Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 2:21 - ಕನ್ನಡ ಸತ್ಯವೇದವು C.L. Bible (BSI)

21 ದೇವರ ಅನುಗ್ರಹವನ್ನು ನಿರಾಕರಿಸುವಂಥವನು ನಾನಲ್ಲ. ಧರ್ಮಶಾಸ್ತ್ರದ ಮೂಲಕ ದೇವರೊಡನೆ ಸತ್ಸಂಬಂಧವು ದೊರಕುವುದಾದರೆ ಕ್ರಿಸ್ತಯೇಸು ಮರಣಕ್ಕೀಡಾದುದು ನಿರರ್ಥಕವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಾನು ದೇವರ ಕೃಪೆಯನ್ನು ತಿರಸ್ಕರಿಸುವುದಿಲ್ಲ. ಧರ್ಮಶಾಸ್ತ್ರದ ಮೂಲಕ ನೀತಿವಂತರಾಗಬಹುದಾದರೆ ಕ್ರಿಸ್ತನು ಮರಣಕ್ಕೀಡಾದುದು ನಿರರ್ಥಕವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಾನು ದೇವರ ಕೃಪೆಯನ್ನು ನಿರರ್ಥಕ ಮಾಡುವದಿಲ್ಲ. ಕರ್ಮಮಾರ್ಗದಿಂದ ನೀತಿಯುಂಟಾಗುವದಾದರೆ ಕ್ರಿಸ್ತನು ಮರಣವನ್ನು ಹೊಂದಿದ್ದಕ್ಕೆ ಕಾರಣವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಇದು ದೇವರ ವರವಾಗಿದೆ ಮತ್ತು ನನಗೆ ಅತಿಮುಖ್ಯವಾದದ್ದಾಗಿದೆ. ಏಕೆಂದರೆ ಧರ್ಮಶಾಸ್ತ್ರವು ನಮ್ಮನ್ನು ನೀತಿವಂತರನ್ನಾಗಿ ಮಾಡಬಹುದಾಗಿದ್ದರೆ, ಕ್ರಿಸ್ತನು ಸಾಯುವ ಅಗತ್ಯವೇ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಾನು ದೇವರ ಕೃಪೆಯನ್ನು ತಿರಸ್ಕರಿಸುವುದಿಲ್ಲ. ಏಕೆಂದರೆ ನಿಯಮದ ಮೂಲಕ ನೀತಿಯು ಬರುವುದಾದರೆ, ಕ್ರಿಸ್ತ ಯೇಸು ಕಾರಣವಿಲ್ಲದೆ ಸತ್ತಂತಾಯಿತು!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ದೆವಾಚಿ ಕುರ್ಪಾ ನಕ್ಕೊ ಮನುಕ್ ಮಿಯಾ ತಯಾರ್ ನಾ, ಕಶ್ಯಾಕ್ ಮಟ್ಲ್ಯಾರ್ ಖಾಯ್ದ್ಯಾಚ್ಯಾ ವೈನಾ ಮಾನುಸ್ ನಿತಿವಂತ್ ಹೊತಾ ಹೊಲ್ಯಾರ್, ಕ್ರಿಸ್ತ್ ಮರಲ್ಲೆ ಕಾಯ್ಬಿ ಫಾಯ್ದ್ಯಾಚೆ ನ್ಹಯ್ ಮನುನ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 2:21
16 ತಿಳಿವುಗಳ ಹೋಲಿಕೆ  

ಅವರು ಆಯ್ಕೆಯಾದುದು ತಮ್ಮ ಸತ್ಕಾರ್ಯಗಳ ಆಧಾರದಿಂದಲ್ಲ, ದೈವಾನುಗ್ರಹದಿಂದಲೇ. ಇಲ್ಲದಿದ್ದರೆ, ದೈವಾನುಗ್ರಹ ನಿಜವಾಗಿ ದೈವಾನುಗ್ರಹ ಎನಿಸಿಕೊಳ್ಳುತ್ತಿರಲಿಲ್ಲ.


ಹಾಗಾದರೆ, ಧರ್ಮಶಾಸ್ತ್ರ ದೇವರ ವಾಗ್ದಾನಕ್ಕೆ ವಿರುದ್ಧವಾಗಿದೆಯೆಂದು ಹೇಳೋಣವೇ? ಎಂದಿಗೂ ಇಲ್ಲ. ಸಜ್ಜೀವಗೊಳಿಸುವ ಶಕ್ತಿಯನ್ನು ಧರ್ಮಶಾಸ್ತ್ರ ಹೊಂದಿದ್ದರೆ ಅದನ್ನು ಅನುಸರಿಸುವುದರಿಂದ ನಿಸ್ಸಂದೇಹವಾಗಿ ದೇವರೊಡನೆ ಸತ್ಸಂಬಂಧ ದೊರಕುತ್ತಿತ್ತು.


ಇಸ್ರಯೇಲರಿಗೆ ಕೊಡಲಾದ ಧರ್ಮಶಾಸ್ತ್ರ ಲೇವಿಯರ ಯಾಜಕತ್ವದ ಮೇಲೆಯೇ ಆಧಾರಗೊಂಡಿದೆ. ಲೇವಿಯರ ಈ ಯಾಜಕತ್ವದಿಂದಲೇ ಸಂಪೂರ್ಣ ಸಿದ್ಧಿ ಪ್ರಾಪ್ತವಾಗುತ್ತಿತ್ತಾದರೆ, ಆರೋನನ ಪರಂಪರೆಗೆ ಸೇರದೆ ಮೆಲ್ಕಿಸದೇಕನ ಪರಂಪರೆಗೆ ಸೇರಿದ ಬೇರೊಬ್ಬ ಯಾಜಕನು ಕಾಣಿಸಿಕೊಳ್ಳುವ ಅವಶ್ಯಕತೆ ಏನಿತ್ತು?


ಕ್ರಿಸ್ತಯೇಸು ಪುನರುತ್ಥಾನರಾಗಲಿಲ್ಲ ಎಂದರೆ ನಮ್ಮ ಬೋಧನೆ ಬರಿದು; ನಿಮ್ಮ ವಿಶ್ವಾಸವೂ ಬರಿದು.


ಆದರೂ ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸುವುದರಿಂದಲ್ಲ, ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಡುವುದರಿಂದ ಮಾತ್ರ ಮಾನವನು ದೇವರೊಡನೆ ಸತ್ಸಂಬಂಧವನ್ನು ಪಡೆಯುತ್ತಾನೆಂದು ಬಲ್ಲೆವು. ದೇವರೊಡನೆ ಸತ್ಸಂಬಂಧವನ್ನು ಪಡೆಯುವ ಸಲುವಾಗಿ ನಾವೂ ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಬಿಟ್ಟು, ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿದ್ದೇವೆ. ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸುವುದರಿಂದಲೆ ಯಾರೂ ದೇವರೊಡನೆ ಸತ್ಸಂಬಂಧಿಕರಾಗಿ ಕಂಡುಬರುವುದಿಲ್ಲ.


ದೇವರೊಡನೆ ಸತ್ಸಂಬಂಧವನ್ನು ಪಡೆಯುವ ಮಾರ್ಗವನ್ನು ಅರಿಯದೆ ತಮ್ಮದೇ ಆದ ಧರ್ಮವನ್ನು ಸ್ಥಾಪಿಸಲು ಅವರು ಪ್ರಯತ್ನಿಸಿದರು. ಎಂದೇ ಅವರು ದೈವ ಸತ್ಸಂಬಂಧಕ್ಕೆ ಬಾಹಿರರಾದರು.


ಇಂತೆಂದುಕೊಂಡೆ ನಾನಾಗ : ವ್ಯರ್ಥವಾಯಿತು ನನ್ನ ಸಾಮರ್ಥ್ಯವೆಲ್ಲ ಶೂನ್ಯವಾಗಿ ಹೋಯಿತು ನನ್ನ ಶಕ್ತಿಯೆಲ್ಲ ನನಗೆ ದೊರಕುವುದು ನ್ಯಾಯ ಸರ್ವೇಶ್ವರನ ಕೈಯಲ್ಲೇ, ನನಗೆ ಬರುವುದು ಬಹುಮಾನ ಆ ದೇವರಿಂದಲೇ.


ನಾನು ನಿಮಗೆ ಶುಭಸಂದೇಶವೆಂದು ತಿಳಿಸಿದ ಸಂಗತಿಯನ್ನು ದೃಢವಾಗಿ ವಿಶ್ವಾಸಿಸಿದರೆ ನೀವು ಜೀವೋದ್ಧಾರವನ್ನು ಪಡೆಯುವಿರಿ. ಇಲ್ಲವಾದರೆ ನಿಮ್ಮ ವಿಶ್ವಾಸ ನಿರರ್ಥಕವಾದೀತು.


ನಾನು ಕೆಡವಿದ್ದನ್ನೇ ಪುನಃ ಕಟ್ಟಿದರೆ ನನ್ನನ್ನು ನಾನೇ ಅಪರಾಧಿ ಎಂದು ರುಜುವಾತು ಪಡಿಸಿದಂತಾಗುವುದಿಲ್ಲವೇ?


ಹೀಗಿರುವಲ್ಲಿ ನಾವು ಏನು ಹೇಳೋಣ? ದೇವರೇ ನಮ್ಮ ಪರ ಇರುವಾಗ ನಮ್ಮನ್ನು ವಿರೋಧಿಸುವವರು ಯಾರು?


ಸಂಪ್ರದಾಯದ ನೆವದಲ್ಲಿ ದೇವರ ಆಜ್ಞೆಗಳನ್ನು ನೀವು ಜಾಣ್ಮೆಯಿಂದ ಬದಿಗೊತ್ತಿರುವುದು ಬಲು ಚೆನ್ನಾಗಿದೆ!


ವ್ಯರ್ಥವಾಗಿಪನು ಪ್ರಭು ರಾಷ್ಟ್ರಯೋಜನೆಗಳನು I ನಿರರ್ಥಕವಾಗಿಪನು ಜನರ ದುಷ್ಟಸಂಕಲ್ಪಗಳನು II


ಕ್ರಿಸ್ತಯೇಸುವೇ ಪುನರುತ್ಥಾನ ಹೊಂದಿಲ್ಲ ಎಂದಮೇಲೆ ನಿಮ್ಮ ವಿಶ್ವಾಸವೇ ನಿರರ್ಥಕ; ಮತ್ತು ನೀವಿನ್ನೂ ನಿಮ್ಮ ಪಾಪಗಳಲ್ಲಿಯೇ ಮುಳುಗಿದ್ದೀರಿ;


‘ನಾವು ಜ್ಞಾನಿಗಳು. ಸರ್ವೇಶ್ವರನ ಧರ್ಮಶಾಸ್ತ್ರ ನಮ್ಮಲ್ಲಿದೆ’ ಎಂದು ನೀವು ಹೇಗೆ ತಾನೇ ಹೇಳಬಲ್ಲಿರಿ? ಧರ್ಮಶಾಸ್ತ್ರಿಗಳ ಸುಳ್ಳು ಲೇಖನಿ ಅದನ್ನು ಸುಳ್ಳನ್ನಾಗಿ ಮಾಡಿದೆ.


ನಮ್ಮ ಪಾಪಗಳ ನಿಮಿತ್ತ ಯೇಸುವನ್ನು ಮರಣಕ್ಕೆ ಗುರಿಪಡಿಸಲಾಯಿತು. ನಮ್ಮನ್ನು ದೇವರೊಡನೆ ಸತ್ಸಂಬಂಧದಲ್ಲಿ ಇರಿಸುವುದಕ್ಕಾಗಿ ಅವರು ಪುನರುತ್ಥಾನ ಹೊಂದಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು