Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 3:12 - ಕನ್ನಡ ಸತ್ಯವೇದವು C.L. Bible (BSI)

12 ಧರ್ಮಶಾಸ್ತ್ರ ವಿಶ್ವಾಸವನ್ನು ಆಧರಿಸಿಲ್ಲ, ಬದಲಿಗೆ, “ಅದರ ವಿಧಿನಿಯಮಗಳನ್ನು ಪಾಲಿಸುವವನು ಅವುಗಳ ಮೂಲಕವಾಗಿ ಜೀವಿಸುತ್ತಾನೆ,” ಎಂದು ಬರೆಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹಾಗೆಯೇ ಮೋಶೆಯ ಧರ್ಮಶಾಸ್ತ್ರಕ್ಕೆ ನಂಬಿಕೆಯು ಆಧಾರವಾಗಿಲ್ಲ, “ಅದರ ನೇಮಗಳನ್ನು ಆಚರಿಸುವವನೇ ಅವುಗಳ ಮೂಲಕ ಬದುಕುವನು” ಎಂದು ಬರೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆದರೆ ಕರ್ಮಮಾರ್ಗಕ್ಕೆ ನಂಬಿಕೆಯು ಆಧಾರವಲ್ಲ, ಅದರ ನೇಮಗಳನ್ನು ಆಚರಿಸಿದವನೇ ಅವುಗಳ ಮೂಲಕ ಬದುಕುವನು ಎಂದು ಬರೆದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಧರ್ಮಶಾಸ್ತ್ರವು ನಂಬಿಕೆಯ ಮಾರ್ಗವನ್ನು ಬಳಸದೆ, “ಈ ವಿಧಿನಿಯಮಗಳನ್ನು ಪಾಲಿಸುವವನು ಅವುಗಳ ಮೂಲಕ ಜೀವವನ್ನು ಪಡೆದುಕೊಳ್ಳುತ್ತಾನೆ” ಎಂದು ಹೇಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಿಯಮವು ನಂಬಿಕೆಯನ್ನು ಆಧಾರಗೊಂಡದ್ದಲ್ಲ. ಆದರೆ, “ನಿಯಮಗಳ ಕ್ರಿಯೆಗಳನ್ನು ಮಾಡುವವನು ಅವುಗಳ ಮೂಲಕ ಬದುಕುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಖರೆ ಖಾಯ್ದ್ಯಾಕ್ನಿ ಅನಿ ವಿಶ್ವಾಸಾಕ್ ಕಾಯ್ಬಿ ಸಮಂದ್ ನಾ, ತೆಚ್ಯಾ ಬದ್ಲಾಕ್ ಪವಿತ್ರ್ ಪುಸ್ತಕ್ ಮನ್ತಾ, “ಜೆ ಕೊನ್ ಖಾಯ್ದ್ಯಾಕ್ ಪಾಜೆ ಹೊಲ್ಲೆ ಸಗ್ಳೆ ಕರ್‍ತಾ, ತೊ ಝಿತ್ತೊ ರ್‍ಹಾತಾ,”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 3:12
13 ತಿಳಿವುಗಳ ಹೋಲಿಕೆ  

ನನ್ನ ಆಜ್ಞಾವಿಧಿಗಳ ಪ್ರಕಾರ ನಡೆದುಕೊಳ್ಳುವವರು ಆ ಆಜ್ಞಾವಿಧಿಗಳಿಂದ ಜೀವಿಸುವರು. ಆದುದರಿಂದ ನೀವು ಅವುಗಳನ್ನೇ ಅನುಸರಿಸಬೇಕು. ನಾನೇ ಸರ್ವೇಶ್ವರ.


‘ಧರ್ಮೋಪದೇಶಕೆ ಮರಳಿ ಮನವೊಲಿದು ಬನ್ನಿ’ ಎಂದು ನೀವೆಷ್ಟೋ ಸಾರಿ ಅವರನ್ನೆಚ್ಚರಿಸಿದಿರಿ ಖಚಿತವಾಗಿ ಆದರೂ ಆಲಿಸಲಿಲ್ಲಾ ಗರ್ವಿಗಳು, ಅವಿಧೇಯರು, ಪಾಪಿಗಳು. ಜೀವಾಧಾರವಾದ ನಿಮ್ಮಾ ವಿಧಿನಿಯಮಗಳನು ಮೀರಿದರು ಮೊಂಡುಬಿದ್ದು ನಿಮ್ಮ ನೊಗಕೆ ಕೊರಳೊಡ್ಡದೆ ಹೋದರು.


ಧರ್ಮಶಾಸ್ತ್ರವನ್ನು ಪಾಲಿಸುವುದರಿಂದ ಮಾತ್ರ ದೇವರ ವಾಗ್ದಾನಕ್ಕೆ ಬಾಧ್ಯತೆ ದೊರಕುವುದಾದರೆ, ಮಾನವನ ವಿಶ್ವಾಸವೂ ವ್ಯರ್ಥ; ದೇವರ ವಾಗ್ದಾನವೂ ನಿರರ್ಥಕ.


ದೈವವಾಗ್ದಾನಕ್ಕೆ ವಿಶ್ವಾಸವೇ ಆಧಾರ. ಇವೆಲ್ಲಕ್ಕೂ ದೈವಾನುಗ್ರಹವೇ ಮೂಲ. ಇವು ಅಬ್ರಹಾಮನ ಸಂತತಿಯವರಿಗೆ, ಅಂದರೆ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವವರಿಗೆ ಮಾತ್ರವಲ್ಲ, ಅಬ್ರಹಾಮನಂತೆ ದೇವರಲ್ಲಿ ವಿಶ್ವಾಸ ಇಟ್ಟವರೆಲ್ಲರಿಗೂ ಖಚಿತವಾಗಿ ದೊರೆಯುತ್ತದೆ. ಏಕೆಂದರೆ, ಅಬ್ರಹಾಮನೇ ನಮ್ಮೆಲ್ಲರಿಗೂ ಮೂಲಪಿತ.


ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅವರಿಗೆ ತಿಳಿಸಿಕೊಟ್ಟೆ.


ಅವರು ಆಯ್ಕೆಯಾದುದು ತಮ್ಮ ಸತ್ಕಾರ್ಯಗಳ ಆಧಾರದಿಂದಲ್ಲ, ದೈವಾನುಗ್ರಹದಿಂದಲೇ. ಇಲ್ಲದಿದ್ದರೆ, ದೈವಾನುಗ್ರಹ ನಿಜವಾಗಿ ದೈವಾನುಗ್ರಹ ಎನಿಸಿಕೊಳ್ಳುತ್ತಿರಲಿಲ್ಲ.


ಅದಕ್ಕೆ ಅವರು, “ಒಳ್ಳೆಯದನ್ನು ಕುರಿತು ನೀನು ನನ್ನನ್ನು ವಿಚಾರಿಸುವುದು ಏಕೆ? ಒಳ್ಳೆಯವರು ಒಬ್ಚರೇ. ನೀನು ಆ ಜೀವಕ್ಕೆ ಪ್ರವೇಶಿಸಬೇಕಾದರೆ ದೈವಾಜ್ಞೆಗಳನ್ನು ಅನುಸರಿಸು,” ಎಂದರು.


ಆದರೆ ಇಸ್ರಯೇಲ್ ವಂಶದವರು ಮರುಭೂಮಿಯಲ್ಲಿ ನನ್ನ ವಿರುದ್ಧ ದಂಗೆಯೆದ್ದರು. ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ಧಿಕ್ಕರಿಸಿದರು. ಮುಖ್ಯವಾಗಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಮಾಡಿದರು. ಆಗ ನಾನು ‘ಮರುಭೂಮಿಯಲ್ಲಿರುವ ಇವರ ಮೇಲೆ ನನ್ನ ರೋಷಾಗ್ನಿಯನ್ನು ಹರಿಸಿ ಇವರನ್ನು ಧ್ವಂಸಮಾಡುವೆನು’ ಎಂದುಕೊಂಡೆ.


ನಾನಾದರೋ ಸತ್ತೆನು. ಜೀವದಾಯಕವಾಗಬೇಕಿದ್ದ ಆಜ್ಞೆಯೇ ನನಗೆ ಮೃತ್ಯುಕಾರಕವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು