Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 3:6 - ಕನ್ನಡ ಸತ್ಯವೇದವು C.L. Bible (BSI)

6 ಸರ್ವೇಶ್ವರ ಇಂತೆನ್ನುತ್ತಾರೆ: “ನಾನು ರಾಷ್ಟ್ರಗಳನ್ನು ಧ್ವಂಸಮಾಡಿದ್ದೇನೆ. ಅವುಗಳ ಕೋಟೆಕೊತ್ತಲಗಳು ಪಾಳುಬಿದ್ದಿವೆ. ಅವುಗಳ ಹಾದಿಬೀದಿಗಳನ್ನು ನಿರ್ಜನವಾಗಿಸಿದ್ದೇನೆ. ಯಾರೂ ಅವುಗಳಲ್ಲಿ ಹಾದುಹೋಗುವಂತಿಲ್ಲ. ಅವರ ಪಟ್ಟಣಗಳು ನಾಶವಾಗಿವೆ; ನಿರ್ನಿವಾಸವಾಗಿ ಶೂನ್ಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನು ಇಂತೆನ್ನುತ್ತಾನೆ, “ನಾನು ಜನಾಂಗಗಳನ್ನು ಧ್ವಂಸಪಡಿಸಿದ್ದೇನೆ, ಅವುಗಳ ಕೋಟೆ ಕೊತ್ತಲುಗಳು ಪಾಳು ಬಿದ್ದವು; ಅವುಗಳ ಬೀದಿಗಳನ್ನು ಹಾಳುಮಾಡಿದ್ದೇನೆ; ಯಾರೂ ಹಾದುಹೋಗರು; ಅವುಗಳ ಪಟ್ಟಣಗಳು ನಾಶವಾದವು, ಜನರೇ ಇಲ್ಲ, ನಿರ್ನಾಮವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 [ಯೆಹೋವನು ಇಂತೆನ್ನುತ್ತಾನೆ - ] ನಾನು ಜನಾಂಗಗಳನ್ನು ಧ್ವಂಸಪಡಿಸಿದ್ದೇನೆ, ಅವುಗಳ ಕೊತ್ತಲಗಳು ಪಾಳುಬಿದ್ದವು, ಅವುಗಳ ಬೀದಿಗಳನ್ನು ಹಾಳುಮಾಡಿದ್ದೇನೆ, ಯಾರೂ ಹಾದುಹೋಗರು; ಅವುಗಳ ಪಟ್ಟಣಗಳು ನಾಶವಾದವು, ಜನರೇ ಇಲ್ಲ, ನಿರ್ನಿವಾಸವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೇವರು ಹೀಗೆನ್ನುತ್ತಾನೆ, “ನಾನು ಇಡೀ ಜನಾಂಗಗಳನ್ನು ನಾಶಮಾಡಿದ್ದೇನೆ. ಅವರ ಬುರುಜುಗಳನ್ನು ನಾಶಮಾಡಿ, ಅವರ ರಸ್ತೆಗಳಲ್ಲಿ ಯಾರೂ ನಡೆಯದ ಹಾಗೆ ಮಾಡಿರುತ್ತೇನೆ. ಅವರ ನಗರಗಳು ನಿರ್ಜನವಾಗಿವೆ. ಯಾರೂ ಅಲ್ಲಿ ವಾಸಮಾಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ನಾನು ಜನಾಂಗಗಳನ್ನು ಕಡಿದು ಬಿಟ್ಟಿದ್ದೇನೆ. ಅವುಗಳ ಗೋಪುರಗಳು ಹಾಳಾಗಿವೆ. ಅವುಗಳ ಬೀದಿಗಳನ್ನು ಯಾರೂ ಹಾದುಹೋಗದ ಹಾಗೆ ಹಾಳುಮಾಡಿದ್ದೆನೆ. ಅವುಗಳ ಪಟ್ಟಣಗಳು ನಾಶವಾದವು. ಹೀಗೆ ಅಲ್ಲಿ ಯಾವನೂ ಇರುವುದಿಲ್ಲ; ಯಾವ ಮನುಷ್ಯನೂ ಅಲ್ಲಿ ವಾಸಿಸುವುದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 3:6
19 ತಿಳಿವುಗಳ ಹೋಲಿಕೆ  

ಈ ಘಟನೆಗಳು ನಮಗೆ ಎಚ್ಚರಿಕೆ ನೀಡುವ ನಿದರ್ಶನಗಳಾಗಿವೆ. ಅವರಂತೆ ನಾವು ಕೆಟ್ಟದಾದವುಗಳನ್ನು ಆಶಿಸಬಾರದು.


ಇದೆಲ್ಲ ಅವರಿಗೆ ಸಂಭವಿಸಿದುದು ಇತರರಿಗೆ ನಿದರ್ಶನವಾಗಿರಲೆಂದು. ಇವುಗಳನ್ನು ಬರೆದಿಟ್ಟಿರುವುದು, ಯುಗಾಂತ್ಯಕ್ಕೆ ಬಂದಿರುವ ನಮಗೆ ಮುನ್ನೆಚ್ಚರಿಕೆಯಾಗಿರಲೆಂದು.


ಕರಾವಳಿಯಲ್ಲಿ ವಾಸಿಸುವ ಕೆರೇತ್ಯ ಜನರೇ, ನಿಮಗೆ ಧಿಕ್ಕಾರ! ಫಿಲಿಷ್ಟಿಯರ ನಾಡಾದ ಕಾನಾನೇ, ನಿನಗೆ ಧಿಕ್ಕಾರ! ಸರ್ವೇಶ್ವರನ ನ್ಯಾಯತೀರ್ಪು ನಿನಗೆ ವಿರುದ್ಧವಾಗಿದೆ; ನಿನ್ನಲ್ಲಿ ಯಾರೂ ಉಳಿಯದಂತೆ ಅಳಿಸಿಬಿಡುವರು.


ಬಿರುಗಾಳಿಯಂತೆ ಅವರನ್ನು ಅಪರಿಚಿತ ಜನಾಂಗಗಳ ಮಧ್ಯೆ ತೂರಿ ಚದರಿಬಿಟ್ಟೆ; ಹಾಗೆ ಅವರು ಚದರಿಹೋದ ಮೇಲೆ ನಾಡು ಹಾಳಾಯಿತು. ಅಲ್ಲಿ ಯಾರೂ ಉಳಿಯದಂತಾಯಿತು. ಅವರ ನಿಮಿತ್ತ ಚೆಲುವ ನಾಡು ನಿರ್ಜನ ಪ್ರದೇಶವಾಯಿತು.”


ಆಗ ಸರ್ವೇಶ್ವರ ಸ್ವಾಮಿಯ ದೂತನು ಹೊರಟುಬಂದು ಅಸ್ಸೀರಿಯರ ಪಾಳೆಯದಲ್ಲಿ 185,000 ಮಂದಿ ಸೈನಿಕರನ್ನು ಮರಣಕ್ಕೆ ಈಡುಮಾಡಿದನು; ಬೆಳಿಗ್ಗೆ ಎದ್ದುನೋಡುವಾಗ ಅವರೆಲ್ಲರೂ ಹೆಣಗಳಾಗಿದ್ದರು.


ನಿಮ್ಮ ಪಟ್ಟಣಗಳನ್ನು ಹಾಳುಮಾಡುವೆನು; ನಿಮ್ಮ ದೇವಸ್ಥಾನಗಳನ್ನು ನೆಲಸಮ ಮಾಡುವೆನು; ನೀವು ಸಮರ್ಪಿಸುವ ಸುಗಂಧದ್ರವ್ಯಗಳ ಸುವಾಸನೆಯನ್ನು ನಾನು ಮೂಸಿಯೂ ನೋಡುವುದಿಲ್ಲ.


ಇಗೋ, ನಿಮ್ಮ ದೇವಾಲಯ ಬರಿದಾಗುವುದು, ಪಾಳು ಬೀಳುವುದು.


ಅದಕ್ಕೆ ನಾನು: “ಸ್ವಾಮಿ, ಈ ಪರಿಸ್ಥಿತಿ ಎಷ್ಟರ ತನಕ?” ಎಂದು ಕೇಳಿದೆನು. ಅದಕ್ಕೆ ಪ್ರತ್ಯುತ್ತರವಾಗಿ :


ವಿಶ್ವದ ಬಗ್ಗೆ ನಾ ಮಾಡಿರುವ ಯೋಜನೆಯಿದು, ರಾಷ್ಟ್ರಗಳನ್ನು ದಂಡಿಸಲೆತ್ತಿರುವ ಕೈಯಿದು".


ನಾನು : “ಈ ನಾಡು ಯಾರೂ ಹಾದುಹೋಗದಷ್ಟು ಹಾಳಾಗಿ ಕಾಡಿನಂತೆ ಸುಟ್ಟುಹೋದದ್ದು ಏಕೆ? ಈ ವಿಷಯವನ್ನು ಗ್ರಹಿಸತಕ್ಕ ಜ್ಞಾನಿ ಯಾರು? ಅದನ್ನು ಸರ್ವೇಶ್ವರನ ಬಾಯಿಂದಲೆ ಕೇಳಿ ತಿಳಿಸಬಲ್ಲವನಾರು?”


ನೋಡಿ, ಜೋರ್ಡನಿನಿಂದ ಪಶ್ಚಿಮ ಮಹಾ ಸಮುದ್ರದವರೆಗೂ ಇರುವ ಜನಾಂಗಗಳಲ್ಲಿ ಸತ್ತವರ ಹಾಗೂ ಉಳಿದವರ ನಾಡನ್ನು ನಿಮಗೆ ಸೊತ್ತಾಗಿ ಕೊಟ್ಟಿದ್ದೇನೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು