Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 1:14 - ಕನ್ನಡ ಸತ್ಯವೇದವು C.L. Bible (BSI)

14 ಮತ್ತು ಆ ದೂತ ಹೀಗೆಂದು ನನಗೆ ಅಪ್ಪಣೆಮಾಡಿದ: “ಇದನ್ನು ನೀನು ಸಾರಿ ಹೇಳಬೇಕು. ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ - ಜೆರುಸಲೇಮಿನ ಹಾಗೂ ಸಿಯೋನಿನ ಮೇಲೆ ನನಗೆ ತುಂಬ ಅಭಿಮಾನವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಆ ದೂತನು ನನಗೆ ಈ ಅಪ್ಪಣೆ ಮಾಡಿದನು, “ನೀನು ಹೀಗೆ ಸಾರಿ ಹೇಳಬೇಕು, ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಯೆರೂಸಲೇಮಿಗೂ, ಚೀಯೋನಿಗೂ ಅವಮಾನವಾಯಿತಲ್ಲಾ’ ಎಂದು ಬಹಳವಾಗಿ ಅಸಮಾಧಾನಗೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ಆ ದೂತನು ನನಗೆ ಈ ಅಪ್ಪಣೆಮಾಡಿದನು - ನೀನು ಹೀಗೆ ಸಾರು - ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಯೆರೂಸಲೇವಿುಗೂ ಚೀಯೋನಿಗೂ ಅವಮಾನವಾಯಿತಲ್ಲಾ ಎಂದು ಬಹಳವಾಗಿ ಕುದಿಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆಗ ಆ ದೂತನು ಜನರಿಗೆ ತಿಳಿಸಲು ಈ ವಿಷಯವನ್ನು ನನಗೆ ಹೇಳಿದನು: ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ, “ಜೆರುಸಲೇಮಿನ ಮೇಲೆಯೂ ಚೀಯೋನಿನ ಮೇಲೆಯೂ ನನಗೆ ಆಳವಾದ ಪ್ರೀತಿಯಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನನ್ನ ಸಂಗಡ ಮಾತನಾಡಿದ ದೂತನು ನನಗೆ, “ಇದನ್ನು ಸಾರಿ ಹೇಳು: ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಯೆರೂಸಲೇಮಿಗಾಗಿಯೂ, ಚೀಯೋನಿಗಾಗಿಯೂ ಮಹಾ ರೋಷವುಳ್ಳವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 1:14
19 ತಿಳಿವುಗಳ ಹೋಲಿಕೆ  

ಆಗ ಸರ್ವೇಶ್ವರ ತಮ್ಮ ದೇಶದ ಮೇಲೆ ಅಭಿಮಾನಗೊಂಡು, ತಮ್ಮ ಜನರಿಗೆ ಕರುಣೆತೋರಿ ಹೀಗೆಂದರು:


“ಮತ್ತೊಮ್ಮೆ ನೀನು ಹೀಗೆಂದು ಘೋಷಿಸು: ‘ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ. ಇನ್ನು ನನ್ನ ಪಟ್ಟಣದಲ್ಲಿ ಸಿರಿಸಂಪತ್ತು ತುಂಬಿತುಳುಕುವುದು. ಸರ್ವೇಶ್ವರ ಸಿಯೋನನ್ನು ಪುನಃ ಸಂತೈಸುವರು. ಜೆರುಸಲೇಮ್ ನಗರವನ್ನು ಪುನಃ ತನ್ನದಾಗಿ ಆರಿಸಿಕೊಳ್ಳುವರು’.”


ನಾನು, ‘ಸ್ವಾಮೀ, ಇದೆಲ್ಲ ಏನು?’ ಎಂದು ಕೇಳಿದೆ. ಅದಕ್ಕೆ ಸೂತ್ರಧಾರಿಯಾದ ದೂತನು ನನ್ನೊಡನೆ ಮಾತನಾಡುತ್ತಾ ‘ಇದು ಏನನ್ನು ಸೂಚಿಸುತ್ತದೆಂಬುದನ್ನು ನಿನಗೆ ತೋರಿಸುತ್ತೇನೆ’ ಎಂದು ಹೇಳಿದ.


ಆ ವಾಣಿ ಮತ್ತೆ ಕೇಳಿಸಿತು : ‘ಗಟ್ಟಿಯಾಗಿ ಕೂಗು’ ಎಂದಿತು ನಾನೇನೆಂದು ಕೂಗಲಿ ಎನ್ನಲು ಈ ಪರಿಯಾಗಿ ಉತ್ತರಿಸಿತು : “ನರಮಾನವರೆಲ್ಲ ಬರೀ ಹುಲ್ಲಿನಂತೆ ಅವರ ಸೊಬಗೆಲ್ಲಾ ಬಯಲಿನ ಕುಸುಮದಂತೆ.


ನಿಮ್ಮ ದೇವರು ಇಂತೆನ್ನುತ್ತಾರೆ : “ಸಂತೈಸಿ, ನನ್ನ ಜನರನ್ನು ಸಂತೈಸಿರಿ.


ಆಗ ಸೂತ್ರಧಾರಿಯಾದ ದೂತನಿಗೆ ಸರ್ವೇಶ್ವರ ಕರುಣೆಯಿಂದ ಸದುತ್ತರ ಕೊಟ್ಟರು.


ಸರ್ವೇಶ್ವರ ಸ್ವಗೌರವವನು ಕಾಪಾಡಿಕೊಳ್ಳುವ ದೇವರು ಮುಯ್ಯಿತೀರಿಸುವ, ಹೌದು, ಕಡುಕೋಪದಿಂದ ಮುಯ್ಯಿತೀರಿಸುವ ದೇವರು. ಸರ್ವೇಶ್ವರ ಮುಯ್ಯಿತೀರಿಸುತ್ತಾರೆ ತನ್ನ ವಿರೋಧಿಗಳಿಗೆ ದೀರ್ಘರೋಷವಿಡುತ್ತಾರೆ, ತಮ್ಮ ಶತ್ರುಗಳ ಮೇಲೆ.


“ಹೇಗೆ ತ್ಯಜಿಸಲಿ ಎಫ್ರಯಿಮೇ, ನಿನ್ನನು ಹೇಗೆ ಕೈಬಿಡಲಿ ಇಸ್ರಯೇಲೇ, ನಿನ್ನನು. ಹೇಗೆ ಈಡುಮಾಡಲಿ ದುರ್ಗತಿಗೆ ನಿನ್ನನು ಅದ್ಮದಂತೆ, ಹೇಗೆ ನಾಶಮಾಡಲಿ ನಿನ್ನನು ಚೆಬೋಯೀಮನಂತೆ?


ಸ್ವಾಮಿ ಸರ್ವೇಶ್ವರಾ, ಆಕಾಶದಿಂದ ನಮ್ಮನು ಈಕ್ಷಿಸಿನೋಡಿ; ಪರಿಶುದ್ಧವೂ ಪೂಜ್ಯವೂ ಆದ ನಿಮ್ಮ ನಿವಾಸದಿಂದ ವೀಕ್ಷಿಸಿನೋಡಿ. ನಿಮ್ಮ ಹುರುಪು ಉತ್ಸಾಹವೆಲ್ಲಿ? ನಿಮ್ಮ ಸಾಹಸಕಾರ್ಯಗಳು ಏನಾದುವು? ನಮ್ಮಿಂದ ಬಿಗಿಹಿಡಿದಿರುವಿರಾ ನಿಮ್ಮ ಕನಿಕರವನು? ನಿಮ್ಮ ಕರುಳ ಕರೆಯನು?


ಅವರು ನ್ಯಾಯನೀತಿಯನ್ನು ವಜ್ರಕವಚವನ್ನಾಗಿ ತೊಟ್ಟುಕೊಳ್ಳುವರು. ರಕ್ಷಣೆ ಎಂಬ ಶಿರಸ್ತ್ರಾಣವನ್ನು ಧರಿಸಕೊಳ್ಳುವರು. ಪ್ರತೀಕಾರವೆಂಬ ಉಡುಪನ್ನು ಉಟ್ಟುಕೊಳ್ಳುವರು. ಆಗ್ರಹ ಎಂಬ ನಿಲುವಂಗಿಯನ್ನು ಹಾಕಿಕೊಳ್ಳುವರು.


ಸರ್ವೇಶ್ವರ ಹೊರಟಿರುವನು ಶೂರನಂತೆ ರೌದ್ರದಿಂದಿರುವನು ಯುದ್ಧವೀರನಂತೆ ಆರ್ಭಟಿಸಿ ಗರ್ಜಿಸುವನು ರಣಕಹಳೆಯಂತೆ ಶತ್ರುಗಳ ಮೇಲೆ ಬೀಳುವನು ಪರಾಕ್ರಮಿಯಂತೆ.


ಹಿಜ್ಕೀಯನು, “ನಾನು ಗುಣಹೊಂದಿ ಸರ್ವೇಶ್ವರ ಸ್ವಾಮಿಯ ಆಲಯವನ್ನು ಸೇರುವೆನು ಎಂಬುದಕ್ಕೆ ಗುರುತೇನು?” ಎಂದು ಕೇಳಿದನು.


ಅಂತ್ಯವಿರದಾತನ ರಾಜ್ಯಾಭಿವೃದ್ಧಿಗೆ ಕೊನೆಯಿರದಾ ರಾಜ್ಯದ ಶಾಂತಿಗೆ. ಆಸೀನನಾಗುವನಾತ ದಾವೀದನ ಸಿಂಹಾಸನದ ಮೇಲೆ ಅಧಿಕಾರ ನಡೆಸುವನು ಆ ಸಾಮ್ರಾಜ್ಯದ ಮೇಲೆ. ಬಲಪಡಿಸುವನು ನ್ಯಾಯನೀತಿಯಿಂದದನು ಇಂದಿಗೂ ಎಂದೆಂದಿಗೂ ಸ್ಥಿರಪಡಿಸುವನದನು. ಸರ್ವಶಕ್ತಸ್ವಾಮಿಯ ಆಗ್ರಹವೆ ಸಾಧಿಸುವುದದನು.


ಅನಂತರ ಸೂತ್ರಧಾರಿಯಾದ ದೂತನು ಮತ್ತೆ ಬಂದು ನಿದ್ರೆ ಹತ್ತಿದವನಂತಿದ್ದ ನನ್ನನ್ನು ಎಚ್ಚರಗೊಳಿಸಿದನು.


ಆ ಅಳಿದುಳಿದವರು ಜೆರುಸಲೇಮಿನಲ್ಲೇ ಹರಡಿಕೊಳ್ಳುವರು, ಸಿಯೋನ್ ಪರ್ವತದಲ್ಲಿ ಅಭಿವೃದ್ಧಿಯಾಗುವರು, ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ಆಗ್ರಹವೇ ಇದನ್ನು ಸಾಧಿಸುವುದು.


ಜೆರುಸಲೇಮಿನೊಡನೆ ಪ್ರೀತಿಯಿಂದ ಮಾತನಾಡಿ; ಅದರ ಊಳಿಗತನ ಮುಗಿಯಿತೆನ್ನಿ; ತಕ್ಕ ಪ್ರಾಯಶ್ಚಿತ್ತವಾಗಿದೆ ಅದು ಗೈದ ದೋಷಕೆ ಸರ್ವೇಶ್ವರ ಸ್ವಾಮಿಯಿಂದಲೇ ಅದರ ಎಲ್ಲಾ ಪಾಪಕೃತ್ಯಗಳಿಗೆ ಇಮ್ಮಡಿ ಶಿಕ್ಷೆಯಾಗಿದೆ ಎಂದು ಕೂಗಿ ಹೇಳಿ ಆ ನಗರಿಗೆ.”


“ಆಹಾ, ನನ್ನ ದೇಶವನ್ನು ತಮ್ಮ ಸೊತ್ತಾಗಿ ಮಾಡಿಕೊಂಡು, ಪೂರ್ಣಹೃದಯದಿಂದ ಆನಂದಪಟ್ಟವರು ಹಾಗು ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ಸೂರೆಗೆ ತಳ್ಳಿಬಿಟ್ಟವರು ಆದ ಎದೋಮಿನವರೆಲ್ಲರನ್ನು ಮತ್ತು ಇತರ ಜನಾಂಗಗಳಲ್ಲಿ ಉಳಿದವರನ್ನು ನಾನು ರೋಷಾವೇಶದಿಂದ ಶಪಿಸಿಯೇ ಶಪಿಸಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು