Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 2:4 - ಕನ್ನಡ ಸತ್ಯವೇದವು C.L. Bible (BSI)

4 ಗೂಢಾಚಾರರಾಗಿ ಬಂದಿದ್ದ ಕೆಲವು ಸಹೋದರರು ಅಲ್ಲಿದ್ದುದರಿಂದ ಒತ್ತಾಯ ನಡೆದೀತೆಂಬ ಶಂಕೆ ಇತ್ತು. ಇವರು ಕ್ರಿಸ್ತಯೇಸುವಿನಲ್ಲಿ ನಮಗಿರುವ ಮುಕ್ತ ಸ್ವಾತಂತ್ರ್ಯದ ಬಗ್ಗೆ ಗುಟ್ಟಾಗಿ ವಿಚಾರಿಸಲು ಬಂದಿದ್ದರು. ನಮ್ಮನ್ನು ಪುನಃ ದಾಸತ್ವದಲ್ಲಿ ಸಿಕ್ಕಿಸಬೇಕೆಂಬುದೇ ಅವರ ಉದ್ದೇಶವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದರೆ ರಹಸ್ಯವಾಗಿ ಒಳಗೆ ಬಂದಿದ್ದ ಸುಳ್ಳು ಸಹೋದರರು ನಮ್ಮನ್ನು ಧರ್ಮಶಾಸ್ತ್ರದ ದಾಸತ್ವದಲ್ಲಿ ಸಿಕ್ಕಿಸಬೇಕೆಂದು, ಕ್ರಿಸ್ತ ಯೇಸುವಿನಲ್ಲಿರುವ ನಮ್ಮ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸಲು ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಸಭೆಗೆ ಕಳ್ಳತನದಿಂದ ಸೇರಿಕೊಂಡ ಸುಳ್ಳು ಸಹೋದರರು ಅಲ್ಲಿ ಇದ್ದದರಿಂದ ಬಲಾತ್ಕಾರ ನಡೆದೀತೆಂಬ ಭಯವಿತ್ತು. ಅವರು ನಮ್ಮನ್ನೂ ದಾಸತ್ವದೊಳಗೆ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿ ನಮಗೆ ದೊರಕಿರುವ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸುವದಕ್ಕೆ ಮರಸಿಕೊಂಡು ಬಂದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೆ ರಹಸ್ಯವಾಗಿ ಒಳಗೆ ಬಂದಿದ್ದ ಸುಳ್ಳು ವಿಶ್ವಾಸಿಗಳು ನಮ್ಮನ್ನು ದಾಸತ್ವದಲ್ಲಿ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿರುವ ನಮ್ಮ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸಲು ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಖರೆ ಉಲ್ಲ್ಯಾಕ್ನಿ ತೆಕಾ ಸುನ್ನತ್ ಕರ್‍ತಲೆ ಪಾಜೆ ಹೊತ್ತೆ, ಅಮ್ಚಿಚ್ ಭಾವಾ ಮನುನ್ ಸಾಂಗುನ್ ಚೊರಿನ್ ಅಮ್ಚ್ಯಾ ತಾಂಡ್ಯಾತ್ ಗುಸಲ್ಲಿ ಝುಟಿ ಲೊಕಾ, ಹೆನಿ ಜೆಜು ಕ್ರಿಸ್ತಾಚ್ಯಾ ವೈನಾ ಅಮಿ ಜೊಡುನ್ ಘೆತಲ್ಯಾ ತ್ಯಾ ಸುಟ್ಕಾತ್ನಾ ಕಾಡುನ್ ಅಮ್ಕಾ ಗುಲಾಮ್ಪಾನಾತ್ ಲೊಟುನ್ ಘಾಲುಚೆ ಮನುನ್ ಚಿಂತಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 2:4
29 ತಿಳಿವುಗಳ ಹೋಲಿಕೆ  

ಏಕೆಂದರೆ, ಕೆಲವರು ಕಳ್ಳತನದಿಂದ ನಿಮ್ಮ ಸಭೆಯೊಳಗೆ ಸೇರಿಕೊಂಡಿದ್ದಾರೆ. ಇವರು ಭಕ್ತಿಹೀನರು; ನಮ್ಮ ದೇವರ ಅನುಗ್ರಹದ ನೆವದಲ್ಲಿ ತಮ್ಮ ಕಾಮಾಭಿಲಾಷೆಗಳನ್ನು ಸಮರ್ಥಿಸಿಕೊಳ್ಳುತ್ತಿರುವವರು; ನಮ್ಮ ಏಕೈಕ ಒಡೆಯರೂ ಪ್ರಭುವೂ ಆದ ಯೇಸುಕ್ರಿಸ್ತರನ್ನು ನಿರಾಕರಿಸುವವರು. ಇಂಥವರಿಗೆ ದಂಡನೆಯಾಗಬೇಕೆಂದು ಬಹಳ ಹಿಂದೆಯೇ ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ನಾವು ಮುಕ್ತ ಸ್ವಾತಂತ್ರ್ಯದಿಂದ ಬಾಳಬೇಕೆಂದು ಕ್ರಿಸ್ತಯೇಸು ನಮ್ಮನ್ನು ಬಿಡುಗಡೆಮಾಡಿದರು. ಆದ್ದರಿಂದ ದೃಢವಾಗಿರಿ. ಗುಲಾಮಗಿರಿಯ ನೊಗಕ್ಕೆ ಪುನಃ ಕೊರಳನ್ನು ಒಡ್ಡದಿರಿ.


ನಮ್ಮ ಸ್ಥಿತಿಯೂ ಹಾಗೆಯೇ ಇತ್ತು. ನಾವು ಬಾಲಕರಂತೆ ವಿಶ್ವದ ಮೂಲಭೂತ ಶಕ್ತಿಗಳಿಗೆ ಅಧೀನರಾಗಿದ್ದೆವು.


ಪ್ರಭುವಿನ ಸೇವೆಯಲ್ಲಿ ನಾನು ಕೈಗೊಂಡ ಪ್ರಯಾಣಗಳು ಅನೇಕ; ನನಗೆ ಬಂದೊದಗಿದ ಅಪಾಯಗಳೂ ಅನೇಕ; ಪ್ರವಾಹಗಳ ಅಪಾಯ, ಕಳ್ಳಕಾಕರ ಅಪಾಯ, ಸ್ವಜನ ಹಾಗೂ ಅನ್ಯಜನರಿಂದ ಅಪಾಯ, ನಗರಗಳ ಹಾಗೂ ನಿರ್ಜನ‍ಪ್ರದೇಶಗಳ ಅಪಾಯ, ಕಡಲುಗಳ ಅಪಾಯ, ಕಪಟ ಸಹೋದರರಿಂದ ಅಪಾಯ - ಇವೆಲ್ಲಕ್ಕೂ ತುತ್ತಾದೆ.


ಪ್ರಿಯರೇ, “ನಾವು ಪವಿತ್ರಾತ್ಮ ಪ್ರೇರಿತರು” ಎಂದು ಹೇಳುವ ಎಲ್ಲರನ್ನೂ ನಂಬಬಾರದು. ಆ ಪ್ರೇರಣೆ ದೇವರಿಂದ ಬಂದಿದೆಯೇ ಎಂದು ಪರೀಕ್ಷಿಸಿ ನೋಡಬೇಕು. ಏಕೆಂದರೆ, ಎಷ್ಟೋ ಮಂದಿ ಕಪಟ ಪ್ರವಾದಿಗಳು ಎಲ್ಲೆಡೆಯಲ್ಲೂ ಹರಡಿದ್ದಾರೆ.


ತಾವೇ ದುರಭ್ಯಾಸಗಳಿಗೆ ಗುಲಾಮರಾಗಿದ್ದರೂ ತಾವು ವಶಪಡಿಸಿಕೊಂಡವರಿಗೆ ಸ್ವಾತಂತ್ರ್ಯವನ್ನು ತರುವ ಮಾತುಕೊಡುತ್ತಾರೆ. ಒಬ್ಬನು ಯಾವುದಕ್ಕೆ ಸೋಲುತ್ತಾನೋ ಅದಕ್ಕೆ ಅವನು ಗುಲಾಮನಾಗುತ್ತಾನೆ.


ಇವರಲ್ಲಿ ಕೆಲವರು ಮನೆಮನೆಗಳಿಗೆ ನುಸಳಿ ನಾನಾ ಪಾಪಗಳಿಂದಲೂ ಕಾಮನೆಗಳಿಂದಲೂ ಕೂಡಿರುವ ಮತಿಗೆಟ್ಟ ಮಹಿಳೆಯರನ್ನು ವಶಪಡಿಸಿಕೊಳ್ಳುವರು.


ಭಿನ್ನಾಭಿಪ್ರಾಯಗಳಿಗೆ ನೀವು ಮಣಿಯುವುದಿಲ್ಲವೆಂದು ನಿಮ್ಮನ್ನು ಕುರಿತು ಪ್ರಭುವಿನಲ್ಲಿ ನನಗೆ ದೃಢವಾದ ನಂಬಿಕೆ ಇದೆ. ನಿಮ್ಮಲ್ಲಿ ಗೊಂದಲ ಎಬ್ಬಿಸುವವನು ಯಾರೇ ಆಗಿರಲಿ, ಅವನು ದೈವದಂಡನೆಗೆ ಗುರಿಯಾಗುತ್ತಾನೆ.


ಯಾರಾದರೂ ನಿಮ್ಮನ್ನು ಅಧೀನಪಡಿಸಿಕೊಂಡರೂ ಕಬಳಿಸಿದರೂ ಮರುಳುಗೊಳಿಸಿದರೂ ತುಚ್ಛೀಕರಿಸಿದರೂ ಕೆನ್ನೆಗೆ ಬಿಗಿದರೂ ಎಲ್ಲವನ್ನೂ ಸಹಿಸಿಕೊಳ್ಳುತ್ತೀರಿ.


ಅವರು ಕಪಟ ಪ್ರೇಷಿತರು, ಕಳ್ಳ ಕೆಲಸಗಾರರು, ಕ್ರಿಸ್ತಯೇಸುವಿನ ಪ್ರೇಷಿತರಂತೆ ನಟಿಸುವವರು.


ಈ ವಾಕ್ಯದಲ್ಲಿ, ‘ಪ್ರಭು’ ಎಂದರೆ ದೇವರ ಆತ್ಮವೇ. ಪ್ರಭುವಿನ ಆತ್ಮ ಎಲ್ಲಿದೆಯೋ ಅಲ್ಲಿ ವಿಮೋಚನೆಯೂ ಇದೆ.


ಇದಲ್ಲದೆ ನಿಮ್ಮಲ್ಲೇ ಕೆಲವರು ಎದ್ದು ಭಕ್ತವಿಶ್ವಾಸಿಗಳನ್ನು ತಮ್ಮ ಕಡೆ ಸೆಳೆದುಕೊಳ್ಳಲು ಅಸತ್ಯವಾದವುಗಳನ್ನು ಹೇಳುವರು.


ನಮ್ಮ ಕಡೆಯ ಕೆಲವು ಜನರು ನಮ್ಮಿಂದ ಯಾವ ಆದೇಶವನ್ನೂ ಪಡೆಯದೆ ನಿಮ್ಮನ್ನು ತೊಂದರೆಗೆ ಈಡುಮಾಡಿ ನಿಮ್ಮ ಮನಸ್ಸನ್ನು ಕಲಕಿದರೆಂಬ ಸಮಾಚಾರ ನಮ್ಮ ಗಮನಕ್ಕೆ ಬಂದಿದೆ.


ಜುದೇಯದಿಂದ ಕೆಲವು ಜನರು ಅಂತಿಯೋಕ್ಯಕ್ಕೆ ಬಂದು ಅಲ್ಲಿನ ಭಕ್ತ ವಿಶ್ವಾಸಿಗಳಿಗೆ, “ಮೋಶೆಯ ನಿಯಮದಂತೆ ನೀವು ಸುನ್ನತಿ ಮಾಡಿಸಿಕೊಂಡ ಹೊರತು ಜೀವೋದ್ಧಾರ ಪಡೆಯಲಾರಿರಿ,” ಎಂದು ಬೋಧಿಸತೊಡಗಿದರು.


ಕೊಡುವೆ ಆ ಕೋಪದ ಕೊಡವನು ನಿನ್ನನು ಶೋಷಿಸಿದವರಿಗೆ ‘ನಾವು ತುಳಿದು ಹಾದುಹೋಗುವಂತೆ ನೆಲಕಚ್ಚಿ ಬೀಳು ಕೆಳಗೆ’ ಎಂದು ನಿಮ್ಮ ಬೆನ್ನನೆ ನೆಲವಾಗಿಸಿ, ಬೀದಿಕಸವನ್ನಾಗಿಸಿದವರಿಗೆ.”


ಸ್ವತಂತ್ರರಂತೆ ಬಾಳಿರಿ; ಆದರೆ ಕೆಟ್ಟತನವನ್ನು ಮರೆಮಾಚಲು ನಿಮ್ಮ ಸ್ವಾತಂತ್ರ್ಯವನ್ನು ದುರುಪಯೋಗಮಾಡಿಕೊಳ್ಳಬೇಡಿ; ದೇವರಿಗೆ ದಾಸರಾಗಿ ಬಾಳಿರಿ.


ಅರೇಬಿಯಾದಲ್ಲಿರುವ ಸೀನಾಯ್ ಪರ್ವತವನ್ನು ಪ್ರತಿನಿಧಿಸುವ ಈ ಹಾಗರಳು ಈಗಿನ ಜೆರುಸಲೇಮ್ ನಗರವನ್ನು ಹೋಲುತ್ತಾಳೆ. ಹೇಗೆಂದರೆ, ಜೆರುಸಲೇಮ್ ತನ್ನ ಮಕ್ಕಳ ಸಮೇತವಾಗಿ ದಾಸತ್ವದಲ್ಲಿ ಇದೆ.


ನಾನೀಗ ಹೇಳುತ್ತಿರುವುದು ಪ್ರಭುವಿನ ಪ್ರೇರಣೆಯಿಂದಲ್ಲ, ಧೈರ್ಯದಿಂದ ತನ್ನನ್ನೇ ಕೊಚ್ಚಿಕೊಳ್ಳುವ ಒಬ್ಬ ಹುಚ್ಚನಂತೆ ಹೇಳುತ್ತಿದ್ದೇನೆ:


ದೇವರು ನಿಮಗೆ ದಯಪಾಲಿಸಿರುವ ಆತ್ಮ ನಿಮ್ಮನ್ನು ಮತ್ತೊಮ್ಮೆ ಗುಲಾಮರನ್ನಾಗಿಯೂ ಭಯಭೀತರನ್ನಾಗಿಯೂ ಮಾಡುವುದಿಲ್ಲ. ಬದಲಿಗೆ, ನಿಮ್ಮನ್ನು ದೇವರ ಮಕ್ಕಳನ್ನಾಗಿಸುತ್ತದೆ. ಆ ಆತ್ಮದ ಮೂಲಕವೇ ನಾವು ದೇವರನ್ನು, “ಅಪ್ಪಾ, ತಂದೆಯೇ” ಎಂದು ಕರೆಯುತ್ತೇವೆ.


ನಿನ್ನ ನಿಯಮದಂತೆ ಬಾಳಲು ಯತ್ನಿಸಿದೆ I ಎಂತಲೇ, ಆತಂಕವಿಲ್ಲದೆ ನಡೆದೆ II


ಜೀವೋದ್ಧಾರವನು ಮರಳಿ ಸವಿಯುವಂತೆ ಮಾಡು I ವಿಧೇಯನಾಗಿ ನಡೆವ ಸಿದ್ಧಮನಸ್ಸನು ನೀಡು II


ವಾಸ್ತವವಾಗಿ, ಬೇರೆ ಯಾವ ಶುಭಸಂದೇಶವೂ ಇಲ್ಲ. ಆದರೆ ಕೆಲವರು ನಿಮ್ಮಲ್ಲಿ ಗೊಂದಲವೆಬ್ಬಿಸಿ, ಕ್ರಿಸ್ತಯೇಸುವಿನ ಶುಭಸಂದೇಶವನ್ನು ಮಾರ್ಪಡಿಸಲು ಯತ್ನಿಸುತ್ತಾ ಇದ್ದಾರೆ.


ಆದರೆ ನಮಗೆ ವಿಮೋಚನೆಯನ್ನು ತರುವ ಸರ್ವೋತ್ತಮ ಧರ್ಮಶಾಸ್ತ್ರವನ್ನು ಲಕ್ಷ್ಯವಿಟ್ಟು ನೋಡಿ ಅದರಲ್ಲೇ ಧ್ಯಾನಾಸಕ್ತನಾಗಿರುವವನು ಅದನ್ನು ಮರೆಯುವುದಿಲ್ಲ. ಅವನು ಕೇಳುವವನು ಮಾತ್ರ ಆಗಿರದೆ, ವಾಕ್ಯದ ಪ್ರಕಾರ ನಡೆಯುವವನೂ ಆಗಿರುತ್ತಾನೆ. ಇಂಥವನು ಭಾಗ್ಯವಂತನು!


ಆದುದರಿಂದ ಹೊಸ ಮದ್ಯವನ್ನು ಹೊಸ ಬುದ್ದಲಿಗಳಲ್ಲೇ ತುಂಬಿಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು