Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 10:10 - ಕನ್ನಡ ಸತ್ಯವೇದವು C.L. Bible (BSI)

10 ಕರೆತರುವೆನವರನು ಈಜಿಪ್ಟ್, ಅಸ್ಸೀರಿಯ ನಾಡುಗಳಿಂದ ಗಿಲ್ಯಾದ್, ಲೆಬೊನೇನ್‍ಗಳಲ್ಲವರು ಬಂದು ಸೇರುವುದರಿಂದ ತುಂಬಿತುಳುಕುವುವು ಆ ನಾಡುಗಳು ಜನಸ್ತೋಮದಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಾನು ಅವರನ್ನು ಐಗುಪ್ತ ದೇಶದೊಳಗಿಂದ ಹಿಂದಕ್ಕೆ ಕರೆದುತರುವೆನು; ಅಶ್ಶೂರದಿಂದ ಕೂಡಿಸುವೆನು; ಗಿಲ್ಯಾದ್, ಲೆಬನೋನುಗಳ ಪ್ರಾಂತ್ಯಕ್ಕೆ ಬರಮಾಡುವೆನು; ಅವರಿಗೆ ಸಾಕಾಗುವಷ್ಟು ಸ್ಥಳ ಸಿಕ್ಕದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಾನು ಅವರನ್ನು ಐಗುಪ್ತ ದೇಶದೊಳಗಿಂದ ಹಿಂದಕ್ಕೆ ಕರತರುವೆನು; ಅಶ್ಶೂರದಿಂದ ಕೂಡಿಸುವೆನು; ಗಿಲ್ಯಾದುಲೆಬನೋನುಗಳ ಪ್ರಾಂತಕ್ಕೆ ಬರಮಾಡುವೆನು; ಅವರಿಗೆ ಸಾಕಾದಷ್ಟು ಸ್ಥಳ ಸಿಕ್ಕದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಾನು ಅವರನ್ನು ಈಜಿಪ್ಟ್‌ನಿಂದ ಮತ್ತು ಅಶ್ಯೂರದಿಂದ ಹಿಂದಕ್ಕೆ ತರುವೆನು. ಅವರನ್ನು ಗಿಲ್ಯಾದಿಗೆ ಕರೆದುಕೊಂಡು ಬರುವೆನು. ಅಲ್ಲಿ ಅವರಿಗೆ ಸ್ಥಳ ಸಾಲದು. ಆದ್ದರಿಂದ ಅವರು ಪಕ್ಕದ ಲೆಬನೋನ್ ಪ್ರಾಂತ್ಯದಲ್ಲಿ ವಾಸಿಸುವಂತೆ ಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಈಜಿಪ್ಟ್ ದೇಶದೊಳಗಿಂದ ಸಹ ಅವರನ್ನು ತಿರುಗಿ ತರುವೆನು. ಅಸ್ಸೀರಿಯದೊಳಗಿಂದ ಅವರನ್ನು ಕೂಡಿಸುವೆನು. ಗಿಲ್ಯಾದಿನ ಮತ್ತು ಲೆಬನೋನಿನ ದೇಶಕ್ಕೆ ಅವರನ್ನು ತರುವೆನು. ಅವರಿಗೆ ಸ್ಥಳ ಸಾಲದೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 10:10
16 ತಿಳಿವುಗಳ ಹೋಲಿಕೆ  

ಗುಬ್ಬಿಗಳಂತೆ ಈಜಿಪ್ಟಿನಿಂದಲೂ ಪಾರಿವಾಳಗಳಂತೆ ಅಸ್ಸೀರಿಯದಿಂದಲೂ ಅವರು ಬೆದರುತ್ತಾ ಓಡಿಬರುತ್ತಾರೆ. ಅವರು ತಮ್ಮ ತಮ್ಮ ಮನೆಗಳಿಗೆ ಹಿಂದಿರುಗುವಂತೆ ಮಾಡುವೆನು.


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ಇಗೋ, ನಾನು ನನ್ನ ಜನರನ್ನು ಪೂರ್ವಪಶ್ಚಿಮ ನಾಡುಗಳಿಂದ ಬಿಡುಗಡೆಮಾಡಿ, ಇಲ್ಲಿಗೆ ಬರಮಾಡುವೆನು.


ಸರ್ವೇಶ್ವರಾ, ನಿಮ್ಮ ಮಂದೆಗೆ ಸೇರಿದ ಜನರನ್ನು ಕುರಿಗಾಹಿಯಂತೆ ಪರಿಪಾಲಿಸಿರಿ. ನಿಮ್ಮ ಸ್ವಾಸ್ತ್ಯವಾಗಿ, ಮಂದೆಯಾಗಿ ಇರುವಂಥ ಜನರು, ಸುತ್ತಮುತ್ತಲು ಫಲವತ್ತಾದ ಹಸಿರು ಭೂಮಿಯಿದ್ದರೂ ಮರಳುಗಾಡಿನಲ್ಲಿ ಪ್ರತ್ಯೇಕವಾಗಿ ಜೀವಿಸುತ್ತಿರುವರು. ಪೂರ್ವಕಾಲದಲ್ಲಿದ್ದಂತೆ, ಈಗ ಅವರು ಬಾಷಾನ್ ಮತ್ತು ಗಿಲ್ಯಾದ್ ನಾಡುಗಳಿಗೆ ತೆರಳಿ ಪೋಷಣೆ ಪಡೆಯಲಿ.


ಸೆರೆಹೋಗಿರುವ ಇಸ್ರಯೇಲಿನ ಸೈನಿಕರು ಕಾನಾನ್ ನಾಡನ್ನು ಚಾರೆಪತಿನವರೆಗೆ ವಶಪಡಿಸಿಕೊಳ್ಳುವರು. ಸೆಪಾರದ ಎಂಬಲ್ಲಿ ಸೆರೆಯಾಗಿರುವ ಜೆರುಸಲೇಮಿನವರು ದಕ್ಷಿಣ ಪ್ರಾಂತ್ಯದ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.


ಇಸ್ರಯೇಲೆಂಬ ಮಂದೆಯನ್ನು ಮರಳಿ ಅದರ ಹುಲ್ಲುಗಾವಲಿಗೆ ಸೇರಿಸುವೆನು. ಅದು ಕರ್ಮೆಲಿನಲ್ಲೂ ಭಾಷಾನಿನಲ್ಲೂ ಮೇಯುವುದು. ಎಫ್ರಯಿಮಿನ ಮತ್ತು ಗಿಲ್ಯಾದಿನ ಗುಡ್ಡಗಳಲ್ಲಿ ಹೊಟ್ಟೆತುಂಬ ತಿನ್ನುವುದು.


ಹೌದು, ಜುದೇಯದ ಅರಸನ ಮನೆತನವನ್ನು ಕುರಿತು ಸರ್ವೇಶ್ವರ ಹೀಗೆನ್ನುತ್ತಾರೆ : “ನನ್ನ ದೃಷ್ಟಿಗೆ ನೀನಿರುವೆ ಗಿಲ್ಯಾದಿನಂತೆ, ಲೆಬನೋನಿನ ಶಿಖರದಂತೆ ಆದರೆ ನಿನ್ನನ್ನು ಮರುಭೂಮಿಯಂತೆ , ನಿರ್ಜನಪ್ರದೇಶದಂತೆ ಮಾಡುವೆನೆಂಬುದು ನಿಶ್ಚಯ.


ದೊಡ್ಡ ಕುಲವಾಗಿಸುವೆನು ಚಿಕ್ಕವನಿಂದ ಬಲಿಷ್ಠ ರಾಷ್ಟ್ರವಾಗಿಸುವೆನು ದುರ್ಬಲನಿಂದ. ಸಾಧಿಸುವೆನು ಇದನು ಕ್ಲುಪ್ತಕಾಲದೊಳು ಸರ್ವೇಶ್ವರನಾದ ನಾನು, ಶೀಘ್ರದೊಳು.


ಅವರು ಜೆರುಸಲೇಮಿನಲ್ಲೇ ವಾಸವಾಗಿರುವರು. ನಾನು ಅವರಿಗೆ ದೇವರಾಗಿರುವೆನು; ಅವರು ನನಗೆ ಸತ್ಸಂಬಂಧವುಳ್ಳ ಸದ್ಧರ್ಮದ ಪ್ರಜೆಗಳಾಗಿರುವರು.”


“ಶತ್ರುಗಳ ಕಡೆಗೆ ಸಿಂಹದಂತೆ ಗರ್ಜಿಸುವ ಸ್ವಾಮಿಯನ್ನು ಆ ಜನರು ಹಿಂಬಾಲಿಸುತ್ತಾರೆ. ಆತ ಆರ್ಭಟಿಸಲು ಅವರ ಮಕ್ಕಳು ನಡುನಡುಗುತ್ತಾ ಬರುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು