Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 4:18 - ಕನ್ನಡ ಸತ್ಯವೇದವು C.L. Bible (BSI)

18 ನಾನು ನಿಮ್ಮ ಬಳಿ ಇರಲಿ, ಇಲ್ಲದಿರಲಿ, ಬೇರೆಯವರು ನಿಮ್ಮಲ್ಲಿ ಅಷ್ಟು ಆಸಕ್ತರಾಗಿರುವುದು ಒಳ್ಳೆಯದೇ. ಆದರೆ ಅಂಥ ಆಸಕ್ತಿ ಸದುದ್ದೇಶದಿಂದ ಕೂಡಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಾನು ನಿಮ್ಮ ಸಂಗಡ ಇರುವಾಗ ಮಾತ್ರವಲ್ಲದೆ ಯಾವಾಗಲೂ ಒಳ್ಳೆಯ ವಿಷಯಕ್ಕಾಗಿ ನೀವು ಆಸಕ್ತಿಯನ್ನು ತೋರಿಸುವುದು ಒಳ್ಳೆಯದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಾನು ನಿಮ್ಮ ಸಂಗಡ ಇರುವಾಗ ಮಾತ್ರವಲ್ಲದೆ ಯಾವಾಗಲೂ ಒಳ್ಳೇ ವಿಷಯದಲ್ಲಿ ನೀವು ಮೆಚ್ಚಿಸಿಕೊಳ್ಳುವದು ಒಳ್ಳೇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದರೆ ಅವರ ಉದ್ದೇಶವು ಒಳ್ಳೆಯದಾಗಿದ್ದಾಗ ಮಾತ್ರ ನಿಮಗೆ ಒಳ್ಳೆಯದಾಗುತ್ತದೆ. ಇದು ಸತ್ಯ. ನಾನು ನಿಮ್ಮೊಂದಿಗಿರುವಾಗಲೂ ನಿಮ್ಮಿಂದ ದೂರವಿರುವಾಗಲೂ ಇದು ಸತ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಾನು ನಿಮ್ಮ ಸಂಗಡ ಇರುವಾಗ ಮಾತ್ರವಲ್ಲದೆ ಯಾವಾಗಲೂ ಉತ್ತಮ ಕಾರ್ಯಗಳಲ್ಲಿ ನೀವು ಆಸಕ್ತರಾಗಿರುವುದು ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಉದ್ದೆಸ್ ಬರೊ ರ್‍ಹಾಲ್ಯಾರ್, ತಸ್ಲಿ ಬರಿ ಉಮ್ಮೆದ್ ಧರುನ್ ಘೆವ್ನ್ ರ್‍ಹಾತಲೆ ಬರೆ, ಹೆ ಕನ್ನಾಬಿ ಖರೆಚ್. ಮಿಯಾ ತುಮ್ಚ್ಯಾ ವಾಂಗ್ಡಾ ರ್‍ಹಾವ್ಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 4:18
13 ತಿಳಿವುಗಳ ಹೋಲಿಕೆ  

ಪ್ರಿಯ ಸಹೋದರರೇ, ನಾನು ನಿಮ್ಮಲ್ಲಿದ್ದಾಗ ನೀವು ಯಾವಾಗಲೂ ನನ್ನ ಮಾತಿನಂತೆ ನಡೆದುಕೊಂಡಿರಿ. ಈಗ, ನಾನು ದೂರವಿರುವಾಗ ಇನ್ನೂ ಹೆಚ್ಚಿನ ಆಸಕ್ತಿಯಿಂದ ನಡೆದುಕೊಳ್ಳಿ. ನಿಮ್ಮ ಜೀವೋದ್ಧಾರಕ್ಕಾಗಿ ಭಯಭಕ್ತಿಯಿಂದ ಶ್ರಮಿಸಿರಿ.


ನನ್ನ ಪ್ರೀತಿಪಾತ್ರರನ್ನು ನಾನು ಖಂಡಿಸುತ್ತೇನೆ ಮತ್ತು ದಂಡಿಸುತ್ತೇನೆ. ಆದುದರಿಂದ ಉತ್ಸಾಹದಿಂದಿರು, ದೇವರಿಗೆ ಅಭಿಮುಖನಾಗಿರು.


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


ಅದೇನೇ ಇರಲಿ, ನೀವು ಮಾತ್ರ ಕ್ರಿಸ್ತಯೇಸುವಿನ ಶುಭಸಂದೇಶಕ್ಕೆ ಯೋಗ್ಯರಾಗಿ ನಡೆದುಕೊಳ್ಳಿರಿ. ನಾನು ನಿಮ್ಮಲ್ಲಿಗೆ ಬಂದರೂ ಸರಿ, ಬಾರದಿದ್ದರೂ ಸರಿ, ಇದು ಮುಖ್ಯವಲ್ಲ. ಶುಭಸಂದೇಶವು ನೀಡುವ ವಿಶ್ವಾಸಕ್ಕಾಗಿ ನೀವು ಒಮ್ಮನಸ್ಸಿನಿಂದ, ಕೆಚ್ಚಿನಿಂದ ಹೋರಾಡುವುದೇ ಮುಖ್ಯ. ಇದು ನನಗೆ ತಿಳಿದುಬಂದರೆ ಅಷ್ಟೇ ಸಾಕು.


ನಾನು ಅಸ್ವಸ್ಥನಾಗಿದ್ದುದರಿಂದ ನಿಮ್ಮಲ್ಲೇ ಇದ್ದು ಮೊತ್ತಮೊದಲ ಬಾರಿಗೆ ಶುಭಸಂದೇಶವನ್ನು ನಿಮಗೆ ಸಾರಲು ಆಸ್ಪದವಾಯಿತು. ಇದನ್ನು ನೀವು ಬಲ್ಲಿರಿ.


ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿರಿ; ನಿಶ್ಚಲರಾಗಿರಿ. ಪ್ರಭುವಿನ ಸೇವೆಯಲ್ಲಿ ನೀವು ಪಡುವ ಪ್ರಯಾಸ ಎಂದಿಗೂ ನಿಷ್ಫಲವಾಗದು. ಆದ್ದರಿಂದ ಅವರ ಸೇವೆಯಲ್ಲಿ ನಿರಂತರ ಶ್ರದ್ಧೆಯುಳ್ಳವರಾಗಿರಿ.


ಮರೆತುಬಿಟ್ಟರು ವಿರೋಧಿಗಳು ನಿನ್ನ ವಾಕ್ಯವನು I ಎಂತಲೆ ದಹಿಸುತಿದೆ ಧರ್ಮಾಸಕ್ತಿ ಎನ್ನನು II


‘ನಿನ್ನ ಆಲಯದ ಮೇಲಿನ ಅಭಿಮಾನವು ನನ್ನನ್ನು ಬೆಂಕಿಯಂತೆ ದಹಿಸುತ್ತದೆ,’ ಎಂದು ಪವಿತ್ರಗ್ರಂಥದಲ್ಲೇ ಬರೆದಿರುವ ವಾಕ್ಯವು ಶಿಷ್ಯರಿಗೆ ಆಗ ನೆನಪಾಯಿತು.


ಅವರು ನ್ಯಾಯನೀತಿಯನ್ನು ವಜ್ರಕವಚವನ್ನಾಗಿ ತೊಟ್ಟುಕೊಳ್ಳುವರು. ರಕ್ಷಣೆ ಎಂಬ ಶಿರಸ್ತ್ರಾಣವನ್ನು ಧರಿಸಕೊಳ್ಳುವರು. ಪ್ರತೀಕಾರವೆಂಬ ಉಡುಪನ್ನು ಉಟ್ಟುಕೊಳ್ಳುವರು. ಆಗ್ರಹ ಎಂಬ ನಿಲುವಂಗಿಯನ್ನು ಹಾಕಿಕೊಳ್ಳುವರು.


ಅಗ್ನಿಯಂತೆನ್ನ ದಹಿಸುತ್ತಿದೆ ನಿನ್ನಾಲಯದಭಿಮಾನ I ಎನ್ನ ಮೇಲೆರಗಿದೆ ನಿನ್ನ ಕಡುದ್ರೋಹಿಗಳ ದೂಷಣ II


ನಿಮ್ಮ ವಿಷಯದಲ್ಲಿ ಏನು ಮಾಡಬೇಕೋ ನನಗೆ ತೋಚುತ್ತಿಲ್ಲ. ಬಹುಶಃ ನೇರವಾಗಿ ನಿಮ್ಮ ಬಳಿಗೆ ಬಂದು, ನಿಮ್ಮ ಮಧ್ಯದಲ್ಲೇ ಇದ್ದು ನನ್ನ ಮಾತಿನ ವೈಖರಿಯನ್ನು ಬದಲಾಯಿಸಿದ್ದರೆ ಚೆನ್ನಾಗಿರುತ್ತಿತ್ತೇನೋ!


ಆ ನನ್ನ ವಿರೋಧಿಗಳು ನಿಮ್ಮನ್ನು ಮೆಚ್ಚಿಸಲು ತುಂಬ ಆಸಕ್ತಿಯನ್ನು ತೋರಿಸುತ್ತಿದ್ದಾರೆ. ಆದರೆ ಅವರ ಉದ್ದೇಶ ಒಳ್ಳೆಯದಲ್ಲ. ನೀವು ಸಹ ಅವರನ್ನು ಅಷ್ಟೇ ಆಸಕ್ತಿಯಿಂದ ಮೆಚ್ಚಿಸಬೇಕೆಂಬುದೇ ಅವರ ಉದ್ದೇಶ. ಆದ್ದರಿಂದಲೇ ನಿಮ್ಮನ್ನು ನನ್ನಿಂದ ಬೇರ್ಪಡಿಸಲು ಯತ್ನಿಸುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು