Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 1:4 - ಕನ್ನಡ ಸತ್ಯವೇದವು C.L. Bible (BSI)

4 “ಜುದೇಯ ನಾಡನ್ನೂ ಜೆರುಸಲೇಮಿನ ನಿವಾಸಿಗಳೆಲ್ಲರನ್ನೂ ಕೈಯೆತ್ತಿ ಸದೆಬಡಿಯುವೆನು; ಬಾಳನ ಪೂಜೆಪುರಸ್ಕಾರಗಳ ಗುರುತೂ ಅಲ್ಲಿ ಇಲ್ಲದಂತೆ ಮಾಡುವೆನು. ಅವನ ಪೂಜಾರಿಗಳನ್ನು ನಿರ್ನಾಮಗೊಳಿಸುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ನಾನು ಯೆಹೂದದ ಮೇಲೂ ಮತ್ತು ಯೆರೂಸಲೇಮಿನವರೆಲ್ಲರ ಮೇಲೂ ಕೈಯೆತ್ತಿ, ಈ ಸ್ಥಳದಿಂದ ಬಾಳನ ಪೂಜೆಯನ್ನು ನಿಶ್ಶೇಷಗೊಳಿಸಿ, ಕೆಮಾರ್ಯ ಮೊದಲಾದ ಪೂಜಾರಿಗಳನ್ನು ನಿರ್ನಾಮ ಮಾಡುವೆನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಾನು ಯೆಹೂದದ ಮೇಲೂ ಯೆರೂಸಲೇವಿುನವರೆಲ್ಲರ ಮೇಲೂ ಕೈಯೆತ್ತಿ ಈ ಸ್ಥಳದಿಂದ ಬಾಳನ ಪೂಜೆಯನ್ನು ನಿಶ್ಶೇಷಗೊಳಿಸಿ ಕೆಮಾರ್ಯ ಮೊದಲಾದ ಪೂಜಾರಿಗಳನ್ನು ನಿರ್ನಾಮಮಾಡುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನು ಹೀಗೆ ನುಡಿದನು: “ನಾನು ಯೆಹೂದವನ್ನೂ ಜೆರುಸಲೇಮಿನಲ್ಲಿ ವಾಸಿಸುವ ಜನರನ್ನೂ ದಂಡಿಸುವೆನು. ಬಾಳನ ಪೂಜೆಯ ಪ್ರತಿಯೊಂದು ಚಿಹ್ನೆಯನ್ನೂ ಅದನ್ನು ಪೂಜಿಸುವ ಪುರೋಹಿತರನ್ನೂ ಮತ್ತು ಯಾವ ಜನರು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ಯೆಹೂದದ ಮೇಲೆಯೂ ಯೆರೂಸಲೇಮಿನ ಎಲ್ಲಾ ನಿವಾಸಿಗಳ ಮೇಲೆಯೂ ನನ್ನ ಕೈಚಾಚುವೆನು. ಈ ಸ್ಥಳದಲ್ಲಿ ಬಾಳನ ಪೂಜೆಗಳನ್ನು ಮತ್ತು ಉಳಿದಿರುವ ವಿಗ್ರಹಾರಾಧಕ ಯಾಜಕರ ಹೆಸರುಗಳನ್ನು ತೆಗೆದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 1:4
14 ತಿಳಿವುಗಳ ಹೋಲಿಕೆ  

ಬೇತಾವೆನಿನ ಬಸವನಿಗೆ ಸಮಾರ್ಯದ ನಿವಾಸಿಗಳು ದಿಗಿಲುಗೊಳ್ಳುವರು; ಅದನ್ನು ಕಾಣದುದಕ್ಕಾಗಿ ಭಕ್ತಜನರು ಎದೆಬಡಿದುಕೊಳ್ಳುವರು. ಅದರ ಮಹಿಮೆ ನಂದಿಹೋಯಿತು ಎಂದು ಪೂಜಾರಿಗಳು ಗೋಳಾಡುವರು.


ನೀನು ಕೆತ್ತಿದ ವಿಗ್ರಹಗಳನ್ನು ಒಡೆದುಹಾಕಿ, ನೀನು ನಿಲ್ಲಿಸಿದ ಕಲ್ಲುಕಂಬಗಳನ್ನು ಉರುಳಿಸಿಬಿಡುವೆನು. ನಿನ್ನ ಕೈಗೆಲಸವಾದ ವಿಗ್ರಹಗಳನ್ನು ನೀನು ಪೂಜಿಸದಂತೆ ಮಾಡುವೆನು.


ಅವರ ಹೆಂಡತಿ, ಮನೆ, ಹೊಲ, ಗದ್ದೆ ಎಲ್ಲವೂ ಅನ್ಯರ ಪಾಲಾಗುವುದು.” “ನಾಡಿನ ನಿವಾಸಿಗಳ ಮೇಲೆ ಕೈಮಾಡುವೆನೆಂಬುದು ಖಚಿತ. ಇದು ಸರ್ವೇಶ್ವರನಾದ ನನ್ನ ನುಡಿ.


ಇದಲ್ಲದೆ, ಅವನು ಬಾಳ್‍ದೇವತೆಗಳ ಬಲಿಪೀಠಗಳನ್ನು ತನ್ನೆದುರಿನಲ್ಲೇ ಹಾಳುಮಾಡಿಸಿ, ಅವುಗಳ ಮೇಲಿದ್ದ ಸೂರ್ಯಸ್ತಂಭಗಳನ್ನು ಕೆಡವಿಸಿ, ಅಶೇರಸ್ತಂಭ, ಕೆತ್ತಿದ ಮತ್ತು ಎರಕದ ವಿಗ್ರಹ, ಇವುಗಳನ್ನು ಒಡಿಸಿ, ಪುಡಿಪುಡಿಮಾಡಿಸಿ, ಅವುಗಳಿಗೆ ಬಲಿಯರ್ಪಿಸಿದವರ ಸಮಾಧಿಗಳ ಮೇಲೆ ಆ ಧೂಳನ್ನು ಚೆಲ್ಲಿಸಿದನು.


ನೂಲು, ಮಟ್ಟಗೋಲು ಇವುಗಳಿಂದಲೋ ಎಂಬಂತೆ ಸಮಾರಿಯವನ್ನೂ ಅಹಾಬನ ಮನೆಯನ್ನೂ ನೆಲಸಮ ಮಾಡಿಬಿಟ್ಟೆನಲ್ಲವೆ? ಜೆರುಸಲೇಮನ್ನೂ ಅವುಗಳಂತೆಯೇ ಮಾಡುವೆನು. ಒಬ್ಬನು ಪಾತ್ರೆಯನ್ನು ಉಜ್ಜಿ ತಲೆ ಕೆಳಗಾಗಿ ಇಡುವಂತೆ ನಾನು ಜೆರುಸಲೇಮನ್ನು ಉಜ್ಜಿ ತಲೆ ಕೆಳಗಾಗಿ ಮಾಡುವೆನು.


ಭುವಿ ಬಾಯ್ದೆರೆದು ನುಂಗಿತು ಹಗೆಗಳನು ನೀ ನಿನ್ನ ಬಲಗೈಯನ್ನು ಚಾಚಲು.


ಸರ್ವೇಶ್ವರನಾದ ನನ್ನ ಈ ಮಾತುಗಳನ್ನು ಕೇಳು : ನೀನು ನನ್ನನ್ನು ಅಲ್ಲಗಳೆದು ನನಗೆ ವಿಮುಖಳಾಗಿರುವೆ. ಆದಕಾರಣ ನಿನ್ನನ್ನು ನಾಶಮಾಡಲು ಕೈಯೆತ್ತಿರುವೆ ನಿನ್ನನ್ನು ಕ್ಷಮಿಸಿ ಕ್ಷಮಿಸಿ ಸಾಕಾಗಿದೆ ನನಗೆ.


ನಾನು ಅವರ ವಿರುದ್ಧ ಕೈಯೆತ್ತಿ ಅವರು ವಾಸವಾಗಿರುವ ದೇಶವನ್ನೆಲ್ಲಾ ಮರುಭೂಮಿಯಿಂದ ದಿಬ್ಬದವರೆಗೂ ಹಾಳುಪಾಳು ಮಾಡುವೆನು; ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”


ಆದುದರಿಂದ ಇಗೋ, ನಾನು ನಿನ್ನ ಮೇಲೆ ಕೈಯೆತ್ತಿ ಸುಲಿಗೆಗಾಗಿ ನಿನ್ನನ್ನು ಮ್ಲೇಚ್ಛರಿಗೆ ವಶಪಡಿಸುವೆನು. ಜನಾಂಗಗಳಿಂದ ಕಿತ್ತು, ದೇಶಗಳಿಂದ ನಿನ್ನ ಹೆಸರನ್ನು ಅಳಿಸಿ ನಿನ್ನನ್ನು ಹಾಳುಮಾಡುವೆನು; ಆಗ ನಾನೇ ಸರ್ವೇಶ್ವರ ಎಂದು ನಿನಗೆ ಗೊತ್ತಾಗುವುದು.”


ಸರ್ವೇಶ್ವರ ಅವರಿಗೆ ಭಯಭೀತಿ ಉಂಟುಮಾಡುವರು; ಅವರ ಭೂಮಿಯಲ್ಲಿನ ದೇವತೆಗಳನ್ನೆಲ್ಲಾ ಕ್ಷಯಿಸಿಬಿಡುವರು; ಅದಾದ ನಂತರ ಪ್ರತಿಯೊಂದು ರಾಷ್ಟ್ರದವರು ತಮ್ಮ ತಮ್ಮ ನಾಡಿನಲ್ಲೇ ಸರ್ವೇಶ್ವರಸ್ವಾಮಿಯನ್ನು ಆರಾಧಿಸುವರು.


ಅಸ್ಸೀರಿಯವನ್ನು ಸರ್ವೇಶ್ವರ ತಮ್ಮ ಭುಜಬಲದಿಂದ ಧ್ವಂಸಮಾಡುವರು; ನಿನೆವೆ ಪಟ್ಟಣವನ್ನು ಹಾಳುಬಿದ್ದ ಅವಶೇಷವಾಗಿ, ನೀರಿಲ್ಲದ ಮರುಭೂಮಿಯಾಗಿ ಮಾಡುವರು.


ಇದಲ್ಲದೆ ಜುದೇಯದ ಅರಸರು ದೇವಸ್ಥಾನದ ಮಾಳಿಗೆಯ ಮೇಲೆ ಆಹಾಜನ ಉಪ್ಪರಿಗೆಯ ಹತ್ತಿರ ಕಟ್ಟಿಸಿದ್ದ ಬಲಿಪೀಠಗಳನ್ನು ಹಾಗು ಮನಸ್ಸೆಯು ಸರ್ವೇಶ್ವರನ ಆಲಯದ ಎರಡು ಪ್ರಾಕಾರಗಳಲ್ಲಿ ಕಟ್ಟಿಸಿದ್ದ ಬಲಿಪೀಠಗಳನ್ನು ಕೆಡವಿ ಪುಡಿಪುಡಿಮಾಡಿ ಅವುಗಳ ಧೂಳನ್ನು ಕಿದ್ರೋನ್ ಹಳ್ಳದಲ್ಲಿ ಹಾಕಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು