Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 4:21 - ಕನ್ನಡ ಸತ್ಯವೇದವು C.L. Bible (BSI)

21 ಧರ್ಮಶಾಸ್ತ್ರಕ್ಕೆ ಅಧೀನರಾಗಲು ಆಶಿಸುವವರೇ, ನನಗೆ ಉತ್ತರ ಕೊಡಿ: ಅದೇ ಧರ್ಮಶಾಸ್ತ್ರ ಹೇಳುವುದನ್ನು ನೀವು ಕೇಳಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಧರ್ಮಶಾಸ್ತ್ರಕ್ಕೆ ಅಧೀನರಾಗಿರುವುದಕ್ಕೆ ಬಯಸುವವರೇ, ಧರ್ಮಶಾಸ್ತ್ರವು ಏನು ಹೇಳುತ್ತದೆಂದು ನಿಮಗೆ ತಿಳಿದಿಲ್ಲವೋ? ನನಗೆ ತಿಳಿಯಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಧರ್ಮಶಾಸ್ತ್ರಾಧೀನರಾಗುವದಕ್ಕೆ ಮನಸ್ಸುಳ್ಳವರೇ, ಧರ್ಮಶಾಸ್ತ್ರಕ್ಕೆ ಕಿವಿಗೊಡುವದಿಲ್ಲವೋ? ನನಗೆ ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನಿಮ್ಮಲ್ಲಿ ಕೆಲವರು ಮೋಶೆಯ ಧರ್ಮಶಾಸ್ತ್ರಕ್ಕೆ ಇನ್ನೂ ಅಧೀನರಾಗಿರಲು ಇಷ್ಟಪಡುತ್ತೀರಿ. ಧರ್ಮಶಾಸ್ತ್ರವು ಏನು ಹೇಳುತ್ತದೆಂಬುದು ನಿಮಗೆ ಗೊತ್ತಿದೆಯೋ? ನನಗೆ ತಿಳಿಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಮೋಶೆಯ ನಿಯಮದ ಕೆಳಗಿರಲು ಬಯಸುವವರೇ, ನಿಯಮವು ಏನು ಹೇಳುತ್ತದೆಯೆಂದು ನೀವು ಸ್ಪಷ್ಟವಾಗಿ ಅರ್ಥಮಾಡಿಕೊಂಡಿದ್ದೀರಾ? ನನಗೆ ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಮೊಯ್ಜೆಚ್ಯಾ ಖಾಯ್ದ್ಯಾಂಚ್ಯಾ ಖಾಯ್ಲ್ ಹೊವ್ನ್ ಚಲ್ತಲ್ಯಾನು, ಮಿಯಾ ತುಮ್ಕಾ ಇಚಾರ್ತಾ, ಖಾಯ್ದೊ ಕಾಯ್ ಸಾಂಗ್ತಾ ಮನ್ತಲೆ ತುಮ್ಕಾ ಗೊತ್ತ್ ಹಾಯ್ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 4:21
16 ತಿಳಿವುಗಳ ಹೋಲಿಕೆ  

ಧರ್ಮಶಾಸ್ತ್ರದ ವಿಧಿನಿಯಮಗಳನ್ನೇ ಆಧಾರವಾಗಿಟ್ಟುಕೊಂಡು ಬಾಳುವವರು ಶಾಪಗ್ರಸ್ತರು. ಏಕೆಂದರೆ, “ಧರ್ಮಗ್ರಂಥದಲ್ಲಿ ಬರೆದಿರುವುದನ್ನೆಲ್ಲಾ ಅನುದಿನವೂ ಕೈಗೊಂಡು ನಡೆಯದ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಲಿಖಿತವಾಗಿದೆ.


ಧರ್ಮಶಾಸ್ತ್ರದ ನೇಮನಿಯಮಗಳು ಆ ಶಾಸ್ತ್ರಕ್ಕೆ ಅಧೀನರಾದವರಿಗೆ ಮಾತ್ರ ಅನ್ವಯಿಸುತ್ತವೆಂದು ನಾವು ಬಲ್ಲೆವು. ಆದ್ದರಿಂದ ಯಾರೂ ಯಾವ ನೆಪವನ್ನು ಹೇಳಲೂ ಬಾಯಿ ತೆರೆಯುವಂತಿಲ್ಲ. ಜಗತ್ತೆಲ್ಲವೂ ದೇವರ ನ್ಯಾಯತೀರ್ಪಿಗೆ ಗುರಿಯಾಗಿದೆ.


ಈಗಲಾದರೋ ನಿಜದೇವರನ್ನು ಅರಿತುಕೊಂಡಿದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ಅರಿತುಕೊಂಡಿದ್ದಾರೆ. ಹೀಗಿರಲಾಗಿ, ದುರ್ಬಲ ಹಾಗೂ ದರಿದ್ರವಾದ ಮೂಲಭೂತ ಶಕ್ತಿಗಳಿಗೆ ನೀವು ಮರಳುವುದೇಕೆ? ಪುನಃ ಅವುಗಳಿಗೆ ಗುಲಾಮರಾಗಲು ಇಚ್ಛಿಸುವುದೇಕೆ?


ಏಕೆಂದರೆ ಪಾಪವು ಇನ್ನೆಂದಿಗೂ ನಿಮ್ಮ ಮೇಲೆ ದಬ್ಬಾಳಿಕೆ ನಡೆಸಲಾಗದು; ನೀವಿನ್ನು ಧರ್ಮಶಾಸ್ತ್ರಕ್ಕೆ ಅಧೀನರಲ್ಲ. ದೈವಾನುಗ್ರಹಕ್ಕೆ ಮಾತ್ರ ಅಧೀನರು.


“ನಿಷ್ಕಾರಣವಾಗಿ ಅವರು ನನ್ನನ್ನು ದ್ವೇಷಿಸಿದರು” ಎಂದು ಅವರ ಧರ್ಮಶಾಸ್ತ್ರದಲ್ಲೇ ಬರೆದಿರುವುದು ಹೀಗೆ ನೆರವೇರಿದೆ.


ನೆರೆದಿದ್ದ ಜನರು ಪ್ರತ್ಯುತ್ತರವಾಗಿ, “ಅಭಿಷಿಕ್ತನಾದ ಲೋಕೋದ್ಧಾರಕ ಸದಾಕಾಲ ಇರುವನೆಂದು ಧರ್ಮಶಾಸ್ತ್ರವೇ ತಿಳಿಸುತ್ತದೆ. ಹೀಗಿರುವಲ್ಲಿ, ನರಪುತ್ರನನ್ನು ಮೇಲೇರಿಸಬೇಕಾಗಿದೆ ಎಂದು ನೀನು ಹೇಳುತ್ತೀಯಲ್ಲಾ, ಅದು ಹೇಗೆ? ಆ ನರಪುತ್ರನು ಯಾರು?” ಎಂದು ಕೇಳಿದರು.


ಆಗ ಯೇಸು, “ ‘ನೀವು ದೇವರುಗಳು’ ಎಂದು ದೇವರೇ ಹೇಳಿರುವ ಮಾತು ನಿಮ್ಮ ಧರ್ಮಶಾಸ್ತ್ರದಲ್ಲಿ ಬರೆದಿದೆಯಲ್ಲವೆ?


ಅದಕ್ಕೆ ಅಬ್ರಹಾಮನು, ‘ಅವರಿಗೆ ಎಚ್ಚರಿಕೆ ಕೊಡಲು ಮೋಶೆ ಮತ್ತು ಪ್ರವಾದಿಗಳ ಗ್ರಂಥಗಳಿವೆ. ಅವುಗಳಿಗೆ ಕಿವಿಗೊಡಲಿ,’ ಎಂದು ಉತ್ತರಕೊಟ್ಟ.


ಯೇಸು, “ಈ ವಿಷಯವಾಗಿ ಮೋಶೆ ನಿಮಗೆ ಏನೆಂದು ವಿಧಿಸಿದ್ದಾನೆ?” ಎಂದು ಅವರನ್ನೇ ಪುನಃ ಪ್ರಶ್ನಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು