Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 2:5 - ಕನ್ನಡ ಸತ್ಯವೇದವು C.L. Bible (BSI)

5 ಕರಾವಳಿಯಲ್ಲಿ ವಾಸಿಸುವ ಕೆರೇತ್ಯ ಜನರೇ, ನಿಮಗೆ ಧಿಕ್ಕಾರ! ಫಿಲಿಷ್ಟಿಯರ ನಾಡಾದ ಕಾನಾನೇ, ನಿನಗೆ ಧಿಕ್ಕಾರ! ಸರ್ವೇಶ್ವರನ ನ್ಯಾಯತೀರ್ಪು ನಿನಗೆ ವಿರುದ್ಧವಾಗಿದೆ; ನಿನ್ನಲ್ಲಿ ಯಾರೂ ಉಳಿಯದಂತೆ ಅಳಿಸಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅಯ್ಯೋ, ಕರಾವಳಿಯಲ್ಲಿ ವಾಸಿಸುವ ಕೆರೇತ್ಯ ಜನಾಂಗವೇ, ನಿನ್ನ ಗತಿಯನ್ನು ಏನು ಹೇಳಲಿ! ಕಾನಾನೇ, ಫಿಲಿಷ್ಟಿಯ ದೇಶವೇ, ಯೆಹೋವನ ನುಡಿಯು ನಿನಗೆ ವಿರುದ್ಧವಾಗಿದೆ; ನಿನ್ನಲ್ಲಿ ವಾಸಿಸುವ ಜನರೇ ನಿಲ್ಲದಂತೆ ನಿನ್ನನ್ನು ನಾಶಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅಯ್ಯೋ, ಕರಾವಳಿಯಲ್ಲಿ ವಾಸಿಸುವ ಕೆರೇತ್ಯ ಜನಾಂಗವೇ, ನಿನ್ನ ಗತಿಯನ್ನು ಏನು ಹೇಳಲಿ! ಕಾನಾನೇ, ಫಿಲಿಷ್ಟಿಯ ದೇಶವೇ, ಯೆಹೋವನ ನುಡಿಯು ನಿನಗೆ ವಿರುದ್ಧವಾಗಿದೆ; ನಿನ್ನಲ್ಲಿ ನಿವಾಸಿಯೇ ನಿಲ್ಲದಂತೆ ನಿನ್ನನ್ನು ನಾಶಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಫಿಲಿಷ್ಟಿಯ ಜನರೇ, ಕರಾವಳಿ ಪ್ರದೇಶದಲ್ಲಿ ವಾಸಿಸುವ ಜನರೇ, ಯೆಹೋವನಿಂದ ಬಂದ ಸಂದೇಶ ನಿಮಗಾಗಿಯೇ. ಕಾನಾನ್ ದೇಶವೇ, ಪಾಲೆಸ್ತೀನ್ ದೇಶವೇ, ನೀವು ನಾಶಗೊಳ್ಳುವಿರಿ. ನಿಮ್ಮಲ್ಲಿ ಯಾರೂ ವಾಸಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅಯ್ಯೋ, ಕರಾವಳಿಯಲ್ಲಿ ವಾಸಿಸುವ ಕೆರೇತ್ಯ ಜನಾಂಗವೇ, ನಿನ್ನ ಗತಿಯನ್ನು ಏನು ಹೇಳಲಿ! ಕಾನಾನೇ, ಫಿಲಿಷ್ಟಿಯ ದೇಶವೇ, ಯೆಹೋವ ದೇವರ ವಾಕ್ಯವು ನಿನಗೆ ವಿರುದ್ಧವಾಗಿದೆ, “ನಿನ್ನಲ್ಲಿ ನಿವಾಸಿಯೇ ನಿಲ್ಲದಂತೆ ನಿನ್ನನ್ನು ನಾಶಮಾಡುವೆನು,” ಎಂದು ಅವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 2:5
14 ತಿಳಿವುಗಳ ಹೋಲಿಕೆ  

ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಗೋ, ನಾನು ಫಿಲಿಷ್ಟಿಯರ ಮೇಲೆ ಕೈಯೆತ್ತುವೆನು; ಕೆರೇತಿಯರನ್ನು ಕತ್ತರಿಸಿಬಿಟ್ಟು, ಸಮುದ್ರತೀರದಲ್ಲಿನ ಜನಶೇಷವನ್ನು ನಿಶ್ಶೇಷಮಾಡುವೆನು;


ಆ ಖಡ್ಗ ವಿಶ್ರಾಂತಿಗೊಳ್ಳುವುದು ಹೇಗೆ? ಅದಕ್ಕೆ ಸರ್ವೇಶ್ವರನೇ ಆಜ್ಞಾಪಿಸಿದ್ದಾನಲ್ಲವೇ? ಅಷ್ಕೆಲೋನಿನ ಹಾಗು ಕರಾವಳಿಯವರೆಗೆ ಅದಕ್ಕೆ ಕೆಲಸ ವಿಧಿಸಿದ್ದಾನಲ್ಲವೆ?”


ಇಸ್ರಯೇಲಿನ ಜನರೇ, ಕಿವಿಗೊಡಿ. ಈಜಿಪ್ಟ್ ದೇಶದಿಂದ ನಿಮ್ಮನ್ನು ಬಿಡುಗಡೆಮಾಡಿ ಕರೆತಂದ ಸರ್ವೆಶ್ವರ ನಿಮ್ಮ ವಿರುದ್ಧವಾಗಿ ನುಡಿಯುವ ಮಾತುಗಳನ್ನು ಆಲಿಸಿರಿ:


ತಮ್ಮನ್ನು ಕುರಿತೇ ಈ ಸಾಮತಿಯನ್ನು ಹೇಳುತ್ತಿದ್ದಾರೆಂದು ಅರ್ಥಮಾಡಿಕೊಂಡ ಆ ಯೆಹೂದ್ಯ ಮುಖಂಡರು ಯೇಸುವನ್ನು ಹಿಡಿದು ಬಂಧಿಸಲು ಯತ್ನಿಸಿದರು. ಆದರೆ ಜನಸಮೂಹಕ್ಕೆ ಭಯಪಟ್ಟು ಅವರನ್ನು ಬಿಟ್ಟುಹೋದರು.


ಆದರೂ ನನ್ನ ದಾಸರಾದ ಪ್ರವಾದಿಗಳಿಗೆ ನಾನು ಕೊಟ್ಟ ಆಜ್ಞೆಗಳು, ವಿಧಿನಿಯಮಗಳು ನಿಮ್ಮ ಪಿತೃಗಳ ಮರಣದ ನಂತರವೂ ಶಾಶ್ವತವಾಗಿ ಉಳಿದಿವೆಯಲ್ಲವೆ? ಅವರು ಪಶ್ಚಾತ್ತಾಪಪಟ್ಟು, ‘ಸೇನಾಧೀಶ್ವರ ಸರ್ವೇಶ್ವರ ನಮ್ಮ ದುರ್ಮಾರ್ಗ ಹಾಗೂ ದುಷ್ಕೃತ್ಯಗಳಿಗೆ ತಕ್ಕಂತೆ ಏನು ಮಾಡಬೇಕೆಂದು ಸಂಕಲ್ಪಿಸಿದ್ದರೋ, ಅದನ್ನು ನಮಗೆ ಮಾಡಿಯೇ ಮಾಡಿದ್ದಾರೆ’ ಎಂದು ಹೇಳಿಕೊಂಡರಲ್ಲವೆ?”


ಸರ್ವೇಶ್ವರ ಇಂತೆನ್ನುತ್ತಾರೆ: “ನಾನು ರಾಷ್ಟ್ರಗಳನ್ನು ಧ್ವಂಸಮಾಡಿದ್ದೇನೆ. ಅವುಗಳ ಕೋಟೆಕೊತ್ತಲಗಳು ಪಾಳುಬಿದ್ದಿವೆ. ಅವುಗಳ ಹಾದಿಬೀದಿಗಳನ್ನು ನಿರ್ಜನವಾಗಿಸಿದ್ದೇನೆ. ಯಾರೂ ಅವುಗಳಲ್ಲಿ ಹಾದುಹೋಗುವಂತಿಲ್ಲ. ಅವರ ಪಟ್ಟಣಗಳು ನಾಶವಾಗಿವೆ; ನಿರ್ನಿವಾಸವಾಗಿ ಶೂನ್ಯವಾಗಿವೆ.


ಇಸ್ರಯೇಲಿನ ಜನರೇ, ನಿಮ್ಮನ್ನು ಕುರಿತು ನಾನು ಹಾಡುವ ಈ ಶೋಕಗೀತೆಯನ್ನು ಕೇಳಿ:


ಪೋಷಣೆ ಪಡೆಯುವರು ದೀನದಲಿತರು, ನಿರ್ಭಯದಿಂದ ನಿದ್ರಿಸುವರು ದಿಕ್ಕಿಲ್ಲದವರು. ನಿನ್ನ ಸಂತಾನದವರಾದರೋ ಸಾಯುವರು ಕ್ಷಾಮದಿಂದ, ಅಳಿದುಳಿದವರು ಹತರಾಗುವರು ಆ ಘಟಸರ್ಪದಿಂದ.


ಐದುಮಂದಿ ಫಿಲಿಷ್ಟಿಯ ಪ್ರಭುಗಳು, ಸರ್ವಕಾನಾನ್ಯರು, ಸಿದೋನ್ಯರು, ಲೆಬನೋನ್ ಪರ್ವತದಲ್ಲಿ ಬಾಳ್ ಹೆರ್ಮೋನ್ ಬೆಟ್ಟದಿಂದ ಹಮಾತಿನ ದಾರಿಯವರೆಗೆ ವಾಸವಾಗಿರುವ ಹಿವ್ವಿಯರು.


ಕೆರೇತ್ಯರೂ ಯೆಹೂದ್ಯರೂ ಕಾಲೇಬ್ಯರೂ ಇರುವ ದಕ್ಷಿಣ ಪ್ರಾಂತ್ಯವನ್ನು ನಾವು ಸೂರೆಮಾಡಿ ಚಿಕ್ಲಗ್ ಊರನ್ನು ಸುಟ್ಟುಬಿಟ್ಟು ಬಂದೆವು,” ಎಂದು ಉತ್ತರಕೊಟ್ಟನು.


“ನಲಿಯದಿರಿ, ಎಲೈ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿಯಿತೆಂದು. ಹಾವು ಸತ್ತರೂ ಅದರ ಮೂಲದಿಂದ ಹುಟ್ಟುವುದು ಕ್ರೂರ ಕಾಳಿಂಗವು, ಅದರ ಮೊಟ್ಟೆಯಿಂದ ಹೊರಬರುವುದು ಹಾರುವ ಘಟಸರ್ಪವು.


ಆಗ ಪಟ್ಟಣದ ಸಂತೆಬೀದಿಗಳಲ್ಲಿ ವಾಸಮಾಡುವವರು ಅತ್ತು ಪ್ರಲಾಪಿಸಲಿ; ವ್ಯಾಪಾರಸ್ಥರೆಲ್ಲರೂ ಸತ್ತುಹೋಗಿರುವರು; ಅಕ್ಕಸಾಲಿಗರೆಲ್ಲರೂ ಕಣ್ಮರೆಯಾಗಿರುವರು.


ಅವು ಯಾವುವೆಂದರೆ - ಈಜಿಪ್ಟಿನ ಈಚೆಯಿರುವ ಶೀಹೋರ್ ನದಿಯಿಂದ ಕಾನಾನ್ಯರಿಗೆ ಸೇರಿದ ಉತ್ತರ ಮೇರೆಯಾದ ಎಕ್ರೋನಿನವರೆಗಿರುವ ಗಾಜಾ, ಅಷ್ಡೋದ್, ಅಷ್ಕೆಲೋನ್, ಗತೂರ್, ಎಕ್ರೋನ್ ಎಂಬ ನಗರಗಳ ಐದು ಮಂದಿ ಫಿಲಿಷ್ಟಿಯ ಪ್ರಭುಗಳ ಸ್ವಾಧೀನದಲ್ಲಿದ್ದಂಥ ಫಿಲಿಷ್ಟಿಯ ಪ್ರಾಂತ್ಯ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು