Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 1:6 - ಕನ್ನಡ ಸತ್ಯವೇದವು C.L. Bible (BSI)

6 ದೇವಾನುಗ್ರಹದ ಸತ್ಯಾರ್ಥವನ್ನು ನೀವು ತಿಳಿದ ದಿನದಿಂದಲೂ ನಿಮ್ಮಲ್ಲಿ ಶುಭಸಂದೇಶವು ಹೇಗೆ ಫಲಭರಿತವಾಗುತ್ತಿದೆಯೋ ಹಾಗೆ ಈ ಶುಭಸಂದೇಶವು ಜಗತ್ತಿನ ಎಲ್ಲೆಡೆಯೂ ಹಬ್ಬಿಹರಡುತ್ತಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳಿದುಕೊಂಡ ದಿನದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ನಿಮ್ಮಲ್ಲಿ ಫಲಕೊಟ್ಟಂತೆ ಲೋಕದಲ್ಲೆಲ್ಲಾ ಫಲಕೊಟ್ಟು ವೃದ್ಧಿಯಾಗುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೀವು ದೇವರ ಕೃಪೆಯನ್ನು ಕುರಿತು ಸತ್ಯಾರ್ಥವನ್ನು ಕೇಳಿ ತಿಳುಕೊಂಡ ದಿವಸದಿಂದ ಆ ಸುವಾರ್ತೆಯು ನಿಮ್ಮಲ್ಲಿ ಫಲಕೊಟ್ಟು ವೃದ್ಧಿಯಾಗುತ್ತಾ ಬಂದ ಪ್ರಕಾರ ಲೋಕದಲ್ಲೆಲ್ಲಾ ಹಬ್ಬಿ ಫಲಕೊಟ್ಟು ವೃದ್ಧಿಯಾಗುತ್ತಾ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆ ಸುವಾರ್ತೆಯು ಲೋಕದಲ್ಲೆಲ್ಲಾ ಹರಡಿದಂತೆ, ನಿಮಗೂ ತಲುಪಲು ನೀವು ಸಹ ಅದನ್ನು ಕೇಳಿ ದೇವರ ಕೃಪೆಯನ್ನು ನಿಜವಾಗಿಯೂ ತಿಳಿದುಕೊಂಡ ದಿವಸದಿಂದ ನಿಮ್ಮಲ್ಲಿಯೂ ಫಲಕೊಟ್ಟು ವೃದ್ಧಿಯಾಗುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತುಮಿ ಖರೆಪಾನಾತ್ ದೆವಾಚಿ ಕಾಮಾ ಆಯ್ಕುನ್ ಕಳ್ವುನ್ ಘೆಟಲ್ಲ್ಯಾ ದಿಸಾಕ್ನಾ, ತುಮ್ಚ್ಯಾತ್ ಕಶೆ ಫಳ್ ದಿತಾ ತಸೆ ಸಗ್ಳ್ಯಾ ಜಗಾತ್ಬಿ ಫಳ್ ದಿಯ್ತ್ ವಾಡ್ವಳ್ಕಿ ಹೊವ್ಕ್ ಲಾಗ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 1:6
36 ತಿಳಿವುಗಳ ಹೋಲಿಕೆ  

ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ, ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಲೋಕಕ್ಕೆ ಹೋಗಬೇಕು, ಸಫಲರಾಗಬೇಕು; ಆ ಫಲ ಶಾಶ್ವತವಾಗಿರಬೇಕೆಂದೇ ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ಪಿತನಿಂದ ಏನು ಕೇಳಿದರೂ ನಿಮಗೆ ಅದು ಸಿಗುವುದು.


ಯೇಸುಕ್ರಿಸ್ತರ ಮುಖಾಂತರ ಲಭಿಸುವ ಸತ್ಸಂಬಂಧದ ಫಲಗಳಿಂದ ತುಂಬಿದವರಾಗಿ ದೇವರಿಗೆ ಸ್ತುತಿಸಲ್ಲಿಸಿ, ಅವರ ಮಹಿಮೆ ಬೆಳಗುವಂತೆ ಮಾಡುವಿರಿ.


ನನ್ನ ಈ ಪುಟ್ಟ ಪತ್ರವನ್ನು ನಂಬಿಕಸ್ಥ ಸಹೋದರನಾದ ಸಿಲ್ವಾನನ ಸಹಾಯದಿಂದ ನಿಮಗೆ ಬರೆದಿರುತ್ತೇನೆ. ನಿಮ್ಮನ್ನು ಪ್ರೋತ್ಸಾಹಿಸಲೆಂದು ಮತ್ತು ಇದುವೇ ದೇವರ ನಿಜವಾದ ಅನುಗ್ರಹವೆಂದು ಸ್ಪಷ್ಟೀಕರಿಸಲು ಬರೆದಿದ್ದೇನೆ. ಈ ಅನುಗ್ರಹದಲ್ಲಿ ನೀವು ದೃಢವಾಗಿ ನಿಲ್ಲಿರಿ.


ಇನ್ನು ನೀವು ವಿಶ್ವಾಸದಲ್ಲಿ ದೃಢವಾಗಿ ಮುನ್ನಡೆಯಬೇಕು. ಶುಭಸಂದೇಶವನ್ನು ಕೇಳಿದಾಗ ನೀವು ಹೊಂದಿದ ಭರವಸೆಯನ್ನು ಕಳೆದುಕೊಳ್ಳದಂತೆ ಜಾಗರೂಕರಾಗಿರಬೇಕು. ಪೌಲನಾದ ನಾನು ಇದೇ ಶುಭಸಂದೇಶದ ಪ್ರಚಾರಕ. ಈ ಶುಭಸಂದೇಶವನ್ನು ಜಗತ್ತಿನಲ್ಲಿರುವ ಸರ್ವಸೃಷ್ಟಿಗೂ ಸಾರಲಾಗುತ್ತಿದೆ.


ಇದನ್ನು ಬೆಳಕಿಗೆ ತರುವ ನನ್ನ ಸಂದೇಶದ ಮೂಲಕ ಮತ್ತು ಯೇಸುಕ್ರಿಸ್ತರನ್ನು ಕುರಿತ ಬೋಧನೆಯ ಮೂಲಕ ದೇವರು ನಿಮ್ಮನ್ನು ವಿಶ್ವಾಸದಲ್ಲಿ ದೃಢಪಡಿಸಲು ಶಕ್ತರು.


ಸಹೋದರರೇ, ಈ ವಿಷಯ ನಿಮಗೆ ತಿಳಿದಿರಲಿ; ನನ್ನ ಸೇವೆ ಇತರ ಜನರಲ್ಲಿ ಫಲಪ್ರದವಾದಂತೆ ನಿಮ್ಮಲ್ಲೂ ಫಲಪ್ರದವಾಗಬೇಕೆಂಬ ಉದ್ದೇಶದಿಂದ ನಿಮ್ಮ ಬಳಿಗೆ ಬರಲು ನಾನು ಅನೇಕ ಸಾರಿ ಪ್ರಯತ್ನಿಸಿದೆನು. ಆದರೆ, ಕಾರಣಾಂತರಗಳಿಂದ ಇದುವರೆಗೂ ಬರಲು ಸಾಧ್ಯವಾಗಲಿಲ್ಲ.


ಕಾಲ ಬರುವುದು; ಅದು ಈಗಲೇ ಬಂದಿದೆ. ಇನ್ನು ಮೇಲೆ ನಿಜವಾದ ಆರಾಧಕರು ಪಿತನನ್ನು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸುವರು. ಅಂಥವರೇ ತಮ್ಮನ್ನು ಆರಾಧಿಸಬೇಕೆಂದು ಪಿತ ಆಶಿಸುತ್ತಾರೆ.


ಬಳಿಕ ಅವರಿಗೆ, “ನೀವು ವಿಶ್ವದ ಎಲ್ಲೆಡೆಗಳಿಗೂ ಹೋಗಿ, ಜಗತ್ತಿಗೆಲ್ಲಾ ಶುಭಸಂದೇಶವನ್ನು ಪ್ರಬೋಧಿಸಿರಿ.


ಇನ್ನೂ ಕೆಲವು ಬೀಜಗಳು ಹದವಾದ ಭೂಮಿಯಲ್ಲಿ ಬಿದ್ದವು. ಅವು ಮೊಳೆತು, ಬೆಳೆದು ತೆನೆಬಿಟ್ಟವು. ಅವುಗಳಲ್ಲಿ ಕೆಲವು ಮೂವತ್ತರಷ್ಟು, ಕೆಲವು ಅರವತ್ತರಷ್ಟು ಮತ್ತೆ ಕೆಲವು ನೂರರಷ್ಟು ಫಸಲನ್ನು ಕೊಟ್ಟವು.”


ಶ್ರೀಸಾಮ್ರಾಜ್ಯದ ಶುಭಸಂದೇಶವನ್ನು ಸರ್ವಜನಾಂಗಗಳಿಗೂ ಸಾಕ್ಷಿಯಾಗಿ ಜಗತ್ತಿನಲ್ಲೆಲ್ಲಾ ಪ್ರಬೋಧಿಸಲಾಗುವುದು. ಅಂತ್ಯವು ಬರುವುದು ಅನಂತರವೇ.


ಕಂಡುಬಂದಿತು ಜಗದ ಎಲ್ಲೆ ಎಲ್ಲೆಗೆ I ನಮ್ಮ ದೇವ ಸಾಧಿಸಿದ ಜಯಗಳಿಕೆ II ಸ್ಮರಿಸಿಕೊಂಡನಾ ಪ್ರಭು ತನ್ನ ಪ್ರೀತಿಯನು I ಇಸ್ರಯೇಲ್ ಕುಲದ ಬಗ್ಗೆ ತನ್ನ ಸತ್ಯತೆಯನು II


ಸಹೋದರರೇ, ಪ್ರಭುವಿಗೆ ಪ್ರಿಯರಾದವರೇ, ನಿಮಗಾಗಿ ನಿರಂತರವೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ನಾವು ಬದ್ಧರು. ಏಕೆಂದರೆ, ದೇವರು ನಿಮ್ಮನ್ನು ಪವಿತ್ರಾತ್ಮರ ಮುಖಾಂತರ ಪಾವನಗೊಳಿಸಿ, ನೀವು ಸತ್ಯದಲ್ಲಿ ವಿಶ್ವಾಸವಿಡುವಂತೆ ಮಾಡಿ, ಜೀವೋದ್ಧಾರವನ್ನು ಪಡೆಯುವಂತೆ ನಿಮ್ಮನ್ನು ಪ್ರಥಮ ಫಲವನ್ನಾಗಿ ಆರಿಸಿಕೊಂಡಿದ್ದಾರೆ.


ಇನ್ನೊಂದು ಕಾರಣಕ್ಕಾಗಿಯೂ ನಾವು ಸತತವೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ನೀವು ದೇವರ ಸಂದೇಶವನ್ನು ನಮ್ಮಿಂದ ಕೇಳಿದಾಗ, ಅದನ್ನು ಮನುಷ್ಯರ ಮಾತುಗಳೆಂದು ಪರಿಗಣಿಸದೆ, ದೇವರ ವಾಕ್ಯವೆಂದೇ ಅರಿತು ಅಂಗೀಕರಿಸಿದಿರಿ. ವಿಶ್ವಾಸಿಗಳಾದ ನಿಮ್ಮಲ್ಲಿ ಚೈತನ್ಯಪೂರ್ಣವಾಗಿರುವ ಈ ವಾಕ್ಯವು, ನಿಜವಾಗಿಯೂ ದೇವರ ಸಂದೇಶವೇ ಸರಿ.


ನಮ್ಮ ಶುಭಸಂದೇಶ ಕೇವಲ ಬಾಯಿಮಾತಿನದಲ್ಲ; ಅದು ಶಕ್ತಿಪೂರ್ಣವಾಗಿ ಪವಿತ್ರಾತ್ಮರ ಸಮೇತವಾಗಿ ಪೂರ್ಣ ಪ್ರಮಾಣದಿಂದ ಬಂದದ್ದು. ನಾವು ನಿಮ್ಮ ನಡುವೆಯಿದ್ದಾಗ, ನಿಮಗೋಸ್ಕರ ಹೇಗೆ ವರ್ತಿಸಿದೆವು ಎಂದು ನೀವೇ ಬಲ್ಲಿರಿ.


ಆಗ ಎಲ್ಲ ವಿಷಯಗಳಲ್ಲಿಯೂ ಪ್ರಭುಯೇಸು ಮೆಚ್ಚುವ ರೀತಿಯಲ್ಲಿ ನೀವು ಜೀವಿಸುವಿರಿ. ನಾನಾ ತರಹದ ಸತ್ಕಾರ್ಯಗಳನ್ನು ಕೈಗೊಳ್ಳುವಿರಿ. ಸತ್ಫಲವನ್ನೀಯುವ ದೈವಜ್ಞಾನದಲ್ಲಿ ವೃದ್ಧಿಹೊಂದುವಿರಿ.


ನಿಮ್ಮಿಂದ ಸಹಾಯ ಪಡೆಯಬೇಕೆಂಬುದು ನನ್ನ ಉದ್ದೇಶವಲ್ಲ. ಆದರೆ ಈ ಸಹಾಯದಿಂದ ನಿಮಗೆ ಮುಂದೆ ದೊರಕುವ ಪ್ರತಿಫಲವು ಸಮೃದ್ಧಿಯಾಗಲೆಂದೇ ನನ್ನ ಇಚ್ಛೆ.


ಕಾರಣ -ಸಚ್ಚರಿತೆ, ಸದಾಚಾರ ಮತ್ತು ಸತ್ಯಸಂಧತೆ ಇವೆಲ್ಲವೂ ಬೆಳಕಿನ ಕುಡಿಗಳು.


ನಿಮ್ಮ ಹೃನ್ಮನಗಳು ನವೀಕೃತವಾಗಲಿ.


ಅವರ ವಿಷಯವಾಗಿ ನೀವು ಕೇಳಿದ್ದು ಮತ್ತು ಕಲಿತದ್ದು ಅವರಲ್ಲಿರುವ ಸತ್ಯಕ್ಕೆ ಅನುಸಾರವಾಗಿತ್ತಲ್ಲವೇ?


ಇತರರಿಗಿಂತಲೂ ಮೊದಲೇ ನಿಮಗೆ ಯೇಸುಕ್ರಿಸ್ತರ ಶುಭಸಂದೇಶವನ್ನು ತಂದವರು ನಾವು. ಹೀಗಿರುವಲ್ಲಿ ನಿಮ್ಮ ವಿಷಯದಲ್ಲಿ ನಾವು ಈಗ ಹೊಗಳಿಕೊಳ್ಳುವಾಗ ನಮ್ಮ ಸರಹದ್ದನ್ನು ಉಲ್ಲಂಘಿಸುತ್ತಿಲ್ಲ.


ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೇನೆಂದರೆ: ದೇವರಿಂದ ನೀವು ಪಡೆದ ವರಪ್ರಸಾದಗಳನ್ನು ವ್ಯರ್ಥಮಾಡಬೇಡಿ.


ಜೆರುಸಲೇಮಿನಿಂದ ಪ್ರಾರಂಭಿಸಿ ಇಲ್ಲುರಿಕ ಪ್ರಾಂತ್ಯದವರೆಗೂ ಸುತ್ತಮುತ್ತಿನಲ್ಲೂ ನಾನು ಸಂಚಾರಮಾಡಿ, ಕ್ರಿಸ್ತಯೇಸುವಿನ ಶುಭಸಂದೇಶವನ್ನು ಪೂರ್ತಿಯಾಗಿ ಪ್ರಚಾರಮಾಡಿದ್ದೇನೆ.


ನೀನು ಇವರ ಕಣ್ಣುಗಳನ್ನು ತೆರೆಯಬೇಕು; ಅಂಧಕಾರವನ್ನು ಬಿಟ್ಟು ಬೆಳಕಿಗೆ ಬರುವಂತೆ ಮಾಡಬೇಕು; ಸೈತಾನನ ಆಧಿಪತ್ಯವನ್ನು ತ್ಯಜಿಸಿ ದೇವರತ್ತ ತಿರುಗುವಂತೆ ಮಾಡಬೇಕು. ಹೀಗೆ, ಅವರು ನನ್ನಲ್ಲಿಡುವ ವಿಶ್ವಾಸದ ಪ್ರಯುಕ್ತ ಪಾಪವಿಮೋಚನೆಯನ್ನು ಪಡೆಯುವರು; ಆಯ್ಕೆಯಾದವರಿಗಿರುವ ಹಕ್ಕುಬಾಧ್ಯತೆಗಳಲ್ಲಿ ಭಾಗಿಗಳಾಗುವರು,’ ಎಂದು ಹೇಳಿದರು.


ನಮ್ಮ ಬೋಧನೆಯನ್ನು ಕೇಳಿದ ಆ ಮಹಿಳೆಯರಲ್ಲಿ ಲಿಡಿಯ ಎಂಬವಳು ಒಬ್ಬಳು. ಈಕೆ ಥುವತೈರ ಎಂಬ ಊರಿನವಳು; ಪಟ್ಟೆಪೀತಾಂಬರಗಳ ವ್ಯಾಪಾರಿ ಹಾಗೂ ದೇವಭಕ್ತೆ. ಪೌಲನ ಬೋಧನೆಗೆ ಕಿವಿಗೊಟ್ಟು ಗ್ರಹಿಸುವಂತೆ ಪ್ರಭು ಆಕೆಯ ಹೃದಯವನ್ನು ತೆರೆದರು.


ದೇವರ ಶುಭಸಂದೇಶವಾದರೋ ಹಬ್ಬಿ ಹರಡತೊಡಗಿತು.


ಈ ಮಾತುಗಳನ್ನು ಕೇಳಿದ ಮೇಲೆ ಅವರು ತಮ್ಮ ಆಕ್ಷೇಪಣೆಯನ್ನು ನಿಲ್ಲಿಸಿದರು, ಮಾತ್ರವಲ್ಲ, ‘ಅನ್ಯಧರ್ಮದವರೂ ಪಶ್ಚಾತ್ತಾಪಪಟ್ಟು ನವಜೀವ ಪಡೆಯುವ ಸದವಕಾಶವನ್ನು ದೇವರು ದಯಪಾಲಿಸಿದ್ದಾರಲ್ಲಾ!’ ಎಂದು ದೈವಸ್ತುತಿ ಮಾಡಿದರು.


ಆದ್ದರಿಂದ ನೀವು ಹೋಗಿ, ಸಕಲ ದೇಶಗಳ ಜನರನ್ನು ನನ್ನ ಶಿಷ್ಯರನ್ನಾಗಿ ಮಾಡಿರಿ; ಪಿತ, ಸುತ, ಮತ್ತು ಪವಿತ್ರಾತ್ಮ ನಾಮದಲ್ಲಿ ಅವರಿಗೆ ದೀಕ್ಷಾಸ್ನಾನ ಮಾಡಿಸಿರಿ.


ಸೇನೆಯನು ನೀ ಅಣಿಗೊಳಿಸುವ ದಿನದೊಳು I ಸೇರಿಕೊಳ್ವರು ತಾವಾಗಿಯೇ ಪ್ರಜೆಗಳು I ಶುಭ್ರ ವಸ್ತ್ರಧರಿಸಿ ನಿನ್ನ ಯುವಕ ಯೋಧರು I ಉದಯಕಾಲದಿಬ್ಬನಿಯಂತೆ ಇಳಿದು ಬರುವರು II


ದೇವರು ತಮ್ಮ ಕೃಪಾತಿಶಯದ ಬಗ್ಗೆ ಸಾರುವ ಹೊಣೆಯನ್ನು ನಿಮ್ಮ ಸಲುವಾಗಿ ನನಗೆ ಕೊಟ್ಟಿರುತ್ತಾರೆಂಬುದನ್ನು ನೀವೇ ಬಲ್ಲಿರಿ.


ದೇವಜನರಿಗೆ ಸಂಗ್ರಹಿಸಲಾದ ಧನಸಹಾಯವನ್ನು ಸುರಕ್ಷಿತವಾಗಿ ಅವರಿಗೆ ತಲುಪಿಸಿದ ಮೇಲೆ ನನ್ನ ಈ ಕಾರ್ಯವನ್ನು ಮುಗಿಸಿಕೊಂಡು ಸ್ಪೇಯಿನ್ ದೇಶಕ್ಕೆ ಹೋಗುವ ಮಾರ್ಗದಲ್ಲಿ ನಿಮ್ಮ ಬಳಿಗೆ ಬರುತ್ತೇನೆ.


ಸತ್ಯಸಂಧರಾಗಿ ಇವರು ನಿಮ್ಮ ಸೇವೆಗೆ ಮೀಸಲಾಗಬೇಕೆಂದು ನನ್ನನ್ನು ನಾನೇ ಮೀಸಲಾಗಿಸಿಕೊಂಡಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು