Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 3:2 - ಕನ್ನಡ ಸತ್ಯವೇದವು C.L. Bible (BSI)

2 ನಿಮ್ಮ ಬಳಿ ಒಂದು ವಿಷಯವನ್ನು ಕೇಳಲಿಚ್ಛಿಸುತ್ತೇನೆ; ನೀವು ಪವಿತ್ರಾತ್ಮರನ್ನು ಪಡೆದುದು ಹೇಗೆ? ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸಿದ್ದರಿಂದಲೋ? ಇಲ್ಲವೆ ಶುಭಸಂದೇಶವನ್ನು ಕೇಳಿ ವಿಶ್ವಾಸಿಸಿದ್ದರಿಂದಲೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಒಂದು ಸಂಗತಿಯನ್ನು ಮಾತ್ರ ನಿಮ್ಮಿಂದ ತಿಳಿದುಕೊಳ್ಳಬೇಕೆಂದಿದ್ದೇನೆ. ನೀವು ದೇವರಾತ್ಮನನ್ನು ಹೊಂದಿದ್ದು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸಿದ್ದರಿಂದಲೋ ಅಥವಾ ನಂಬಿಕೆಯ ಸುವಾರ್ತೆಯನ್ನು ಕೇಳಿದ್ದರಿಂದಲೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಒಂದು ಸಂಗತಿಯನ್ನು ಮಾತ್ರ ನಿವ್ಮಿುಂದ ತಿಳುಕೊಳ್ಳಬೇಕೆಂದಿದ್ದೇನೆ. ನೀವು ದೇವರಾತ್ಮನನ್ನು ಹೊಂದಿದ್ದು ನೇಮನಿಷ್ಠೆಗಳನ್ನು ಅನುಸರಿಸಿದ್ದರಿಂದಲೋ? ಕೇಳಿ ನಂಬಿದ್ದರಿಂದಲೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಈ ವಿಷಯವೊಂದನ್ನು ನನಗೆ ತಿಳಿಸಿರಿ: ನೀವು ಪವಿತ್ರಾತ್ಮನನ್ನು ಹೊಂದಿಕೊಂಡದ್ದು ಹೇಗೆ? ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದ ಹೊಂದಿಕೊಂಡಿರೊ? ಇಲ್ಲ! ಸುವಾರ್ತೆಯನ್ನು ಕೇಳಿ ಅದರಲ್ಲಿ ನಂಬಿಕೆಯಿಟ್ಟದ್ದರಿಂದಲೇ ಪವಿತ್ರಾತ್ಮನನ್ನು ಹೊಂದಿಕೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇದೊಂದನ್ನು ಮಾತ್ರ ನಿಮ್ಮಿಂದ ತಿಳಿಯಬಯಸುತ್ತೇನೆ. ನೀವು ಪವಿತ್ರ ಆತ್ಮರನ್ನು ಹೊಂದಿದ್ದು ನಿಯಮದ ಕ್ರಿಯೆಯಿಂದಲೋ? ಇಲ್ಲವೆ ಕೇಳಿದ್ದನ್ನು ನಂಬಿದ್ದರಿಂದಲೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಮಾಕಾ ತುಮಿ ಎಕ್ ಸಾಂಗಾ: ತುಮಿ ದೆವಾಚೊ ಆತ್ಮೊ ಖಾಯ್ದೊ ಕಾಯ್ ಸಾಂಗ್ತಾ ತೆ ಕರುನ್ ಜೊಡುನ್ ಘೆಟ್ಲ್ಯಾಶಿ, ಕಾಯ್ ಬರಿ ಖಬರ್ ಆಯ್ಕುನ್ ಅನಿ ತೆಚ್ಯಾ ವರ್‍ತಿ ವಿಶ್ವಾಸ್ ಕರುನ್ ಜೊಡುನ್ ಘೆಟ್ಲ್ಯಾಶಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 3:2
19 ತಿಳಿವುಗಳ ಹೋಲಿಕೆ  

ಇದರಿಂದಾಗಿ ಅಬ್ರಹಾಮನಿಗೆ ದೊರಕಿದ ಸೌಭಾಗ್ಯ, ಕ್ರಿಸ್ತಯೇಸುವಿನ ಮುಖಾಂತರ ಅನ್ಯಧರ್ಮೀಯರಿಗೂ ದೊರಕುವಂತಾಯಿತು; ವಿಶ್ವಾಸದ ಮೂಲಕವಾಗಿ, ದೇವರು ವಾಗ್ದಾನ ಮಾಡಿದ ಪವಿತ್ರಾತ್ಮ ನಮಗೂ ದೊರಕುವಂತಾಯಿತು.


ಮಾನವನ ಅಂತರಂಗವನ್ನು ಅರಿತ ದೇವರು ನಿಮಗೆ ಕೊಟ್ಟಂತೆಯೇ ಅವರಿಗೂ ಪವಿತ್ರಾತ್ಮ ಅವರನ್ನು ಕೊಟ್ಟರು. ಅವರೂ ತಮ್ಮವರೇ ಎಂದು ವ್ಯಕ್ತಪಡಿಸಿದರು.


ದೇವರು ನಿಮಗೆ ಪವಿತ್ರಾತ್ಮರನ್ನು ಪ್ರಧಾನಮಾಡಿ ಮಹತ್ಕಾರ್ಯಗಳನ್ನು ಎಸಗುತ್ತಾ ಬಂದಿದ್ದಾರೆ. ಹಾಗೆ ಮಾಡುತ್ತಿರುವುದು, ನೀವು ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸಿದ್ದರಿಂದಲ್ಲ, ಶುಭಸಂದೇಶವನ್ನು ಕೇಳಿ, ವಿಶ್ವಾಸ ಇಟ್ಟಿರುವುದರಿಂದ.


ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ಹಲವಾರು ಮಹತ್ಕಾರ್ಯಗಳಿಂದಲೂ ಮತ್ತು ತಮ್ಮ ಚಿತ್ತಾನುಸಾರ ಅನುಗ್ರಹಿಸಿದ ಪವಿತ್ರಾತ್ಮ ಅವರ ವರದಾನಗಳಿಂದಲೂ ದೇವರು ಆ ಪ್ರಮಾಣವನ್ನು ಪುಷ್ಟೀಕರಿಸಿದ್ದಾರೆ.


ಇವರು ಬಂದು ಆ ಜನರು ಪವಿತ್ರಾತ್ಮ ಅವರ ವರವನ್ನು ಪಡೆಯಲೆಂದು ಅವರಿಗೋಸ್ಕರ ಪ್ರಾರ್ಥನೆಮಾಡಿದರು.


ಅದಕ್ಕೆ ಪೇತ್ರನು, “ನಿಮ್ಮಲ್ಲಿ ಪ್ರತಿ ಒಬ್ಬನೂ ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖನಾಗಿ ದೇವರಿಗೆ ಅಭಿಮುಖನಾಗಲಿ; ಯೇಸುಕ್ರಿಸ್ತರ ನಾಮದಲ್ಲಿ ದೀಕ್ಷಾಸ್ನಾನವನ್ನು ಪಡೆಯಲಿ. ಇದರಿಂದ ನೀವು ಪಾಪಕ್ಷಮೆಯನ್ನು ಪಡೆಯುವಿರಿ; ದೇವರ ವರವಾದ ಪವಿತ್ರಾತ್ಮರನ್ನು ಹೊಂದುವಿರಿ.


ಒಬ್ಬನು, ಒಮ್ಮೆ ಜ್ಞಾನೋದಯವನ್ನು ಪಡೆದು, ಸ್ವರ್ಗೀಯ ವರದಾನಗಳನ್ನು ಆಸ್ವಾದಿಸಿ, ಪವಿತ್ರಾತ್ಮ ಅವರ ಸಹಭಾಗಿಯಾಗಿ,


ದೇವರು ಮಾನವನನ್ನು ಹೇಗೆ ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ ಎಂಬುದನ್ನು ಶುಭಸಂದೇಶವು ಪ್ರಕಟಿಸುತ್ತದೆ. ಇಂಥ ಸಂಬಂಧವು ಆದಿಯಿಂದ ಅಂತ್ಯದವರೆಗೂ ವಿಶ್ವಾಸದಿಂದ ಮಾತ್ರ ಸಾಧ್ಯ. “ಯಾರು ದೇವರೊಡನೆ ಸತ್ಸಂಬಂಧ ಹೊಂದಿರುತ್ತಾರೋ ಅವರು ವಿಶ್ವಾಸದಿಂದಲೇ ಸಜ್ಜೀವವನ್ನು ಪಡೆಯುತ್ತಾರೆ," ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ಈ ಸೇವಾಕಾರ್ಯವನ್ನು ಅವರು ಸ್ವಾರ್ಥಸಾಧನೆಗಾಗಿ ಅಲ್ಲ, ನಿಮಗೋಸ್ಕರವಾಗಿಯೇ ಮಾಡುತ್ತಿರುವುದಾಗಿ ಅವರಿಗೆ ತಿಳಿಸಲಾಗಿತ್ತು. ಅವರು ಪ್ರವಾದಿಸಿದ ಘಟನೆಗಳು ಈಗ ಸಂಭವಿಸಿವೆ ಎಂಬುದನ್ನು ಸ್ವರ್ಗದಿಂದ ಕಳುಹಿಸಲಾದ ಪವಿತ್ರಾತ್ಮರ ಶಕ್ತಿಯಿಂದ, ಶುಭಸಂದೇಶವನ್ನು ಸಾರಿದವರ ಮುಖಾಂತರ ನಿಮಗೆ ಪ್ರಕಟಿಸಲಾಗಿದೆ. ದೇವದೂತರು ಸಹ ವೀಕ್ಷಿಸಲು ಅಪೇಕ್ಷಿಸುವಂಥ ಸಂಗತಿಗಳಿವು.


ಏಕೆಂದರೆ, ಯಾರಾದರೂ ಬಂದು, ನಾವು ಬೋಧಿಸದೆ ಇರುವ ಬೇರೊಬ್ಬ ಯೇಸುವನ್ನು ಬೋಧಿಸಿದರೆ ನೀವು ಸ್ವೀಕರಿಸುತ್ತೀರಿ. ನೀವು ಹೊಂದಿರುವ ಪವಿತ್ರಾತ್ಮರಿಗೆ ಬದಲಾಗಿ ಬೇರೊಬ್ಬ ಆತ್ಮವನ್ನು ಪಡೆಯುವಂತೆ ಮಾಡಿದರೆ, ನೀವು ಸ್ವಾಗತಿಸುತ್ತೀರಿ. ನಿಮಗೆ ಈಗಾಗಲೇ ದೊರಕಿರುವ ಶುಭಸಂದೇಶವಲ್ಲದೆ ಬೇರೊಂದು ಸಂದೇಶವನ್ನು ನಿಮಗೆ ಸಾರಿದರೆ, ನೀವು ಒಮ್ಮೆಗೇ ಒಪ್ಪಿಕೊಳ್ಳುತ್ತೀರಿ. ಇದು ನಿಜಕ್ಕೂ ಆಶ್ಚರ್ಯವೇ ಸರಿ.


ಧರ್ಮಶಾಸ್ತ್ರಕ್ಕೆ ಬಾಹಿರರಾದವರನ್ನು ಗಳಿಸಿಕೊಳ್ಳಲು ನಾನು ಧರ್ಮಶಾಸ್ತ್ರಕ್ಕೆ ಬಾಹಿರನಂತೆ ಆದೆ. ಯೇಸುಕ್ರಿಸ್ತರ ನಿಯಮಕ್ಕೆ ನಾನು ವಿಧೇಯನಾದುದರಿಂದ ದೇವರ ನಿಯಮಕ್ಕೆ ನಾನು ಬಾಹಿರನೇನೂ ಅಲ್ಲ.


ನೀವು ಪವಿತ್ರಾತ್ಮ ಸಂಬಂಧವಾದ ಆಧ್ಯಾತ್ಮಿಕ ಜೀವನವನ್ನು ಪ್ರಾರಂಭಿಸಿಯೂ ಈಗ ಅದನ್ನು ಕೇವಲ ದೇಹಸಂಬಂಧವಾದ ವಿಧಿಯಿಂದ ಪೂರೈಸಬೇಕೆಂದಿದ್ದೀರೋ? ನೀವು ಅಷ್ಟು ಮತಿಗೆಟ್ಟವರೋ?


ಶುಭವಾರ್ತೆಯನ್ನು ಅವರಿಗೆ ಸಾರಲಾದಂತೆ ನಮಗೂ ಸಾರಲಾಯಿತು. ಅವರು ಅದನ್ನು ಆಲಿಸಿದರು; ಆದರೆ ಅವರಲ್ಲಿ ವಿಶ್ವಾಸವಿರಲಿಲ್ಲ. ಈ ಕಾರಣ, ಅವರು ಕೇಳಿದ ಸಂದೇಶದಿಂದ ಫಲ ಪಡೆಯದೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು