Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 5:2 - ಕನ್ನಡ ಸತ್ಯವೇದವು C.L. Bible (BSI)

2 ಪೌಲನಾದ ನಾನು ಹೇಳುವುದನ್ನು ಕೇಳಿ: ನೀವು ಸುನ್ನತಿ ಮಾಡಿಸಿಕೊಂಡರೆ ಕ್ರಿಸ್ತಯೇಸುವಿನಿಂದ ನಿಮಗೆ ಯಾವ ಪ್ರಯೋಜನವೂ ಆಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನೋಡಿರಿ, ಪೌಲನೆಂಬ ನಾನು ನಿಮಗೆ ಹೇಳುತ್ತೇನೆ, ನೀವು ಸುನ್ನತಿಮಾಡಿಸಿಕೊಂಡರೆ ಕ್ರಿಸ್ತನಿಂದ ನಿಮಗೆ ಏನೂ ಪ್ರಯೋಜನವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೋಡಿರಿ, ಪೌಲನೆಂಬ ನಾನು ನಿಮಗೆ ಒಂದನ್ನು ಹೇಳುತ್ತೇನೆ - ನೀವು ಸುನ್ನತಿಮಾಡಿಸಿಕೊಂಡರೆ ಕ್ರಿಸ್ತನಿಂದ ನಿಮಗೆ ಏನೂ ಪ್ರಯೋಜನವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಕೇಳಿ, ನಾನೇ ಪೌಲನು. ನೀವು ಸುನ್ನತಿ ಮಾಡಿಸಿಕೊಂಡು ಧರ್ಮಶಾಸ್ತ್ರಕ್ಕೆ ಹಿಂತಿರುಗಿಕೊಳ್ಳುವುದಾದರೆ ಕ್ರಿಸ್ತನಿಂದ ನಿಮಗೇನೂ ಪ್ರಯೋಜನವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇಗೋ, ಪೌಲನೆಂಬ ನಾನು ನಿಮಗೆ ಹೇಳುವುದೇನೆಂದರೆ, ನೀವು ಸುನ್ನತಿ ಮಾಡಿಸಿಕೊಂಡರೆ, ಕ್ರಿಸ್ತ ಯೇಸುವಿನ ಮುಖಾಂತರ ನಿಮಗೆ ಏನೂ ಪ್ರಯೋಜನವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಪಾವ್ಲು ಮನ್ತಲ್ಯಾ ಮಿಯಾ ತುಮಿ ಸುನ್ನತ್ ಕರುನ್ ಘೆವ್ಕ್ ತುಮ್ಕಾಚ್ ಸೊಡುನ್ ದಿಲ್ಯಾರ್, ಕ್ರಿಸ್ತಾಕ್ನಾ ಕಾಯ್ಬಿ ಫಾಯ್ದೊ ನಾ ಮನುನ್ ಹೊಲೆ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 5:2
16 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸುವಿನಲ್ಲಿ ಬಾಳುವವರಿಗೆ ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಮುಖ್ಯವಲ್ಲ. ಪ್ರೀತಿಯಿಂದ ಕಾರ್ಯ ಎಸಗುವ ವಿಶ್ವಾಸವೇ ಪ್ರಮುಖವಾದುದು.


ಜುದೇಯದಿಂದ ಕೆಲವು ಜನರು ಅಂತಿಯೋಕ್ಯಕ್ಕೆ ಬಂದು ಅಲ್ಲಿನ ಭಕ್ತ ವಿಶ್ವಾಸಿಗಳಿಗೆ, “ಮೋಶೆಯ ನಿಯಮದಂತೆ ನೀವು ಸುನ್ನತಿ ಮಾಡಿಸಿಕೊಂಡ ಹೊರತು ಜೀವೋದ್ಧಾರ ಪಡೆಯಲಾರಿರಿ,” ಎಂದು ಬೋಧಿಸತೊಡಗಿದರು.


ಶುಭವಾರ್ತೆಯನ್ನು ಅವರಿಗೆ ಸಾರಲಾದಂತೆ ನಮಗೂ ಸಾರಲಾಯಿತು. ಅವರು ಅದನ್ನು ಆಲಿಸಿದರು; ಆದರೆ ಅವರಲ್ಲಿ ವಿಶ್ವಾಸವಿರಲಿಲ್ಲ. ಈ ಕಾರಣ, ಅವರು ಕೇಳಿದ ಸಂದೇಶದಿಂದ ಫಲ ಪಡೆಯದೆ ಹೋದರು.


ಸಹೋದರರೇ, ಸುನ್ನತಿಮಾಡಿಸಿಕೊಳ್ಳುವುದು ಅವಶ್ಯಕವೆಂದು ನಾನು ಇನ್ನೂ ಬೋಧಿಸುತ್ತಿರುವುದಾಗಿ ಕೆಲವರು ಹೇಳುತ್ತಿದ್ದಾರಲ್ಲವೇ? ಹಾಗೆ ಬೋಧಿಸುತ್ತಿರುವುದಾದರೆ ನಾನೇಕೆ ಹೀಗೆ ಹಿಂಸೆಬಾಧೆಗಳನ್ನು ಅನುಭವಿಸಬೇಕಾಗುತ್ತಿತ್ತು? ನಾನು ಹಾಗೇನಾದರೂ ಬೋಧಿಸಿದ್ದರೆ, ಶಿಲುಬೆಯ ಸಂದೇಶದಿಂದ ಯಾವ ಅಡ್ಡಿ ಆತಂಕವೂ ಉಂಟಾಗುತ್ತಿರಲಿಲ್ಲ.


“ಪೌಲನು ನಮ್ಮ ಹತ್ತಿರವಿರುವಾಗ ಮೆದುವಾಗಿಯೂ ದೂರವಿರುವಾಗ ಕಠಿಣನಾಗಿಯೂ ವರ್ತಿಸುತ್ತಾನೆ,” ಎಂದು ನಿಮ್ಮಲ್ಲಿ ಕೆಲವರು ಮಾತನಾಡಿಕೊಳ್ಳುವುದು ನನಗೆ ತಿಳಿದುಬಂದಿದೆ. ವಿನಯಶೀಲರೂ ದೀನದಯಾಳುವೂ ಆದ ಕ್ರಿಸ್ತಯೇಸುವಿನ ಹೆಸರಿನಲ್ಲಿ ನಾನು ಕೇಳಿಕೊಳ್ಳುವುದೇನೆಂದರೆ:


ನಮ್ಮ ಕಡೆಯ ಕೆಲವು ಜನರು ನಮ್ಮಿಂದ ಯಾವ ಆದೇಶವನ್ನೂ ಪಡೆಯದೆ ನಿಮ್ಮನ್ನು ತೊಂದರೆಗೆ ಈಡುಮಾಡಿ ನಿಮ್ಮ ಮನಸ್ಸನ್ನು ಕಲಕಿದರೆಂಬ ಸಮಾಚಾರ ನಮ್ಮ ಗಮನಕ್ಕೆ ಬಂದಿದೆ.


ನಿಮ್ಮಲ್ಲಿಗೆ ಹಿಂದಿರುಗಲು ನಮಗೆ ಮನಸ್ಸಿತ್ತು. ಪೌಲನೆಂಬ ನಾನಂತೂ, ನಿಮ್ಮ ಬಳಿಗೆ ಬರಲು ಅನೇಕ ಸಾರಿ ಪ್ರಯಾಸಪಟ್ಟೆ. ಆದರೆ ಸೈತಾನನು ನಮಗೆ ಅಡ್ಡಿ ಆತಂಕವನ್ನೊಡ್ಡಿದನು.


ಆದರೂ ನಿನ್ನ ಮೇಲಿರುವ ಪ್ರೀತಿಯ ನಿಮಿತ್ತ ನಾನು ನಿನ್ನಲ್ಲಿ ವಿನಂತಿಸುತ್ತೇನೆ: ವೃದ್ಧಪ್ರಾಯನೂ ಮತ್ತು ಕ್ರಿಸ್ತಯೇಸುವಿಗೋಸ್ಕರ ಈಗ ಸೆರೆಯಾಳೂ ಆಗಿರುವ ಪೌಲನೆಂಬ ನಾನು ಒನೇಸಿಮನ ಪರವಾಗಿ ನಿನ್ನಲ್ಲಿ ವಿಜ್ಞಾಪಿಸುತ್ತೇನೆ.


ಪೌಲನಾದ ನಾನು ನನ್ನ ಸ್ವಂತ ಕೈಬರಹದಿಂದ ನಿಮಗೆ ವಂದನೆಯನ್ನು ಬರೆಯುತ್ತಿದ್ದೇನೆ.


ಫರಿಸಾಯ ಪಂಥಕ್ಕೆ ಸೇರಿದ ಕೆಲವು ಭಕ್ತರು ಮಾತ್ರ ಎದ್ದುನಿಂತು, ಅನ್ಯಧರ್ಮೀಯರು ಸುನ್ನತಿಮಾಡಿಸಿಕೊಳ್ಳಲೇಬೇಕು, ಅವರು ಮೋಶೆಯ ನಿಯಮಗಳನ್ನು ಅನುಸರಿಸುವಂತೆ ಆಜ್ಞೆ ಮಾಡಲೇಬೇಕು,” ಎಂದರು.


ಅದನ್ನು ಪೌಲನೆಂಬ ನಾನೇ ಕೊಟ್ಟು ತೀರಿಸುತ್ತೇನೆ ಎಂದು ನನ್ನ ಹಸ್ತಾಕ್ಷರದಲ್ಲೇ ಬರೆದುಕೊಡುತ್ತಿದ್ದೇನೆ. ಆದರೆ ಈಗ ನೀನು ಏನಾಗಿದ್ದೀಯೋ ಅದು ನನ್ನಿಂದಲೇ. ಹೀಗೆ ನೀನೇ ನನಗೆ ಸಾಲಗಾರನಾಗಿದ್ದೀ ಎಂದು ನಾನು ಹೇಳಬೇಕಾಗಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು