Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 2:8 - ಕನ್ನಡ ಸತ್ಯವೇದವು C.L. Bible (BSI)

8 ಹೌದು, ಯೆಹೂದ್ಯರಿಗೆ ಪ್ರೇಷಿತನಾಗುವಂತೆ ಪೇತ್ರನನ್ನು ಪ್ರೇರೇಪಿಸಿದ ದೇವರು, ಯೆಹೂದ್ಯರಲ್ಲದವರಿಗೆ ಪ್ರೇಷಿತನಾಗಲು ನನ್ನನ್ನು ಪ್ರೇರೇಪಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಸುನ್ನತಿಯಾದವರಲ್ಲಿ ಅಪೊಸ್ತಲತನವನ್ನು ನಡೆಸುವುದಕ್ಕೋಸ್ಕರ ಪೇತ್ರನಿಗೆ ವಹಿಸಿಕೊಟ್ಟಂಥ ದೇವರು, ಸುನ್ನತಿಯಿಲ್ಲದವರಲ್ಲಿ ಅದನ್ನು ನಡೆಸುವುದಕ್ಕಾಗಿ ನನಗೆ ವಹಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಸುನ್ನತಿಯಾದವರಿಗೆ ಸುವಾರ್ತೆಯನ್ನು ಸಾರುವ ಕೆಲಸವು ಹೇಗೆ ಪೇತ್ರನಿಗೆ ಕೊಡಲ್ಪಟ್ಟಿತೋ ಹಾಗೆಯೇ ಸುನ್ನತಿಯಿಲ್ಲದವರಿಗೆ ಅದನ್ನು ಸಾರುವ ಕೆಲಸವು ನನಗೆ ಕೊಟ್ಟಿರುವದನ್ನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೂದ್ಯರಿಗೆ ಅಪೊಸ್ತಲನಾಗಿ ಕೆಲಸ ಮಾಡಲು ದೇವರು ಪೇತ್ರನಿಗೆ ವಹಿಸಿಕೊಟ್ಟಂತೆಯೇ ಯೆಹೂದ್ಯರಲ್ಲದವರಿಗೆ ಅಪೊಸ್ತಲನಾಗಿ ಕೆಲಸ ಮಾಡಲು ನನಗೂ ವಹಿಸಿ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಏಕೆಂದರೆ, ಯೆಹೂದ್ಯರಿಗೆ ಅಪೊಸ್ತಲನಾಗಿರುವ ಪೇತ್ರನಲ್ಲಿ ಕಾರ್ಯಮಾಡಿದ ದೇವರೇ, ಯೆಹೂದ್ಯರಲ್ಲದವರಿಗೆ ನಾನು ಅಪೊಸ್ತಲನಾಗಿರಲು ನನ್ನಲ್ಲಿ ಕಾರ್ಯಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಕಶ್ಯಾಕ್ ಮಟ್ಲ್ಯಾರ್ ಸುನ್ನತ್ ಕರಲ್ಲ್ಯಾಂಚೊ ಅಪೊಸ್ತಲ್ ಹೊವ್ಕ್ ಪೆದ್ರುಕ್ ಎಚುನ್ ಕಾಡಲ್ಲ್ಯಾನುಚ್; ಜುದೆವ್ ನ್ಹಯ್ ಹೊತ್ತ್ಯಾಂಚೊ ಅಪೊಸ್ತಲ್ ಹೊವ್ಕ್ ಮನುನ್ ಮಾಕಾಬಿ ಎಚುನ್ ಕಾಡ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 2:8
23 ತಿಳಿವುಗಳ ಹೋಲಿಕೆ  

ಪ್ರಭು ಅವನಿಗೆ, “ನೀನು ಹೋಗು, ನನ್ನ ನಾಮವನ್ನು ಅನ್ಯಧರ್ಮದವರಿಗೂ ಅರಸರಿಗೂ ಇಸ್ರಯೇಲಿನ ಜನರಿಗೂ ಪ್ರಕಟಿಸಲು ನಾನು ಆರಿಸಿಕೊಂಡಿರುವ ಸಾಧನ ಅವನು.


‘ಹೋಗು ನಾನು ನಿನ್ನನ್ನು ದೂರದಲ್ಲಿರುವ ಅನ್ಯಧರ್ಮೀಯರ ಬಳಿಗೆ ಕಳುಹಿಸುತ್ತೇನೆ,’ ಎಂದರು.


ಪೌಲನು ಅವರಿಗೆ ನಮಸ್ಕರಿಸಿ ತನ್ನ ಸೇವೆಯ ಮೂಲಕ ದೇವರು ಯೆಹೂದ್ಯೇತರರ ಮಧ್ಯೆ ಮಾಡಿದ ಮಹತ್ಕಾರ್ಯಗಳನ್ನು ಒಂದೊಂದಾಗಿ ವರದಿಮಾಡಿದನು.


ಇದನ್ನು ಕೇಳಿದ್ದೇ, ಸಭೆ ಸೇರಿದ್ದವರೆಲ್ಲರೂ ಮೌನರಾದರು. ಪೌಲ ಮತ್ತು ಬಾರ್ನಬರಿಗೆ ಕಿವಿಗೊಟ್ಟರು. ದೇವರು ಅವರ ಮುಖಾಂತರ ಅನ್ಯಧರ್ಮೀಯರ ಮಧ್ಯೆ ಎಸಗಿದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಕುರಿತು ಕೇಳಿದರು.


ನಾನು ಈಗ ಈ ಸ್ಥಿತಿಯಲ್ಲಿ ಇರುವುದು ದೇವರ ಅನುಗ್ರಹದಿಂದಲೇ. ಅವರ ಅನುಗ್ರಹ ನನ್ನಲ್ಲಿ ವ್ಯರ್ಥವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚು ಶ್ರಮಪಟ್ಟು ಸೇವೆಮಾಡಿದ್ದೇನೆ. ಅದನ್ನು ಮಾಡಿದವನು ನಾನಲ್ಲ, ನನ್ನಲ್ಲಿರುವ ದೇವರ ಅನುಗ್ರಹವೇ.


ಇತರರಿಗೆ ನಾನು ಪ್ರೇಷಿತನಲ್ಲದಿದ್ದರೂ ನಿಮಗಂತೂ ನಾನು ಪ್ರೇಷಿತನೇ. ನಾನು ಪ್ರೇಷಿತನು ಎಂಬುದಕ್ಕೆ ಪ್ರಭುವಿಗೆ ಸೇರಿದವರಾದ ನೀವೇ ಜೀವಂತ ಸಾಕ್ಷಿಗಳು.


ಪ್ರೇಷಿತರು ಅವರ ಮೇಲೆ ಹಸ್ತನಿಕ್ಷೇಪ ಮಾಡಲು ಅವರು ಪವಿತ್ರಾತ್ಮ ವರವನ್ನು ಪಡೆದರು.


ಆದರೆ ಪ್ರೇಷಿತರ ಬೋಧನೆಯನ್ನು ಕೇಳಿದ ಅನೇಕರು ವಿಶ್ವಾಸಿಗಳಾದರು. ಭಕ್ತವಿಶ್ವಾಸಿಗಳ ಸಂಖ್ಯೆ ಸುಮಾರು ಐದು ಸಾವಿರಕ್ಕೆ ಏರಿತು.


ಆದರೆ ಪವಿತ್ರಾತ್ಮ ಅವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯುತರಾಗುವಿರಿ. ಆಗ ನೀವು ಜೆರುಸಲೇಮಿನಲ್ಲೂ ಜುದೇಯದಲ್ಲೂ ಸಮಾರಿಯದಲ್ಲೂ ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು.


ನನ್ನನ್ನು ಚೇತನಗೊಳಿಸುತ್ತಿರುವ ಯೇಸುಕ್ರಿಸ್ತರ ಶಕ್ತಿಯಿಂದ ಈ ಗುರಿಯನ್ನು ಸಾಧಿಸಲು ಶ್ರಮವಹಿಸಿ ಹೋರಾಡುತ್ತಿದ್ದೇನೆ.


ದೇವರು ನಿಮಗೆ ಪವಿತ್ರಾತ್ಮರನ್ನು ಪ್ರಧಾನಮಾಡಿ ಮಹತ್ಕಾರ್ಯಗಳನ್ನು ಎಸಗುತ್ತಾ ಬಂದಿದ್ದಾರೆ. ಹಾಗೆ ಮಾಡುತ್ತಿರುವುದು, ನೀವು ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸಿದ್ದರಿಂದಲ್ಲ, ಶುಭಸಂದೇಶವನ್ನು ಕೇಳಿ, ವಿಶ್ವಾಸ ಇಟ್ಟಿರುವುದರಿಂದ.


ಪೌಲ ಎಂಬವನು ಏನು ಮಾಡುತ್ತಿರುವನೆಂದು ನೀವು ನೋಡಿದ್ದೀರಿ ಹಾಗೂ ಕೇಳಿದ್ದೀರಿ; ಕೈಯಿಂದ ಮಾಡಿದ ಆಕೃತಿಗಳು ದೇವರೇ ಅಲ್ಲವೆಂದು ಇಲ್ಲಿ ಎಫೆಸದಲ್ಲೂ ಹೆಚ್ಚುಕಡಿಮೆ ಇಡೀ ಏಷ್ಯದಲ್ಲೂ ಪ್ರಚಾರಮಾಡುತ್ತಿದ್ದಾನೆ; ಮಾತ್ರವಲ್ಲ, ಅನೇಕ ಜನರನ್ನು ಮನವೊಲಿಸಿ ಮಾರ್ಪಡಿಸಿಬಿಟ್ಟಿದ್ದಾನೆ.


ಇನ್ನೊಂದು ಕಾರಣಕ್ಕಾಗಿಯೂ ನಾವು ಸತತವೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ನೀವು ದೇವರ ಸಂದೇಶವನ್ನು ನಮ್ಮಿಂದ ಕೇಳಿದಾಗ, ಅದನ್ನು ಮನುಷ್ಯರ ಮಾತುಗಳೆಂದು ಪರಿಗಣಿಸದೆ, ದೇವರ ವಾಕ್ಯವೆಂದೇ ಅರಿತು ಅಂಗೀಕರಿಸಿದಿರಿ. ವಿಶ್ವಾಸಿಗಳಾದ ನಿಮ್ಮಲ್ಲಿ ಚೈತನ್ಯಪೂರ್ಣವಾಗಿರುವ ಈ ವಾಕ್ಯವು, ನಿಜವಾಗಿಯೂ ದೇವರ ಸಂದೇಶವೇ ಸರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು