Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 6:3 - ಕನ್ನಡ ಸತ್ಯವೇದವು C.L. Bible (BSI)

3 ಅಲ್ಪನು ತಾನು ಶ್ರೇಷ್ಠನೆಂದು ಭಾವಿಸಿಕೊಂಡರೆ ತನ್ನನ್ನು ತಾನೇ ವಂಚಿಸಿಕೊಳ್ಳುತ್ತಾನೆ, ಅಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯಾವನಾದರೂ ಅಲ್ಪನಾಗಿದ್ದು ತಾನು ದೊಡ್ಡವನೆಂದು ಭಾವಿಸಿಕೊಂಡರೆ ತನ್ನನ್ನು ತಾನೇ ಮೋಸಗೊಳಿಸಿಕೊಳ್ಳುವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯಾವನಾದರೂ ಅಲ್ಪನಾಗಿದ್ದು ತಾನು ದೊಡ್ಡವನೆಂದು ಭಾವಿಸಿಕೊಂಡರೆ ತನ್ನನ್ನು ತಾನೇ ಮೋಸಗೊಳಿಸಿದವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯಾವನಾದರೂ ತಾನು ಪ್ರಾಮುಖ್ಯನಲ್ಲದಿದ್ದರೂ ತನ್ನನ್ನು ಪ್ರಾಮುಖ್ಯನೆಂದು ಭಾವಿಸಿಕೊಂಡರೆ ಅವನು ತನ್ನನ್ನೇ ಮೋಸಪಡಿಸಿಕೊಳ್ಳುತ್ತಾನೆ. ಒಬ್ಬನು ತನ್ನನ್ನು ಮತ್ತೊಬ್ಬನೊಡನೆ ಹೋಲಿಸಿಕೊಳ್ಳಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಏನೂ ಅಲ್ಲದವನೊಬ್ಬನು ತಾನು ಏನೋ ಆಗಿದ್ದೇನೆಂದು ಭಾವಿಸಿಕೊಂಡರೆ, ತನ್ನನ್ನು ತಾನೇ ವಂಚಿಸಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಕಶ್ಯಾಕ್ ಮಟ್ಲ್ಯಾರ್, ಕೊನ್‍ಬಿ ಎಕ್ಲೊ ಅಪ್ನಿ ಕಾಯ್ಬಿ ನ್ಹಯ್ ರ್‍ಹಾತಾನಾ, ಅಪ್ನಿ ಮೊಟೊ ಮನುನ್ ಚಿಂತಾ ಹೊಲ್ಯಾರ್ ತೊ ಅಪ್ನಾಕುಚ್ ಪಸ್ವುನ್ ಘೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 6:3
17 ತಿಳಿವುಗಳ ಹೋಲಿಕೆ  

ತಾನೇ ಜ್ಞಾನಿಯೆಂದು ಎಣಿಸಿಕೊಳ್ಳುವವನನ್ನು ನೋಡು; ಅಂಥವನಿಗಿಂತ ಮೂಢನ ಸುಧಾರಣೆ ಹೆಚ್ಚು ಸಾಧ್ಯ.


ಯಾರೂ ತನ್ನನ್ನು ತಾನೇ ವಂಚಿಸಿಕೊಳ್ಳದಿರಲಿ. ನಿಮ್ಮಲ್ಲಿ ಯಾರಾದರೂ ಈ ಲೋಕದ ದೃಷ್ಟಿಯಲ್ಲಿ ತಾನು ಜಾಣನೆಂದು ಭಾವಿಸುವುದಾದರೆ ಅಂಥವನು ಮೊದಲು ಹುಚ್ಚನಂತಿರಲು ಕಲಿಯಲಿ. ಆಗ ಅವನು ನಿಜವಾಗಿಯೂ ಜಾಣನಾಗುತ್ತಾನೆ.


ಯಾರಾದರೂ ತಾನು ಬಲ್ಲವನೆಂದು ಕೊಚ್ಚಿಕೊಳ್ಳುವುದಾದರೆ ತಾನು ತಿಳಿಯಬೇಕಾದುದನ್ನು ಅವನು ಸರಿಯಾಗಿ ತಿಳಿದಿರುವುದಿಲ್ಲ.


ದೇವರು ನನಗೆ ದಯಪಾಲಿಸಿರುವ ಸೇವೆಯ ನಿಮಿತ್ತ ನಾನು ನಿಮಗೆ ಹೇಳುವ ಬುದ್ಧಿಮಾತಿದು: ನಿಮ್ಮಲ್ಲಿ ಯಾರೂ ತನ್ನನ್ನೇ ಅತಿಯಾಗಿ ಭಾವಿಸಿಕೊಳ್ಳದಿರಲಿ. ದೇವರು ತನಗೆ ಇತ್ತಿರುವ ವಿಶ್ವಾಸದ ಪರಿಮಾಣದ ಮೇರೆಗೆ ಪ್ರತಿಯೊಬ್ಬನೂ ತನ್ನ ಬಗ್ಗೆ ಸರಿಯಾದ ಅಭಿಪ್ರಾಯ ಹೊಂದಿರಲಿ.


ನಮ್ಮ ಸ್ವಂತ ಶಕ್ತಿಯಿಂದಲೇ ಏನನ್ನೋ ಸಾಧಿಸಿಬಿಟ್ಟಿದ್ದೇವೆ ಎಂದು ಹೇಳಿಕೊಳ್ಳುವ ಸಾಮರ್ಥ್ಯ ನಮಗಿಲ್ಲ. ನಮ್ಮ ಸಾಮರ್ಥ್ಯವೆಲ್ಲ ದೇವರಿಂದಲೇ ಬಂದುದು.


ಪ್ರವಾದನೆಯ ವರವೆನಗಿರಬಹುದು ಇರಬಹುದು ನಿಗೂಢ ರಹಸ್ಯಗಳರಿವು ಎಲ್ಲದರ ಪರಿಜ್ಞಾನ, ಪರ್ವತವನೇ ಕದಲಿಪ ವಿಶ್ವಾಸ ಪ್ರೀತಿಯೊಂದಿಲ್ಲದಿರೆ ನಾ ಶೂನ್ಯಸಮಾನ.


ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿಕೊಂಡರೆ, ನಮ್ಮನ್ನು ನಾವೇ ವಂಚಿಸಿಕೊಳ್ಳುತ್ತೇವೆ ಮತ್ತು ಸತ್ಯವೆಂಬುದೇ ನಮ್ಮಲ್ಲಿ ಇರುವುದಿಲ್ಲ.


ನಿಮ್ಮನಿಮ್ಮಲ್ಲಿ ಸಾಮರಸ್ಯವಿರಲಿ. ದೊಡ್ಡಸ್ತಿಕೆಯಿಂದ ವರ್ತಿಸಬೇಡಿ. ದೀನದಲಿತರೊಡನೆ ಗೆಳೆತನ ಬೆಳೆಸಿರಿ. ನೀವೇ ಜಾಣರೆಂದು ಭಾವಿಸದಿರಿ.


ಫರಿಸಾಯನು ಮುಂದೆ ನಿಂತು ತನ್ನಷ್ಟಕ್ಕೆ ಹೀಗೆ ಪ್ರಾರ್ಥನೆಮಾಡಿದ: ‘ಓ ದೇವರೇ, ನಾನು ಇತರರ ಹಾಗೆ ಅಲ್ಲ. ಅವರೋ ಕೊಳ್ಳೆಗಾರರು, ಅನ್ಯಾಯಗಾರರು, ವ್ಯಭಿಚಾರಿಗಳು. ನಾನು ಈ ಸುಂಕದವನಂತೆಯೂ ಅಲ್ಲ. ಇದಕ್ಕಾಗಿ ನಿಮಗೆ ಧನ್ಯವಾದವನ್ನು ಸಲ್ಲಿಸುತ್ತೇನೆ.


ದೇವರ ವಾಕ್ಯವನ್ನು ಕಿವಿಯಿಂದ ಕೇಳಿದರೆ ಸಾಕೆಂದು ತಿಳಿದು ಮರುಳಾಗದಿರಿ. ಆ ವಾಕ್ಯವನ್ನು ಅನುಸರಿಸಿ ನಡೆಯುವವರಾಗಿರಿ.


ಗಾಳಿಯಿದೆ, ಮೋಡವಿದೆ, ಆದರೆ ಮಳೆಯಿಲ್ಲ; ಕೊಡದೆಯೆ ತಾನೊಬ್ಬ ದಾನಿಯೆಂದು ಕೊಚ್ಚಿಕೊಳ್ಳುವವನೂ ಹಾಗೆಯೆ.


ತಾನು ಸದ್ಭಕ್ತನೆಂದು ಭಾವಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣ ಹಾಕದಿದ್ದರೆ, ಅಂಥವನ ಭಕ್ತಿ ವ್ಯರ್ಥ. ಅವನು ತನ್ನನ್ನೇ ವಂಚಿಸಿಕೊಳ್ಳುತ್ತಾನಷ್ಟೆ.


ದುಷ್ಕರ್ಮಿಗಳು ಮತ್ತು ದುರ್ಬೋಧಕರು ಇತರರನ್ನು ವಂಚಿಸುತ್ತಾ ತಮ್ಮನ್ನೂ ವಂಚಿಸಿಕೊಳ್ಳುತ್ತಾ ದಿನೇದಿನೇ ಅಧೋಗತಿಗಿಳಿಯುತ್ತಾರೆ.


ಹೀಗೆ ಹೊಗಳಿಕೊಳ್ಳುವ ನಾನು ಹುಚ್ಚನೇ ಸರಿ. ಆದರೆ ಇದಕ್ಕೆ ಒತ್ತಾಯಪಡಿಸಿದವರು ನೀವೇ. ನೀವೇ ನನ್ನನ್ನು ಹೊಗಳಬೇಕಾಗಿತ್ತು. ಏಕೆಂದರೆ, ನಾನು ಶೂನ್ಯಸಮಾನನಾದರೂ ಆ “ಮಹಾಪ್ರೇಷಿತರು” ಎಂದು ಹೇಳಿಕೊಳ್ಳುವವರಿಗಿಂತ ಕೀಳಾದವನಲ್ಲ.


ಅಲ್ಲಿದ್ದ ಗಣ್ಯವ್ಯಕ್ತಿಗಳು ಕೂಡ (ಅವರು ಹಿಂದೆ ಎಂಥವರಾಗಿದ್ದರು ಎಂಬುದು ನನಗೆ ಮುಖ್ಯವಲ್ಲ; ದೇವರು ಮುಖನೋಡಿ ಮಣೆ ಹಾಕುವವರಲ್ಲ) ನನಗೆ ಯಾವ ಹೊಸ ಸಲಹೆ ನೀಡಲಿಲ್ಲ.


ಸ್ವಲ್ಪಕಾಲಕ್ಕೆ ಹಿಂದೆ ತೈದ ಎಂಬವನಿದ್ದ. ತಾನೊಬ್ಬ ಮಹಾಪುರುಷನು ಎಂದು ಹೇಳಿಕೊಳ್ಳುತ್ತಿದ್ದ. ಸುಮಾರು ನಾನೂರು ಮಂದಿ ಅವನ ಅನುಯಾಯಿಗಳಾದರು. ಅವನ ಕೊಲೆಯಾದದ್ದೇ, ಅವನನ್ನು ಹಿಂಬಾಲಿಸಿದವರೆಲ್ಲರೂ ಚದರಿಹೋದರು. ಅವನ ಪಕ್ಷ ನಿರ್ನಾಮವಾಯಿತು.


ನನಗೆ ಕೊಡಲಾಗಿದ್ದ ಈ ವಿಶೇಷ ವರವನ್ನು ಮನಗಂಡು ಸಭಾಸ್ತಂಭಗಳೆಂದು ಪರಿಗಣಿತರಾದ ಯಕೋಬ, ಕೇಫ ಮತ್ತು ಯೊವಾನ್ನರು ನನಗೂ ಬಾರ್ನಬನಿಗೂ ಕೈಯಲ್ಲಿ ಕೈಯನ್ನಿಟ್ಟು ಅನ್ಯೋನ್ಯತೆಯನ್ನು ಸೂಚಿಸಿದರು. ಅಲ್ಲದೆ, “ನೀವು ಯೆಹೂದ್ಯರಲ್ಲದವರ ಬಳಿಗೆ ಹೋಗಿರಿ, ನಾವು ಯೆಹೂದ್ಯರ ಬಳಿಗೆ ಹೋಗುತ್ತೇವೆ,” ಎಂದೂ ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು