Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 1:8 - ಕನ್ನಡ ಸತ್ಯವೇದವು C.L. Bible (BSI)

8 ರಾತ್ರಿಯಲ್ಲಿ ನನಗೆ ಈ ದರ್ಶನವಾಯಿತು. ಇಗೋ, ಕೆಂಪು ಕುದುರೆಯನ್ನೇರಿದ್ದ ಒಬ್ಬ ವ್ಯಕ್ತಿ ತಗ್ಗಿನಲ್ಲಿರುವ ಸುಗಂಧ ವೃಕ್ಷಗಳ ನಡುವೆ ನಿಂತಿದ್ದಾನೆ. ಅವನ ಹಿಂದೆ ಕೆಂಪು, ನಸುಗೆಂಪು ಮತ್ತು ಬಿಳಿಯ ಕುದುರೆಗಳಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ರಾತ್ರಿಯಲ್ಲಿ ನನಗೆ ದರ್ಶನವಾಯಿತು. ಇಗೋ, ಕೆಂಪು ಕುದುರೆಯನ್ನು ಹತ್ತಿದ ಒಬ್ಬ ಪುರುಷನು ತಗ್ಗಿನಲ್ಲಿರುವ ಸುಗಂಧವೃಕ್ಷಗಳ ನಡುವೆ ನಿಂತಿದ್ದನು; ಅವನ ಹಿಂದೆ ಕೆಂಪು, ಕಂದು, ಬಿಳಿ ಕುದುರೆಗಳು ಮತ್ತು ಅವರ ಸವಾರರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ರಾತ್ರಿಯಲ್ಲಿ ನನಗೆ ದರ್ಶನವಾಯಿತು - ಇಗೋ, ಕೆಂಪು ಕುದುರೆಯನ್ನು ಹತ್ತಿದ ಒಬ್ಬ ಪುರುಷನು ತಗ್ಗಿನಲ್ಲಿರುವ ಸುಗಂಧ ವೃಕ್ಷಗಳ ನಡುವೆ ನಿಂತಿದ್ದನು; ಅವನ ಹಿಂದೆ ಕೆಂಪು ಕಪಿಲ ಬಿಳಿ ಕುದುರೆಗಳನ್ನು ಹತ್ತಿದವರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ರಾತ್ರಿವೇಳೆಯಲ್ಲಿ ಒಬ್ಬ ಮನುಷ್ಯನು ಕೆಂಪು ಬಣ್ಣದ ಕುದುರೆಯ ಮೇಲೆ ಸವಾರಿ ಮಾಡುವದನ್ನು ಕಂಡೆನು. ಅವನು ಕಣಿವೆಯ ಸುಗಂಧ ಮರಗಳ ಬಳಿ ನಿಂತಿದ್ದನು. ಅವನ ಹಿಂದೆ ಕೆಂಪು, ಕಂದು ಮತ್ತು ಬಿಳಿ ಕುದುರೆಗಳು ನಿಂತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ರಾತ್ರಿಯಲ್ಲಿ ನನಗೆ ದರ್ಶನವಾಯಿತು. ಕೆಂಪು ಕುದುರೆಯ ಮೇಲೆ ಸವಾರಿ ಮಾಡುವ ಒಬ್ಬನು, ತಗ್ಗಿನಲ್ಲಿದ್ದ ಗಂಧದ ಗಿಡಗಳ ನಡುವೆ ನಿಂತಿದ್ದನು. ಅವನ ಹಿಂದೆ ಕೆಂಪು, ಕಂದು ಬಣ್ಣದ ಹಾಗು ಬಿಳಿಯ ಕುದುರೆಗಳು ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 1:8
26 ತಿಳಿವುಗಳ ಹೋಲಿಕೆ  

ಆಗ ಕೆಂಪು ಕುದುರೆ ಒಂದು ಹೊರಟುಬಂದಿತು. ಅದರ ಮೇಲೆ ಒಬ್ಬನು ಕುಳಿತಿದ್ದನು. ವಿಶ್ವದಲ್ಲಿ ಶಾಂತಿಯನ್ನು ಅಳಿಸಿಹಾಕಿ ಲೋಕದ ಜನರು ಒಬ್ಬರನ್ನೊಬ್ಬರು ಕೊಲ್ಲುವಂತೆ ಮಾಡುವ ಅಧಿಕಾರವನ್ನು ಅವನಿಗೆ ಕೊಡಲಾಗಿತ್ತು. ಇದಲ್ಲದೆ, ಅವನಿಗೆ ದೊಡ್ಡ ಖಡ್ಗವನ್ನೂ ಸಹ ಕೊಡಲಾಗಿತ್ತು.


“ಎಫೆಸದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡಿದಿರುವಾತನೂ ಏಳು ಚಿನ್ನದ ದೀಪಸ್ತಂಭಗಳ ನಡುವೆ ನಡೆದಾಡುವಾತನೂ ನೀಡುವ ಸಂದೇಶವಿದು:


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ನನ್ನ ಕುರಿಗಾಹಿಗೆ ವಿರುದ್ಧವಾಗಿ, ನನ್ನಾಸಂಗಡಿಗನಿಗೆದುರಾಗಿ, ಓ ಖಡ್ಗವೇ, ಎಚ್ಚರಗೊಳ್ಳು; ಕೊಲ್ಲು ಕುರಿಗಾಹಿಯನು. ಆಗ ಚದರುವುವು ಕುರಿಗಳು, ಕೈಮಾಡಲಿರುವೆ ಮರಿಗಳ ಮೇಲೂ.


ಬೆಳೆಯುವುದು ಮುಳ್ಳಿಗೆ ಬದಲಾಗಿ ದೇವದಾರು, ದತ್ತೂರಿಗೆ ಪ್ರತಿಯಾಗಿ ಸುಗಂಧದ ಮರವು. ಉಳಿದಿರುತ್ತದೆ ಆ ವನವು ಶಾಶ್ವತ ಗುರುತಾಗಿ ಸರ್ವೇಶ್ವರ ಸ್ವಾಮಿಯ ನಾಮಸ್ಮರಣೆಗಾಗಿ.”


ನೆಡುವೆನು ಅಡವಿಯಲ್ಲಿ ದೇವದಾರು ಕಸ್ತೂರಿ, ಜಾಲಿ, ಸುಗಂಧ ಓಲೀವ್ ಮರಗಳನು; ತೋಪಾಗಿ ಬೆಳೆಸುವೆನು ಅರಣ್ಯದೊಳು ತುರಾಯಿ, ತಪಸಿ, ತಿಲಕ ವೃಕ್ಷಗಳನು.


ನಾನು ಕಂಡ ರಾತ್ರಿಯ ಕನಸಿನಲ್ಲಿ ನರಪುತ್ರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಸನ್ನಿಧಿಗೆ ತಂದರು.


ಅದರ ಸಾರಾಂಶ ಇದು: ನಾನು ರಾತ್ರಿ ಕಂಡ ಕನಸಿನಲ್ಲಿ ನಾಲ್ಕು ದಿಕ್ಕುಗಳಿಂದಲೂ ಗಾಳಿ ಮಹಾಸಾಗರದ ಮೇಲೆ ರಭಸವಾಗಿ ಬೀಸಿ ಬಡಿಯುತ್ತಿತ್ತು.


ಆ ರಾತ್ರಿಯೇ ಸ್ವಪ್ನದಲ್ಲಿ ಕನಸಿನ ಗುಟ್ಟು ದಾನಿಯೇಲನಿಗೆ ವ್ಯಕ್ತವಾಯಿತು. ಕೂಡಲೆ ಆತನು ಪರಲೋಕ ದೇವರನ್ನು ಹೀಗೆಂದು ಸ್ತುತಿಸಿದನು:


“ಪರಮ ಪವಿತ್ರನ, ಶಾಶ್ವತ ಲೋಕದ ನಿತ್ಯನಿವಾಸಿಯಾದ ಮಹೋನ್ನತನ ಮಾತಿದು : ಉನ್ನತವಾದ ಪವಿತ್ರಾಲಯದಲ್ಲಿ ವಾಸಿಸುವವನು ನಾನು; ಆದರೂ ಪಶ್ಚಾತ್ತಾಪಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ಜನರಿಗೆ ಗಾಢನಿದ್ರೆ ಹತ್ತುವ ಹೊತ್ತಿನಲಿ ರಾತ್ರಿಕಾಲದ ಸ್ವಪ್ನಯೋಚನೆಗಳ ಸುಳಿಯಲಿ


ದೇವರಾದ ಸರ್ವೇಶ್ವರ ಆ ರಾತ್ರಿ ಕನಸಿನಲ್ಲಿ ಅವನಿಗೆ ಕಾಣಿಸಿಕೊಂಡರು; “ನಿನಗೆ ಯಾವ ವರಬೇಕು ಕೇಳಿಕೋ,” ಎಂದು ಹೇಳಿದರು.


ಯೆಹೋಶುವನು ಜೆರಿಕೋವಿಗೆ ಹತ್ತಿರವಿದ್ದಾಗ, ಒಮ್ಮೆ ಕಣ್ಣೆತ್ತಿ ನೋಡಿದನು. ಇಗೋ, ಒಬ್ಬ ವ್ಯಕ್ತಿ ಕಾಣಿಸಿಕೊಂಡನು. ಹಿರಿದ ಕತ್ತಿಯನ್ನು ಕೈಯಲ್ಲಿ ಹಿಡಿದು ನಿಂತಿದ್ದನು. ಯೆಹೋಶುವ ಅವನನ್ನು ಸಮೀಪಿಸಿ, “ನೀನು ನಮ್ಮವನೋ ಅಥವಾ ಶತ್ರು ಕಡೆಯವನೋ?” ಎಂದು ಕೇಳಿದನು.


ಆದರೆ ದೇವರು ಅಬೀಮೆಲೆಕನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ನೀನು ಆ ಮಹಿಳೆಯನ್ನು ಸೇರಿಸಿಕೊಂಡ ಕಾರಣ ಸಾಯತಕ್ಕವನು, ಆಕೆಗೆ ಗಂಡನಿದ್ದಾನೆ,” ಎಂದರು.


ನನ್ನ ಕಾಂತನು ತೆರಳಿಹನು ಸುಗಂಧ ಸಸ್ಯಗಳಿರುವ ತೋಟಕೆ ಉದ್ಯಾನಗಳಲ್ಲಿ ಮಂದೆಯನು ಮೇಯಿಸುವುದಕೆ ಅಲ್ಲಿನ ನೆಲದಾವರೆಗಳನ್ನು ಕೊಯ್ದು ತರುವುದಕೆ.


ನನ್ನ ಇನಿಯನು ನನ್ನವನೇ, ನಾನು ಅವನವಳೇ ಮೇಯುತಿದೆ ಅವನ ಮಂದೆ ನೆಲದಾವರೆಗಳ ನಡುವೆ.


ಆಗ ಬಿಳಿಯ ಕುದುರೆಯೊಂದು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಕೈಯಲ್ಲಿ ಬಿಲ್ಲೊಂದು ಇತ್ತು. ಅವನಿಗೆ ಜಯಮಾಲೆಯನ್ನು ಹಾಕಲಾಗಿತ್ತು. ಅವನು ಜಯಪ್ರದನಾಗಿ, ಜಯದ ಮೇಲೆ ಜಯಗಳಿಸುವ ಸಲುವಾಗಿ ಹೊರಟುಹೋದನು.


ಈ ನಿಯಮದ ಪ್ರಕಾರ ಆ ಪರ್ಣಕುಟೀರ ನಿರ್ಮಾಣಕ್ಕಾಗಿ ಜನರು ಗುಡ್ಡಕ್ಕೆ ಹೋಗಿ, ಒಲೀವ, ಕಾಡು ಓಲೀವ್, ಸುಗಂಧ, ಖರ್ಜೂರ ಮುಂತಾದ ಮರಗಳ ದಟ್ಟವಾದ ಎಲೆಗಳುಳ್ಳ ಕೊಂಬೆಗಳನ್ನು ತರಬೇಕಾಗಿತ್ತು. ‘ಇದಕ್ಕಾಗಿ ಅವರ ಎಲ್ಲ ಪಟ್ಟಣಗಳಲ್ಲಿಯು ಹಾಗು ಜೆರುಸಲೇಮಿನಲ್ಲಿಯು ಡಂಗುರದಿಂದ ಪ್ರಕಟಿಸಬೇಕು’ ಎಂಬುದಾಗಿ ಬರೆದಿರುವ ಶಾಸನವೊಂದು ಮೋಶೆಗೆ ಸರ್ವೇಶ್ವರನಿಂದ ದೊರಕಿದ ಧರ್ಮಶಾಸ್ತ್ರದಲ್ಲಿ ಸಿಕ್ಕಿತು.


ಡೇರಿಯಸನ ಆಳ್ವಿಕೆಯ ಎರಡನೇ ವರ್ಷದ ಹನ್ನೊಂದನೆಯ ತಿಂಗಳಿನ (ಅಂದರೆ ಶೆಬಾತ್ ತಿಂಗಳಿನ) ಇಪ್ಪತ್ತನಾಲ್ಕನೆಯ ದಿನದಲ್ಲಿ ಇದ್ದೋವಿನ ಮೊಮ್ಮಗನೂ ಬೆರೆಕ್ಯನ ಮಗನೂ ಆದ ಜೆಕರ್ಯನೆಂಬ ಪ್ರವಾದಿಗೆ ಸರ್ವೇಶ್ವರ ಕೊಟ್ಟ ದರ್ಶನವಿದು:


ಕೂಡಲೆ ಸುಗಂಧ ವೃಕ್ಷಗಳ ನಡುವೆ ಇದ್ದವನು: “ಇವರು ಲೋಕದ ವೀಕ್ಷಣಾರ್ಥವಾಗಿ ದೇವರಿಂದ ಕಳುಹಿಸಲ್ಪಟ್ಟವರು” ಎಂದು ಉತ್ತರಕೊಟ್ಟ.


ಆಗ ಅವರು ವೃಕ್ಷಗಳ ನಡುವೆ ನಿಂತಿದ್ದ ದೇವದೂತನಿಗೆ “ನಾವು ಲೋಕವನ್ನೆಲ್ಲ ವೀಕ್ಷಿಸಿಬಂದಿದ್ದೇವೆ. ಅದು ನಿಶ್ಚಿಂತೆಯಿಂದ ನೆಮ್ಮದಿಯಾಗಿದೆ,” ಎಂದು ವರದಿ ಮಾಡಿದರು.


ಆ ರಾತ್ರಿ ದೇವರು ಯಕೋಬನಿಗೆ ದರ್ಶನವಿತ್ತು, “ಯಕೋಬನೇ, ಯಕೋಬನೇ,” ಎಂದು ಕರೆಯಲು, ಅವನು, "ಇಗೋ, ಸಿದ್ಧನಿದ್ದೇನೆ,” ಎಂದನು.


ಅವರು ಸಮೀಪಿಸಿದಾಗ, “ನನ್ನ ಮಾತಿಗೆ ಕಿವಿಗೊಡಿ ನಿಮ್ಮಲ್ಲಿ ಪ್ರವಾದಿಯಿದ್ದರೆ ಅವನಿಗೆ ಕಾಣಿಸಿಕೊಳ್ಳುವೆ ಜ್ಞಾನದೃಷ್ಟಿಯಲ್ಲಿ ಇಲ್ಲವೆ ಅವನ ಸಂಗಡ ಮಾತಾಡುವೆ ಸ್ವಪ್ನದಲ್ಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು