Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 1:13 - ಕನ್ನಡ ಸತ್ಯವೇದವು C.L. Bible (BSI)

13 ಆಗ ಸೂತ್ರಧಾರಿಯಾದ ದೂತನಿಗೆ ಸರ್ವೇಶ್ವರ ಕರುಣೆಯಿಂದ ಸದುತ್ತರ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನನ್ನೊಂದಿಗೆ ಮಾತನಾಡಿದ ದೂತನಿಗೆ, ಯೆಹೋವನು ಕರುಣೆ ಹಾಗೂ ಒಳ್ಳೆಯ ಮಾತುಗಳಿಂದ ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನನಗೆ ವಿವರಿಸುವ ದೂತನಿಗೆ ಯೆಹೋವನು ಕರುಣೆಯ ಒಳ್ಳೆಯ ಮಾತುಗಳಿಂದ ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಗ ನನ್ನೊಡನೆ ಮಾತಾಡುತ್ತಿದ್ದ ದೇವದೂತನಿಗೆ ಯೆಹೋವನು ಉತ್ತರಿಸಿ ಅವನನ್ನು ಒಳ್ಳೆಯ ಆದರಣೆಯ ಮಾತುಗಳಿಂದ ಸಂತೈಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ಯೆಹೋವ ದೇವರು ನನ್ನ ಸಂಗಡ ಮಾತನಾಡಿದ ದೂತನಿಗೆ ಒಳ್ಳೆಯ ಮಾತುಗಳಿಂದಲೂ, ಆದರಣೆಯ ಮಾತುಗಳಿಂದಲೂ ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 1:13
14 ತಿಳಿವುಗಳ ಹೋಲಿಕೆ  

“ಸರ್ವೇಶ್ವರ ಹೀಗೆನ್ನುತ್ತಾರೆ: ‘ಬಾಬಿಲೋನಿನ ರಾಜ್ಯ ಎಪ್ಪತ್ತು ವರ್ಷ ಪ್ರಬಲಿಸಿದ ಮೇಲೆ ನಾನು ನಿಮ್ಮನ್ನು ಸಂಧಿಸಿ ಈ ಸ್ಥಳಕ್ಕೆ ಮರಳಿ ಬರಮಾಡುವೆನು. ಈ ಶುಭವಾಕ್ಯವನ್ನು ನಿಮ್ಮ ಮೇಲ್ಮೆಗಾಗಿ ನೆರವೇರಿಸುವೆನು.


“ನಾಲ್ಕನೇ, ಐದನೇ, ಏಳನೇ ಮತ್ತು ಹತ್ತನೇ ತಿಂಗಳುಗಳ ಉಪವಾಸ ಇವು ಯೆಹೂದ್ಯ ವಂಶಕ್ಕೆ ವಿಶೇಷ ಹಬ್ಬದ ದಿನಗಳಾಗಿ ಮಾರ್ಪಟ್ಟು, ಜನರು ಹರ್ಷಿಸಿ ಆನಂದಿಸುವರು. ಇಂತಿರಲು ಸತ್ಯವನ್ನೂ ಸಮಾಧಾನವನ್ನೂ ಪ್ರೀತಿಸಿರಿ.”


ಅನಂತರ ಸೂತ್ರಧಾರಿಯಾದ ದೂತನು ಮತ್ತೆ ಬಂದು ನಿದ್ರೆ ಹತ್ತಿದವನಂತಿದ್ದ ನನ್ನನ್ನು ಎಚ್ಚರಗೊಳಿಸಿದನು.


ನಾನು, ‘ಸ್ವಾಮೀ, ಇದೆಲ್ಲ ಏನು?’ ಎಂದು ಕೇಳಿದೆ. ಅದಕ್ಕೆ ಸೂತ್ರಧಾರಿಯಾದ ದೂತನು ನನ್ನೊಡನೆ ಮಾತನಾಡುತ್ತಾ ‘ಇದು ಏನನ್ನು ಸೂಚಿಸುತ್ತದೆಂಬುದನ್ನು ನಿನಗೆ ತೋರಿಸುತ್ತೇನೆ’ ಎಂದು ಹೇಳಿದ.


“ಅವರ ವರ್ತನೆಯನ್ನು ನೋಡಿದ್ದೇನೆ. ಆದರೂ ಅವರನ್ನು ಸ್ವಸ್ಥಪಡಿಸುತ್ತೇನೆ. ಅವರಿಗೆ ದಾರಿತೋರಿಸುತ್ತಾ, ಅವರಿಗೂ ಅವರಿಗಾಗಿ ದುಃಖಿಸುವವರಿಗೂ ಸಾಂತ್ವನ ಸಂಭಾವನೆಯನ್ನು ಕೊಡುತ್ತೇನೆ.


ಇವರಲ್ಲಿ ಒಬ್ಬನು, ನದಿಯ ನೀರಿನ ಮೇಲ್ಗಡೆ ನಾರಿನ ಹೊದಿಕೆಯನ್ನು ಹೊದ್ದು ನಿಂತಿದ್ದ ದೂತನನ್ನು ನೋಡಿ, “ಈ ಆಶ್ಚರ್ಯಕಾರ್ಯಗಳು ನೆರವೇರಲು ಎಷ್ಟುಕಾಲ ಹಿಡಿಯುವುದು?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು