Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 4:3 - ಕನ್ನಡ ಸತ್ಯವೇದವು C.L. Bible (BSI)

3 ನಮ್ಮ ಸ್ಥಿತಿಯೂ ಹಾಗೆಯೇ ಇತ್ತು. ನಾವು ಬಾಲಕರಂತೆ ವಿಶ್ವದ ಮೂಲಭೂತ ಶಕ್ತಿಗಳಿಗೆ ಅಧೀನರಾಗಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹಾಗೆಯೇ ನಾವು ಸಹ ಬಾಲಕರಾಗಿದ್ದಾಗ ಲೋಕದ ಮೂಲತತ್ವಗಳಿಗೆ ಅಧೀನರಾಗಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಹಾಗೆಯೇ ನಾವು ಸಹ ಬಾಲಕರಾಗಿದ್ದಾಗ ಲೋಕದವರ ಬಾಲಬೋಧೆಗೆ ಅಧೀನರಾಗಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅದೇ ರೀತಿಯಲ್ಲಿ ನಾವು ಮೊದಲು ಮಕ್ಕಳಂತಿದ್ದೆವು. ಈ ಪ್ರಪಂಚದ ಉಪಯೋಗವಿಲ್ಲದ ನಿಯಮಗಳಿಗೆ ನಾವು ಗುಲಾಮರಾಗಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅದರಂತೆಯೇ ನಾವು ಬಾಲಕರಾಗಿದ್ದಾಗ ಲೋಕದ ಮೂಲಪಾಠಗಳಿಗೆ ಗುಲಾಮರಾಗಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತಸೆಚ್ ಅಮಿಬಿ ಆತ್ಮಿಕ್ ರಿತಿಚ್ಯಾನ್ ವಾಡುಚ್ಯಾ ಅದ್ದಿ ಜಗಾಚ್ಯಾ ಆತ್ಮ್ಯಾಂಚ್ಯಾ ಚಾಲ್ನುಕಿಕ್ ಗುಲಾಮ್ ಹೊವ್ನ್ ಹೊತ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 4:3
20 ತಿಳಿವುಗಳ ಹೋಲಿಕೆ  

ನೀವು ಕ್ರಿಸ್ತಯೇಸುವಿನೊಡನೆ ಮೃತರಾಗಿರುವ ಕಾರಣ, ಪ್ರಾಕೃತ ಶಕ್ತಿಗಳ ಬಂಧನದಿಂದ ಬಿಡುಗಡೆ ಹೊಂದಿದ್ದೀರಿ. ಹೀಗಿರುವಲ್ಲಿ, ಪ್ರಾಪಂಚಿಕ ವಿಧಿನಿಯಮಗಳಿಗೆ ಒಳಪಟ್ಟು ಬಾಳುತ್ತಿರುವುದೇಕೆ?


ಪ್ರಪಂಚದ ಪ್ರಬಲ ಶಕ್ತಿಗಳಿಂದಲೂ ಮಾನವ ವಿವೇಚನೆಯ ಶುಷ್ಕತರ್ಕ ಸಿದ್ಧಾಂತಗಳಿಂದಲೂ ಯಾರೂ ನಿಮ್ಮನ್ನು ಮೋಸಗೊಳಿಸಿ ವಶಪಡಿಸಿಕೊಳ್ಳದಂತೆ ಎಚ್ಚರಿಕೆಯಿಂದಿರಿ. ಇವುಗಳು ಪ್ರಾಪಂಚಿಕ ಪಾರಂಪರ್ಯಕ್ಕೆ ಮತ್ತು ವಿಶ್ವದ ಮೂಲಭೂತ ಶಕ್ತಿಗಳಿಗೆ ಸಂಬಂಧಿಸಿದವುಗಳೇ ಹೊರತು ಯೇಸುಕ್ರಿಸ್ತರಿಗಲ್ಲ.


ಈಗಲಾದರೋ ನಿಜದೇವರನ್ನು ಅರಿತುಕೊಂಡಿದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ಅರಿತುಕೊಂಡಿದ್ದಾರೆ. ಹೀಗಿರಲಾಗಿ, ದುರ್ಬಲ ಹಾಗೂ ದರಿದ್ರವಾದ ಮೂಲಭೂತ ಶಕ್ತಿಗಳಿಗೆ ನೀವು ಮರಳುವುದೇಕೆ? ಪುನಃ ಅವುಗಳಿಗೆ ಗುಲಾಮರಾಗಲು ಇಚ್ಛಿಸುವುದೇಕೆ?


ಗೂಢಾಚಾರರಾಗಿ ಬಂದಿದ್ದ ಕೆಲವು ಸಹೋದರರು ಅಲ್ಲಿದ್ದುದರಿಂದ ಒತ್ತಾಯ ನಡೆದೀತೆಂಬ ಶಂಕೆ ಇತ್ತು. ಇವರು ಕ್ರಿಸ್ತಯೇಸುವಿನಲ್ಲಿ ನಮಗಿರುವ ಮುಕ್ತ ಸ್ವಾತಂತ್ರ್ಯದ ಬಗ್ಗೆ ಗುಟ್ಟಾಗಿ ವಿಚಾರಿಸಲು ಬಂದಿದ್ದರು. ನಮ್ಮನ್ನು ಪುನಃ ದಾಸತ್ವದಲ್ಲಿ ಸಿಕ್ಕಿಸಬೇಕೆಂಬುದೇ ಅವರ ಉದ್ದೇಶವಾಗಿತ್ತು.


ಹೌದು, ಪ್ರಿಯ ಸಹೋದರರೇ, ನಾವು ದಾಸಿಯ ಮಕ್ಕಳಲ್ಲ, ಧರ್ಮಪತ್ನಿಯ ಮಕ್ಕಳು.


ಆದುದರಿಂದ ನಮ್ಮ ಪೂರ್ವಜರಿಂದಾಗಲೀ ನಮ್ಮಿಂದಾಗಲೀ ಹೊರಲಾಗದಂಥ ಹೊರೆಯನ್ನು ಈ ಅನುಯಾಯಿಗಳ ಮೇಲೆ ಏಕೆ ಹೊರಿಸುತ್ತೀರಿ? ಹೀಗೆ ದೇವರನ್ನೇಕೆ ಕೆಣಕುತ್ತೀರಿ?


ದೇವರು ನಿಮಗೆ ದಯಪಾಲಿಸಿರುವ ಆತ್ಮ ನಿಮ್ಮನ್ನು ಮತ್ತೊಮ್ಮೆ ಗುಲಾಮರನ್ನಾಗಿಯೂ ಭಯಭೀತರನ್ನಾಗಿಯೂ ಮಾಡುವುದಿಲ್ಲ. ಬದಲಿಗೆ, ನಿಮ್ಮನ್ನು ದೇವರ ಮಕ್ಕಳನ್ನಾಗಿಸುತ್ತದೆ. ಆ ಆತ್ಮದ ಮೂಲಕವೇ ನಾವು ದೇವರನ್ನು, “ಅಪ್ಪಾ, ತಂದೆಯೇ” ಎಂದು ಕರೆಯುತ್ತೇವೆ.


ಯೇಸು ಸ್ವಾಮಿ ತಮ್ಮಲ್ಲಿ ನಂಬಿಕೆ ಇಟ್ಟಿದ್ದ ಯೆಹೂದ್ಯರಿಗೆ ಹೀಗೆಂದರು: “ನನ್ನ ಮಾತಿಗೆ ನೀವು ಶರಣಾದರೆ ನಿಜವಾಗಿಯೂ ನೀವು ನನ್ನ ಶಿಷ್ಯರು.


ಇವರು ಯಾಜಕರಾದುದು ಅಳಿವಿಲ್ಲದ ಜೀವಶಕ್ತಿಯಿಂದ; ಕುಲಗೋತ್ರಗಳ ನಿಯಮಾನುಸಾರವಾದ ದೈಹಿಕ ಹುಟ್ಟಿನಿಂದಲ್ಲ.


ಅರೇಬಿಯಾದಲ್ಲಿರುವ ಸೀನಾಯ್ ಪರ್ವತವನ್ನು ಪ್ರತಿನಿಧಿಸುವ ಈ ಹಾಗರಳು ಈಗಿನ ಜೆರುಸಲೇಮ್ ನಗರವನ್ನು ಹೋಲುತ್ತಾಳೆ. ಹೇಗೆಂದರೆ, ಜೆರುಸಲೇಮ್ ತನ್ನ ಮಕ್ಕಳ ಸಮೇತವಾಗಿ ದಾಸತ್ವದಲ್ಲಿ ಇದೆ.


ಹಾಗಾದರೆ ಧರ್ಮಶಾಸ್ತ್ರದ ಉದ್ದೇಶವಾದರೂ ಏನು? ಅಪರಾಧದ ಅರಿವನ್ನು ಮೂಡಿಸುವುದಕ್ಕಾಗಿ ಅದನ್ನು ಕಾಲಕ್ರಮೇಣ ಸೇರಿಸಲಾಯಿತು. ದೇವವಾಗ್ದಾನವನ್ನು ಪಡೆದ ಆ ಸಂತತಿ ಬರುವ ತನಕ ಮಾತ್ರ ಅದು ಇರಲೆಂದು ಕೊಡಲಾಯಿತು. ಅಲ್ಲದೆ, ಕೇವಲ ದೇವದೂತರ ಮುಖಾಂತರ, ಒಬ್ಬ ಮಾನವ ಮಧ್ಯಸ್ಥನ ಮೂಲಕ ಮಾತ್ರ ಅದನ್ನು ನೀಡಲಾಯಿತು.


“ದುಡಿದು, ಭಾರಹೊತ್ತು, ಬಳಲಿ ಬೆಂಡಾಗಿರುವ ಸರ್ವಜನರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ; ನಾನು ನಿಮಗೆ ವಿಶ್ರಾಂತಿಕೊಡುತ್ತೇನೆ.


ಧರ್ಮಶಾಸ್ತ್ರ ಪಾರಮಾರ್ಥಿಕವಾದುದೆಂದು ನಾವು ಬಲ್ಲೆವು. ನಾನಾದರೋ ನರಮಾನವನು; ಪಾಪಕ್ಕೆ ನನ್ನನ್ನೇ ಗುಲಾಮನನ್ನಾಗಿ ಮಾರಿಕೊಂಡವನು.


ಯಾರಾದರೂ ನಿಮ್ಮನ್ನು ಅಧೀನಪಡಿಸಿಕೊಂಡರೂ ಕಬಳಿಸಿದರೂ ಮರುಳುಗೊಳಿಸಿದರೂ ತುಚ್ಛೀಕರಿಸಿದರೂ ಕೆನ್ನೆಗೆ ಬಿಗಿದರೂ ಎಲ್ಲವನ್ನೂ ಸಹಿಸಿಕೊಳ್ಳುತ್ತೀರಿ.


ತಂದೆ ಗೊತ್ತುಮಾಡಿದ ದಿನದವರೆಗೂ ಅವನು ಪೋಷಕರ ಹಾಗೂ ಕಾರ್ಯನಿರ್ವಾಹಕರ ಕೈಕೆಳಗೆ ಇರುತ್ತಾನೆ.


ಹಿಂದೆ ನೀವು ದೇವರನ್ನು ಅರಿಯದೆ ಇದ್ದಿರಿ. ದೇವರಲ್ಲದವುಗಳಿಗೆ ಅಧೀನರಾಗಿದ್ದೀರಿ.


ಇದೊಂದು ಅಲಂಕಾರ ರೂಪ. ಆ ಇಬ್ಬರು ಸ್ತ್ರೀಯರು ಎರಡು ಒಡಂಬಡಿಕೆಗಳಿಗೆ ಸದೃಶರಾಗಿದ್ದಾರೆ. ಒಂದು, ಸೀನಾಯ್ ಪರ್ವತದಲ್ಲಿ ಮಾಡಲಾದ ಒಡಂಬಡಿಕೆ; ಅದು ದಾಸತ್ವಕ್ಕೆ ಮಕ್ಕಳನ್ನು ಹೆರುತ್ತದೆ. ಅದನ್ನು ಸೂಚಿಸುವವಳೇ ದಾಸಿ ಹಾಗರಳು.


ಇಷ್ಟರೊಳಗೆ ನೀವು ಇತರರಿಗೆ ಬೋಧಿಸಲು ಶಕ್ತರಾಗಬೇಕಾಗಿತ್ತು; ಆದರೆ ದೇವರ ವಾಕ್ಯದ ಮೂಲ ಪಾಠಗಳನ್ನೇ ಇತರರು ನಿಮಗೆ ಮತ್ತೆ ಹೇಳಿಕೊಡಬೇಕಾಗಿದೆ. ಗಟ್ಟಿಯಾದ ಆಹಾರವನ್ನು ಉಣ್ಣುವ ಬದಲು ನೀವಿನ್ನೂ ಹಾಲನ್ನೇ ಕುಡಿಯಬೇಕಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು