Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 3:10 - ಕನ್ನಡ ಸತ್ಯವೇದವು C.L. Bible (BSI)

10 ಮಾತ್ರವಲ್ಲ, ನೂತನ ಸ್ವಭಾವವನ್ನು ಧರಿಸಿಕೊಂಡಿದ್ದೀರಿ. ನೀವು ಸೃಷ್ಟಿಕರ್ತನನ್ನು ಸಂಪೂರ್ಣವಾಗಿ ಅರಿತುಕೊಳ್ಳಬೇಕು ಎಂಬ ಉದ್ದೇಶದಿಂದ ಈ ಸ್ವಭಾವವನ್ನು ಅನುದಿನವೂ ನವೀಕರಿಸಲಾಗುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಈ ನೂತನ ಸ್ವಭಾವವು ಸೃಷ್ಟಿಸಿದಾತನ ಹೋಲಿಕೆಯ ಜ್ಞಾನದ ಮೇರೆಗೆ ಅದು ನೂತನವಾಗುತ್ತಾ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಈ ಸ್ವಭಾವವು ಅದನ್ನು ಸೃಷ್ಟಿಸಿದಾತನ ಹೋಲಿಕೆಯ ಮೇರೆಗೆ ದಿನೇದಿನೇ ನೂತನವಾಗುತ್ತಾ ಪೂರ್ಣಜ್ಞಾನವನ್ನು ಉಂಟುಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನೀವು ಹೊಸ ಜೀವನವನ್ನು ಆರಂಭಿಸಿರುವಿರಿ. ಈ ಹೊಸ ಜೀವನದಲ್ಲಿ ನೀವು ನಿಮ್ಮನ್ನು ಸೃಷ್ಟಿಸಿದಾತನ ಹೋಲಿಕೆಯ ಮೇರೆಗೆ ನೂತನರಾಗುತ್ತಿದ್ದೀರಿ. ದೇವರ ಬಗ್ಗೆ ನಿಜವಾದ ತಿಳುವಳಿಕೆಯನ್ನು ಈ ಹೊಸ ಜೀವನ ಕೊಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಸೃಷ್ಟಿಕರ್ತನ ಸ್ವರೂಪವನ್ನು, ತಿಳುವಳಿಕೆಯಲ್ಲಿ ನವೀಕರಣ ಹೊಂದುತ್ತಿರುವ ಆ ನೂತನ ಸ್ವಭಾವವನ್ನೇ ಧರಿಸಿಕೊಂಡವರಾಗಿದ್ದೀರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಅನಿ ತುಮಿ ನ್ಹವಿ ಚಾಲ್ ನೆಸ್ಲ್ಯಾಸಿ, ತೆ ಹ್ಯಾ ನ್ಹವ್ಯಾ ಜಿವನಾತ್ ತುಮ್ಕಾ ರಚಲ್ಲ್ಯಾಚ್ಯಾ ರುಪಾ ಸಾರ್ಕೆ, ಶಾನೆಪಾನ್ ಘೆವ್ಕಸಾಟ್ನಿ ಅಮ್ಕಾ ನ್ಹವ್ಯಾನ್ ರಚುನ್ ಹೊಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 3:10
33 ತಿಳಿವುಗಳ ಹೋಲಿಕೆ  

ಇಹಲೋಕದ ಆಚಾರವಿಚಾರಗಳಿಗೆ ಮಾರುಹೋಗಬೇಡಿ. ಬದಲಿಗೆ, ಮಾನಸಾಂತರಗೊಂಡು ನೂತನ ಜೀವಿಗಳಾಗಿ ಬಾಳಿರಿ. ಆಗ ನೀವು ದೇವರ ಚಿತ್ತಾನುಸಾರ ಯಾವುದು ಉತ್ತಮವಾದುದು, ಯಾವುದು ಉನ್ನತವಾದುದು, ಯಾವುದು ಉತ್ಕೃಷ್ಟವಾದುದು ಎಂಬುದನ್ನು ಅರಿತುಕೊಳ್ಳುವಿರಿ.


ನಾವಾದರೋ ದೇವರ ಕಲಾಕೃತಿಗಳು. ಕ್ರಿಸ್ತಯೇಸುವಿನಲ್ಲಿ ನಾವು ಸತ್ಕಾರ್ಯಗಳನ್ನು ಮಾಡುತ್ತಾ ಬಾಳಬೇಕೆಂದು ತಾವು ಮೊದಲೇ ನಿರ್ಣಯಿಸಿದ್ದಂತೆ ದೇವರು ನಮ್ಮನ್ನು ಸೃಷ್ಟಿಸಿದ್ದಾರೆ.


ನೀವು ದೇವರಿಂದ ಆಯ್ಕೆಯಾದವರು. ದೇವರಿಗೆ ಪ್ರಿಯವಾದವರು. ದೇವರ ಸ್ವಂತಜನರು. ಹೀಗಿರಲಾಗಿ ಕನಿಕರ, ದಯೆ, ದೀನತೆ, ವಿನಯಶೀಲತೆ, ಶಾಂತಿ, ಸಹನೆ ಎಂಬ ಸದ್ಗುಣಗಳೇ ನಿಮ್ಮ ಆಭರಣಗಳಾಗಿರಲಿ.


ಯಾರಾದರೂ ಯೇಸುಕ್ರಿಸ್ತರೊಡನೆ ಒಂದಾದರೆ ಅವನು ನೂತನ ಸೃಷ್ಟಿಯಾಗುತ್ತಾನೆ. ಹಳೆಯದೆಲ್ಲಾ ಅಳಿದುಹೋಗುತ್ತದೆ. ಹೊಸದಿದೋ, ಜನ್ಮತಳೆದಿದೆ.


ಶುದ್ಧ ಹೃದಯವನು ದೇವಾ, ನಿರ್ಮಿಸು I ಅಂತರಂಗವನು ಚೇತನಗೊಳಿಸು II


ಅವರು ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ನೆರವೇರಿಸುವಂತೆ ನಾನು ಅವರಿಗೆ ಒಂದೇ ಮನಸ್ಸನ್ನು ದಯಪಾಲಿಸಿ, ನೂತನ ಸ್ವಭಾವವನ್ನು ಅವರಲ್ಲಿ ಹುಟ್ಟಿಸುವೆನು;


ಎಲ್ಲಕ್ಕಿಂತ ಮಿಗಿಲಾಗಿ ನಿಮ್ಮಲ್ಲಿ ಪ್ರೀತಿಯಿರಲಿ. ಪ್ರೀತಿಯೇ ಸಮಸ್ತವನ್ನು ಸಂಪೂರ್ಣಗೊಳಿಸುವ ಬಂಧನ.


ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು, ನಿಮ್ಮಲ್ಲಿ ನನ್ನ ಸ್ವಭಾವವನ್ನು ಹುಟ್ಟಿಸುವೆನು. ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು, ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು.


ಆದರೆ ದೇವರ ವಾಕ್ಯವನ್ನು ಕೈಗೊಂಡು ನಡೆಯುವವನಲ್ಲಿ ಪ್ರೀತಿ ನಿಜಕ್ಕೂ ಸಿದ್ಧಿಗೆ ಬಂದಿರುತ್ತದೆ.


ದೇಹದ ದುರಿಚ್ಛೆಗಳಿಗೆ ಬಲಿಯಾಗದೆ ಕ್ರಿಸ್ತಂಬರರಾಗಿರಿ.


ನಾವು ದೇವರ ಆಜ್ಞೆಗಳನ್ನು ಕೈಗೊಂಡು ನಡೆದರೆ ಅದರಿಂದಲೇ ಅವರ ಅರಿವು ನಮಗಿದೆ ಎಂದು ಖಚಿತವಾಗುತ್ತದೆ.


ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡರೋಅವರನ್ನು ತಮ್ಮ ಪುತ್ರನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದರು. ಹೀಗೆ ಅನೇಕ ಸಹೋದರರಲ್ಲಿ ತಮ್ಮ ಪುತ್ರನೇ ಜೇಷ್ಠನಾಗಿರಬೇಕೆಂಬುದು ದೇವರ ನಿರ್ಧಾರವಾಗಿದೆ.


ಏಕೈಕ ನಿಜದೇವರಾದ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅರಿತುಕೊಳ್ಳುವುದೇ ನಿತ್ಯಜೀವ.


ನೀವು ಮಾಡುತ್ತಾ ಬಂದಿರುವ ಅಪರಾಧಗಳನ್ನೆಲ್ಲಾ ನಿಮ್ಮಿಂದ ತೊಲಗಿಸಿಬಿಟ್ಟು, ನಿಮ್ಮ ಹೃದಯವನ್ನೂ ಸ್ವಭಾವವನ್ನೂ ನೂತನ ಮಾಡಿಕೊಳ್ಳಿ; ಇಸ್ರಯೇಲ್ ವಂಶದವರೇ, ನೀವು ಏಕೆ ಸಾಯಬೇಕು?


ಸಿಂಹಾಸನಾರೂಢನಾಗಿದ್ದವನು ಆಗ, “ಇಗೋ, ನಾನೆಲ್ಲವನ್ನೂ ಹೊಸದಾಗಿಸುತ್ತೇನೆ,” ಎಂದನು. ಅಲ್ಲದೆ ಅವನು, “ಇದನ್ನು ನೀನು ಬರೆ, ಈ ಮಾತುಗಳು ಸತ್ಯವಾದುವು ಹಾಗೂ ವಿಶ್ವಾಸಾರ್ಹವಾದುವು,” ಎಂದು ಹೇಳಿದನು.


ವಿಧಿನಿಯಮಗಳಿಂದ ಕೂಡಿದ ಧರ್ಮಶಾಸ್ತ್ರವನ್ನು ನಿರರ್ಥಕಗೊಳಿಸಿದ್ದಾರೆ. ಉಭಯರನ್ನು ಒಂದುಗೂಡಿಸಿ, ಶಾಂತಿ ಸಮಾಧಾನವನ್ನೇರ್ಪಡಿಸಿ, ನೂತನ ಮಾನವನನ್ನಾಗಿ ಪರಿವರ್ತಿಸಿದ್ದಾರೆ.


ಸುನ್ನತಿ ಮಾಡಿಸಿಕೊಳ್ಳುವುದೋ, ಮಾಡಿಸಿಕೊಳ್ಳದಿರುವುದೋ ಮಹತ್ತಾದುದಲ್ಲ. ಹೊಸ ಸೃಷ್ಟಿಯಾಗುವುದೇ ಮಹತ್ತರವಾದುದು.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದ ದೇವರೇ, ತಮ್ಮ ಜ್ಯೋತಿಯಿಂದ ನಮ್ಮ ಅಂತರಂಗವನ್ನು ಬೆಳಗಿಸಿದ್ದಾರೆ. ಇದರ ಪರಿಣಾಮವಾಗಿ ಕ್ರಿಸ್ತಯೇಸುವಿನ ಮುಖಮಂಡಲದಲ್ಲಿ ಪ್ರಜ್ವಲಿಸುತ್ತಿರುವ ದೇವರ ಮಹಿಮೆಯ ದಿವ್ಯಜ್ಞಾನವು ನಮ್ಮಲ್ಲಿ ಉದಯಿಸುವಂತಾಗಿದೆ.


ಮುಸುಕು ತೆರೆದ ಮುಖವುಳ್ಳ ನಾವೆಲ್ಲರೂ ಪ್ರಭುವಿನ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತೆ ಇದ್ದೇವೆ. ಆ ಪ್ರಭುವಿನಿಂದ ಹೊರಹೊಮ್ಮುವ ಮಹಿಮೆ ನಮ್ಮನ್ನು ಅಧಿಕಾಧಿಕವಾಗಿ ಮಾರ್ಪಡಿಸಿ ಅವರನ್ನೇ ಹೋಲುವಂತೆ ಮಾಡುತ್ತದೆ. ಇದೆಲ್ಲಾ ದೇವರಾತ್ಮವಾಗಿರುವ ಪ್ರಭುವಿನ ಕಾರ್ಯವೇ ಸರಿ.


ಇರುಳು ಬಹುಮಟ್ಟಿಗೆ ಕಳೆಯಿತು. ಹಗಲು ಸಮೀಪಿಸಿತು. ಇನ್ನು ಅಂಧಕಾರಕ್ಕೆ ಅನುಗುಣವಾದ ದುಷ್ಕೃತ್ಯಗಳನ್ನು ತ್ಯಜಿಸಿಬಿಡೋಣ. ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ.


ಹೇಗೆಂದರೆ, ಕ್ರಿಸ್ತಯೇಸುವಿನಲ್ಲಿ ಒಂದಾಗುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡಿರುವ ನೀವೆಲ್ಲರೂ ಕ್ರಿಸ್ತಂಬರರಾಗಿದ್ದೀರಿ.


ಎಚ್ಚರಗೊಳ್ಳು, ಎಚ್ಚರಗೊಳ್ಳು ಓ ಸಿಯೋನೇ, ಶಕ್ತಿಶಾಲಿಯಾಗು ಪವಿತ್ರನಗರ ಜೆರುಸಲೇಮೆ. ಧರಿಸಿಕೊ ನಿನ್ನ ಚಂದದ ಉಡುಪನು ನಿನ್ನೊಳಗೆ ಪ್ರವೇಶಿಸರು ಇನ್ನು ಅಪವಿತ್ರರು, ಅನ್ಯಧರ್ಮೀಯರು.


ಅನಂತರವೂ ವಿಶ್ವಾಸಭ್ರಷ್ಟನಾದರೆ, ಅಂಥವನು ಪಶ್ಚಾತ್ತಾಪಪಟ್ಟು ದೈವಾಭಿಮುಖನಾಗುವುದು ಅಸಾಧ್ಯ. ಏಕೆಂದರೆ, ಅಂಥವನು ತನ್ನ ಪಾಲಿಗೆ ದೇವರ ಪುತ್ರನನ್ನು ಪುನಃ ಶಿಲುಬೆಗೆ ಏರಿಸಿ ಅವರನ್ನು ಬಹಿರಂಗವಾಗಿ ಅವಮಾನಗೊಳಿಸುವವನಾಗುತ್ತಾನೆ.


ಅವರು ನ್ಯಾಯನೀತಿಯನ್ನು ವಜ್ರಕವಚವನ್ನಾಗಿ ತೊಟ್ಟುಕೊಳ್ಳುವರು. ರಕ್ಷಣೆ ಎಂಬ ಶಿರಸ್ತ್ರಾಣವನ್ನು ಧರಿಸಕೊಳ್ಳುವರು. ಪ್ರತೀಕಾರವೆಂಬ ಉಡುಪನ್ನು ಉಟ್ಟುಕೊಳ್ಳುವರು. ಆಗ್ರಹ ಎಂಬ ನಿಲುವಂಗಿಯನ್ನು ಹಾಕಿಕೊಳ್ಳುವರು.


ಧರ್ಮವನ್ನು ನಾನು ಧರಿಸಿಕೊಂಡೆ; ಅದು ನನಗೆ ಅಂಬರವಾಗಿತ್ತು ನ್ಯಾಯನೀತಿ ನನಗೆ ನಿಲುವಂಗಿಯೂ ಪೇಟವೂ ಆಗಿತ್ತು.


ಆದಾಮನ ವಂಶದವರ ಚರಿತ್ರೆ: ಸೃಷ್ಟಿಕಾಲದಲ್ಲಿ ದೇವರು ಮಾನವನನ್ನು ತಮ್ಮ ಹೋಲಿಕೆಯಂತೆಯೇ ಸೃಷ್ಟಿಮಾಡಿದರು.


ಹೀಗಿರಲಾಗಿ, ದೀಕ್ಷಾಸ್ನಾನ ಮಾಡಿಸಿಕೊಂಡಾಗ ಅವರ ಮರಣದಲ್ಲಿ ಪಾಲುಗಾರರಾದ ನಮಗೆ ಅವರೊಡನೆ ಸಮಾಧಿಯೂ ಆಯಿತು. ಆದುದರಿಂದ ತಂದೆಯ ಮಹಿಮಾಶಕ್ತಿಯಿಂದ ಕ್ರಿಸ್ತಯೇಸು ಮರಣದಿಂದ ಪುನರುತ್ಥಾನ ಹೊಂದಿದಂತೆಯೇ ನಾವು ಸಹ ಹೊಸಜೀವವನ್ನು ಹೊಂದಿ ಬಾಳುತ್ತೇವೆ.


ಹೀಗಿರಲು, ನಾವು ಎದೆಗುಂದುವುದಿಲ್ಲ. ನಮ್ಮ ಭೌತಿಕ ದೇಹವು ನಶಿಸುತ್ತಿದ್ದರೂ ನಮ್ಮ ಅಂತರಂಗವು ದಿನೇದಿನೇ ನೂತನವಾಗುತ್ತದೆ.


ನಿನ್ನ ವಿಶ್ವಾಸವನ್ನು ಬೇರೆಯವರಿಗೂ ನೀಡಿ ಕ್ರಿಸ್ತಯೇಸುವಿನಲ್ಲಿ ನಮ್ಮದಾಗಿರುವ ಎಲ್ಲಾ ಒಳಿತಿನ ಅರಿವನ್ನು ಹೆಚ್ಚಿಸಿಕೊಳ್ಳಬೇಕೆಂಬುದೇ ನನ್ನ ಪ್ರಾರ್ಥನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು