Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 2:4 - ಕನ್ನಡ ಸತ್ಯವೇದವು C.L. Bible (BSI)

4 ಯಾರೂ ತಮ್ಮ ಕುತರ್ಕಗಳಿಂದ ನಿಮ್ಮನ್ನು ಮೋಸಗೊಳಿಸದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯಾರೂ ನಿಮ್ಮನ್ನು ತಮ್ಮ ಮನವೊಲಿಸುವ ಮಾತುಗಳಿಂದ ಮೋಸಗೊಳಿಸದಿರಲಿ ಎಂದು ನಾನು ನಿಮಗೆ ಇದನ್ನು ಹೇಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯಾರಾದರೂ ರಂಜನೆಯಾದ ಮಾತುಗಳಿಂದ ನಿಮ್ಮನ್ನು ಮೋಸಗೊಳಿಸಿಯಾರೆಂಬ ಭಯ ನನಗಿರುವದರಿಂದ ಇದನ್ನು ಹೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯಾವನೂ ನಿಮ್ಮನ್ನು ಸರಿಯೆನಿಸುವ ಸುಳ್ಳು ಮಾತುಗಳಿಂದ ಮೋಸಗೊಳಿಸದಂತೆ ಈ ಸಂಗತಿಗಳನ್ನು ನಿಮಗೆ ಹೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯಾರೂ ತಮ್ಮ ತರ್ಕದ ನಯಮಾತುಗಳಿಂದ ನಿಮ್ಮನ್ನು ವಂಚಿಸಬಾರದೆಂದು ನಾನು ಇದನ್ನು ಹೇಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಕೊನ್‍ಬಿ ತುಮ್ಕಾ ಸಮಾ ದಿಸ್ತಲ್ಯಾ ಝುಟ್ಯಾ ಬೊಲ್ನ್ಯಾನಿ ಪಸ್ವುನಸಿ ಸಾರ್ಕೆ ಹಿ ಸಂಗ್ತಿಯಾ ತುಮ್ಕಾ ಸಾಂಗ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 2:4
28 ತಿಳಿವುಗಳ ಹೋಲಿಕೆ  

ಪ್ರಿಯರೇ, “ನಾವು ಪವಿತ್ರಾತ್ಮ ಪ್ರೇರಿತರು” ಎಂದು ಹೇಳುವ ಎಲ್ಲರನ್ನೂ ನಂಬಬಾರದು. ಆ ಪ್ರೇರಣೆ ದೇವರಿಂದ ಬಂದಿದೆಯೇ ಎಂದು ಪರೀಕ್ಷಿಸಿ ನೋಡಬೇಕು. ಏಕೆಂದರೆ, ಎಷ್ಟೋ ಮಂದಿ ಕಪಟ ಪ್ರವಾದಿಗಳು ಎಲ್ಲೆಡೆಯಲ್ಲೂ ಹರಡಿದ್ದಾರೆ.


ಇನ್ನು ಮೇಲೆ ನಾವು ಸಣ್ಣ ಮಕ್ಕಳಂತೆ ದುರ್ಜನರ ವಂಚನೆಗೂ ದುರ್ಬೋಧಕರ ಕುಯುಕ್ತಿಗೂ ಒಳಪಟ್ಟು ಅತ್ತಿತ್ತ ಅಲೆದಾಡುವುದಿಲ್ಲ. ಗಾಳಿ ಬಂದಂತೆ ತೂರಾಡುವುದಿಲ್ಲ.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಯಾರೂ ನಿಮ್ಮನ್ನು ಮೋಸಗೊಳಿಸದಂತೆ ಜಾಗರೂಕರಾಗಿರಿ.


ಅನೇಕ ಮಂದಿ ವಂಚಕರು ಲೋಕದಲ್ಲಿ ತಲೆದೋರಿದ್ದಾರೆ. ಯೇಸುಕ್ರಿಸ್ತರು ಮನುಷ್ಯ ಆಗಿಬಂದರೆಂಬುದನ್ನು ಇವರು ಒಪ್ಪಿಕೊಳ್ಳುವುದಿಲ್ಲ. ಇಂಥವನು ವಂಚಕನೂ ಕ್ರಿಸ್ತವಿರೋಧಿಯೂ ಹೌದು.


ಕಪಟ ಉದ್ಧಾರಕರೂ ವಂಚಕಪ್ರವಾದಿಗಳೂ ತಲೆಯೆತ್ತಿಕೊಳ್ಳುವರು. ಅವರು ಪವಾಡಗಳನ್ನು ಮಾಡಿತೋರಿಸಿ, ದೇವರು ಆರಿಸಿಕೊಂಡವರನ್ನೂ ಮೋಸಗೊಳಿಸುವರು.


ಅವನು ಬಂದು ಭೂಮಿಯ ಅಷ್ಟದಿಕ್ಕುಗಳಲ್ಲಿರುವ ಗೋಗ್ ಮತ್ತು ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸುವನು. ಯುದ್ಧಮಾಡುವುದಕ್ಕಾಗಿ ಅವರನ್ನು ಒಟ್ಟುಗೂಡಿಸುವನು. ಅವರ ಸಂಖ್ಯೆ ಸಮುದ್ರತೀರದ ಮರಳಿನಷ್ಟಿರುವುದು.


ದುಷ್ಕರ್ಮಿಗಳು ಮತ್ತು ದುರ್ಬೋಧಕರು ಇತರರನ್ನು ವಂಚಿಸುತ್ತಾ ತಮ್ಮನ್ನೂ ವಂಚಿಸಿಕೊಳ್ಳುತ್ತಾ ದಿನೇದಿನೇ ಅಧೋಗತಿಗಿಳಿಯುತ್ತಾರೆ.


ಪ್ರಾಪಂಚಿಕ ಹರಟೆಗಳಿಂದ ದೂರವಿರು. ಅವುಗಳಲ್ಲಿ ಕಾಲಹರಣ ಮಾಡುವವರು ದೇವರಿಂದ ದೂರಸರಿಯುತ್ತಾರೆ.


ಹುರುಳಿಲ್ಲದ ಮಾತುಗಳನ್ನು ಆಡುವವರಿಗೆ ಮರುಳಾಗದಿರಿ. ಇಂಥ ಕೃತ್ಯಗಳನ್ನು ಮಾಡುವ ದುಷ್ಕರ್ಮಿಗಳ ಮೇಲೆ ದೇವರ ಕೋಪ ಎರಗುತ್ತದೆ.


ಇದಲ್ಲದೆ ನಿಮ್ಮಲ್ಲೇ ಕೆಲವರು ಎದ್ದು ಭಕ್ತವಿಶ್ವಾಸಿಗಳನ್ನು ತಮ್ಮ ಕಡೆ ಸೆಳೆದುಕೊಳ್ಳಲು ಅಸತ್ಯವಾದವುಗಳನ್ನು ಹೇಳುವರು.


ಆ ಒಂದು ಸಾವಿರ ವರ್ಷಗಳ ಕಾಲದವರೆಗೆ, ಅದು ಜನಾಂಗಗಳನ್ನು ಮರುಳುಗೊಳಿಸದಂತೆ ದೇವದೂತನು ಸೈತಾನನನ್ನು ಪಾತಾಳಕ್ಕೆ ದಬ್ಬಿ, ಬಾಗಿಲು ಮುಚ್ಚಿ, ಅದಕ್ಕೆ ಮುದ್ರೆ ಹಾಕಿದನು. ಆ ಸಾವಿರ ವರ್ಷಗಳ ಕಾಲ ಮುಗಿದ ಮೇಲೆ ಅವನಿಗೆ ಸ್ವಲ್ಪಕಾಲ ಬಿಡುಗಡೆ ದೊರೆಯುವುದು.


ಭೂನಿವಾಸಿಗಳೆಲ್ಲರೂ ಅಂದರೆ, ಜಗತ್ತು ಸೃಷ್ಟಿ ಆಗುವ ಮೊದಲೇ ಯಾರಯಾರ ಹೆಸರುಗಳು ವಧೆಯಾದ ಯಜ್ಞದ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ, ಅಂಥವರೆಲ್ಲರೂ ಆ ಮೃಗವನ್ನು ಆರಾಧಿಸುವರು.


ಸಮಸ್ತ ಜಗತ್ತನ್ನೂ ವಂಚಿಸುತ್ತಿದ್ದ ಆ ಮಹಾಘಟಸರ್ಪವನ್ನು ಭೂಮಿಗೆ ತಳ್ಳಲಾಯಿತು. ಈ ಪುರಾತನ ಸರ್ಪಕ್ಕೆ ‘ಪಿಶಾಚಿ’ ಎಂತಲೂ ‘ಸೈತಾನ’ ಎಂತಲೂ ಹೆಸರು. ಅದರ ದೂತರನ್ನು ಅದರೊಡನೆ ತಳ್ಳಲಾಯಿತು.


ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸಬೇಕೆಂದಿರುವವರನ್ನು ಕುರಿತು ಇದನ್ನು ನಿಮಗೆ ಬರೆದಿದ್ದೇನೆ.


ನನ್ನ ಪ್ರಿಯ ಮಕ್ಕಳೇ, ಅಂತಿಮ ಕಾಲ ಸಮೀಪಿಸಿತು. ಕ್ರಿಸ್ತವಿರೋಧಿ ಬರುವನೆಂದು ನೀವು ಕೇಳಿದ್ದೀರಿ. ಈಗಾಗಲೇ ಅನೇಕ ಕ್ರಿಸ್ತವಿರೋಧಿಗಳು ತಲೆದೋರಿದ್ದಾರೆ. ಇದರಿಂದ ಅಂತಿಮಕಾಲ ಸನ್ನಿಹಿತವಾಯಿತೆಂದು ನಮಗೆ ತಿಳಿದುಬರುತ್ತದೆ.


ನಿಮ್ಮಲ್ಲಿ ಕೆಲವರು ದೇವದೂತರ ಆರಾಧನೆಯಲ್ಲಿ ಆಸಕ್ತರಾಗಿದ್ದಾರೆ. ಲೌಕಿಕ ಜ್ಞಾನದಿಂದ ನಿರರ್ಥಕವಾಗಿ ಉಬ್ಬಿಕೊಂಡಿದ್ದಾರೆ. ತಾವು ಬಹಳ ವಿನಯಶಾಲಿಗಳೆಂದು ಹೆಚ್ಚಳಪಡುತ್ತಾರೆ. ಇಂಥವರು ನಿಮ್ಮನ್ನು ಕಡೆಗಾಣಿಸದಂತೆ ಎಚ್ಚರದಿಂದಿರಿ. ಇವರು ಯೇಸುಕ್ರಿಸ್ತರೆಂಬ ಶಿರಸ್ಸಿನಿಂದ ಬೇರ್ಪಟ್ಟಿದ್ದಾರೆ.


ಪ್ರಪಂಚದ ಪ್ರಬಲ ಶಕ್ತಿಗಳಿಂದಲೂ ಮಾನವ ವಿವೇಚನೆಯ ಶುಷ್ಕತರ್ಕ ಸಿದ್ಧಾಂತಗಳಿಂದಲೂ ಯಾರೂ ನಿಮ್ಮನ್ನು ಮೋಸಗೊಳಿಸಿ ವಶಪಡಿಸಿಕೊಳ್ಳದಂತೆ ಎಚ್ಚರಿಕೆಯಿಂದಿರಿ. ಇವುಗಳು ಪ್ರಾಪಂಚಿಕ ಪಾರಂಪರ್ಯಕ್ಕೆ ಮತ್ತು ವಿಶ್ವದ ಮೂಲಭೂತ ಶಕ್ತಿಗಳಿಗೆ ಸಂಬಂಧಿಸಿದವುಗಳೇ ಹೊರತು ಯೇಸುಕ್ರಿಸ್ತರಿಗಲ್ಲ.


ಗೂಢಾಚಾರರಾಗಿ ಬಂದಿದ್ದ ಕೆಲವು ಸಹೋದರರು ಅಲ್ಲಿದ್ದುದರಿಂದ ಒತ್ತಾಯ ನಡೆದೀತೆಂಬ ಶಂಕೆ ಇತ್ತು. ಇವರು ಕ್ರಿಸ್ತಯೇಸುವಿನಲ್ಲಿ ನಮಗಿರುವ ಮುಕ್ತ ಸ್ವಾತಂತ್ರ್ಯದ ಬಗ್ಗೆ ಗುಟ್ಟಾಗಿ ವಿಚಾರಿಸಲು ಬಂದಿದ್ದರು. ನಮ್ಮನ್ನು ಪುನಃ ದಾಸತ್ವದಲ್ಲಿ ಸಿಕ್ಕಿಸಬೇಕೆಂಬುದೇ ಅವರ ಉದ್ದೇಶವಾಗಿತ್ತು.


ಆದರೂ ಹವ್ವಳು ಸರ್ಪದ ಕುಯುಕ್ತಿಗೆ ಸಿಕ್ಕಿ ಮೋಸಹೋದಂತೆ ನೀವೂ ಕೂಡ ಕ್ರಿಸ್ತಯೇಸುವಿನ ವಿಷಯದಲ್ಲಿ ಇರಬೇಕಾದ ಶುದ್ಧ ಪಾತಿವ್ರತ್ಯವನ್ನು ಕಳೆದುಕೊಂಡು ಕೆಟ್ಟುಹೋದೀರಿ ಎಂಬ ಭಯ ನನಗುಂಟು.


ನನ್ನ ಬೋಧನೆ ಹಾಗು ಮಾತುಕತೆ ಕೇವಲ ಬುದ್ಧಿವಂತಿಕೆಯಿಂದಾಗಲಿ, ಮಾತಿನ ಚಮತ್ಕಾರದಿಂದಾಗಲಿ ಕೂಡಿರಲಿಲ್ಲ; ಅದಕ್ಕೆ ಬದಲಾಗಿ ದೇವರ ಆತ್ಮವನ್ನು ಅವರ ಶಕ್ತಿಯನ್ನು ಸಮರ್ಥಿಸುತ್ತಿದ್ದವು.


ಏಕೆಂದರೆ ಕಪಟ ಉದ್ಧಾರಕರೂ ವಂಚಕ ಪ್ರವಾದಿಗಳೂ ತಲೆಯೆತ್ತಿಕೊಳ್ಳುವರು. ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನೂ ಮೋಸಗೊಳಿಸುವಂತಹ ಮಹತ್ಕಾರ್ಯಗಳನ್ನೂ ಪವಾಡಗಳನ್ನೂ ಮಾಡಿತೋರಿಸುವರು.


ಪ್ರಭುವಿನ ಹೆಸರಿನಲ್ಲಿ ನಾನು ನಿಮಗೆ ಒತ್ತಿ ಹೇಳುತ್ತೇನೆ: ಇನ್ನು ಮುಂದೆ ನೀವು ಅನ್ಯಜನರಂತೆ ಜೀವಿಸುವುದನ್ನು ತ್ಯಜಿಸಿರಿ. ಅವರ ಆಲೋಚನೆಗಳು ಹುರುಳಿಲ್ಲದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು