Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 5:22 - ಕನ್ನಡ ಸತ್ಯವೇದವು C.L. Bible (BSI)

22 ಪವಿತ್ರಾತ್ಮದತ್ತವಾದ ಸತ್ಫಲಗಳು ಯಾವುವೆಂದರೆ: ಪ್ರೀತಿ, ಆನಂದ, ಶಾಂತಿಸಮಾಧಾನ, ಸಹನೆ, ದಯೆ, ಸದ್ಗುಣ, ಪ್ರಾಮಾಣಿಕತೆ, ಸೌಭಾಗ್ಯ, ಸಂಯಮ - ಇಂಥವುಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ - ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ದಯೆ ಉಪಕಾರ ನಂಬಿಕೆ ಸಾಧುತ್ವ ಶಮೆದಮೆ ಇಂಥವುಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದರೆ ದೇವರಾತ್ಮನು ಹುಟ್ಟಿಸುವುದು ಪ್ರೀತಿ, ಆನಂದ, ಶಾಂತಿ, ತಾಳ್ಮೆ, ಕರುಣೆ, ಉಪಕಾರ, ನಂಬಿಗಸ್ತಿಕೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಪವಿತ್ರಾತ್ಮರ ಫಲವೇನೆಂದರೆ: ಪ್ರೀತಿ, ಆನಂದ, ಸಮಾಧಾನ, ಸಹನೆ, ದಯೆ, ಸದ್ಗುಣ, ನಂಬಿಗಸ್ತಿಕೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಖರೆ ದೆವಾಚ್ಯಾ ಆತ್ಮ್ಯಾಕ್ನಾ ಯೆತಲೆ ಫಳ್ ಕಾಯ್ ಮಟ್ಲ್ಯಾರ್, ಪ್ರೆಮ್, ಕುಶಿ, ಸಮಾಧಾನ್, ಸೊಸುನ್‍ ಘೆತಲೆ, ಬರೆಪಾನ್ , ಮಜತ್, ವಿಶ್ವಾಸ್ಪಾನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 5:22
44 ತಿಳಿವುಗಳ ಹೋಲಿಕೆ  

“ಹೌದು, ನಾನೇ ದ್ರಾಕ್ಷಾಬಳ್ಳಿ; ನೀವೇ ಅದರ ಕವಲುಬಳ್ಳಿಗಳು. ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅಂಥವನು ಸಮೃದ್ಧಿಯಾಗಿ ಫಲಕೊಡುವನು. ಏಕೆಂದರೆ, ನನ್ನಿಂದ ಬೇರ್ಪಟ್ಟು ನಿಮ್ಮಿಂದ ಏನೂ ಮಾಡಲಾಗದು.


ನನ್ನಲ್ಲಿದ್ದೂ ಫಲಕೊಡದ ಕವಲುಬಳ್ಳಿಗಳನ್ನೆಲ್ಲಾ ಅವರು ಕತ್ತರಿಸಿಹಾಕುವರು. ಫಲಕೊಡುವ ಕವಲುಬಳ್ಳಿಗಳು ಮತ್ತಷ್ಟು ಫಲಕೊಡುವಂತೆ ಅವನ್ನು ಸವರಿ ಶುದ್ಧಗೊಳಿಸುವರು.


ಕಾರಣ -ಸಚ್ಚರಿತೆ, ಸದಾಚಾರ ಮತ್ತು ಸತ್ಯಸಂಧತೆ ಇವೆಲ್ಲವೂ ಬೆಳಕಿನ ಕುಡಿಗಳು.


ನದಿಯ ಬದಿಯಲೇ ಬೆಳೆದಿಹ ಮರದಂತೆ I ಸಕಾಲಕೆ ಫಲವೀವ ವೃಕ್ಷದಂತೆ I ಎಲೆಬಾಡದೆ ಪಸಿರಿರುವ ತರುವಂತೆ I ಸಿಗುವುದು ಅವನ ಕಾರ್ಯಗಳಿಗೆ ಸಫಲತೆ II


ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ, ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಲೋಕಕ್ಕೆ ಹೋಗಬೇಕು, ಸಫಲರಾಗಬೇಕು; ಆ ಫಲ ಶಾಶ್ವತವಾಗಿರಬೇಕೆಂದೇ ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ಪಿತನಿಂದ ಏನು ಕೇಳಿದರೂ ನಿಮಗೆ ಅದು ಸಿಗುವುದು.


ಅಂತೆಯೇ, ಪ್ರಿಯ ಸಹೋದರರೇ, ನೀವು ಕ್ರಿಸ್ತಯೇಸುವಿನ ದೇಹದೊಂದಿಗೆ ಒಂದಾಗಿರುವುದರಿಂದ ಧರ್ಮಶಾಸ್ತ್ರದ ಪಾಲಿಗೆ ಸತ್ತವರಾದಿರಿ. ಇದರ ಪರಿಣಾಮವಾಗಿ, ಮರಣದಿಂದ ಪುನರುತ್ಥಾನ ಹೊಂದಿದ ಕ್ರಿಸ್ತಯೇಸುವಿನೊಂದಿಗೆ ಬಂಧಿತರಾಗಿದ್ದೀರಿ. ಹೀಗೆ, ದೇವರಿಗೆ ನಾವು ಸತ್ಫಲವನ್ನು ಈಯುವವರಾಗಿದ್ದೇವೆ.


ಸತ್ಯಕ್ಕೆ ಶರಣಾಗಿ ಆತ್ಮಶುದ್ಧಿಹೊಂದಿರುವ ನೀವು ಸಹೋದರರನ್ನು ನಿಷ್ಕಪಟದಿಂದ ಪ್ರೀತಿಸಬಲ್ಲಿರಿ. ಎಂದೇ, ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.


“ಒಳ್ಳೆಯ ಹಣ್ಣು ಬೇಕಾದರೆ ಮರ ಒಳ್ಳೆಯದಿರಬೇಕು. ಹುಳುಕು ಮರವಾದರೆ ಸಿಗುವುದು ಹುಳುಕು ಹಣ್ಣೇ. ಹಣ್ಣಿನ ರುಚಿಯಿಂದ ಮರವನ್ನು ಗುರುತಿಸಬಹುದು.


ನಿಲ್ಲುವುವು ನಂಬಿಕೆ, ನಿರೀಕ್ಷೆ, ಪ್ರೀತಿ ನೆಲೆಯಾಗಿ; ಈ ಮೂರಲಿ ಪ್ರೀತಿಯೇ ಪರಮೋನ್ನತವೆಂಬುದ ನೀನರಿ.


ಯೇಸುಕ್ರಿಸ್ತರ ಮುಖಾಂತರ ಲಭಿಸುವ ಸತ್ಸಂಬಂಧದ ಫಲಗಳಿಂದ ತುಂಬಿದವರಾಗಿ ದೇವರಿಗೆ ಸ್ತುತಿಸಲ್ಲಿಸಿ, ಅವರ ಮಹಿಮೆ ಬೆಳಗುವಂತೆ ಮಾಡುವಿರಿ.


ಆಗ ಎಲ್ಲ ವಿಷಯಗಳಲ್ಲಿಯೂ ಪ್ರಭುಯೇಸು ಮೆಚ್ಚುವ ರೀತಿಯಲ್ಲಿ ನೀವು ಜೀವಿಸುವಿರಿ. ನಾನಾ ತರಹದ ಸತ್ಕಾರ್ಯಗಳನ್ನು ಕೈಗೊಳ್ಳುವಿರಿ. ಸತ್ಫಲವನ್ನೀಯುವ ದೈವಜ್ಞಾನದಲ್ಲಿ ವೃದ್ಧಿಹೊಂದುವಿರಿ.


ಸಹೋದರರೇ, ನೀವು ಮುಕ್ತ ಸ್ವತಂತ್ರ ಜೀವನವನ್ನು ನಡೆಸಬೇಕೆಂದು ದೇವರು ನಿಮ್ಮನ್ನು ಕರೆದಿದ್ದಾರೆ. ಆದರೆ, ಆ ಸ್ವಾತಂತ್ರ್ಯವನ್ನು ದೈಹಿಕ ಬಯಕೆಗಳಿಗೆ ಸಾಧನವಾಗಿ ಮಾಡಿಕೊಳ್ಳಬೇಡಿ. ಬದಲಾಗಿ, ನೀವು ಒಬ್ಬರಿಗೊಬ್ಬರು ಪ್ರೀತಿಯಿಂದ ಸೇವೆಮಾಡಿರಿ.


ನಿಮ್ಮ ಹೃನ್ಮನಗಳು ನವೀಕೃತವಾಗಲಿ.


ಆದರೆ ನೀವು ಪಾಪದಿಂದ ಬಿಡುಗಡೆ ಹೊಂದಿರುವಿರಿ. ದೇವರಿಗೆ ದಾಸರಾಗಿರುವಿರಿ. ಇದರಿಂದ ನಿಮಗೆ ಸಿಕ್ಕಿರುವ ಪ್ರತಿಫಲ ಪರಿಶುದ್ಧಜೀವನ; ಅಂತಿಮವಾಗಿ ಅಮರ ಜೀವನ.


ಕ್ರಿಸ್ತಯೇಸುವನ್ನು ನೀವು ನೋಡದಿದ್ದರೂ ಅವರನ್ನು ಪ್ರೀತಿಸುತ್ತೀರಿ. ನೀವೀಗ ಕಣ್ಣಾರೆ ಕಾಣದಿದ್ದರೂ ಅವರನ್ನು ವಿಶ್ವಾಸಿಸುತ್ತೀರಿ.


ನೀನಿನ್ನೂ ಯುವಕನೆಂದು ನಿನ್ನನ್ನು ತಾತ್ಸಾರ ಮಾಡುವುದಕ್ಕೆ ಯಾರಿಗೂ ಅವಕಾಶ ಕೊಡಬೇಡ. ನಿನ್ನ ನಡೆನುಡಿ, ಪ್ರೀತಿವಿಶ್ವಾಸ ಹಾಗೂ ಪರಿಶುದ್ಧತೆಯ ವಿಷಯದಲ್ಲಿ ವಿಶ್ವಾಸಿಗಳಿಗೆಲ್ಲರಿಗೂ ನೀನೇ ಆದರ್ಶಪ್ರಾಯನಾಗಿರು.


ಕ್ರಿಸ್ತಯೇಸು ತಮ್ಮ ಸ್ವಂತ ಹಿತವನ್ನು ಎಂದಿಗೂ ಬಯಸಲಿಲ್ಲ. “ದೇವರೇ, ನಿಮ್ಮನ್ನು ದೂಷಿಸಿದವರ ದೂಷಣೆಗಳು ನನ್ನ ಮೇಲೆ ಎರಗಿವೆ,” ಎಂದು ಲಿಖಿತವಾಗಿರುವ ವಾಕ್ಯ ಅವರಿಗೆ ಅನ್ವಯಿಸುತ್ತದೆ.


ನನ್ನ ಈ ಪುಟ್ಟ ಪತ್ರವನ್ನು ನಂಬಿಕಸ್ಥ ಸಹೋದರನಾದ ಸಿಲ್ವಾನನ ಸಹಾಯದಿಂದ ನಿಮಗೆ ಬರೆದಿರುತ್ತೇನೆ. ನಿಮ್ಮನ್ನು ಪ್ರೋತ್ಸಾಹಿಸಲೆಂದು ಮತ್ತು ಇದುವೇ ದೇವರ ನಿಜವಾದ ಅನುಗ್ರಹವೆಂದು ಸ್ಪಷ್ಟೀಕರಿಸಲು ಬರೆದಿದ್ದೇನೆ. ಈ ಅನುಗ್ರಹದಲ್ಲಿ ನೀವು ದೃಢವಾಗಿ ನಿಲ್ಲಿರಿ.


ಸಹೋದರರೇ, ನೀವು ಗುಣಸಂಪನ್ನರೂ ಜ್ಞಾನಸಂಪನ್ನರೂ ಒಬ್ಬರಿಗೊಬ್ಬರು ಬುದ್ಧಿಹೇಳಿಕೊಳ್ಳಲು ಸಮರ್ಥರೂ ಆಗಿದ್ದೀರಿ ಎಂದು ನಾನು ಚೆನ್ನಾಗಿ ಬಲ್ಲೆ.


ಮುಂದಿನ ವರ್ಷ ಹಣ್ಣು ಬಿಟ್ಟರೆ ಸರಿ; ಇಲ್ಲದಿದ್ದರೆ ಕಡಿದುಹಾಕೋಣ,’ ಎಂದನು.”


ಅಂತೆಯೇ, ಸಭಾಸೇವಕಿಯರು ಸಜ್ಜನೆಯರಾಗಿರಬೇಕು. ಚಾಡಿಮಾತುಗಳನ್ನು ಆಡುವವರೂ ಮದ್ಯಾಸಕ್ತರೂ ಆಗಿರದೆ ಎಲ್ಲ ವಿಷಯಗಳಲ್ಲಿ ನಂಬಿಕಸ್ಥರಾಗಿರಬೇಕು.


ನುಡಿವುದು ಎಫ್ರಯಿಮ್, “ನನಗಿನ್ನು ಬೇಡ ವಿಗ್ರಹಗಳ ಗೊಡವೆ". ಅದಕ್ಕೆ ಒಲಿದು ಕಟಾಕ್ಷಿಸುವವನು ನಾನೇ ಅದಕ್ಕೆ ಹಚ್ಚಹಸಿರಾದ ತುರಾಯಿಮರದಂತಿರುವೆ ಅದಕ್ಕೆ ಫಲವನ್ನು ನೀಡುವವನು ನಾನೇ.”


ದುಷ್ಟರ ಹಾಗೂ ಕೆಡುಕರ ಬಲೆಗೆ ನಾವು ಬೀಳದಂತೆ ಪ್ರಾರ್ಥಿಸಿರಿ. ಏಕೆಂದರೆ, ವಿಶ್ವಾಸವೆಂಬುದು ಎಲ್ಲರಲ್ಲಿಯೂ ಇರುವುದಿಲ್ಲ.


ಆದಿಗಿಂತ ಅಂತ್ಯ ಲೇಸು; ಗರ್ವಕ್ಕಿಂತ ತಾಳ್ಮೆ ಲೇಸು.


ಆದರೂ ಈ ನಗರವನ್ನು ಉದ್ಧಾರಮಾಡಿ, ಸುಧಾರಿಸಿ, ಇದರ ನಿವಾಸಿಗಳನ್ನು ಗುಣಪಡಿಸುವೆನು. ಸಮೃದ್ಧಿಯಾದ ಸೌಭಾಗ್ಯವನ್ನು ಹಾಗೂ ಶಾಂತಿಸಮಾಧಾನವನ್ನು ಇವರಿಗೆ ಅನುಗ್ರಹಿಸುವೆನು.


ಶರೀರ ಸ್ವಭಾವಕ್ಕೆ ಅನುಸಾರವಾಗಿ ನಡೆಯುವವರು ಶರೀರಕ್ಕೆ ಸಂಬಂಧಪಟ್ಟ ವಿಷಯಗಳಲ್ಲಿ ಮಗ್ನರಾಗಿರುತ್ತಾರೆ. ಪವಿತ್ರಾತ್ಮ ಅವರಿಗೆ ಅನುಸಾರವಾಗಿ ನಡೆಯುವವರಾದರೋ ಆತ್ಮಕ್ಕೆ ಸಂಬಂಧಪಟ್ಟ ವಿಷಯಗಳಲ್ಲಿ ಮಗ್ನರಾಗಿರುತ್ತಾರೆ.


ಏಕೆಂದರೆ, ದೇವರ ಸಾಮ್ರಾಜ್ಯ ತಿನ್ನುವುದರಲ್ಲಿ, ಕುಡಿಯುವುದರಲ್ಲಿ ಅಲ್ಲ, ಪವಿತ್ರಾತ್ಮ ಅವರಿಂದ ಬರುವ ಸತ್ಸಂಬಂಧ, ಶಾಂತಿಸಮಾಧಾನ ಮತ್ತು ಸಂತೋಷ ಇವುಗಳಲ್ಲಿ ಅಡಗಿದೆ.


ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲೂ ಪವಿತ್ರಾತ್ಮ ಪ್ರೇರಿತವಾದ ಪ್ರೀತಿಯಿಂದಲೂ ನಾನು ನಿಮ್ಮಲ್ಲಿ ಕೇಳಿಕೊಳ್ಳುವುದೇನೆಂದರೆ: ನೀವು ನನಗೋಸ್ಕರ ದೇವರಲ್ಲಿ ಪ್ರಾರ್ಥಿಸಿ ನನ್ನ ಹೋರಾಟದಲ್ಲಿ ಸಹಕರಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು