Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 4:5 - ಕನ್ನಡ ಸತ್ಯವೇದವು C.L. Bible (BSI)

5 ನೆರೆಯವರ ವಿಷಯದಲ್ಲಿ ಜಾಣತನದಿಂದ ವರ್ತಿಸಿರಿ. ನಿಮಗಿರುವ ಸಮಯ ಸಂದರ್ಭವನ್ನು ಸದುಪಯೋಗಪಡಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಸಮಯವನ್ನು ಸದುಪಯೋಗಿಸಿಕೊಂಡು ಹೊರಗಿನವರೊಂದಿಗೆ ಜ್ಞಾನವುಳ್ಳವರಾಗಿ ನಡೆದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಸಮಯವನ್ನು ಸುಮ್ಮನೆ ಕಳಕೊಳ್ಳದೆ ಅದನ್ನು ಬೆಲೆಯುಳ್ಳದ್ದೆಂದು ಉಪಯೋಗಿಸಿ ಹೊರಗಿನವರ ಮುಂದೆ ಜ್ಞಾನವುಳ್ಳವರಾಗಿ ನಡೆದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅವಿಶ್ವಾಸಿಗಳೊಂದಿಗೆ ವ್ಯವಹರಿಸುವಾಗ ಜ್ಞಾನವುಳ್ಳವರಾಗಿರಿ. ನಿಮ್ಮ ಸಮಯವನ್ನು ಅತ್ಯುತ್ತಮವಾದ ರೀತಿಯಲ್ಲಿ ಬಳಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಪ್ರತಿಯೊಂದು ಅವಕಾಶವನ್ನೂ ಸದುಪಯೋಗ ಮಾಡಿಕೊಂಡು ಹೊರಗಿನವರೊಂದಿಗೆ ಜಾಣತನದಿಂದ ನಡೆದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ವಿಶ್ವಾಸ್ ನಸಲ್ಲ್ಯಾ ಲೊಕಾಂಚ್ಯಾಕ್ನಾ ಯಾವಾರ್ ಕರ್‍ತಾನಾ, ಬುದ್ದ್ ಹೊತ್ತೆ ಹೊವ್ನ್ ರ್‍ಹಾವಾ, ತುಮ್ಕಾ ದಿಲ್ಲೊ ಎಳ್ ಬರ್‍ಯಾ ರಿತಿನ್ ವಾಪ್ರುನ್ ಘೆವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 4:5
15 ತಿಳಿವುಗಳ ಹೋಲಿಕೆ  

ಹೀಗೆ ಬಾಳಿದರೆ ಅನ್ಯಜನರು ನಿಮ್ಮನ್ನು ಗೌರವಿಸುವರು; ಇತರರನ್ನು ಅವಲಂಬಿಸುವ ಅವಶ್ಯಕತೆ ನಿಮಗಿರುವುದಿಲ್ಲ.


ನಿಮ್ಮಲ್ಲಿ ಯಾರಾದರೂ ಜ್ಞಾನಿಯೂ ವಿವೇಕಿಯೂ ಆದವನು ಇದ್ದಾನೋ? ಅಂಥವನು ಜ್ಞಾನದ ಲಕ್ಷಣವಾಗಿರುವ ವಿನಯಶೀಲತೆಯನ್ನು ತನ್ನ ನಡೆನುಡಿಯಲ್ಲಿ ತೋರ್ಪಡಿಸಲಿ.


ನೀವು ಶುಭಸಂದೇಶಕ್ಕೆ ವಿಧೇಯರಾಗಿ ನಡೆಯುವವರೆಂಬ ಸಮಾಚಾರ ಎಲ್ಲೆಲ್ಲೂ ಹರಡಿದೆ. ಇದರಿಂದಾಗಿ ನಾನು ನಿಮ್ಮ ವಿಷಯದಲ್ಲಿ ಸಂತೋಷಪಡುತ್ತೇನೆ. ನೀವು ಒಳ್ಳೆಯ ವಿಷಯದಲ್ಲಿ ಜಾಣರೂ ಕೆಟ್ಟ ವಿಷಯದಲ್ಲಿ ಕಳಂಕರಹಿತರೂ ಆಗಿರಬೇಕು.


ದೇವರಿಂದ ಬರುವ ಜ್ಞಾನವಾದರೋ ಮೊಟ್ಟಮೊದಲನೆಯದಾಗಿ ಪವಿತ್ರವಾದುದು. ಅದು ಶಾಂತಿಸಮಾಧಾನ ಉಳ್ಳದ್ದು. ಸಹನೆ ಸಂಯಮವುಳ್ಳದ್ದು, ನ್ಯಾಯಸಮ್ಮತವಾದದ್ದು, ದಯೆದಾಕ್ಷಿಣ್ಯಗಳಿಂದಲೂ ಸತ್ಕಾರ್ಯಗಳಿಂದಲೂ ಫಲಭರಿತವಾದದ್ದು. ವಂಚನೆಯಾಗಲಿ, ಚಂಚಲತೆಯಾಗಲಿ ಅದರಲ್ಲಿ ಇರುವುದಿಲ್ಲ.


“ಗಮನಿಸಿರಿ, ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಸೂಕ್ಷ್ಮಬುದ್ಧಿಯುಳ್ಳವರೂ ಪಾರಿವಾಳಗಳಂತೆ ಸರಳಜೀವಿಗಳೂ ಆಗಿರಿ.


ಕ್ರೈಸ್ತರಲ್ಲದವರಿಂದಲೂ ಆತನು ಒಳ್ಳೆಯವನೆನಿಸಿಕೊಂಡಿರಬೇಕು. ಹೀಗಿದ್ದರೆ ಮಾತ್ರ ನಿಂದೆಗೊಳಗಾಗದೆ ಸೈತಾನನ ಕುತಂತ್ರಗಳಿಂದ ದೂರವಿರಬಲ್ಲನು.


ಕ್ರಿಸ್ತಯೇಸುವಿನ ವಾಕ್ಯ ನಿಮ್ಮಲ್ಲಿ ನೆಲೆಸಿ ಸಮೃದ್ಧಿಯಾಗಿ ಬೆಳೆಯಲಿ. ಜ್ಞಾನಸಂಪನ್ನರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿರಿ ಹಾಗೂ ಬುದ್ಧಿ ಹೇಳಿಕೊಳ್ಳಿರಿ. ಕೃತಜ್ಞತೆಯುಳ್ಳವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಭಕ್ತಿಗೀತೆಗಳಿಂದಲೂ ಹೃದಯಾಂತರಾಳದಿಂದ ದೇವರಿಗೆ ಹಾಡಿರಿ.


ಅದಕ್ಕೆ ಯೇಸು, “ದೇವರ ಸಾಮ್ರಾಜ್ಯದ ರಹಸ್ಯವನ್ನು ನಿಮಗೆ ತಿಳಿಸಲಾಗಿದೆ. ಮಿಕ್ಕವರಿಗಾದರೋ ಅದೆಲ್ಲವೂ ಸಾಮತಿಗಳ ರೂಪದಲ್ಲಿ ಮರೆಯಾಗಿದೆ. ಏಕೆಂದರೆ,


ನಿಮ್ಮಲ್ಲಿ ಯಾರಿಗಾದರೂ ಜ್ಞಾನದ ಕೊರತೆಯಿದ್ದರೆ ಅಂಥವನು ದೇವರಲ್ಲಿ ಬೇಡಿಕೊಳ್ಳಲಿ. ಯಾರನ್ನೂ ತಿರಸ್ಕರಿಸದೆ ಎಲ್ಲರಿಗೂ ಯಥೇಚ್ಛವಾಗಿ ನೀಡುವ ದೇವರು, ಅವನಿಗೆ ಜ್ಞಾನವನ್ನು ದಯಪಾಲಿಸುತ್ತಾರೆ.


ಅಂತೆಯೇ ಸ್ತ್ರೀಯರೇ, ನೀವು ನಿಮ್ಮ ಪತಿಯರಿಗೆ ವಿಧೇಯರಾಗಿರಿ. ಅವರಲ್ಲಿ ಕೆಲವರು ದೇವರ ವಾಕ್ಯವನ್ನು ನಂಬದೆ ಇರಬಹುದು. ಆದರೂ ಯಾವ ಮಾತುಕತೆಯಿಲ್ಲದೆ ನಿಮ್ಮ ಸನ್ನಡತೆಯಿಂದಲೇ ಅವರನ್ನು ಜಯಿಸಬಹುದು.


ಜೀವನಾವಧಿಯನು ಲೆಕ್ಕಿಸುವುದನು ನಮಗೆ ಕಲಿಸು I ಈ ಪರಿಜ್ಞಾನವುಳ್ಳಂಥ ಹೃದಯವನು ನೀ ಕರುಣಿಸು II


ಅದಕ್ಕೆ ರಾಜನು, “ನೀವು ಆ ಕನಸನ್ನು ನನಗೆ ತಿಳಿಸದಿದ್ದರೆ ನಿಮಗೆ ಮರಣದಂಡನೆಯಾಗುವುದು ಖಚಿತವೆಂದು ತಿಳಿದೇ ಕಾಲಹರಣ ಮಾಡುತ್ತಿದ್ದೀರಿ. ಇದು ನನಗೆ ಚೆನ್ನಾಗಿ ಗೊತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು