Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 3:14 - ಕನ್ನಡ ಸತ್ಯವೇದವು C.L. Bible (BSI)

14 ಇದರಿಂದಾಗಿ ಅಬ್ರಹಾಮನಿಗೆ ದೊರಕಿದ ಸೌಭಾಗ್ಯ, ಕ್ರಿಸ್ತಯೇಸುವಿನ ಮುಖಾಂತರ ಅನ್ಯಧರ್ಮೀಯರಿಗೂ ದೊರಕುವಂತಾಯಿತು; ವಿಶ್ವಾಸದ ಮೂಲಕವಾಗಿ, ದೇವರು ವಾಗ್ದಾನ ಮಾಡಿದ ಪವಿತ್ರಾತ್ಮ ನಮಗೂ ದೊರಕುವಂತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅಬ್ರಹಾಮನಿಗೆ ಉಂಟಾದ ಆಶೀರ್ವಾದವು, ಕ್ರಿಸ್ತ ಯೇಸುವಿನಲ್ಲಿ ಅನ್ಯಜನರಿಗೆಲ್ಲ ಸಿಗುವಂತೆಯೂ ಮತ್ತು ದೇವರು ವಾಗ್ದಾನ ಮಾಡಿದ ಪರಿಶುದ್ಧಾತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತೆಯೂ, ತನ್ನ ಮರಣದ ಮೂಲಕ ಕ್ರಿಸ್ತನು ನಮ್ಮನ್ನು ಕೊಂಡುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಕ್ರಿಸ್ತನು ನಮ್ಮ ನಿವಿುತ್ತ ಶಾಪವಾಗಿ ಧರ್ಮಶಾಸ್ತ್ರದಲ್ಲಿ ಹೇಳಿರುವ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಶಾಸ್ತ್ರದಲ್ಲಿ ಬರೆದದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಎಲ್ಲಾ ಜನರಿಗೆ ದೇವರ ಆಶೀರ್ವಾದವು ದೊರೆಯಲೆಂದು ಕ್ರಿಸ್ತನು ಹೀಗೆ ಮಾಡಿದನು. ಈ ಆಶೀರ್ವಾದವನ್ನು ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ್ದನು. ಈ ಆಶೀರ್ವಾದವು ಯೇಸು ಕ್ರಿಸ್ತನ ಮೂಲಕ ಬರುತ್ತದೆ. ದೇವರು ವಾಗ್ದಾನ ಮಾಡಿದ ಪವಿತ್ರಾತ್ಮನನ್ನು ನಾವು ಹೊಂದಿಕೊಳ್ಳಲೆಂದು ಯೇಸು ಮರಣಹೊಂದಿದನು. ನಂಬಿಕೆಯಿಡುವುದರ ಮೂಲಕ ನಾವು ಈ ವಾಗ್ದಾನವನ್ನು ಪಡೆದುಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅಬ್ರಹಾಮನ ಆಶೀರ್ವಾದವು ಕ್ರಿಸ್ತ ಯೇಸುವಿನ ಮೂಲಕ ಯೆಹೂದ್ಯರಲ್ಲದವರಿಗೆ ಉಂಟಾಗಿ, ನಂಬಿಕೆಯ ಮೂಲಕ ವಾಗ್ದಾನದ ಪವಿತ್ರಾತ್ಮರನ್ನು ನಾವು ಪಡೆದುಕೊಳ್ಳುವುದಕ್ಕಾಗಿಯೇ ದೇವರು ನಮ್ಮನ್ನು ವಿಮೋಚಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ದೆವಾನ್ ಅಬ್ರಾಹಾಮಾಕ್ ಗೊಸ್ಟ್ ದಿವ್ನ್ ದಿಲ್ಲೊ ಆಶಿರ್ವಾದ್ ಕ್ರಿಸ್ತ್ ಜೆಜುಚ್ಯಾ ವೈನಾ ಜುದೆವ್ ನ್ಹಯ್ ಹೊತ್ತ್ಯಾಕ್ನಿಬಿ ದಿವ್ನ್ ಹೊವ್ಚೆ, ಅನಿ ವಿಶ್ವಾಸಾಚ್ಯಾ ವೈನಾ ಅಮಿ ದೆವಾನ್ ಗೊಸ್ಟ್ ದಿಲ್ಲೊ ಆತ್ಮೊ ಘೆವ್ಚೆ ಮನುನ್ ಕ್ರಿಸ್ತಾನ್ ಅಸೆ ಕರ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 3:14
48 ತಿಳಿವುಗಳ ಹೋಲಿಕೆ  

ಯೆಹೂದ್ಯರಾಗಿರಲಿ, ಗ್ರೀಕರಾಗಿರಲಿ, ಪರತಂತ್ರರಾಗಿರಲಿ, ಸ್ವತಂತ್ರರಾಗಿರಲಿ-ನಾವೆಲ್ಲರೂ ಒಂದೇ ದೇಹವಾಗುವಂತೆ ಒಂದೇ ಆತ್ಮದಿಂದ ದೀಕ್ಷಾಸ್ನಾನ ಹೊಂದಿದ್ದೇವೆ. ಒಂದೇ ಆತ್ಮವನ್ನು ನಮ್ಮೆಲ್ಲರಿಗೂ ಪಾನವಾಗಿ ಕೊಡಲಾಗಿದೆ.


ಇದರ ಪರಿಣಾಮವಾಗಿ ಅವರ ಮುಖಾಂತರವೇ ಉಭಯತ್ರರು ಒಂದೇ ಪವಿತ್ರಾತ್ಮ ಅವರಲ್ಲಿ ಪಿತನ ಸಾನ್ನಿಧ್ಯವನ್ನು ಸೇರಲು ಮಾರ್ಗವಾಯಿತು.


ನಿಮ್ಮ ಬಳಿ ಒಂದು ವಿಷಯವನ್ನು ಕೇಳಲಿಚ್ಛಿಸುತ್ತೇನೆ; ನೀವು ಪವಿತ್ರಾತ್ಮರನ್ನು ಪಡೆದುದು ಹೇಗೆ? ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸಿದ್ದರಿಂದಲೋ? ಇಲ್ಲವೆ ಶುಭಸಂದೇಶವನ್ನು ಕೇಳಿ ವಿಶ್ವಾಸಿಸಿದ್ದರಿಂದಲೋ?


ಯೇಸು, ದೇವರ ಬಲಪಾರ್ಶ್ವಕ್ಕೆ ಆರೋಹಿತರಾದರು. ಅವರು ತಮ್ಮ ಪಿತ ವಾಗ್ದಾನಮಾಡಿದ ಪವಿತ್ರಾತ್ಮ ಅವರನ್ನು ಪಡೆದು, ನಮ್ಮ ಮೇಲೆ ಸುರಿಸಿದ ಆ ವರವನ್ನೇ ನೀವು ಈಗ ನೋಡುತ್ತಿರುವುದು ಹಾಗೂ ಕೇಳುತ್ತಿರುವುದು.


ಅವರು ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ನೆರವೇರಿಸುವಂತೆ ನಾನು ಅವರಿಗೆ ಒಂದೇ ಮನಸ್ಸನ್ನು ದಯಪಾಲಿಸಿ, ನೂತನ ಸ್ವಭಾವವನ್ನು ಅವರಲ್ಲಿ ಹುಟ್ಟಿಸುವೆನು;


ಸತ್ಯಕ್ಕೆ ಶರಣಾಗಿ ಆತ್ಮಶುದ್ಧಿಹೊಂದಿರುವ ನೀವು ಸಹೋದರರನ್ನು ನಿಷ್ಕಪಟದಿಂದ ಪ್ರೀತಿಸಬಲ್ಲಿರಿ. ಎಂದೇ, ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.


ತಮ್ಮಲ್ಲಿ ವಿಶ್ವಾಸವಿಡುವವರು ಪಡೆಯಲಿದ್ದ ಪವಿತ್ರಾತ್ಮರನ್ನು ಕುರಿತೇ ಯೇಸು ಹೀಗೆ ಹೇಳಿದ್ದು. ಪವಿತ್ರ ಆತ್ಮ ಇನ್ನೂ ಬಂದಿರಲಿಲ್ಲ. ಏಕೆಂದರೆ, ಯೇಸು ಇನ್ನೂ ಮೇಲೇರಿ ಮಹಿಮೆಯನ್ನು ಪಡೆದಿರಲಿಲ್ಲ.


ಆದರೆ ದೇವರು ಉನ್ನತಲೋಕದಿಂದ ತಮ್ಮ ಪವಿತ್ರಾತ್ಮ ಧಾರೆಯನ್ನು ನಮ್ಮ ಮೇಲೆ ಸುರಿಯುವರು; ಆಗ ಪಾಳುಭೂಮಿ ಫಲಭರಿತ ಭೂಮಿಯಾಗುವುದು; ಫಲಭರಿತ ಭೂಮಿ ಸಮೃದ್ಧ ಅರಣ್ಯವಾಗಿ ಮಾರ್ಪಡುವುದು.


ದೇವರ ಪವಿತ್ರಾತ್ಮರನ್ನು ನೋಯಿಸದಿರಿ; ವಿಮೋಚನೆಯ ದಿನದಂದು ನೀವು ದೇವರಿಗೆ ಸೇರಿದವರು ಎಂಬುದನ್ನು ತೋರಿಸಲು ನಿಮ್ಮ ಮೇಲೆ ಒತ್ತಲಾಗಿರುವ ಮುದ್ರೆಯು ಅವರೇ.


ಅವರು ತಮ್ಮ ಮಹಿಮೆಯ ಸಂಪನ್ಮೂಲಗಳಿಂದ ಪವಿತ್ರಾತ್ಮ ಅವರ ಮುಖಾಂತರ ನಿಮ್ಮ ಅಂತರಂಗವನ್ನು ಬಲಗೊಳಿಸಲಿ;


ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿ ನೀವು ಸಹ ಇತರರೆಲ್ಲರೊಡನೆ ದೇವರ ನಿವಾಸಕ್ಕೆ ತಕ್ಕ ಮಂದಿರವಾಗಿ ಪವಿತ್ರಾತ್ಮ ಅವರಿಂದ ಕಟ್ಟಲ್ಪಡುತ್ತಿದ್ದೀರಿ.


ನೀವು ದೇವರ ಮಕ್ಕಳಾಗಿರುವುದರಿಂದಲೇ, “ಅಪ್ಪಾ, ತಂದೆಯೇ,” ಎಂದು ಕರೆಯುವ ತಮ್ಮ ಪುತ್ರನ ಆತ್ಮವನ್ನು ದೇವರು ನಮ್ಮ ಹೃದಯಗಳಿಗೆ ಕಳುಹಿಸಿದ್ದಾರೆ.


ಹಾಗೆಯೇ, ದೇವರು ಅಬ್ರಹಾಮನಿಗೂ ಆತನ ಸಂತತಿಗೂ ವಾಗ್ದಾನಗಳನ್ನು ಮಾಡಿದರು. "ನಿನ್ನ ಸಂತತಿಗಳಿಗೆ" ಎಂದು ಹೇಳಿ ಅನೇಕರನ್ನು ಸೂಚಿಸದೆ “ನಿನ್ನ ಸಂತತಿಗೆ” ಎಂದು ಹೇಳಿ ಒಬ್ಬ ವ್ಯಕ್ತಿಯನ್ನೇ ಆ ವಾಗ್ದಾನದಲ್ಲಿ ಸೂಚಿಸಿದರು. ಆ ವ್ಯಕ್ತಿಯೇ ಕ್ರಿಸ್ತಯೇಸು.


ಅವರೇ ನಮ್ಮ ಮೇಲೆ ತಮ್ಮ ಮುದ್ರೆಯನ್ನೊತ್ತಿ ನಮ್ಮ ಅಂತರಂಗದಲ್ಲಿ ಪವಿತ್ರಾತ್ಮ ಅವರನ್ನು ಖಾತರಿಯಾಗಿ ಇರಿಸಿದ್ದಾರೆ.


ಮತ್ತೆ ಆತ ಇಂತೆಂದನು ನನಗೆ : “ಮಹತ್ಕಾರ್ಯವೇನೂ ಅಲ್ಲ ನನ್ನ ದಾಸನಾದ ನಿನಗೆ ಕುಲಗಳನು ಉದ್ಧರಿಸುವ ಮಾತ್ರಕೆ ಇಸ್ರಯೇಲರಲಿ ರಕ್ಷಿತರಾದವರನ್ನು ಮರಳಿ ಬರಮಾಡುವ ಮಾತ್ರಕೆ. ನೇಮಿಸಿರುವೆನು ನಿನ್ನನ್ನು ಜ್ಯೋತಿಯನ್ನಾಗಿ ಸರ್ವಜನಾಂಗಗಳಿಗೆ ನನ್ನ ರಕ್ಷಣೆ ವ್ಯಾಪಿಸಿರುವಂತೆ ಮಾಡಲು ಜಗದ ಕಟ್ಟಕಡೆಯವರೆಗೆ.”


ಈ ಘಟನೆಗಳಿಗೆ ನಾವು ಸಾಕ್ಷಿಗಳು; ನಾವು ಮಾತ್ರವಲ್ಲ, ದೈವೇಚ್ಛೆಯಂತೆ ನಡೆಯುವವರಿಗೆ ದೇವರು ದಯಪಾಲಿಸುವ ಪವಿತ್ರಾತ್ಮ ಅವರು ಕೂಡ ಸಾಕ್ಷಿಯಾಗಿದ್ದಾರೆ,” ಎಂದನು.


ಇವರಿಂದಲ್ಲದೆ ಬೇರಾರಿಂದಲೂ ನಮಗೆ ಜೀವೋದ್ಧಾರವಿಲ್ಲ. ಇವರ ನಾಮವನ್ನು ಬಿಟ್ಟರೆ ಈ ಧರೆಯಲ್ಲಿರುವ ಬೇರೆ ಯಾವ ನಾಮದಿಂದಲೂ ನಾವು ಜೀವೋದ್ಧಾರ ಹೊಂದುವಂತಿಲ್ಲ.”


ನನ್ನ ಪಿತ ವಾಗ್ದಾನ ಮಾಡಿದ ವ್ಯಕ್ತಿಯನ್ನು ನಾನೇ ನಿಮಗೆ ಕಳುಹಿಸಿಕೊಡುವೆನು. ಸ್ವರ್ಗದಿಂದ ಬರುವ ಶಕ್ತಿಯಿಂದ ನೀವು ಭೂಷಿತರಾಗುವ ತನಕ ಈ ಪಟ್ಟಣದಲ್ಲೇ ಕಾದಿರಿ,” ಎಂದು ಹೇಳಿದರು.


ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ, ಅವಕ್ಕಿಂತಲೂ ಹೆಚ್ಚಾಗಿ ಸ್ವರ್ಗದಲ್ಲಿರುವ ನಿಮ್ಮ ತಂದೆ ತಮ್ಮನ್ನು ಕೇಳಿಕೊಳ್ಳುವವರಿಗೆ ಪವಿತ್ರಾತ್ಮ ಅವರನ್ನೇ ಅನುಗ್ರಹಿಸಬಲ್ಲರು! ಎಂದು ನಾನು ನಿಮಗೆ ಹೇಳುತ್ತೇನೆ.”


“ದಾವೀದನ ವಂಶಜರಲ್ಲೂ ಜೆರುಸಲೇಮಿನ ನಿವಾಸಿಗಳ ಮನದಲ್ಲೂ ಕರುಣಿಸುವ ಹಾಗೂ ಪ್ರಾರ್ಥಿಸುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನೇ ಅವರು ಆಗ ದಿಟ್ಟಿಸಿ ನೋಡುವರು. ಏಕೈಕ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಕಾಲವಾದ ಜ್ಯೇಷ್ಠ ಪುತ್ರನಿಗಾಗಿ ಎಂಬಂತೆ ಅತ್ತು ಪ್ರಲಾಪಿಸುವರು.


ಇನ್ನೆಂದಿಗೂ ಅವರಿಗೆ ವಿಮುಖನಾಗೆನು; ಇಸ್ರಯೇಲ್ ವಂಶದ ಮೇಲೆ ನನ್ನ ಆತ್ಮವನ್ನು ಸುರಿಸಿದ್ದೇನೆ; ಇದು ಸರ್ವೇಶ್ವರನಾದ ದೇವರ ನುಡಿ.”


ನಾನು ಅವರೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡುವೆನು. ಹೀಗೆ ನಾನು ಅವರಿಗೆ ಒಳಿತನ್ನು ಮಾಡುವುದನ್ನು ಬಿಡೆನು. ನನ್ನ ಬಗ್ಗೆ ಅವರ ಹೃದಯದಲ್ಲಿ ಭಯಭಕ್ತಿ ನೆಲಸುವಂತೆ ಮಾಡುವೆನು. ಆಗ ಅವರು ನನ್ನನ್ನು ಬಿಟ್ಟು ಅಗಲಿಹೋಗರು.


ಸರ್ವೇಶ್ವರನಾದ ನಾನು ಹೇಳುತ್ತೇನೆ ಕೇಳಿ: ಆ ದಿನಗಳು ಬಂದಮೇಲೆ ನಾನು ಇಸ್ರಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು - ನನ್ನ ಧರ್ಮಶಾಸ್ತ್ರವನ್ನು ಅವರ ಅಂತರಂಗದಲ್ಲಿ ಇಡುವೆನು. ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


ಪ್ರದರ್ಶಿಸಿಹನು ಸ್ವಾಮಿ ಸರ್ವೇಶ್ವರನು ರಾಷ್ಟ್ರಗಳಿಗೆಲ್ಲ ತನ್ನ ಶ್ರೀಶಕ್ತಿಯನು. ಕಾಣುವುವು ಜಗದ ಎಲ್ಲೆ ಎಲ್ಲೆಗಳು ನಮ್ಮ ದೇವ ಸಾಧಿಸುವ ಮುಕ್ತಿಯನು.


ಇಂತಿರಲು ನನ್ನ ದಾಸನಾದ ಇಸ್ರಯೇಲೇ, ನಾನು ಆಯ್ದುಕೊಂಡ ಯಕೋಬೇ, ನನ್ನ ಗೆಳೆಯ ಅಬ್ರಹಾಮನ ಸಂತತಿಯೇ,


ನೀನು ನನ್ನ ಮಾತನ್ನು ಕೇಳಿದ್ದರಿಂದ ವಿಶ್ವದ ಎಲ್ಲ ರಾಷ್ಟ್ರಗಳಿಗೂ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು ಎಂಬುದಾಗಿ ಸರ್ವೇಶ್ವರನೇ ಆಣೆಯಿಟ್ಟು ಹೇಳಿದ್ದಾರೆ,” ಎಂದನು.


ಮುಯ್ಯಿಗೆ ಮುಯ್ಯಿ ತೀರಿಸಬೇಡಿರಿ; ಶಾಪಕ್ಕೆ ಪ್ರತಿಶಾಪ ಹಾಕದೆ ಆಶೀರ್ವಾದ ಮಾಡಿರಿ. ಹೀಗೆ ಮಾಡಿದರೆ ದೇವರ ಆಶೀರ್ವಾದವನ್ನು ಬಾಧ್ಯವಾಗಿ ಪಡೆಯುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು