Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 4:30 - ಕನ್ನಡ ಸತ್ಯವೇದವು C.L. Bible (BSI)

30 ಪವಿತ್ರಗ್ರಂಥ ಹೇಳುವುದಾದರೂ ಏನು? “ದಾಸಿಯನ್ನೂ ಅವಳ ಮಗನನ್ನೂ ಹೊರಕ್ಕೆ ದೂಡು; ದಾಸಿಯ ಮಗನು ಧರ್ಮಪತ್ನಿಯ ಮಗನೊಂದಿಗೆ ಪಾಲುಗಾರನಾಗಕೂಡದು.” ಎಂದಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆದರೆ ದೇವರ ವಾಕ್ಯವು ಏನು ಹೇಳುತ್ತದೆ? “ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು. ದಾಸಿಯ ಮಗನು ಸ್ವತಂತ್ರಳ ಮಗನೊಂದಿಗೆ ಎಷ್ಟು ಮಾತ್ರಕ್ಕೂ ಬಾಧ್ಯಸ್ಥನಾಗಬಾರದು” ಎಂದು ಹೇಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆದರೂ ಶಾಸ್ತ್ರವು ಏನು ಹೇಳುತ್ತದೆ? ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ದಾಸಿಯ ಮಗನು ಧರ್ಮಪತ್ನಿಯ ಮಗನೊಂದಿಗೆ ಎಷ್ಟು ಮಾತ್ರಕ್ಕೂ ಬಾಧ್ಯನಾಗಬಾರದೆಂದು ಹೇಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆದರೆ ಪವಿತ್ರ ಗ್ರಂಥವು ಏನು ಹೇಳುತ್ತದೆ? “ದಾಸಿಯನ್ನು ಮತ್ತು ಅವಳ ಮಗನನ್ನು ಹೊರಗೆ ಹಾಕು; ಸ್ವತಂತ್ರಳಾದ ಸ್ತ್ರೀಯ ಮಗನು ತನ್ನ ತಂದೆಯು ಹೊಂದಿರುವ ಪ್ರತಿಯೊಂದನ್ನು ಪಡೆದುಕೊಳ್ಳುವನು. ಆದರೆ ದಾಸಿಗೆ ಏನೂ ದೊರೆಯುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆದರೆ ಪವಿತ್ರ ವೇದವು ಏನು ಹೇಳುತ್ತದೆ? “ದಾಸಿಯನ್ನೂ, ಅವಳ ಮಗನನ್ನೂ ಹೊರಗೆ ಹಾಕು. ಏಕೆಂದರೆ ದಾಸಿಯ ಮಗನು ಧರ್ಮಪತ್ನಿಯ ಮಗನೊಂದಿಗೆ ಎಂದಿಗೂ ವಾರಸುದಾರನಾಗಬಾರದು.” ಎಂದಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಖರೆ ಪವಿತ್ರ್ ಪುಸ್ತಕ್ ಕಾಯ್ ಸಾಂಗ್ತಾ? ತೆ ಮನ್ತಾ, ಗುಲಾಮ್ ಬಾಯ್ಕೊಮನ್ಸಿಕ್ ಅನಿ ತಿಚ್ಯಾ ಲೆಕಾಕ್ ಭಾಯ್ರ್ ಘಾಲಾ, ಸ್ವತಂತ್ರ್ ಬಾಯ್ಕೊಮನ್ಸಿಚ್ಯಾ ವಾಂಗ್ಡಾ; ಗುಲಾಮ್ ಬಾಯ್ಕೊಮನ್ಸಿಚ್ಯಾ ಲೆಕಾಕ್ ಬಾಬಾಚ್ಯಾ ಆಸ್ತಿತ್ ವಾಟೊ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 4:30
11 ತಿಳಿವುಗಳ ಹೋಲಿಕೆ  

ದಾಸನಾದವನು ಶಾಶ್ವತವಾಗಿ ಮನೆಯಲ್ಲಿ ಇರುವಂತಿಲ್ಲ. ಶಾಶ್ವತವಾಗಿ ಇರುವವನು ಪುತ್ರನೇ.


“ದೇವರು ನಮ್ಮಲ್ಲಿ ಇರುವ ಆತ್ಮವನ್ನು ಅತ್ಯಾಸಕ್ತಿಯಿಂದ ಅಪೇಕ್ಷಿಸುತ್ತಾರೆ,” ಎಂಬ ಪವಿತ್ರಗ್ರಂಥದ ವಾಕ್ಯವು ಹುರುಳಿಲ್ಲದ್ದೆಂದು ಭಾವಿಸುವಿರಾ?


ಅದಕ್ಕೆ ಬದಲಾಗಿ ಸಮಸ್ತ ಲೋಕವೂ ಪಾಪಕ್ಕೆ ಒಳಗಾಯಿತು ಎಂದು ಪವಿತ್ರಗ್ರಂಥ ಸ್ಪಷ್ಟೀಕರಿಸುತ್ತದೆ. ಹೀಗೆ, ವಾಗ್ದಾನ ಮಾಡಿದ ಸೌಭಾಗ್ಯವನ್ನು ಯೇಸುಕ್ರಿಸ್ತರಲ್ಲಿ ವಿಶ್ವಾಸವಿಟ್ಟವರಿಗೆ ಅವರ ನಂಬಿಕೆಯ ಆಧಾರದ ಮೇಲೆ ಕೊಡಲಾಗುತ್ತದೆ.


ಈ ವಿಶ್ವಾಸದ ಮೂಲಕವೇ ಅನ್ಯಧರ್ಮೀಯರನ್ನು ಕೂಡ ದೇವರು ತಮ್ಮ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ, ಎಂದು ಪವಿತ್ರಗ್ರಂಥದಲ್ಲಿ ಮೊದಲೇ ಬರೆಯಲಾಗಿತ್ತು. ಈ ಕಾರಣದಿಂದಲೇ ಅಬ್ರಹಾಮನಿಗೆ, “ನಿನ್ನ ಮುಖಾಂತರವೇ ಎಲ್ಲಾ ಜನಾಂಗಗಳು ಆಶೀರ್ವಾದವನ್ನು ಪಡೆಯುವುವು,” ಎಂಬ ಶುಭವರ್ತಮಾನವನ್ನು ಪಡೆಯುವುವು,” ಎಂಬ ಶುಭವರ್ತಮಾನವನ್ನು ಮುಂಚಿತವಾಗಿ ತಿಳಿಸಲಾಯಿತು.


ದೇವರು ಮುಂಚಿತವಾಗಿಯೇ ಆರಿಸಿಕೊಂಡಿದ್ದ ತಮ್ಮ ಜನಾಂಗವನ್ನು ತಿರಸ್ಕರಿಸಲಿಲ್ಲ. ಎಲೀಯನ ವಿಷಯವಾಗಿ ಪವಿತ್ರಗ್ರಂಥವು ಹೇಳಿರುವುದು ನಿಮಗೆ ತಿಳಿಯದೋ?


ಏಕೆಂದರೆ, ಪವಿತ್ರಗ್ರಂಥದಲ್ಲಿ ಹೀಗೆ ಹೇಳಿದೆ: “ಅಬ್ರಹಾಮನು ದೇವರಲ್ಲಿ ವಿಶ್ವಾಸವಿಟ್ಟನು; ಆತನು ತಮ್ಮ ಸತ್ಸಂಬಂಧದಲ್ಲಿ ಇರುವುದಾಗಿ ದೇವರು ಪರಿಗಣಿಸಿದರು.”


ಅಬ್ರಹಾಮನಿಗೆ ಇಬ್ಬರು ಮಕ್ಕಳಿದ್ದರು: ಒಬ್ಬನು ದಾಸಿಯಿಂದ ಹುಟ್ಟಿದವನು; ಇನ್ನೊಬ್ಬನು ಧರ್ಮಪತ್ನಿಯಿಂದ ಹುಟ್ಟಿದವನು.


ಹೌದು, ಪ್ರಿಯ ಸಹೋದರರೇ, ನಾವು ದಾಸಿಯ ಮಕ್ಕಳಲ್ಲ, ಧರ್ಮಪತ್ನಿಯ ಮಕ್ಕಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು