Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 4:16 - ಕನ್ನಡ ಸತ್ಯವೇದವು C.L. Bible (BSI)

16 ಹೀಗಿರಲಾಗಿ ಸತ್ಯವನ್ನು ನುಡಿಯುವುದರಿಂದ ನಾನು ನಿಮಗೆ ಶತ್ರುವಾಗಿಬಿಟ್ಟೆನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಹೀಗಿರಲಾಗಿ ನಾನು ನಿಮಗೆ ಸತ್ಯವನ್ನು ಹೇಳುವುದರಿಂದ ನಿಮಗೆ ಶತ್ರುವಾಗಿದ್ದೇನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಹೀಗಿರಲಾಗಿ ನಾನು ನಿಮಗೆ ಸತ್ಯವನ್ನು ಹೇಳುವದರಿಂದ ನಿಮಗೆ ಶತ್ರುವಾಗಿದ್ದೇನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಾನು ನಿಮಗೆ ಸತ್ಯವನ್ನು ಹೇಳುವುದರಿಂದ ಈಗ ನಿಮ್ಮ ಶತ್ರುವಾಗಿದ್ದೇನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಹೀಗಿರಲಾಗಿ ಸತ್ಯವನ್ನು ಹೇಳಿದ್ದರಿಂದ ನಾನು ನಿಮಗೆ ಶತ್ರುವಾಗಿಬಿಟ್ಟೆನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಮಿಯಾ ತುಮ್ಕಾ ಖರೆ ಸಾಂಗ್ತಲ್ಯಾಸಾಟ್ನಿ; ಅತ್ತಾ ತುಮ್ಚೊ ವೈರಿ ಹೊಲಾ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 4:16
17 ತಿಳಿವುಗಳ ಹೋಲಿಕೆ  

ಕಂಡ ದೋಷವನ್ನು ಮಂಟಪದಲ್ಲಿ ಖಂಡಿಸುವವನನ್ನು ನೀವು ಹಗೆಮಾಡುತ್ತೀರಿ; ನ್ಯಾಯವಾದಿಗಳ ಮೇಲೆ ದ್ವೇಷ ಸಾಧಿಸುತ್ತೀರಿ.


ಕುಚೋದ್ಯಗಾರನನ್ನು ಗದರಿಸಬೇಡ, ಅವನು ನಿನ್ನನ್ನು ದ್ವೇಷಿಸುವನು. ಜ್ಞಾನವಂತನನ್ನು ಗದರಿಸು, ಅವನು ನಿನ್ನನ್ನು ಪ್ರೀತಿಸುವನು.


ಇದುವರೆಗೂ ನಿಮ್ಮ ಬದುಕಿನ ಓಟ ಚೆನ್ನಾಗಿ ಸಾಗುತ್ತಿತ್ತು. ಸತ್ಯಕ್ಕೆ ಶರಣರಾಗದಂತೆ ಈಗ ನಿಮ್ಮನ್ನು ತಡೆದವರು ಯಾರು?


ನಾನು ನುಡಿಯುವುದಾದರೋ ಸತ್ಯವನ್ನೇ. ಆದುದರಿಂದಲೇ ನಿಮಗೆ ನನ್ನಲ್ಲಿ ನಂಬಿಕೆ ಇಲ್ಲ.


ಸಜ್ಜನರು ವಿಧಿಸುವಾ ಶಿಕ್ಷೆ ಎನಗೆ ಕಟಾಕ್ಷ I ದುರ್ಜನರಿಂದ ನನಗಾಗದಿರಲಿ ಅಭಿಷೇಕ I ಸತತ ಪ್ರಾರ್ಥಿಸುವೆ ಆ ದುಷ್ಕೃತ್ಯಗಳ ವಿರುದ್ಧ II


ಅವನು, “ನಮಗಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ; ಅವನು ಇಮ್ಲನ ಮಗನಾದ ಮೀಕಾಯೆಹು ಎಂಬವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆ,” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು, “ಅರಸರು ಹಾಗನ್ನಬಾರದು,” ಎಂದನು.


ಆದರೆ ನಾವು ಅವರಿಗೆ ಕ್ಷಣಮಾತ್ರವೂ ಬಿಟ್ಟುಕೊಡಲಿಲ್ಲ. ಹೀಗೆ ನಿಮಗೋಸ್ಕರ ಶುಭಸಂದೇಶದ ಸತ್ಯಾರ್ಥವನ್ನು ಸುಭದ್ರವಾಗಿ ಇರಿಸಿದೆವು.


ಲೋಕಕ್ಕೆ ನಿಮ್ಮ ಮೇಲೆ ಹಗೆಯಿಲ್ಲ. ಅದಕ್ಕೆ ಹಗೆಯಿರುವುದು ನನ್ನ ಮೇಲೆ. ಏಕೆಂದರೆ, ಅದರ ವರ್ತನೆ ಕೆಟ್ಟದೆಂದು ನಾನು ಯಥಾರ್ಥವಾಗಿ ಹೇಳುತ್ತಾ ಇದ್ದೇನೆ.


ಅಹಾಬನು ಎಲೀಯನನ್ನು ನೋಡಿ, “ಎಲೈ ವೈರಿಯೇ, ನೀನು ನನ್ನನ್ನು ಕಂಡುಹಿಡಿದೆಯಾ?” ಎಂದು ಕೇಳಿದನು. ಅವನು, “ಹೌದು, ಕಂಡುಹಿಡಿದೆ, ನೀನು ನಿನ್ನನ್ನು ಪಾಪಕ್ಕೆ ಮಾರಿಬಿಟ್ಟು, ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದೆ.


ಅವರ ಈ ನಡತೆ, ಶುಭಸಂದೇಶದ ಸತ್ಯಕ್ಕೆ ಅನುಗುಣವಾದುದಲ್ಲ ಎಂದು ನನಗೆ ಮನದಟ್ಟಾಯಿತು. ಆಗ ನಾನು ಅವರೆಲ್ಲರ ಸಮ್ಮುಖದಲ್ಲೇ ಕೇಫನಿಗೆ: “ನೀನು ಯೆಹೂದ್ಯನಾಗಿದ್ದೂ ಯೆಹೂದ್ಯರಂತೆ ನಡೆಯದೆ ಅನ್ಯಧರ್ಮೀಯರಂತೆ ನಡೆದುಕೊಳ್ಳುತ್ತ ಇದ್ದಿಯಲ್ಲವೇ? ಹೀಗಿರುವಲ್ಲಿ ಅನ್ಯಧರ್ಮೀಯರು ಯೆಹೂದ್ಯರಂತೆ ನಡೆದುಕೊಳ್ಳಬೇಕೆಂದು ನೀನು ಒತ್ತಾಯಪಡಿಸುವುದಾದರೂ ಹೇಗೆ?” ಎಂದು ಕೇಳಿದೆ.


ಈ ಮಾತನ್ನು ಹೇಳಿದ ಪ್ರವಾದಿಗೆ ಅರಸನು, “ನಿನ್ನನ್ನು ನಾನು ಆಲೋಚನಾಮಂತ್ರಿಯನ್ನಾಗಿ ನೇಮಿಸಲಿಲ್ಲ; ಬಾಯಿಮುಚ್ಚುವಿಯೋ: ಅಥವಾ ಏಟು ತಿನ್ನುವಿಯೋ?’ ಎಂದನು. ಅದಕ್ಕೆ ಅವನು, “ನೀವು ನನ್ನ ಬುದ್ಧಿವಾದವನ್ನು ಆಲಿಸದೆ ಹೀಗೆ ಮಾಡುವುದರಿಂದ ದೇವರು ನಿಮ್ಮನ್ನು ನಾಶಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾರೆಂದು ನಾನು ಬಲ್ಲೆ,” ಎಂದು ಹೇಳಿ ಸುಮ್ಮನಾದನು.


ಅವರಿಗೆ, ‘ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕರಗಿಸಬೇಕು,’ ಎಂದು ಆಜ್ಞಾಪಿಸಿದನು.


ಅದೊಂದು ಭಾಗ್ಯವೆಂದೇ ತಿಳಿದಿರಿ. ಆ ಭಾವನೆ ಈಗೆಲ್ಲಿದೆ? ಆಗ, ಬೇಕಾಗಿದ್ದಿದ್ದರೆ ನಿಮ್ಮ ಕಣ್ಣುಗಳನ್ನೇ ಕಿತ್ತು ನನಗೆ ಕೊಡುತ್ತಿದ್ದಿರಿ ಎಂದು ನಾನು ಹೇಳಬಲ್ಲೆ!


ಆ ನನ್ನ ವಿರೋಧಿಗಳು ನಿಮ್ಮನ್ನು ಮೆಚ್ಚಿಸಲು ತುಂಬ ಆಸಕ್ತಿಯನ್ನು ತೋರಿಸುತ್ತಿದ್ದಾರೆ. ಆದರೆ ಅವರ ಉದ್ದೇಶ ಒಳ್ಳೆಯದಲ್ಲ. ನೀವು ಸಹ ಅವರನ್ನು ಅಷ್ಟೇ ಆಸಕ್ತಿಯಿಂದ ಮೆಚ್ಚಿಸಬೇಕೆಂಬುದೇ ಅವರ ಉದ್ದೇಶ. ಆದ್ದರಿಂದಲೇ ನಿಮ್ಮನ್ನು ನನ್ನಿಂದ ಬೇರ್ಪಡಿಸಲು ಯತ್ನಿಸುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು