Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 3:28 - ಕನ್ನಡ ಸತ್ಯವೇದವು C.L. Bible (BSI)

28 ನೀವೆಲ್ಲರೂ ಕ್ರಿಸ್ತಯೇಸುವಿನಲ್ಲಿ ಒಂದಾಗಿದ್ದೀರಿ. ಎಂದೇ, ಇನ್ನು ಮೇಲೆ ಯೆಹೂದ್ಯ-ಯೆಹೂದ್ಯನಲ್ಲದವ, ದಾಸ-ದಣಿ, ಗಂಡು-ಹೆಣ್ಣು, ಎಂಬ ಭೇದವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ ಯೆಹೂದ್ಯನು ಅಥವಾ ಗ್ರೀಕನು ಎಂದಾಗಲೀ, ಆಳು ಅಥವಾ ಒಡೆಯ ಎಂದಾಗಲೀ, ಗಂಡು ಹಾಗೂ ಹೆಣ್ಣು ಎಂದಾಗಲೀ ಭೇದವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ, ಆಳು ಒಡೆಯ ಎಂದೂ, ಗಂಡು ಹೆಣ್ಣು ಎಂದೂ ಭೇದವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಈಗ ಕ್ರಿಸ್ತನಲ್ಲಿ ಯೆಹೂದ್ಯನು, ಗ್ರೀಕನು ಎಂಬ ವ್ಯತ್ಯಾಸವಿಲ್ಲ; ಸ್ವತಂತ್ರರು ಮತ್ತು ಗುಲಾಮರು ಎಂಬ ವ್ಯತ್ಯಾಸವಿಲ್ಲ; ಸ್ತ್ರೀಯರು ಮತ್ತು ಪುರುಷರು ಎಂಬ ವ್ಯತ್ಯಾಸವಿಲ್ಲ. ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ, ಯೆಹೂದ್ಯರು ಯೆಹೂದ್ಯರಲ್ಲದವರು ಎಂದೂ ದಾಸರು ಸ್ವತಂತ್ರರು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಅಶೆ ರ್‍ಹಾತಾನಾ, ಜುದೆವ್ ಅನಿ ಗ್ರಿಕ್ ಅಸಲ್ಲ್ಯಾಂಚ್ಯಾ ಮದ್ದಿ ಗುಲಾಮ್ ಅನಿ ಸ್ವತಂತ್ರ್ ಅಸಲ್ಲ್ಯಾ ಮದ್ದಿ ಘೊವ್ಮಾನ್ಸಾ ಅನಿ ಬಾಯ್ಕೊಮಾನ್ಸಾಂಚ್ಯಾ ಮದ್ದಿ ಕಸ್ಲೊಬಿ ಬೆದ್‍ ನಾ ತುಮಿ ಸಗ್ಳೆ ಜಾನಾ ಕ್ರಿಸ್ತಾ ಜೆಜುಚ್ಯಾ ಎಕ್ವಟ್ಟಾತ್ ಎಕ್ ಹೊವ್ನ್ ಹಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 3:28
31 ತಿಳಿವುಗಳ ಹೋಲಿಕೆ  

ಇಂಥ ಹೊಸ ಜೀವನದಲ್ಲಿ ಯೆಹೂದ್ಯ-ಗ್ರೀಕ, ಸುನ್ನತಿ ಹೊಂದಿದವ-ಸುನ್ನತಿ ಇಲ್ಲದವ, ನಾಗರಿಕ-ಅನಾಗರಿಕ, ಯಜಮಾನ-ಗುಲಾಮ ಎಂಬ ಭಿನ್ನಭೇದಗಳಿಲ್ಲ, ಕ್ರಿಸ್ತಯೇಸುವೇ ಸಮಸ್ತದಲ್ಲಿ ಸಮಸ್ತವೂ ಆಗಿದ್ದಾರೆ.


ಕ್ರಿಸ್ತಯೇಸುವಿನಲ್ಲಿ ಬಾಳುವವರಿಗೆ ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಮುಖ್ಯವಲ್ಲ. ಪ್ರೀತಿಯಿಂದ ಕಾರ್ಯ ಎಸಗುವ ವಿಶ್ವಾಸವೇ ಪ್ರಮುಖವಾದುದು.


ಈ ಮಂದೆಗೆ ಸೇರದ ಬೇರೆ ಕುರಿಗಳೂ ನನಗಿವೆ. ಅವನ್ನೂ ನಾನು ಕರೆತರಬೇಕು. ಅವು ಸಹ ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಕುರಿಹಿಂಡು ಆಗುವುದು. ಒಬ್ಬನೇ ಕುರಿಗಾಹಿ ಇರುವನು.


ನೀವೆಲ್ಲರೂ ಒಂದೇ ಶರೀರಕ್ಕೆ ಸೇರಿದವರು; ಒಬ್ಬರೇ ಪವಿತ್ರಾತ್ಮರನ್ನು ಪಡೆದವರು; ಒಂದೇ ನಿರೀಕ್ಷೆಗಾಗಿ ಕರೆಹೊಂದಿದವರು.


ಯೆಹೂದ್ಯ ಜನಾಂಗದಿಂದ ಮಾತ್ರವಲ್ಲ, ಇತರ ಜನಾಂಗದಿಂದಲೂ ಕರೆಯಲಾಗಿರುವ ನಾವೇ ಈ ಕರುಣೆಯ ಕುಡಿಕೆಗಳು.


ಶಭಸಂದೇಶದ ವಿಷಯದಲ್ಲಿ ನಾನು ನಾಚಿಕೆಪಡುವವನೇ ಅಲ್ಲ. ಯೆಹೂದ್ಯರನ್ನು ಮೊದಲ್ಗೊಂಡು ಇತರರಿಗೂ ವಿಶ್ವಾಸಿಸುವ ಪ್ರತಿಯೊಬ್ಬನಿಗೂ ಈ ಶುಭಸಂದೇಶವು ಜೀವೋದ್ಧಾರವನ್ನು ತರುವ ದೇವರ ಶಕ್ತಿಯಾಗಿದೆ.


ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಮುಖ್ಯವಲ್ಲ, ದೇವರ ಆಜ್ಞೆಗಳಿಗೆ ವಿಧೇಯನಾಗಿರುವುದೇ ಮುಖ್ಯ.


ಆ ಜನತೆಗಾಗಿ ಮಾತ್ರವಲ್ಲ, ಚದರಿಹೋಗಿದ್ದ ದೇವಜನರನ್ನು ಒಂದುಗೂಡಿಸುವ ಸಲುವಾಗಿಯೂ ಪ್ರಾಣತ್ಯಾಗ ಮಾಡಲಿದ್ದಾರೆಂಬುದು ಆ ಮಾತಿನ ಇಂಗಿತ.


ನಾನಿನ್ನು ಲೋಕದಲ್ಲಿ ಇರುವುದಿಲ್ಲ. ಇವರಾದರೋ ಲೋಕದಲ್ಲಿ ಇರುತ್ತಾರೆ. ನಾನು ನಿಮ್ಮ ಬಳಿಗೆ ಬರುತ್ತಿದ್ದೇನೆ. ಪವಿತ್ರ ಪಿತನೇ, ನಾವು ಒಂದಾಗಿರುವಂತೆ ನೀವು ನನಗೆ ಕೊಟ್ಟಿರುವ ಇವರೂ ಒಂದಾಗಿರುವ ಹಾಗೆ ನಿಮ್ಮ ನಾಮದ ಶಕ್ತಿಯಿಂದ ಇವರನ್ನು ಸುರಕ್ಷಿತವಾಗಿರಿಸಿರಿ.


ಏಕೆಂದರೆ, ಕ್ರೈಸ್ತವಿಶ್ವಾಸಿಯಾದ ಸತಿಯ ಮುಖಾಂತರ ಪತಿ ದೇವಜನರೊಂದಿಗೆ ಸಂಬಂಧಪಡೆಯುತ್ತಾನೆ. ಅಂತೆಯೇ ಕ್ರೈಸ್ತವಿಶ್ವಾಸಿಯಾದ ಪತಿಯ ಮುಖಾಂತರ ಸತಿ ದೇವಜನರೊಂದಿಗೆ ಸಂಬಂಧಪಡೆಯುತ್ತಾಳೆ. ಇಲ್ಲದಿದ್ದರೆ ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು. ಈಗಲಾದರೋ ಅವರು ದೇವಜನರೊಂದಿಗೆ ಸಂಬಂಧ ಉಳ್ಳವರಾಗಿದ್ದಾರೆ.


ಆ ದಿನಗಳಲ್ಲಿ ದಾಸದಾಸಿಯರ ಮೇಲೂ ನನ್ನ ಆತ್ಮವನ್ನು ಸುರಿಸುವೆನು.


ಯೇಸುಕ್ರಿಸ್ತರಲ್ಲಿ ವಿಶ್ವಾಸವಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರನ್ನೂ ದೇವರು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ.


ಆದುದರಿಂದ ಈಗ ಕ್ರಿಸ್ತಯೇಸುವಿನಲ್ಲಿ ಇರುವವರಿಗೆ ದಂಡನಾತೀರ್ಪು ಇರುವುದಿಲ್ಲ.


ಇದರಿಂದಾಗಿ ಅಬ್ರಹಾಮನಿಗೆ ದೊರಕಿದ ಸೌಭಾಗ್ಯ, ಕ್ರಿಸ್ತಯೇಸುವಿನ ಮುಖಾಂತರ ಅನ್ಯಧರ್ಮೀಯರಿಗೂ ದೊರಕುವಂತಾಯಿತು; ವಿಶ್ವಾಸದ ಮೂಲಕವಾಗಿ, ದೇವರು ವಾಗ್ದಾನ ಮಾಡಿದ ಪವಿತ್ರಾತ್ಮ ನಮಗೂ ದೊರಕುವಂತಾಯಿತು.


ಕ್ರಿಸ್ತಯೇಸುವಿನಲ್ಲಿ ಇಟ್ಟಿರುವ ವಿಶ್ವಾಸದ ಮೂಲಕ ನೀವೆಲ್ಲರೂ ದೇವರ ಮಕ್ಕಳಾಗಿದ್ದೀರಿ.


ನನ್ನ ದೇಹಸ್ಥಿತಿ ನಿಮಗೆ ಬೇಸರವನ್ನುಂಟುಮಾಡುವಂಥದ್ದಾಗಿದ್ದರೂ ನೀವು ನನ್ನನ್ನು ತಿರಸ್ಕರಿಸಲಿಲ್ಲ; ಅಸಹ್ಯಪಡಲಿಲ್ಲ. ನನ್ನನ್ನು ದೇವದೂತನಂತೆ ಏಕೆ, ಕ್ರಿಸ್ತಯೇಸುವಿನಂತೆಯೇ ಭಾವಿಸಿ ಉಪಚರಿಸಿದಿರಿ.


ಕ್ರಿಸ್ತಯೇಸುವಿಗೆ ಸೇರಿದ ಎಲ್ಲರೂ ತಮ್ಮ ದೈಹಿಕ ವ್ಯಾಮೋಹವನ್ನು ಅದರ ಆಶಾಪಾಶಗಳ ಹಾಗೂ ದುರಿಚ್ಛೆಗಳ ಸಮೇತ ಶಿಲುಬೆಗೆ ಜಡಿದುಬಿಟ್ಟಿದ್ದಾರೆ.


ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿರುವ ಎಫೆಸದ ದೇವಜನರಿಗೆ - ದೇವರ ಚಿತ್ತಾನುಸಾರ ಕ್ರಿಸ್ತಯೇಸುವಿನ ಪ್ರೇಷಿತನಾಗಿ ನೇಮಕಗೊಂಡ ಪೌಲನು ಬರೆಯುವ ಪತ್ರ.


ಕ್ರಿಸ್ತಯೇಸುವಿನಲ್ಲಿ ಜೀವಿಸುವ ಫಿಲಿಪ್ಪಿಯ ದೇವಜನರಿಗೆ, ಧರ್ಮಾಧಿಕಾರಿಗಳಿಗೆ ಹಾಗೂ ಧರ್ಮಸೇವಕರಿಗೆ - ಕ್ರಿಸ್ತಯೇಸುವಿನ ದಾಸರಾದ ಪೌಲ ಮತ್ತು ತಿಮೊಥೇಯರು ಜೊತೆಗೂಡಿ ಬರೆಯುವ ಪತ್ರ.


ಶುಭಸಂದೇಶದ ಸೇವೆಯನ್ನು ಕೈಗೊಳ್ಳಲು ಯೋಗ್ಯನೆಂದು ಎಣಿಸಿ ನನಗೆ ಬೇಕಾದ ಶಕ್ತಿಸಾಮರ್ಥ್ಯವನ್ನು ದಯಪಾಲಿಸಿದ ನಮ್ಮ ಪ್ರಭು ಯೇಸುಕ್ರಿಸ್ತರಿಗೆ ನಾನು ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ನನ್ನ ಪ್ರೀತಿಯ ಪುತ್ರ ತಿಮೊಥೇಯನಿಗೆ ಪೌಲನು ಬರೆಯುವ ಪತ್ರ. ಕ್ರಿಸ್ತಯೇಸುವಿನಲ್ಲಿರುವವರಿಗೆ ಲಭಿಸುವ ಅಮರ ಜೀವದ ವಾಗ್ದಾನವನ್ನು ಸಾರಲು ದೈವಚಿತ್ತಾನುಸಾರ ಪ್ರೇಷಿತನಾದ ನಾನು ತಿಳಿಸುವುದೇನೆಂದರೆ: ಪಿತನಾಗಿರುವ ದೇವರೂ ಒಡೆಯರಾದ ಕ್ರಿಸ್ತಯೇಸುವೂ ನಿಮಗೆ ಕೃಪೆಯನ್ನೂ ಕರುಣೆಯನ್ನೂ ಶಾಂತಿಯನ್ನು ಅನುಗ್ರಹಿಸಲಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು