Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 2:5 - ಕನ್ನಡ ಸತ್ಯವೇದವು C.L. Bible (BSI)

5 ನಾನು ಶಾರೀರಿಕವಾಗಿ ನಿಮ್ಮಿಂದ ದೂರವಿದ್ದರೂ ಆತ್ಮಿಕವಾಗಿ ನಿಮ್ಮೊಂದಿಗಿದ್ದೇನೆ. ನಿಮ್ಮ ಕ್ರಮಬದ್ಧ ನಡತೆಯನ್ನೂ ಕ್ರಿಸ್ತಯೇಸುವಿನಲ್ಲಿ ನಿಮಗಿರುವ ಸ್ಥಿರವಿಶ್ವಾಸವನ್ನೂ ನೋಡುವಾಗ ನನಗೆ ಅಮಿತಾನಂದವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಾನು ಶರೀರದಿಂದ ನಿಮ್ಮ ಬಳಿಯಲ್ಲಿ ಇಲ್ಲದಿದ್ದರೂ ಆತ್ಮನಿಂದ ನಿಮ್ಮೊಂದಿಗಿದ್ದು ನೀವು ಕ್ರಮಬದ್ಧವಾಗಿ ನಡೆಯುವುದನ್ನು ಮತ್ತು ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಂತಿರುವುದನ್ನೂ ನೋಡಿ ಸಂತೋಷಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಾನು ಶರೀರದಿಂದ ನಿಮ್ಮ ಬಳಿಯಲ್ಲಿ ಇಲ್ಲದಿದ್ದರೂ ಆತ್ಮದಿಂದ ನಿಮ್ಮೊಂದಿಗಿದ್ದು ನೀವು ಕ್ರಮವಾಗಿ ನಡೆಯುವದನ್ನೂ ಕ್ರಿಸ್ತನಂಬಿಕೆಯಲ್ಲಿ ದೃಢವಾಗಿ ನಿಂತಿರುವದನ್ನೂ ನೋಡಿ ಸಂತೋಷಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅಲ್ಲಿ ನಾನು ನಿಮ್ಮೊಡನೆ ಇರದಿದ್ದರೂ ನನ್ನ ಮನಸ್ಸು ನಿಮ್ಮೊಡನಿರುತ್ತದೆ. ನಿಮ್ಮ ಕ್ರಮಬದ್ಧವಾದ ನಡತೆಯನ್ನು ನೋಡಲು ಮತ್ತು ಕ್ರಿಸ್ತನಲ್ಲಿ ಇಟ್ಟಿರುವ ದೃಢನಂಬಿಕೆಯನ್ನು ಅರಿಯಲು ಬಹಳ ಸಂತೋಷಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಾನು ಶಾರೀರಿಕವಾಗಿ ನಿಮ್ಮಿಂದ ದೂರವಾಗಿದ್ದರೂ ಆತ್ಮದಲ್ಲಿ ನಿಮ್ಮೊಂದಿಗಿದ್ದು ನೀವು ಎಷ್ಟು ಕ್ರಮವುಳ್ಳವರೆಂಬುದನ್ನೂ, ಕ್ರಿಸ್ತ ಯೇಸುವಿನಲ್ಲಿ ನಿಮ್ಮ ವಿಶ್ವಾಸ ಎಷ್ಟು ದೃಢವಾಗಿದೆ ಎಂಬುದನ್ನೂ, ನೋಡಿ ನನಗೆ ಆನಂದವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಮಿಯಾ ತುಮ್ಚ್ಯಾ ವಾಂಗ್ಡಾ ರ್‍ಹಾಯ್ ನಸ್ಲ್ಯಾರ್ಬಿ; ಮಾಜೊ ಆತ್ಮೊ ತುಮ್ಚ್ಯಾ ವಾಂಗ್ಡಾ ರ್‍ಹಾತಾ, ತುಮಿ ಕ್ರಿಸ್ತಾಚ್ಯಾ ವಿಶ್ವಾಸಾತ್ ಘಟ್ಟ್ ಇಬೆ ಹೊತ್ತೆ ಬಗುನ್ ಲೈ ಮಿಯಾ ಕುಶಿ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 2:5
19 ತಿಳಿವುಗಳ ಹೋಲಿಕೆ  

ಸಹೋದರರೇ, ನಾವು ದೈಹಿಕವಾಗಿ ನಿಮ್ಮಿಂದ ಸ್ವಲ್ಪಕಾಲ ದೂರವಿದ್ದರೂ ಅಂತರಂಗದಲ್ಲಿ ನಿಮ್ಮೊಡನೆಯೇ ಇದ್ದೆವು; ನಿಮ್ಮನ್ನು ಮುಖಾಮುಖಿಯಾಗಿ ಕಾಣಲು ಪ್ರಯತ್ನಿಸಿದೆವು.


ವಿಶ್ವಾಸದಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ. ನಿಮ್ಮ ಸಹ ವಿಶ್ವಾಸಿಗಳು ಜಗತ್ತಿನಲ್ಲೆಲ್ಲಾ ಇಂಥ ಹಿಂಸೆಬಾಧೆಗಳನ್ನೇ ಅನುಭವಿಸುತ್ತಿದ್ದಾರೆಂದು ನಿಮಗೆ ತಿಳಿದಿದೆ.


ಜಾಗರೂಕರಾಗಿರಿ, ವಿಶ್ವಾಸದಲ್ಲಿ ದೃಢರಾಗಿರಿ, ಧೈರ್ಯಶಾಲಿಗಳಾಗಿರಿ, ಸ್ಥೈರ್ಯದಿಂದ ಬಾಳಿರಿ.


ನಾವೆಲ್ಲರೂ ಕ್ರಿಸ್ತಯೇಸುವಿನೊಡನೆ ಸಹಬಾಧ್ಯರು; ಆದರೆ, ಪ್ರಾರಂಭದಲ್ಲಿ ನಮಗಿದ್ದ ನಂಬಿಕೆ-ನಿರೀಕ್ಷೆಯನ್ನು ಕೊನೆಯವರೆಗೂ ಸ್ಥಿರವಾಗಿ ಇರಿಸಿಕೊಳ್ಳಬೇಕು.


ಆದರೆ ಎಲ್ಲವನ್ನು ಒಪ್ಪವಾಗಿ, ಓರಣವಾಗಿ ಮಾಡಿರಿ.


ಈ ನಂಬಿಕೆ, ನಿರೀಕ್ಷೆ, ನಮ್ಮ ಬಾಳನೌಕೆಯ ಸ್ಥಿರವಾದ ಹಾಗೂ ಸುರಕ್ಷಿತವಾದ ಲಂಗರಿನಂತಿದೆ. ಇದು ತೆರೆಯ ಹಿಂದಿರುವ ಸ್ವರ್ಗೀಯ ಗರ್ಭಗುಡಿಯನ್ನು ಪ್ರವೇಶಿಸುವಂಥದ್ದು.


ನೀವು ಪ್ರಭುವಿನಲ್ಲಿ ಅಚಲರಾಗಿರುವುದನ್ನು ಕೇಳಿ ಪುನಶ್ಚೇತನಗೊಂಡಿದ್ದೇವೆ.


ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿರಿ; ನಿಶ್ಚಲರಾಗಿರಿ. ಪ್ರಭುವಿನ ಸೇವೆಯಲ್ಲಿ ನೀವು ಪಡುವ ಪ್ರಯಾಸ ಎಂದಿಗೂ ನಿಷ್ಫಲವಾಗದು. ಆದ್ದರಿಂದ ಅವರ ಸೇವೆಯಲ್ಲಿ ನಿರಂತರ ಶ್ರದ್ಧೆಯುಳ್ಳವರಾಗಿರಿ.


ನೆಲೆಯಾಗಿರಲಿಲ್ಲ ಅವರ ಹೃದಯ ಆತನಲಿ I ಬದ್ಧರಾಗಿರಲಿಲ್ಲ ಆತನ ನಿಬಂಧನೆಗಳಲಿ II


ಮರೆಯರು ನನ್ನ ಮಹತ್ಕಾರ್ಯಗಳನು I ಇಡುವರು ನನ್ನಲ್ಲೇ ಭರವಸೆಯನು I ಕೈಗೊಳ್ಳುವರು ನನ್ನ ಆಜ್ಞೆಗಳನು II


ಇದಲ್ಲದೆ, ಯಾಜಕರು ಸಮರ್ಪಿಸಬೇಕಾಗಿದ್ದ ದಹನಬಲಿ, ಶಾಂತಿಸಮಾಧಾನ ಬಲಿಗಳ ಕೊಬ್ಬು ಹಾಗು ದಹನಬಲಿ ಸಂಬಂಧವಾದ ಪಾನದ್ರವ್ಯ ಇವೂ ಅಪಾರವಾಗಿ ಇದ್ದವು.


ನಿಮಗಾಗಿಯೂ ಲವೊದಿಕೀಯದವರಿಗಾಗಿಯೂ ಹಾಗೂ ನನ್ನ ನೇರ ಪರಿಚಯ ಇಲ್ಲದವರಿಗಾಗಿಯೂ ನಾನು ಎಷ್ಟು ಶ್ರಮಿಸುತ್ತಿದ್ದೇನೆಂಬುದನ್ನು ತಿಳಿಸಬಯಸುತ್ತೇನೆ.


ನೀವು ಹಸಿವು ನೀಗಿಸಿಕೊಳ್ಳುವುದಕ್ಕಾಗಿ ಸಭೆಗೆ ಬರುವುದಾದರೆ ಮನೆಯಲ್ಲೇ ಊಟಮಾಡಿ. ಆಗ ಸಭೆಸೇರಿ ನೀವು ನ್ಯಾಯವಿಚಾರಣೆಗೆ ಗುರಿಯಾಗುವುದಿಲ್ಲ. ಇನ್ನುಳಿದ ವಿಷಯಗಳನ್ನು ನಾನು ಬಂದು ಇತ್ಯರ್ಥ ಮಾಡುತ್ತೇನೆ.


ಅಂದಿನಿಂದ ಅವರು ಪ್ರೇಷಿತರ ಬೋಧನೆಯನ್ನು ಕೇಳುವುದರಲ್ಲಿ ನಿರತರಾಗಿದ್ದರು; ಅನ್ಯೋನ್ಯವಾಗಿ ಬಾಳುತ್ತಿದ್ದರು; ರೊಟ್ಟಿ ಮುರಿಯುವ ಸಹಭೋಜನದಲ್ಲಿ ಪಾಲ್ಗೊಳ್ಳುತ್ತಿದ್ದರು ಹಾಗೂ ಪ್ರಾರ್ಥನಾಕೂಟಗಳಲ್ಲಿ ಭಾಗವಹಿಸುತ್ತಿದ್ದರು.


ರೂತಳು ತನ್ನ ಸಂಗಡ ಬರಲು ನಿರ್ಧರಿಸಿದ್ದಾಳೆಂದು ತಿಳಿದು ನವೊಮಿ ಅವಳನ್ನು ಮತ್ತೆ ಒತ್ತಾಯಪಡಿಸಲಿಲ್ಲ.


ಪಾಪಕ್ಕೆ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಬೇಕು, ನಮ್ಮ ಪ್ರಭು ಯೇಸುವಿನಲ್ಲಿ ವಿಶ್ವಾಸವಿಡಬೇಕು, ಎಂದು ಯೆಹೂದ್ಯರಿಗೂ ಗ್ರೀಕರಿಗೂ ಸ್ಪಷ್ಟವಾದ ಎಚ್ಚರಿಕೆಯನ್ನು ಕೊಟ್ಟಿದ್ದೇನೆ.


ಆಗ ಸರ್ವೇಶ್ವರ ಮೋಶೆಗೆ, “ಒಬ್ಬೊಬ್ಬ ಕುಲಾಧಿಪತಿ ಒಂದೊಂದು ದಿನ ಬಲಿಪೀಠದ ಪ್ರತಿಷ್ಠೆಗಾಗಿ ತನ್ನ ಕಾಣಿಕೆಯನ್ನು ಸಮರ್ಪಿಸಲಿ,” ಎಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು