Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 1:10 - ಕನ್ನಡ ಸತ್ಯವೇದವು C.L. Bible (BSI)

10 “ಆ ದಿನದಲ್ಲಿ ಜೆರುಸಲೇಮಿನಲ್ಲಿರುವ ಮೀನುಬಾಗಿಲಿನ ಬಳಿ ಕೂಗಾಟವನ್ನು, ಪಟ್ಟಣದ ಹೊಸ ಬಡಾವಣೆಯಲ್ಲಿ ಗೋಳಾಟವನ್ನು, ಹಾಗೂ ಬೆಟ್ಟಗುಡ್ಡಗಳಲ್ಲಿ ಭೀಕರ ಗದ್ದಲವನ್ನು ಕೇಳುವಿರಿ. ಇದು ಸರ್ವೇಶ್ವರಸ್ವಾಮಿಯ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅದೇ ದಿನದಲ್ಲಿ ಮೀನುಬಾಗಿಲಿನಿಂದ ಕೂಗಾಟ, ಎರಡನೆಯ ಕೇರಿಯಿಂದ ಗೋಳಾಟ, ಗುಡ್ಡಗಳ ಮೇಲಿನಿಂದ ಭೀಕರ ಶಬ್ದವನ್ನು ಕೇಳುವಿರಿ, ಅಂತು ದೊಡ್ಡ ಗದ್ದಲವಾಗುವುದು” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅದೇ ದಿನದಲ್ಲಿ ಮೀನುಬಾಗಿಲಿಂದ ಕೂಗಾಟ, ಎರಡನೆಯ ಕೇರಿಯಿಂದ ಗೋಳಾಟ, ಗುಡ್ಡಗಳ ಮೇಲಿಂದ ಧಡಮ್ ಎನ್ನುವ ಶಬ್ದ, ಅಂತು ದೊಡ್ಡ ಗದ್ದಲವಾಗುವದು; ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೋವನು ಇನ್ನೂ ಹೇಳುವುದೇನೆಂದರೆ, “ಆ ಸಮಯದಲ್ಲಿ ಜೆರುಸಲೇಮಿನ ಮೀನು ಬಾಗಿಲಲ್ಲಿ ಜನರು ಸಹಾಯಕ್ಕಾಗಿ ಮೊರೆಯಿಡುವರು. ನಗರದ ಇತರ ಕಡೆಗಳಿಂದ ಜನರು ರೋಧಿಸುವರು. ನಗರದ ಸುತ್ತಲಿರುವ ಬೆಟ್ಟಗಳಲ್ಲಿ ನಾಶವಾಗುವ ಶಬ್ದವನ್ನು ಜನರು ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಆ ದಿನದಲ್ಲಿ, ಮೀನಿನ ಬಾಗಿಲಿನಿಂದ ಕೂಗಿನ ಶಬ್ದವೂ ಹೊಸ ಮನೆಯಿಂದ ಗೋಳಾಟವೂ ಗುಡ್ಡಗಳ ಕಡೆಯಿಂದ ಮುರಿಯುವ ಬಲವಾದ ಶಬ್ದವೂ ಕೇಳಿಬರುವುದು, ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 1:10
18 ತಿಳಿವುಗಳ ಹೋಲಿಕೆ  

ಇದಾದ ಮೇಲೆ, ಅವನು ಗೀಹೋನ್ ಬುಗ್ಗೆಯ ದಕ್ಷಿಣದ ಕಡೆಯಿಂದ ಮೀನುಬಾಗಿಲಿನ ಮಾರ್ಗದವರೆಗಿರುವ ಕಣಿವೆಯಲ್ಲಿ, ಓಫೆಲ್ ಗುಡ್ಡದ ಸುತ್ತಲೂ ಇದ್ದ ದಾವೀದನಗರದ ಹೊರಗಿನ ಗೋಡೆಯನ್ನು ಇನ್ನೂ ಎತ್ತರವಾಗಿ ಕಟ್ಟಿಸಿದನು. ಜುದೇಯ ನಾಡಿನ ಕೋಟೆಕೊತ್ತಲುಗಳುಳ್ಳ ಎಲ್ಲ ಪಟ್ಟಣಗಳಲ್ಲಿ ಸೇನಾಪತಿಗಳನ್ನು ಇರಿಸಿದನು.


ಆ ದಿನದಲ್ಲಿ ಆಸ್ಥಾನದ ಗೀತೆಗಳು ಶೋಕಗೀತೆಗಳಾಗಿ ಮಾರ್ಪಡುವುವು. ಹೆಣಗಳು ಎಲ್ಲೆಲ್ಲೂ ಬಿದ್ದಿರುವುವು. ಅವುಗಳನ್ನು ಸದ್ದುಗದ್ದಲವಿಲ್ಲದೆ ಬಿಸಾಡಲಾಗುವುದು.” ಇದು ಸರ್ವೇಶ್ವರಸ್ವಾಮಿಯ ನುಡಿ.


ಆಗ ಯಾಜಕ ಹಿಲ್ಕೀಯನು, ಅಹೀಕಾಮ್, ಅಕ್ಬೋರ್, ಶಾಫಾನ್, ಅಸಾಯ ಎಂಬವರು ಹುಲ್ದ ಎಂಬ ಪ್ರವಾದಿನಿಯ ಬಳಿಗೆ ಹೋಗಿ ಆಕೆಯ ಹತ್ತಿರ ವಿಚಾರಿಸಿದರು. ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ರಾಜವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಈಕೆಯ ಗಂಡನು. ಈಕೆ ಜೆರುಸಲೇಮಿನ ಎರಡನೇ ಕೇರಿಯಲ್ಲಿ ವಾಸವಾಗಿದ್ದಳು.


ಮೀನುಬಾಗಿಲನ್ನು ಕಟ್ಟಿದವರು ಹಸ್ಸೆನಾಹನ ಮನೆಯವರು. ಇವರು ಅದರ ಮೇಲೆ ತೊಲೆಗಳನ್ನಿಟ್ಟು ಅದಕ್ಕೆ ಕದ, ತಿರುಗಣಿ, ಅಗುಳಿಗಳನ್ನು ಹಚ್ಚಿದರು.


ಅದು ರೌದ್ರದ ದಿನ, ಕಷ್ಟ - ಸಂಕಟದ ದಿನ, ನಾಶವಿನಾಶದ ದಿನ, ಕತ್ತಲು ಕಾರ್ಗತ್ತಲ ದಿನ, ಕಾರ್ಮುಗಿಲು ಕವಿದ ಕರಾಳ ದಿನ;


“ಸ್ವಾಮಿ ಸರ್ವೇಶ್ವರ ನ್ಯಾಯತೀರ್ಪು ನೀಡುವ ದಿನ ಸಮೀಪಿಸಿದೆ; ಆದುದರಿಂದ ಅವರ ಸನ್ನಿಧಿಯಲ್ಲಿ ಮೌನ ತಾಳಿರಿ. ಸರ್ವೇಶ್ವರ, ಯಜ್ಞದ ಔತಣವನ್ನು ಸಿದ್ಧಗೊಳಿಸಿದ್ದಾರೆ. ಅತಿಥಿಗಳನ್ನು ಪವಿತ್ರೀಕರಿಸಿದ್ದಾರೆ.


ಚಿದ್ಕೀಯನ ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಬತ್ತನೆಯ ದಿನದಲ್ಲಿ ನಗರದ ಪೌಳಿಗೋಡೆ ಒಡಕುಬಿದ್ದು ಜೆರುಸಲೇಮ್ ಶತ್ರುವಶವಾಯಿತು.


ಸಿಯೋನ್ ನಗರಿ ಪ್ರಸವವೇದನೆ ಪಡುವವಳಂತೆ ಚೊಚ್ಚಲ ಹೆರಿಗೆಯ ವೇದನೆಯನ್ನು ಅನುಭವಿಸುವವಳಂತೆ ಕಿರಿಚಿಕೊಳ್ಳುವ ಕೂಗನ್ನು ನಾನು ಕೇಳಿದ್ದೇನೆ. ಉಬ್ಬಸಪಡುತ್ತಾ ಎರಡು ಕೈಗಳನ್ನೂ ಚಾಚಿ ‘ಅಯ್ಯೋ ನನಗೆ ಕೇಡು, ಕೊಲೆಗಡುಕನ ಮುಂದೆ ನನ್ನ ಪ್ರಾಣ ಉಡುಗುತ್ತಿದೆ’ ಎಂದು ಅರುಚಿಕೊಳ್ಳುತ್ತಿಹಳು.


ಗುರುಗುಟ್ಟುತ್ತೇವೆ ಕರಡಿಗಳಂತೆ, ಮುಲುಗುತ್ತೇವೆ ಪಾರಿವಾಳಗಳಂತೆ. ನ್ಯಾಯನಿರ್ಣಯವನ್ನು ಎದುರುನೋಡಿದರೂ ಅದು ನಮಗೆ ಸಿಗದಿದೆ; ಜೀವೋದ್ಧಾರವನ್ನು, ನಿರೀಕ್ಷಿಸಿದರೂ ಅದು ನಮ್ಮಿಂದ ದೂರವಿದೆ.


ಹೀಗೆ ಸರ್ವೇಶ್ವರ, ಹಿಜ್ಕೀಯನನ್ನೂ ಜೆರುಸಲೇಮಿನವರನ್ನೂ ಅಸ್ಸೀರಿಯದ ಅರಸ ಸನ್ಹೇರೀಬನ ಕೈಗೂ ಸುತ್ತಲಿನ ಎಲ್ಲ ಶತ್ರುಗಳ ಕೈಗೂ ಸಿಕ್ಕದಂತೆ ತಪ್ಪಿಸಿ ಕಾಪಾಡುತ್ತಿದ್ದರು.


ಸೊಲೊಮೋನನು ಜೆರುಸಲೇಮ್ ಪಟ್ಟಣದಲ್ಲಿ ತನ್ನ ತಂದೆ ದಾವೀದನಿಗೆ ದೇವದರ್ಶನ ಉಂಟಾದ ಮೋರೀಯಾ ಗುಡ್ಡದಲ್ಲಿ, ಸರ್ವೇಶ್ವರನ ಆಲಯವನ್ನು ಕಟ್ಟಿಸ ತೊಡಗಿದನು. ಈ ಮೊದಲು, ಯೆಬೂಸಿಯನಾದ ಒರ್ನಾನನ ಕಣವಾಗಿದ್ದ ಆ ಸ್ಥಳವನ್ನು, ದಾವೀದನು ಇದಕ್ಕಾಗಿ ಸಿದ್ಧಮಾಡಿದ್ದನು.


ದಾವೀದನು ಆ ಕೋಟೆಗೆ ‘ದಾವೀದನಗರ’ ಎಂದು ಹೆಸರಿಟ್ಟು ಅಲ್ಲೇ ವಾಸಿಸುತ್ತಿದ್ದನು. ಅದರ ಸುತ್ತಲೂ ಮಿಲ್ಲೋವಿನಿಂದ ಪ್ರಾರಂಭಿಸಿ ಒಳಗಿನ ಪೌಳಿಗೋಡೆಯನ್ನು ಕಟ್ಟಿಸಿದನು.


ಆದರೂ ಅವನು, ಈಗ ‘ದಾವೀದನಗರ’ ಎನಿಸಿಕೊಳ್ಳುವ ಸಿಯೋನ್ ಕೋಟೆಯನ್ನು ಸ್ವಾಧೀನಪಡಿಸಿಕೊಂಡನು.


ಆಗ ಹಿಲ್ಕೀಯನೂ ಅರಸನ ಜನರೂ ಹುಲ್ದ ಎಂಬ ಪ್ರವಾದಿನಿಯ ಬಳಿಗೆ ಹೋಗಿ, ಅಪ್ಪಣೆಯಾದಂತೆ ಆಕೆಯ ಬಳಿ ವಿಚಾರಿಸಿದರು. ಹಸ್ತನ ಮೊಮ್ಮಗನೂ ತೊಕ್ಹತನ ಮಗನೂ ರಾಜವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಆಕೆಯ ಗಂಡ. ಆಕೆ ಜೆರುಸಲೇಮಿನ ಎರಡನೆಯ ಕೇರಿಯಲ್ಲಿ ವಾಸವಾಗಿದ್ದಳು.


ಅಲ್ಲಿಂದ ಎಫ್ರಯಿಮ್ ಬಾಗಿಲು, ಯೆಷಾನಾ ಬಾಗಿಲು, ಮೀನು ಬಾಗಿಲು, ಹನನೇಲ್ ಬುರುಜು, ಹಮ್ಮೇಯಾ ಬುರುಜು ಇವುಗಳ ಮಾರ್ಗವಾಗಿ ಕುರಿಬಾಗಿಲಿನವರೆಗೂ ಹೋಗಿ ಸೆರೆಮನೆಯ ಬಾಗಿಲಿನ ಬಳಿಯಲ್ಲಿ ನಿಂತೆವು.


ಆ ವಂಶದವರು ಎತ್ತರವಾದ ಎಲ್ಲಾ ಗುಡ್ಡಗಳ ಮೇಲೆ, ಎಲ್ಲಾ ಬೆಟ್ಟಗಳ ತುದಿಗಳಲ್ಲಿ, ಸೊಂಪಾದ ಎಲ್ಲಾ ಮರಗಳ ಕೆಳಗೆ ಹಾಗು ತಮ್ಮ ಸಮಸ್ತ ವಿಗ್ರಹಗಳಿಗೆ ಸುಗಂಧಹೋಮ ಮಾಡುತ್ತಿದ್ದ ದಟ್ಟವಾದ ಎಲ್ಲಾ ಮರಗಳ ಕೆಳಗೆ ಹತರಾಗಿ, ತಮ್ಮ ಯಜ್ಞವೇದಿಕೆಗಳ ಸುತ್ತಲು ತಮ್ಮ ಬೊಂಬೆಗಳ ನಡುವೆ ಬಿದ್ದಿರುವಾಗ ನಾನೇ ಸರ್ವೇಶ್ವರ ಎಂದು ಗೊತ್ತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು