Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 3:3 - ಕನ್ನಡ ಸತ್ಯವೇದವು C.L. Bible (BSI)

3 ಅದರ ಪ್ರಮುಖರು ಗರ್ಜಿಸುವ ಸಿಂಹಗಳು. ಅದರ ನ್ಯಾಯಾಧಿಪತಿಗಳು ಹಸಿದ ತೋಳಗಳು. ಕಡಿಯುವುದಕ್ಕೆ ಎಲುಬನ್ನು ಕೂಡ ಮರುದಿನದವರೆಗೆ ಉಳಿಸವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರೊಳಗಿನ ಮುಖ್ಯಾಧಿಕಾರಿಗಳು ಗರ್ಜಿಸುವ ಸಿಂಹಗಳು; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳು; ಮರುದಿನ ಬೆಳಗ್ಗೆ ಕಡಿಯುವುದಕ್ಕೆ ಎಲುಬು ಸಹಾ ಬಿಡದ ಕ್ರೂರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅದರಲ್ಲಿನ ಮುಖ್ಯಾಧಿಕಾರಿಗಳು ಗರ್ಜಿಸುವ ಸಿಂಹಗಳು; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳು; ಮರುದಿನ ಕಡಿಯುವದಕ್ಕೆ ಎಲುಬು ಕೂಡಾ ವಿುಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಜೆರುಸಲೇಮಿನ ನಾಯಕರು ಗರ್ಜಿಸುವ ಸಿಂಹದಂತೆ ಇದ್ದಾರೆ, ಅವರ ನ್ಯಾಯಾಧಿಪತಿಗಳು ರಾತ್ರಿ ಕಾಲದಲ್ಲಿ ಕುರಿಗಳ ಮೇಲೆ ಬೀಳುವ ಹಸಿದ ತೋಳಗಳಂತಿದ್ದಾರೆ. ಬೆಳಗಾಗಲು, ಏನೂ ಉಳಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವಳ ಪ್ರಮುಖರು ಗರ್ಜಿಸುವ ಸಿಂಹಗಳು. ಅವಳ ನ್ಯಾಯಾಧಿಪತಿಗಳು ಸಂಜೆಯ ತೋಳಗಳು. ಕಡಿಯುವುದಕ್ಕೆ ಎಲುಬನ್ನು ಕೂಡ ಮರುದಿನದವರೆಗೆ ಉಳಿಸವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 3:3
15 ತಿಳಿವುಗಳ ಹೋಲಿಕೆ  

“ಅವರ ಕುದುರೆಗಳು ಚಿರತೆಗಳಿಗಿಂತ ಬಿರುಸು; ಹಸಿದ ತೋಳಗಳಿಗಿಂತ ಚುರುಕು. ಅವರ ರಾಹುತರು ರಭಸದಿಂದ ಹಾರಿಬರುವರು. ಬೇಟೆಯನ್ನು ಕಬಳಿಸಲು ಕಾತರದಿಂದ ಹಾರುವ ರಣಹದ್ದಿನಂತೆ ದೂರದಿಂದ ಧಾವಿಸಿಬರುವರು.


ಆದಕಾರಣ ಅಡವಿಯ ಸಿಂಹ ಅವರನ್ನು ಕೊಲ್ಲುವುದು ಕಾಡಿನ ತೋಳ ಕೊಳ್ಳೆಹೊಡೆಯುವುದು ಚಿರತೆ ಅವರ ಪಟ್ಟಣಗಳಿಗೆ ಹೊಂಚುಹಾಕುವುದು ಅಲ್ಲಿಂದ ಹೊರಬರುವ ಪ್ರತಿಯೊಬ್ಬನನ್ನು ಸೀಳುವುದು. ಅವರ ಅಪರಾಧಗಳೋ ಬಹಳ, ಅವರ ದ್ರೋಹಗಳೋ ಅಪಾರ !


ಇಗೋ, ಇಸ್ರಯೇಲಿನ ಅರಸರು ತಮ್ಮ ತಮ್ಮ ಶಕ್ತ್ಯಾನುಸಾರ ನಿನ್ನಲ್ಲಿ ರಕ್ತ ಸುರಿಸುತ್ತಲೇ ಇದ್ದಾರೆ.


ಆದರೆ ನಿನ್ನ ದೃಷ್ಟಿ, ನಿನ್ನ ಮನಸ್ಸು ನೆಲೆಗೊಂಡಿವೆ ದುರ್ಲಾಭದಲ್ಲಿ, ನಿರ್ದೋಷಿಯ ರಕ್ತ ಸುರಿಸುವುದರಲ್ಲಿ ದಬ್ಬಾಳಿಕೆಯಲ್ಲಿ, ಹಿಂಸಾಚಾರಗಳಲ್ಲಿ.”


ನಿನ್ನ ಅಧಿಪತಿಗಳೇ ದ್ರೋಹಿಗಳಾಗಿದ್ದಾರೆ, ಕಳ್ಳರ ಗೆಳೆಯರಾಗಿದ್ದಾರೆ. ಎಲ್ಲರೂ ಲಂಚಕೋರರಾಗಿದ್ದಾರೆ. ಕಪ್ಪಕಾಣಿಕೆಗಳಿಗೆ ಕೈಯೊಡ್ಡುತ್ತಾರೆ. ಆದರೆ ಅನಾಥರ ಪರವಾಗಿ ವಾದಿಸುವುದಿಲ್ಲ. ವಿಧವೆಯರ ವ್ಯಾಜ್ಯವನ್ನು ತೀರಿಸುವುದಿಲ್ಲ.


ದಲಿತರನ್ನಾಳುವ ದುರುಳರಾಜ ಗರ್ಜಿಸುವ ಸಿಂಹ, ಹುಡುಕಾಡುವ ಕರಡಿ.


ಗರ್ಜಿಸುತಿಹರು ಸೈನಿಕರು ಸಿಂಹದಂತೆ, ಆರ್ಭಟಿಸುತಿಹರವರು ಪ್ರಾಯದ ಸಿಂಹಗಳಂತೆ, ಗುರುಗುಟ್ಟುತಿಹರು ಬೇಟೆ ಹಿಡಿದ ಕೇಸರಿಯಂತೆ. ಅದನ್ನೆತ್ತಿಕೊಂಡು ಓಡುತಿಹರು, ಬಿಡಿಸುವರಾರೂ ಇಲ್ಲದಂತೆ.


ಜುದೇಯದ ಹಾಗು ಜೆರುಸಲೇಮಿನ ರಾಜ್ಯಾಧಿಕಾರಿಗಳು, ಕಂಚುಕಿಗಳು, ಯಾಜಕರು, ಸೀಳಿದ ಕರುವಿನ ಹೋಳುಗ಼ಳ ನಡುವೆ ಹಾದು ನನ್ನ ಮುಂದೆ ಒಪ್ಪಂದಮಾಡಿದರು. ಆದರೆ ಆ ಒಪ್ಪಂದಕ್ಕೆ ತದ್ವಿರುದ್ಧವಾಗಿ ನಡೆದಿದ್ದಾರೆ ನಾಡಿನ ಎಲ್ಲ ಜನರು.


ನೀವು ಕತ್ತಿ ಬಳಸುವುದರಲ್ಲೇ ನಿರತರಾಗಿದ್ದೀರಿ, ದುರಾಚಾರ ನಡೆಸುತ್ತೀರಿ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ನೆರೆಯವನ ಹೆಂಡತಿಯನ್ನು ಕೆಡಿಸುತ್ತಾನೆ; ನಿಮ್ಮಂಥವರು ದೇಶವನ್ನು ಅನುಭವಿಸಬಹುದೋ?’


“ಪ್ರವಾದಿಗಳು ಭ್ರಷ್ಟರು, ಯಾಜಕರೂ ಭ್ರಷ್ಟರು ! ನನ್ನಾಲಯದಲ್ಲೆ ಅವರು ನಡೆಸುವ ಕೆಟ್ಟತನವನ್ನು ನಾನು ಕಂಡಿರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು