Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 6:2 - ಕನ್ನಡ ಸತ್ಯವೇದವು C.L. Bible (BSI)

2 ಒಬ್ಬರ ಭಾರವನ್ನು ಒಬ್ಬರು ಹೊತ್ತುಕೊಳ್ಳಿ. ಹೀಗೆ ಕ್ರಿಸ್ತಯೇಸುವಿನ ನಿಯಮವನ್ನು ನೆರವೇರಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಒಬ್ಬರು ಮತ್ತೊಬ್ಬರ ಭಾರವನ್ನು ಹೊತ್ತುಕೊಳ್ಳಲಿ, ಹೀಗೆ ಕ್ರಿಸ್ತನ ನೀತಿನಿಯಮಗಳನ್ನು ನೆರವೇರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಒಬ್ಬರು ಮತ್ತೊಬ್ಬರ ಭಾರವನ್ನು ಹೊತ್ತುಕೊಳ್ಳಲಿ; ಹೀಗೆ ಕ್ರಿಸ್ತನ ನಿಯಮವನ್ನು ನೆರವೇರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಿಮ್ಮ ಭಾರವಾದ ಹೊರೆಗಳನ್ನು ಹೊರಲು ಒಬ್ಬರಿಗೊಬ್ಬರು ಸಹಾಯಮಾಡಿರಿ. ಹೀಗೆ ನೀವು ಕ್ರಿಸ್ತನ ಆಜ್ಞೆಯನ್ನು ನಿಜವಾಗಿಯೂ ಅನುಸರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಒಬ್ಬನು ಮತ್ತೊಬ್ಬನ ಭಾರವನ್ನು ಹೊತ್ತುಕೊಳ್ಳಲಿ. ಹೀಗೆ ಕ್ರಿಸ್ತ ಯೇಸುವಿನ ನಿಯಮವನ್ನು ನೆರವೇರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಎಕಾಮೆಕಾಚ್ಯಾ ಗರ್ಜೆತ್ ಮಜತ್ ಕರಾ, ಅನಿ ಅಶೆ ತುಮಿ ಕ್ರಿಸ್ತಾಚ್ಯಾ ಖಾಯ್ದ್ಯಾಕ್ ಖಾಯ್ಲ್ ಹೊವ್ನ್ ಚಲ್ತ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 6:2
25 ತಿಳಿವುಗಳ ಹೋಲಿಕೆ  

ವಿಶ್ವಾಸದಲ್ಲಿ ದೃಢವಾಗಿರುವ ನಾವು ನಮ್ಮ ಹಿತವನ್ನೇ ಬಯಸದೆ ವಿಶ್ವಾಸದಲ್ಲಿ ದೃಢವಲ್ಲದವರ ಲೋಪದೋಷಗಳನ್ನು ಸಹಿಸಿಕೊಳ್ಳಬೇಕು.


ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ; ಮನಗುಂದಿದವರಿಗೆ ಧೈರ್ಯ ತುಂಬಿರಿ; ದುರ್ಬಲರಿಗೆ ನೆರವಾಗಿರಿ; ಎಲ್ಲರೊಡನೆ ಸಹನೆಯಿಂದಿರಿ. ಇದು ನಮ್ಮ ಪ್ರಬೋಧನೆ.


ನಿಮಗೊಂದು ಹೊಸ ಆಜ್ಞೆಯನ್ನು ಕೊಡುತ್ತೇನೆ: ಒಬ್ಬರನ್ನೊಬ್ಬರು ಪ್ರೀತಿಸಿರಿ. ನಾನು ನಿಮ್ಮನ್ನು ಪ್ರಿತಿಸಿದಂತೆಯೇ ನೀವು ಸಹ ಒಬ್ಬರನ್ನೊಬ್ಬರು ಪ್ರೀತಿಸಿರಿ.


ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬುದು ಕ್ರಿಸ್ತಯೇಸು ನಮಗೆ ಮಾಡಿರುವ ಆಜ್ಞೆ.


‘ನಿನ್ನನ್ನು ನೀನು ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನು ಪ್ರೀತಿಸು’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ. ಈ ರಾಜಾಜ್ಞೆಯನ್ನು ಕೈಗೊಂಡು ನಡೆಯುತ್ತಿದ್ದರೆ ಅದು ಒಳ್ಳೆಯದು.


ನಾನು ಕೊಡುವ ಆಜ್ಞೆ ಏನೆಂದರೆ: ನಾನು ನಿಮ್ಮನ್ನು ಪ್ರೀತಿಸಿದಂತೆಯೇ ನೀವು ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು.


ನಿನ್ನ ಹಗೆಯವನ ಕತ್ತೆ ಹೊರೆಯನ್ನು ತಾಳದೆ ಕೆಳಗೆ ಬಿದ್ದಿರುವುದನ್ನು ಕಂಡರೆ ಅದನ್ನು ಎಬ್ಬಿಸುವುದಕ್ಕೆ ನಿನಗೆ ಮನಸ್ಸಿಲ್ಲದಿದ್ದರೂ ಅವನಿಗೆ ಸಹಾಯ ಮಾಡಿ ಅದನ್ನು ಎಬ್ಬಿಸಲೇ ಬೇಕು.


ನಾವು ಪಾಪದ ಪಾಲಿಗೆ ಸತ್ತು, ಸತ್ಯಕ್ಕೋಸ್ಕರ ಜೀವಿಸುವಂತೆ ಕ್ರಿಸ್ತಯೇಸು ತಮ್ಮ ದೇಹದಲ್ಲಿ ನಮ್ಮ ಪಾಪಗಳನ್ನು ಹೊತ್ತು ಶಿಲುಬೆಯ ಮರವನ್ನೇರಿದರು. ಅವರ ಗಾಯಗಳಿಂದ ನೀವು ಗುಣಹೊಂದಿದಿರಿ.


ಹೀಗೆ, “ನಮ್ಮ ದುರ್ಬಲತೆಗಳನ್ನು ವಹಿಸಿಕೊಂಡನು; ನಮ್ಮ ರೋಗರುಜಿನಗಳನ್ನು ಆತನೇ ಪರಿಹರಿಸಿದನು,” ಎಂಬ ಯೆಶಾಯನ ಪ್ರವಾದನೆ ಈಡೇರಿತು.


ಪ್ರತಿಯೊಬ್ಬನೂ ತನ್ನ ಹೊರೆಯನ್ನು ತಾನೇ ಹೊತ್ತುಕೊಳ್ಳಬೇಕು.


ಧರ್ಮಶಾಸ್ತ್ರಕ್ಕೆ ಬಾಹಿರರಾದವರನ್ನು ಗಳಿಸಿಕೊಳ್ಳಲು ನಾನು ಧರ್ಮಶಾಸ್ತ್ರಕ್ಕೆ ಬಾಹಿರನಂತೆ ಆದೆ. ಯೇಸುಕ್ರಿಸ್ತರ ನಿಯಮಕ್ಕೆ ನಾನು ವಿಧೇಯನಾದುದರಿಂದ ದೇವರ ನಿಯಮಕ್ಕೆ ನಾನು ಬಾಹಿರನೇನೂ ಅಲ್ಲ.


ಏಕೆಂದರೆ ಕ್ರಿಸ್ತಯೇಸುವಿನಲ್ಲಿ ಇರುವವರಿಗೆ ಜೀವವನ್ನು ತರುವ ಪವಿತ್ರಾತ್ಮ ನಿಯಮವು ಪಾಪ-ಮರಣಗಳ ನಿಯಮದಿಂದ ನಿನ್ನನ್ನು ಬಿಡುಗಡೆ ಮಾಡಿದೆ.


ಅದಕ್ಕೆ ಯೇಸು, “ಶಾಸ್ತ್ರಜ್ಞರೇ, ನಿಮಗೂ ಧಿಕ್ಕಾರ! ಹೊರಲಾಗದ ಹೊರೆಗಳನ್ನು ನೀವು ಜನರ ಮೇಲೆ ಹೇರುತ್ತೀರಿ; ನೀವಾದರೋ ನಿಮ್ಮ ಕಿರುಬೆರಳಿನಿಂದ ಕೂಡ ಅವುಗಳನ್ನು ಮುಟ್ಟುವುದಿಲ್ಲ.


“ನಾನು ಹೇಳುವುದನ್ನು ಕೇಳಿ : ಅನ್ಯಾಯದ ಬಂಧನಗಳನ್ನು ಬಿಚ್ಚುವುದು, ಭಾರವಾದ ನೊಗದ ಕಣಿಗಳನ್ನು ಕಳಚುವುದು, ಜರ್ಜರಿತರಾದವರನ್ನು ಬಿಡುಗಡೆಮಾಡುವುದು,


ಆದರೆ ನಿಮ್ಮ ಸಮಸ್ಯೆಗಳನ್ನೂ ಹೊಣೆಯನ್ನೂ ವ್ಯಾಜ್ಯಗಳನ್ನೂ ನಾನೊಬ್ಬನೇ ಸಹಿಸುವುದು ಹೇಗೆ?


ಆದರೆ ನಮಗೆ ವಿಮೋಚನೆಯನ್ನು ತರುವ ಸರ್ವೋತ್ತಮ ಧರ್ಮಶಾಸ್ತ್ರವನ್ನು ಲಕ್ಷ್ಯವಿಟ್ಟು ನೋಡಿ ಅದರಲ್ಲೇ ಧ್ಯಾನಾಸಕ್ತನಾಗಿರುವವನು ಅದನ್ನು ಮರೆಯುವುದಿಲ್ಲ. ಅವನು ಕೇಳುವವನು ಮಾತ್ರ ಆಗಿರದೆ, ವಾಕ್ಯದ ಪ್ರಕಾರ ನಡೆಯುವವನೂ ಆಗಿರುತ್ತಾನೆ. ಇಂಥವನು ಭಾಗ್ಯವಂತನು!


ವಿಮೋಚನೆಯನ್ನೀಯುವ ಧರ್ಮಶಾಸ್ತ್ರದ ನ್ಯಾಯತೀರ್ಪಿಗೆ ಗುರಿಯಾಗುವಿರಿ ಎಂದು ತಿಳಿದು ನೀವು ನಡೆಯಲ್ಲೂ ನುಡಿಯಲ್ಲೂ ಯೋಗ್ಯರಾಗಿ ಬಾಳಿ.


ಅವರು ನೀತಿಯ ಮಾರ್ಗವನ್ನು ಅರಿತುಕೊಂಡು ತಾವು ಸ್ವೀಕರಿಸಿದ ಪವಿತ್ರ ಆಜ್ಞೆಯನ್ನು ತಿರಸ್ಕರಿಸುವುದಕ್ಕಿಂತ ಅದನ್ನು ಅರಿಯದವರಾಗಿದ್ದರೆ ಒಳ್ಳೆಯದಾಗುತ್ತಿತ್ತು.


ಪೂರ್ವಕಾಲದಲ್ಲಿ ಪವಿತ್ರ ಪ್ರವಾದಿಗಳು ಹೇಳಿದ ಮಾತುಗಳನ್ನು ಮತ್ತು ಪ್ರೇಷಿತರ ಮೂಲಕ, ಲೋಕೋದ್ಧಾರಕರಾದ ನಮ್ಮ ಪ್ರಭು ಕೊಟ್ಟ ಆಜ್ಞೆಗಳನ್ನು ನಿಮ್ಮ ಜ್ಞಾಪಕಕ್ಕೆ ತರಲು ಬಯಸಿದ್ದೇನೆ.


“ಸಿರಿಯಾದವರು ನನ್ನನ್ನು ಸೋಲಿಸುವಂತೆ ಕಂಡರೆ ನೀನು ನನ್ನ ಸಹಾಯಕ್ಕೆ ಬಾ; ಅಮ್ಮೋನಿಯರು ನಿನ್ನನ್ನು ಸೋಲಿಸುವಂತೆ ಕಂಡರೆ ನಾನು ನಿನ್ನ ಸಹಾಯಕ್ಕೆ ಬರುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು