Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 4:15 - ಕನ್ನಡ ಸತ್ಯವೇದವು C.L. Bible (BSI)

15 ಅದೊಂದು ಭಾಗ್ಯವೆಂದೇ ತಿಳಿದಿರಿ. ಆ ಭಾವನೆ ಈಗೆಲ್ಲಿದೆ? ಆಗ, ಬೇಕಾಗಿದ್ದಿದ್ದರೆ ನಿಮ್ಮ ಕಣ್ಣುಗಳನ್ನೇ ಕಿತ್ತು ನನಗೆ ಕೊಡುತ್ತಿದ್ದಿರಿ ಎಂದು ನಾನು ಹೇಳಬಲ್ಲೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ನಮಗೆ ಶುಭವಾಯಿತೆಂದು ನೀವು ಅಂದುಕೊಂಡಿರಲ್ಲಾ, ಆ ನಿಮ್ಮ ಶುಭವು ಎಲ್ಲಿ ಹೋಯಿತು? ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನಾದರೂ ಕಿತ್ತು ನನಗೆ ಕೊಡುತ್ತಿದ್ದಿರೆಂದು ನಿಮ್ಮನ್ನು ಕುರಿತು ಸಾಕ್ಷಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಗ ನಮಗೆ ಶುಭವಾಯಿತೆಂದು ನೀವು ಅಂದುಕೊಂಡಿರಲ್ಲಾ; ಆ ಶುಭವು ಎಲ್ಲಿ ಹೋಯಿತು? ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನಾದರೂ ಕಿತ್ತು ನನಗೆ ಕೊಡುತ್ತಿದ್ದಿರೆಂದು ನಿಮ್ಮನ್ನು ಕುರಿತು ಸಾಕ್ಷಿಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆಗ ನೀವು ಬಹು ಸಂತೋಷವುಳ್ಳವರಾಗಿದ್ದಿರಿ. ಆ ಆನಂದವು ಈಗ ಎಲ್ಲಿದೆ? ನನಗೆ ಸಹಾಯ ಮಾಡಲು ನೀವು ಏನು ಬೇಕಾದರೂ ಮಾಡುವುದಕ್ಕೆ ಸಿದ್ಧರಾಗಿದ್ದಿರೆಂಬುದು ನನ್ನ ನೆನಪಿನಲ್ಲಿದೆ. ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನೇ ಕಿತ್ತು ನನಗೆ ಕೊಟ್ಟುಬಿಡುತ್ತಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನೀವು ಕೋರಿದ ಆ ಶುಭವೆಲ್ಲಿ? ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನೇ ಕಿತ್ತು ನನಗೆ ಕೊಡುತ್ತಿದ್ದಿರಿ ಎಂದು ನಿಮ್ಮ ವಿಷಯವಾಗಿ ನಾನು ಸಾಕ್ಷಿಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತನ್ನಾ ತುಮಿ ಲೈ ಕುಶಿನ್ ಹೊತ್ತ್ಯಾಶಿ. ತಿ ಕುಶಿ ಅತ್ತಾ ಖೈ ಹಾಯ್? ಮಿಯಾಚ್ ಸಾಕ್ಷಿ ದಿತಾ. ಸಾಧ್ಯ್ ಹೊಲ್ಯಾರ್ ತುಮ್ಚೆ ಡೊಳೆ ಸೈತ್ ಮೆಟ್ಟುನ್ ಕಾಡುನ್ ಮಾಕಾ ದಿವ್ಕ್ ತುಮಿ ತಯಾರ್ ಹೊತ್ತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 4:15
17 ತಿಳಿವುಗಳ ಹೋಲಿಕೆ  

ವಿಶ್ವಾಸದ ಮೂಲಕ ನಾವು ದೈವಾನುಗ್ರಹವನ್ನು ಸವಿಯುವಂತೆ ಯೇಸುಕ್ರಿಸ್ತರು ದಾರಿ ತೋರಿಸಿದರು. ನಾವೀಗ ನೆಲೆಗೊಂಡಿರುವುದು ಆ ಅನುಗ್ರಹದಲ್ಲಿಯೇ. ಆದ್ದರಿಂದಲೇ, ದೇವರ ಮಹಿಮೆಯಲ್ಲಿ ನಾವೂ ಪಾಲುಗೊಳ್ಳುತ್ತೇವೆಂಬ ಭರವಸೆಯಿಂದ ಹೆಮ್ಮೆಪಡುತ್ತೇವೆ.


ನಿಮಗಾಗಿಯೂ ಲವೊದಿಕೀಯ ಹಾಗೂ ಹಿರೆಯಾಪೊಲಿಯದ ಜನರಿಗಾಗಿಯೂ ಆತನು ಶ್ರಮವಹಿಸಿ ದುಡಿಯುತ್ತಿದ್ದಾನೆಂಬುದಕ್ಕೆ ನಾನೇ ಸಾಕ್ಷಿ.


ಅವರು ನಿರ್ವಹಿಸುವ ಕಾರ್ಯದ ನಿಮಿತ್ತ ಅವರನ್ನು ಅತ್ಯಧಿಕ ಪ್ರೀತಿಯಿಂದ ಗೌರವಿಸಿರಿ. ನಿಮ್ಮನಿಮ್ಮೊಳಗೆ ಸಮಾಧಾನದಿಂದಿರಿ.


ನೀವು ನಮಗೆ ಇಷ್ಟು ಪ್ರಿಯರಾದ ಕಾರಣ ದೇವರ ಶುಭಸಂದೇಶವನ್ನು ಸಾರುವುದಕ್ಕೆ ಮಾತ್ರವಲ್ಲ, ನಿಮಗಾಗಿ ನಮ್ಮ ಪ್ರಾಣವನ್ನು ನೀಡುವುದಕ್ಕೂ ಸಿದ್ಧರಾಗಿದ್ದೆವು.


ಪ್ರತಿಯೊಬ್ಬನೂ ತನ್ನ ನಡತೆಯನ್ನು ತನ್ನಷ್ಟಕ್ಕೆ ತಾನೇ ಪರಿಶೋಧಿಸಿಕೊಳ್ಳಲಿ. ತನ್ನ ನಡತೆ ಒಳಿತಾಗಿದ್ದರೆ ಹೆಮ್ಮೆಪಡಲಿ. ಆದರೆ ಇತರರೊಂದಿಗೆ ಹೋಲಿಸಿ ಹೆಮ್ಮೆಪಡಬೇಕಾಗಿಲ್ಲ.


ಪವಿತ್ರಾತ್ಮದತ್ತವಾದ ಸತ್ಫಲಗಳು ಯಾವುವೆಂದರೆ: ಪ್ರೀತಿ, ಆನಂದ, ಶಾಂತಿಸಮಾಧಾನ, ಸಹನೆ, ದಯೆ, ಸದ್ಗುಣ, ಪ್ರಾಮಾಣಿಕತೆ, ಸೌಭಾಗ್ಯ, ಸಂಯಮ - ಇಂಥವುಗಳೇ.


ನನ್ನ ಪ್ರಿಯ ಮಕ್ಕಳೇ, ತಾಯಿ ತನ್ನ ಮಗುವಿಗಾಗಿ ಪ್ರಸವವೇದನೆಪಡುವ ಪ್ರಕಾರ ಕ್ರಿಸ್ತಯೇಸು ನಿಮ್ಮಲ್ಲಿ ರೂಪುಗೊಳ್ಳುವ ತನಕ ನಿಮಗಾಗಿ ನಾನು ಮತ್ತೆ ಅಂಥ ವೇದನೆಯನ್ನು ಪಡುತ್ತಿದ್ದೇನೆ.


ಇದರಿಂದಾಗಿ ಅಬ್ರಹಾಮನಿಗೆ ದೊರಕಿದ ಸೌಭಾಗ್ಯ, ಕ್ರಿಸ್ತಯೇಸುವಿನ ಮುಖಾಂತರ ಅನ್ಯಧರ್ಮೀಯರಿಗೂ ದೊರಕುವಂತಾಯಿತು; ವಿಶ್ವಾಸದ ಮೂಲಕವಾಗಿ, ದೇವರು ವಾಗ್ದಾನ ಮಾಡಿದ ಪವಿತ್ರಾತ್ಮ ನಮಗೂ ದೊರಕುವಂತಾಯಿತು.


ತಮ್ಮ ಶಕ್ತಿಗನುಸಾರವಾಗಿ ಮಾತ್ರವಲ್ಲ, ಕೆಲವೊಮ್ಮೆ ಶಕ್ತಿಮೀರಿಯೂ ನೀಡಿದ್ದಾರೆಂದು ನಾನು ಖಂಡಿತವಾಗಿ ಹೇಳುತ್ತೇನೆ.


ಭರವಸೆಯ ಮೂಲವಾಗಿರುವ ದೇವರಲ್ಲಿರುವ ನಮ್ಮ ವಿಶ್ವಾಸದ ಮೂಲಕ ಲಭಿಸುವ ಆನಂದವನ್ನೂ ಶಾಂತಿಸಮಾಧಾನವನ್ನೂ ನಿಮಗೆ ಸಮೃದ್ಧಿಯಾಗಿ ದಯಪಾಲಿಸಲಿ. ನಿಮ್ಮ ಭರವಸೆ ಪವಿತ್ರಾತ್ಮ ಅವರ ಪ್ರಭಾವದಿಂದ ಪ್ರವರ್ಧಿಸುವಂತಾಗಲಿ.


ದೇವರ ವಿಷಯದಲ್ಲಿ ಅವರು ಬಹಳ ನಿಷ್ಠಾವಂತರು ಎಂದು ಒತ್ತಿಹೇಳಬಲ್ಲೆ. ಆದರೆ ಆ ನಿಷ್ಠೆ ನೈಜಜ್ಞಾನವನ್ನು ಆಧರಿಸಿಲ್ಲ.


ಸ್ವದೇಶಿಯರೂ ರಕ್ತಸಂಬಂಧಿಕರೂ ಆದ ನನ್ನ ಸಹೋದರರ ಪರವಾಗಿ ನಾನು ಕ್ರಿಸ್ತಯೇಸುವಿನಿಂದ ಬಹಿಷ್ಕೃತನಾಗಿ ಶಾಪಗ್ರಸ್ತನಾಗಲು ಸಹ ಸಿದ್ಧನಿದ್ದೇನೆ.


ಕಲ್ಲುಭೂಮಿಯ ಮೇಲೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿ ಸಂತೋಷದಿಂದ ಸ್ವೀಕರಿಸಿದವರು; ಅದು ಅವರಲ್ಲಿ ಬೇರೂರದ ಕಾರಣ ಅವರು ಸ್ವಲ್ಪಕಾಲ ವಿಶ್ವಾಸಿಸುತ್ತಾರೆ; ಶೋಧನೆಯ ಸಮಯದಲ್ಲಿ ಅದನ್ನು ತೊರೆದುಬಿಡುತ್ತಾರೆ.


ನನ್ನ ದೇಹಸ್ಥಿತಿ ನಿಮಗೆ ಬೇಸರವನ್ನುಂಟುಮಾಡುವಂಥದ್ದಾಗಿದ್ದರೂ ನೀವು ನನ್ನನ್ನು ತಿರಸ್ಕರಿಸಲಿಲ್ಲ; ಅಸಹ್ಯಪಡಲಿಲ್ಲ. ನನ್ನನ್ನು ದೇವದೂತನಂತೆ ಏಕೆ, ಕ್ರಿಸ್ತಯೇಸುವಿನಂತೆಯೇ ಭಾವಿಸಿ ಉಪಚರಿಸಿದಿರಿ.


ಹೀಗಿರಲಾಗಿ ಸತ್ಯವನ್ನು ನುಡಿಯುವುದರಿಂದ ನಾನು ನಿಮಗೆ ಶತ್ರುವಾಗಿಬಿಟ್ಟೆನೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು