Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 1:5 - ಕನ್ನಡ ಸತ್ಯವೇದವು C.L. Bible (BSI)

5 ಸತ್ಯ ವಾಕ್ಯದ, ಅಂದರೆ ಶುಭಸಂದೇಶದ ಮೂಲಕ ನೀವು ಕೇಳಿ ತಿಳಿದಂಥ ಹಾಗೂ ನಿರೀಕ್ಷಿಸುವಂಥ ಸೌಭಾಗ್ಯವನ್ನು ಸ್ವರ್ಗಲೋಕದಲ್ಲಿ ನಿಮಗಾಗಿ ಕಾದಿರಿಸಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಪರಲೋಕದಲ್ಲಿ ನಿಮಗೋಸ್ಕರ ಕಾದಿರಿಸಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5-6 ನಿಮಗೆ ನಿರೀಕ್ಷೆ ಇರುವುದರಿಂದಲೇ ಕ್ರಿಸ್ತನಲ್ಲಿ ನಂಬಿಕೆ ಇಟ್ಟಿದ್ದೀರಿ ಮತ್ತು ದೇವಜನರನ್ನು ಪ್ರೀತಿಸುತ್ತೀರಿ. ನೀವು ನಿರೀಕ್ಷಿಸುವಂಥವುಗಳು ನಿಮಗೋಸ್ಕರ ಪರಲೋಕದಲ್ಲಿ ಸಿದ್ಧ ಮಾಡಲ್ಪಟ್ಟಿವೆ ಎಂಬುದು ನಿಮಗೆ ತಿಳಿದಿದೆ. ನಿಮಗೆ ತಿಳಿಸಲಾದ ಸತ್ಯವಾಕ್ಯವನ್ನು ಅಂದರೆ ಸುವಾರ್ತೆಯನ್ನು ನೀವು ಕೇಳಿದಾಗ ಈ ನಿರೀಕ್ಷೆಯ ಬಗ್ಗೆ ತಿಳಿದುಕೊಂಡಿರಿ. ನೀವು ಸುವಾರ್ತೆಯನ್ನು ಕೇಳಿ ದೇವರ ಕೃಪೆಯ ಸತ್ಯಾರ್ಥವನ್ನು ತಿಳಿದುಕೊಂಡಂದಿನಿಂದ ಸುವಾರ್ತೆಯು ನಿಮ್ಮಲ್ಲಿ ವೃದ್ಧಿಯಾಗುತ್ತಿದೆ ಮತ್ತು ಜನರಿಗೆ ಆಶೀರ್ವಾದಕರವಾಗಿದೆ. ಅದೇ ರೀತಿ ಪ್ರಪಂಚದ ಎಲ್ಲಾ ಕಡೆಗಳಲ್ಲೂ ಸುವಾರ್ತೆಯು ವೃದ್ಧಿಯಾಗುತ್ತಿದೆ ಮತ್ತು ಆಶೀರ್ವಾದಕರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಪರಲೋಕದಲ್ಲಿ ನಿಮಗೋಸ್ಕರ ಕಾದಿರಿಸಲಾದ ನಿರೀಕ್ಷೆಯಿಂದಲೇ ಈ ವಿಶ್ವಾಸವೂ ಪ್ರೀತಿಯೂ ಬುಗ್ಗೆಯಾಗಿ ಒದಗಿಬರುತ್ತದೆ. ಈ ನಿರೀಕ್ಷೆಯ ಬಗ್ಗೆ ಸುವಾರ್ತೆಯ ಸತ್ಯ ಸಂದೇಶವನ್ನು ಮೊದಲೇ ನೀವು ಕೇಳಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಸರ್‍ಗಾತ್ ತುಮ್ಚ್ಯಾಸಾಟ್ನಿ ಥವಲ್ಲ್ಯಾ ಹೊತ್ತಾ ಬರೊಸ್ಯಾಚ್ಯಾ ವಿಶಯಾತ್ ಬರಿ ಖಬರ್ ಮನ್ತಲ್ಯಾ ಖರ್‍ಯಾ ವೈನಾ ತುಮಿ ಅದ್ದಿಚ್ ಆಯಿಕ್ಲ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 1:5
33 ತಿಳಿವುಗಳ ಹೋಲಿಕೆ  

ನೀವು ಸಹ ಸತ್ಯವಾಕ್ಯವನ್ನು ಅಂದರೆ, ನಿಮಗೆ ಜೀವೋದ್ಧಾರವನ್ನೀಯುವ ಶುಭಸಂದೇಶವನ್ನು ಕೇಳಿ ಯೇಸುಕ್ರಿಸ್ತರಲ್ಲಿ ವಿಶ್ವಾಸ ಇಟ್ಟಿರಿ. ದೇವರು ವಾಗ್ದಾನಮಾಡಿದ ಪವಿತ್ರಾತ್ಮ ಅವರಿಂದ ಮುದ್ರಿತರಾದಿರಿ.


ಇನ್ನು ನನಗೆ ಉಳಿದಿರುವುದು ಒಂದೇ: ಸಜ್ಜನರಿಗೆ ಸಲ್ಲುವಂಥ ಜಯಮಾಲೆ ನನಗೀಗ ಸಿದ್ಧವಾಗಿದೆ. ಅದನ್ನು ನೀತಿವಂತ ನ್ಯಾಯಾಧಿಪತಿಯಾದ ಪ್ರಭು ಆ ದಿನದಂದು ನನಗೆ ಕೊಡುವರು; ನನಗೆ ಮಾತ್ರವಲ್ಲ, ಅವರ ಪ್ರತ್ಯಕ್ಷತೆಯನ್ನು ಪ್ರೀತಿಯಿಂದ ನಿರೀಕ್ಷಿಸುತ್ತಿರುವ ಎಲ್ಲರಿಗೂ ಕೊಡುವರು.


ಈ ರಹಸ್ಯ ಎಷ್ಟು ಶ್ರೀಮಂತವಾದುದು, ಎಷ್ಟು ಮಹಿಮಾನ್ವಿತವಾದುದು ಎಂಬುದನ್ನು ಎಲ್ಲಾ ಜನಾಂಗಗಳಿಗೂ ತಿಳಿಸಲು ದೇವರು ಇಚ್ಛಿಸಿದರು. ಕ್ರಿಸ್ತಯೇಸು ನಿಮ್ಮಲ್ಲಿದ್ದು ಮುಂದಿನ ಮಹಿಮೆಯ ನಿರೀಕ್ಷೆಗೆ ಆಧಾರವಾಗಿದ್ದಾರೆ ಎಂಬುದೇ ಈ ರಹಸ್ಯ.


ಹೊಸ ಜನ್ಮಪಡೆದ ಶಿಶುಗಳಂತೆ, ಶುದ್ಧವಾದ ಆಧ್ಯಾತ್ಮಿಕ ಹಾಲಿಗಾಗಿ ಹಂಬಲಿಸಿರಿ; ಅದನ್ನು ಕುಡಿದು ಬೆಳೆಯುತ್ತಾ ಜೀವೋದ್ಧಾರವನ್ನು ಹೊಂದುವಿರಿ.


ಇನ್ನು ನೀವು ವಿಶ್ವಾಸದಲ್ಲಿ ದೃಢವಾಗಿ ಮುನ್ನಡೆಯಬೇಕು. ಶುಭಸಂದೇಶವನ್ನು ಕೇಳಿದಾಗ ನೀವು ಹೊಂದಿದ ಭರವಸೆಯನ್ನು ಕಳೆದುಕೊಳ್ಳದಂತೆ ಜಾಗರೂಕರಾಗಿರಬೇಕು. ಪೌಲನಾದ ನಾನು ಇದೇ ಶುಭಸಂದೇಶದ ಪ್ರಚಾರಕ. ಈ ಶುಭಸಂದೇಶವನ್ನು ಜಗತ್ತಿನಲ್ಲಿರುವ ಸರ್ವಸೃಷ್ಟಿಗೂ ಸಾರಲಾಗುತ್ತಿದೆ.


ಕ್ರಿಸ್ತಯೇಸುವಿನಲ್ಲಿ ನಮಗಿರುವ ನಂಬಿಕೆ ಕೇವಲ ಬದುಕಿಗೆ ಸೀಮಿತವಾಗಿದ್ದರೆ ಜಗತ್ತಿನಲ್ಲಿ ನಮಗಿಂತ ನಿರ್ಭಾಗ್ಯರು ಬೇರೆ ಯಾರೂ ಇಲ್ಲ.


ಏಕೆಂದರೆ, ಧರ್ಮಶಾಸ್ತ್ರವು ಏನನ್ನೂ ಸಿದ್ಧಿಗೆ ತರಲಿಲ್ಲ. ಅದಕ್ಕೆ ಬದಲಾಗಿ ದೇವರ ಸನ್ನಿಧಿಗೆ ನಮ್ಮನ್ನು ಕೊಂಡೊಯ್ಯಬಲ್ಲ ನಂಬಿಕೆ ನಿರೀಕ್ಷೆಯನ್ನು ನಮಗೆ ಒದಗಿಸಲಾಗಿದೆ.


ಇನ್ನೊಂದು ಕಾರಣಕ್ಕಾಗಿಯೂ ನಾವು ಸತತವೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ನೀವು ದೇವರ ಸಂದೇಶವನ್ನು ನಮ್ಮಿಂದ ಕೇಳಿದಾಗ, ಅದನ್ನು ಮನುಷ್ಯರ ಮಾತುಗಳೆಂದು ಪರಿಗಣಿಸದೆ, ದೇವರ ವಾಕ್ಯವೆಂದೇ ಅರಿತು ಅಂಗೀಕರಿಸಿದಿರಿ. ವಿಶ್ವಾಸಿಗಳಾದ ನಿಮ್ಮಲ್ಲಿ ಚೈತನ್ಯಪೂರ್ಣವಾಗಿರುವ ಈ ವಾಕ್ಯವು, ನಿಜವಾಗಿಯೂ ದೇವರ ಸಂದೇಶವೇ ಸರಿ.


ಕ್ರಿಸ್ತಯೇಸುವಿನಲ್ಲಿ ನಂಬಿಕೆ ನಿರೀಕ್ಷೆಯನ್ನಿಟ್ಟಿರುವ ಪ್ರತಿಯೊಬ್ಬನೂ ಅವರು ಶುದ್ಧರಾಗಿರುವಂತೆಯೇ ತನ್ನನ್ನು ಶುದ್ಧವಾಗಿಟ್ಟುಕೊಳ್ಳುತ್ತಾನೆ.


ನಾವಾದರೋ ಪವಿತ್ರಾತ್ಮರ ಮುಖಾಂತರ ವಿಶ್ವಾಸದಿಂದ ದೇವರೊಂದಿಗೆ ಸತ್ಸಂಬಂಧವನ್ನು ಹೊಂದುತ್ತೇವೆಂಬ ನಿರೀಕ್ಷೆ ಉಳ್ಳವರಾಗಿದ್ದೇವೆ; ಈ ನಿರೀಕ್ಷೆ ಸಫಲವಾಗುವುದನ್ನು ಎದುರುನೋಡುತ್ತಿದ್ದೇವೆ.


ಹೌದು, ದೇವರು ಮಾನವರ ಅಪರಾಧಗಳನ್ನು ಲೆಕ್ಕಿಸದೆ, ಕ್ರಿಸ್ತಯೇಸುವಿನಲ್ಲಿ ಇಡೀ ಜಗತ್ತನ್ನೇ ತಮ್ಮೊಡನೆ ಸಂಧಾನಗೊಳಿಸುತ್ತಿದ್ದಾರೆ. ಈ ಸಂಧಾನದ ಸಂದೇಶವನ್ನು ಸಾರುವ ಸೌಭಾಗ್ಯವನ್ನು ಅವರೇ ನಮಗೆ ಕೊಟ್ಟಿದ್ದಾರೆ.


ಸಭೆ ಸೇರಿದ್ದವರಲ್ಲಿ ಕೆಲವರು ಸದ್ದುಕಾಯ ಪಂಥದವರು ಮತ್ತೆ ಕೆಲವರು ಫರಿಸಾಯ ಪಂಥದವರು. ಇದನ್ನು ಗಮನಿಸಿದ ಪೌಲನು, “ಸಹೋದರರೇ, ನಾನೊಬ್ಬ ಫರಿಸಾಯ, ಫರಿಸಾಯರ ವಂಶಜ. ಸತ್ತವರು ಪುನರುತ್ಥಾನ ಹೊಂದುತ್ತಾರೆ ಎಂಬ ನಮ್ಮ ನಿರೀಕ್ಷೆಯ ನಿಮಿತ್ತ ನಾನು ಇಲ್ಲಿ ವಿಚಾರಣೆಗೆ ಗುರಿಯಾಗಿದ್ದೇನೆ,” ಎಂದು ಧ್ವನಿಯೆತ್ತಿ ಸಭೆಯಲ್ಲಿ ಹೇಳಿದನು.


ಕ್ರಿಸ್ತಯೇಸುವನ್ನು ಪ್ರಭುವೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠಾಪಿಸಿರಿ. ನಿಮ್ಮಲ್ಲಿರುವ ನಂಬಿಕೆ ನಿರೀಕ್ಷೆಯ ಬಗ್ಗೆ ಯಾರಾದರೂ ಪ್ರಶ್ನಿಸಿದರೆ ಅವರಿಗೆ ತಕ್ಕ ಉತ್ತರ ಕೊಡಲು ಸರ್ವದಾ ಸಿದ್ಧರಾಗಿರಿ.


ನಿಲ್ಲುವುವು ನಂಬಿಕೆ, ನಿರೀಕ್ಷೆ, ಪ್ರೀತಿ ನೆಲೆಯಾಗಿ; ಈ ಮೂರಲಿ ಪ್ರೀತಿಯೇ ಪರಮೋನ್ನತವೆಂಬುದ ನೀನರಿ.


ಮಾನವರು ಸಜ್ಜನರಾಗಿರಲಿ, ದುರ್ಜನರಾಗಿರಲಿ, ಪುನರುತ್ಥಾನ ಹೊಂದುವರೆಂದು ಇವರಂತೆಯೇ ನಾನು ದೇವರಲ್ಲಿ ನಂಬಿಕೆಯುಳ್ಳವನಾಗಿದ್ದೇನೆ.


ನಿನಗಂಜಿ ನಡೆವರಿಗೆ ನೀ ಕಟ್ಟಿಟ್ಟಿರುವ ಬುತ್ತಿ ಅದೆಷ್ಟು ಅಗಾಧ I ನಿನ್ನ ನಂಬಿದವರಿಗೆ ಬಟ್ಟ ಬಯಲಾಗಿ ನೀಡುವ ನೆರವದೆಷ್ಟು ಅಪಾರ II


ಕ್ರಿಸ್ತಯೇಸು, ಪಾಪಿಗಳ ಉದ್ಧಾರಕ್ಕಾಗಿ ಈ ಲೋಕಕ್ಕೆ ಬಂದರು ಎನ್ನುವ ಮಾತು ಸತ್ಯವಾದುದು, ನಂಬಲರ್ಹವಾದುದು ಹಾಗೂ ಎಲ್ಲರ ಅಂಗೀಕಾರಕ್ಕೆ ಯೋಗ್ಯವಾದುದು. ಅಂಥ ಪಾಪಿಗಳಲ್ಲಿ ನಾನೇ ಪ್ರಮುಖನು.


ನಮ್ಮನ್ನು ಪ್ರೀತಿಸಿ ನಿತ್ಯಾದರಣೆಯನ್ನೂ ಉತ್ತಮ ನಿರೀಕ್ಷೆಯನ್ನೂ ಅನುಗ್ರಹವಾಗಿ ಕೊಟ್ಟಿರುವ ನಮ್ಮ ಪ್ರಭುವಾದ ಯೇಸುಕ್ರಿಸ್ತರು ಹಾಗೂ ಪಿತನಾದ ದೇವರು ನಿಮ್ಮ ಹೃನ್ಮನಗಳನ್ನು ಉತ್ತೇಜನಗೊಳಿಸಲಿ.


ಕ್ರಿಸ್ತಯೇಸುವಿನ ವಾಕ್ಯ ನಿಮ್ಮಲ್ಲಿ ನೆಲೆಸಿ ಸಮೃದ್ಧಿಯಾಗಿ ಬೆಳೆಯಲಿ. ಜ್ಞಾನಸಂಪನ್ನರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿರಿ ಹಾಗೂ ಬುದ್ಧಿ ಹೇಳಿಕೊಳ್ಳಿರಿ. ಕೃತಜ್ಞತೆಯುಳ್ಳವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಭಕ್ತಿಗೀತೆಗಳಿಂದಲೂ ಹೃದಯಾಂತರಾಳದಿಂದ ದೇವರಿಗೆ ಹಾಡಿರಿ.


ಧರ್ಮಗ್ರಂಥವು ಹೇಳುವುದಿಷ್ಟೆ; ದೇವರ ವಾಕ್ಯ ನಿನ್ನ ಸಮೀಪದಲ್ಲೇ ಇದೆ. ಅದು ನಿನ್ನ ಬಾಯಲ್ಲೂ ಹೃದಯದಲ್ಲೂ ಇದೆ. ಅದೇ ನಾವು ನಿಮಗೆ ಬೋಧಿಸುವ ವಿಶ್ವಾಸದ ವಾಕ್ಯ.


ಸಮಸ್ತ ಮಾನವಕೋಟಿಯ ಪ್ರಭುವಾದ ಯೇಸುಕ್ರಿಸ್ತರ ಮುಖಾಂತರ ಶಾಂತಿ ಲಭಿಸುತ್ತದೆ ಎಂಬ ಶುಭಸಂದೇಶವನ್ನು ದೇವರು ಇಸ್ರಯೇಲ್ ಜನಾಂಗಕ್ಕೆ ಸಾರಿದರು. ಈ ವಿಷಯ ನಿಮಗೆ ತಿಳಿದಿದೆ.


ನಿಮ್ಮ ಆಸ್ತಿಪಾಸ್ತಿಗಳನ್ನು ಮಾರಿ, ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ; ಲಯವಾಗದ ಸಂಪತ್ತನ್ನು ಸ್ವರ್ಗದಲ್ಲಿ ಶೇಖರಿಸಿಟ್ಟುಕೊಳ್ಳಿರಿ. ಅಲ್ಲಿ ಅದು ಕಳ್ಳನಿಗೆ ದಕ್ಕುವಂತಿಲ್ಲ; ನುಸಿಹಿಡಿದು ನಾಶವಾಗುವಂತಿಲ್ಲ.


“ನನ್ನ ಸಹೋದರರೇ, ಅಬ್ರಹಾಮನ ಸಂತತಿಯವರೇ, ಮತ್ತು ದೇವರಲ್ಲಿ ಭಯಭಕ್ತಿ ಉಳ್ಳ ಇನ್ನಿತರರೇ, ಈ ಜೀವೋದ್ಧಾರದ ಸಂದೇಶವನ್ನು ಕಳುಹಿಸಿರುವುದು ನಮಗಾಗಿಯೇ.


ಸತ್ಯೋಕ್ತಿ, ದೈವಶಕ್ತಿ, ಇವುಗಳಿಂದಲೂ ನಾವು ದೇವರ ದಾಸರೆಂದು ತೋರ್ಪಡಿಸುತ್ತೇವೆ. ರಕ್ಷಿಸಲೂ ಎದುರಿಸಲೂ ಧರ್ಮವೆಂಬ ಆಯುಧವನ್ನು ಕೈಯಲ್ಲಿ ಹಿಡಿದಿದ್ದೇವೆ.


ಆದರೆ ನಾವು ಅವರಿಗೆ ಕ್ಷಣಮಾತ್ರವೂ ಬಿಟ್ಟುಕೊಡಲಿಲ್ಲ. ಹೀಗೆ ನಿಮಗೋಸ್ಕರ ಶುಭಸಂದೇಶದ ಸತ್ಯಾರ್ಥವನ್ನು ಸುಭದ್ರವಾಗಿ ಇರಿಸಿದೆವು.


ಅವರ ಈ ನಡತೆ, ಶುಭಸಂದೇಶದ ಸತ್ಯಕ್ಕೆ ಅನುಗುಣವಾದುದಲ್ಲ ಎಂದು ನನಗೆ ಮನದಟ್ಟಾಯಿತು. ಆಗ ನಾನು ಅವರೆಲ್ಲರ ಸಮ್ಮುಖದಲ್ಲೇ ಕೇಫನಿಗೆ: “ನೀನು ಯೆಹೂದ್ಯನಾಗಿದ್ದೂ ಯೆಹೂದ್ಯರಂತೆ ನಡೆಯದೆ ಅನ್ಯಧರ್ಮೀಯರಂತೆ ನಡೆದುಕೊಳ್ಳುತ್ತ ಇದ್ದಿಯಲ್ಲವೇ? ಹೀಗಿರುವಲ್ಲಿ ಅನ್ಯಧರ್ಮೀಯರು ಯೆಹೂದ್ಯರಂತೆ ನಡೆದುಕೊಳ್ಳಬೇಕೆಂದು ನೀನು ಒತ್ತಾಯಪಡಿಸುವುದಾದರೂ ಹೇಗೆ?” ಎಂದು ಕೇಳಿದೆ.


ಅವರ ವಿಷಯವಾಗಿ ನೀವು ಕೇಳಿದ್ದು ಮತ್ತು ಕಲಿತದ್ದು ಅವರಲ್ಲಿರುವ ಸತ್ಯಕ್ಕೆ ಅನುಸಾರವಾಗಿತ್ತಲ್ಲವೇ?


ಈ ವಿಷಯಗಳೆಲ್ಲಾ ನಿಮಗೆ ತಿಳಿದೇ ಇವೆ; ನೀವು ಅಂಗೀಕರಿಸಿದ ಸತ್ಯದಲ್ಲಿ ಸ್ಥಿರವಾಗಿಯೂ ಇದ್ದೀರಿ. ಆದರೂ ಇವುಗಳನ್ನು ಪದೇ ಪದೇ ನಿಮ್ಮ ಜ್ಞಾಪಕಕ್ಕೆ ತರಲು ಅಪೇಕ್ಷಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು