Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 1:21 - ಕನ್ನಡ ಸತ್ಯವೇದವು C.L. Bible (BSI)

21 “ಇವರು ಏನು ಮಾಡುವುದಕ್ಕೆ ಬಂದಿದ್ದಾರೆ?” ಎಂದು ಕೇಳಿದಾಗ ಆತ: ಯೆಹೂದ್ಯರಲ್ಲಿ ಯಾರೂ ತಲೆಯೆತ್ತದಂತೆ ಅವುಗಳನ್ನು ಚದರಿಸುವ ಕೊಂಬುಗಳು ಅವು. ಇವರಾದರೆ ಜುದೇಯ ನಾಡನ್ನು ಚದರಿಸಬೇಕೆಂದು ತಲೆಯೆತ್ತಿದ ರಾಷ್ಟ್ರಗಳನ್ನೆ ಚದರಿಸಿ ಅವರ ಕೊಂಬುಗಳನ್ನು ಹೊಡೆದು ಕೆಡುವುವುದಕ್ಕೆ ಬಂದಿದ್ದಾರೆ,” ಎಂದು ಹೇಳಿದರು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆಗ ನಾನು, “ಇವರು ಏನು ಮಾಡುವುದಕ್ಕೆ ಬಂದಿದ್ದಾರೆ?” ಎಂದು ಕೇಳಲು ಅವನು, “ಈ ಕೊಂಬುಗಳು ಯೆಹೂದದವರಲ್ಲಿ ಯಾರೂ ತಲೆಯೆತ್ತದಂತೆ ಅವರನ್ನು ಚದುರಿಸಿವೆಯಷ್ಟೆ; ಇವರಾದರೋ ಯೆಹೂದ ದೇಶದವರನ್ನು ಚದುರಿಸಬೇಕೆಂದು ತಲೆಯೆತ್ತಿದ ಜನಾಂಗಗಳ ಕೊಂಬುಗಳನ್ನು ಹೆದರಿಸಿ ಕೆಡುವುದಕ್ಕೆ ಬಂದಿದ್ದಾರೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆಗ ನಾನು - ಇವರು ಏನು ಮಾಡುವದಕ್ಕೆ ಬಂದಿದ್ದಾರೆ ಎಂದು ಕೇಳಲು ಅವನು - ಈ ಕೊಂಬುಗಳು ಯೆಹೂದದವರಲ್ಲಿ ಯಾರೂ ತಲೆಯೆತ್ತದಂತೆ ಅವರನ್ನು ಚದರಿಸಿವೆಯಷ್ಟೆ; ಇವರಾದರೋ ಯೆಹೂದ ದೇಶದವರನ್ನು ಚದರಿಸಬೇಕೆಂದು ತಲೆಯೆತ್ತಿದ ಜನಾಂಗಗಳ ಕೊಂಬುಗಳನ್ನು ಹೆದರಿಸಿ ಕೆಡವುವದಕ್ಕೆ ಬಂದಿದ್ದಾರೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ಯಾವ ಕೆಲಸಕ್ಕಾಗಿ ಈ ಕೆಲಸಗಾರರು ಬರುತ್ತಿದ್ದಾರೆ?” ಎಂದು ನಾನು ವಿಚಾರಿಸಿದೆನು. ಅದಕ್ಕಾತನು, “ಯೆಹೂದದ ಜನರನ್ನು ವಿದೇಶಗಳಲ್ಲಿ ಚದರಿ ಹೋಗುವಂತೆ ಮಾಡಿದ ಜನಾಂಗಗಳನ್ನು ಈ ಕೊಂಬುಗಳು ಸೂಚಿಸುತ್ತವೆ. ಈ ಕೊಂಬುಗಳು ಯೆಹೂದದ ಜನರನ್ನು ಎತ್ತಿ ಪರದೇಶಗಳಿಗೆ ಬಿಸಾಡಿದವು. ಈ ಕೊಂಬುಗಳು ಯಾರಿಗೂ ದಯೆ ತೋರಿಸಲಿಲ್ಲ. ಆದರೆ ಈ ನಾಲ್ಕು ಮಂದಿ ಕೆಲಸಗಾರರು ಆ ಕೊಂಬುಗಳಿಗೆ ಭಯಪಡಿಸಿ ಅವುಗಳನ್ನು ಎತ್ತಿ ಬಿಸಾಡಲು ಬಂದಿದ್ದಾರೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಾನು, “ಇವರು ಏನು ಮಾಡುವುದಕ್ಕೆ ಬರುತ್ತಾರೆ?” ಎಂದೆನು. ಅದಕ್ಕೆ ಅವರು, “ಯೆಹೂದ್ಯರಲ್ಲಿ ಯಾರೂ ತಲೆಯೆತ್ತದಂತೆ ಅವುಗಳನ್ನು ಚದರಿಸುವ ಕೊಂಬುಗಳು ಅವು. ಆದರೆ ಇವರು ಯೆಹೂದ ದೇಶವನ್ನು ಚದರಿಸಬೇಕೆಂದು ತಲೆಯೆತ್ತಿದ ರಾಷ್ಟ್ರಗಳನ್ನೇ ಚದರಿಸಿ, ಅದರ ಕೊಂಬುಗಳನ್ನು ಕೆಡವಿ ಹಾಕುವುದಕ್ಕೆ ಬಂದಿದ್ದಾರೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 1:21
6 ತಿಳಿವುಗಳ ಹೋಲಿಕೆ  

“ಈ ಕೊಂಬುಗಳು ಏನನ್ನು ಸೂಚಿಸುತ್ತವೆ?” ಎಂದು ನಾನು ಕೇಳಿದಾಗ ಸೂತ್ರಧಾರಿಯಾದ ದೂತನು: ‘ಇವು ಜೂದ, ಇಸ್ರಯೇಲ್, ಮತ್ತು ಜೆರುಸಲೇಮಿನ ಪ್ರಜೆಗಳನ್ನು ಚದರಿಸಿಬಿಟ್ಟ ಕೊಂಬುಗಳು,’ ಎಂದನು.


ಸರ್ವೇಶ್ವರ ಸಿದ್ಧಿಗೆ ತಂದಿದ್ದಾನೆ ತನ್ನ ಸಂಕಲ್ಪವನ್ನು ಈಡೇರಿಸಿದ್ದಾನೆ ಪುರಾತನ ಕಾಲದಲ್ಲಿ ತಾನು ನುಡಿದುದನ್ನು. ನಿನ್ನನ್ನು ಧ್ವಂಸಮಾಡಿದ್ದಾನೆ ದಯೆದಾಕ್ಷಿಣ್ಯವಿಲ್ಲದೆ. ಆನಂದ ತಂದಿದ್ದಾನೆ ವೈರಿಗಳಿಗೆ ಕೋಡುಮೂಡಿಸಿದ್ದಾನೆ ವಿರೋಧಿಗಳಿಗೆ !


ಕತ್ತರಿಸುವನು ಕೆಡುಕರ ಕೋರೆಕೋಡುಗಳನು I ಎತ್ತರಿಸುವನು ಸಜ್ಜನರ ಕೋರೆಕೊಂಬುಗಳನು II


ಆ ದೂತ ಎಡಬಲಗೈಗಳನ್ನು ಆಕಾಶದ ಕಡೆಗೆ ಎತ್ತಿಕೊಂಡು, “ಶಾಶ್ವತ ಜೀವಸ್ವರೂಪನಾಣೆ, ಒಂದು ಯುಗ, ಎರಡು ಯುಗ, ಮತ್ತು ಅರ್ಧ ಯುಗ ಕಳೆಯಬೇಕು. ದೇವಜನರಿಗಾಗುವ ಹಿಂಸೆಬಾಧೆಗಳು ಸಂಪೂರ್ಣವಾಗಿ ನಿಂತಮೇಲೆ ಈ ಕಾರ್ಯಗಳೆಲ್ಲ ಮುಕ್ತಾಯವಾಗುವುವು,” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.


ದಂಗೆಯೆದ್ದಿಹರಿದೋ ನಿನ್ನ ಶತ್ರುಗಳು I ತಲೆಯೆತ್ತಿಕೊಂಡಿಹರು ನಿನ್ನ ದ್ವೇಷಿಗಳು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು