Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 10:2 - ಕನ್ನಡ ಸತ್ಯವೇದವು C.L. Bible (BSI)

2 ಗೃಹದೇವತೆಗಳು ನುಡಿಯುವುದು ಜೊಳ್ಳು; ಶಕುನ ಹೇಳುವವರ ಮಾತು ಸುಳ್ಳು. ಸ್ವಪ್ನಕಾರರ ಕನಸುಗಳು ಕಲ್ಪಿತ, ಅವರು ಹೇಳುವ ಸಮಾಧಾನ ವ್ಯರ್ಥ, ಈ ಕಾರಣ ಜನರು ಕುರಿಗಳಂತೆ ಚದರಿದ್ದಾರೆ; ಕುರುಬನಿಲ್ಲದೆ ಕಂಗೆಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ವಿಗ್ರಹಗಳು ನುಡಿಯುವುದು ಸುಳ್ಳು; ಕಣಿಹೇಳುವವರು ದರ್ಶನವನ್ನು ಕಾಣುವುದು ಸುಳ್ಳು, ತಿಳಿಸುವ ಕನಸುಗಳು ಮೋಸವಾದವುಗಳು, ಹೇಳುವ ಸಮಾಧಾನವು ವ್ಯರ್ಥ. ಆದುದರಿಂದ ನನ್ನ ಜನರು ದಿಕ್ಕಾಪಾಲಾಗಿದ್ದಾರೆ; ಕುರುಬನು ಇಲ್ಲದ ಕಾರಣ ಬಾಧೆಗೆ ಒಳಗಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ವಿಗ್ರಹಗಳು ನುಡಿಯುವದು ಜೊಳ್ಳು; ಕಣಿಯವರು ಕಾಣುವದು ಸುಳ್ಳು, ತಿಳಿಸುವ ಕನಸುಗಳು ಕಲ್ಪಿತ, ಹೇಳುವ ಸಮಾಧಾನವು ವ್ಯರ್ಥ, ಆದದರಿಂದ ನನ್ನ ಜನರು ದಿಕ್ಕಾಪಾಲಾಗಿದ್ದಾರೆ; ಕುರುಬನು ಇಲ್ಲದ ಕಾರಣ ಬಾಧೆಗೆ ಒಳಗಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಜನರು ಭವಿಷ್ಯವನ್ನು ತಿಳಿಯುವುದಕ್ಕೆ ತಮ್ಮ ಸಣ್ಣ ಬೊಂಬೆಗಳನ್ನೋ ಮಂತ್ರಜಾಲವನ್ನೋ ಉಪಯೋಗಿಸುವರು. ಆದರೆ ಅವೆಲ್ಲಾ ನಿಷ್ಪ್ರಯೋಜಕ. ಆ ಜನರು ದರ್ಶನವನ್ನು ನೋಡುವರು ಮತ್ತು ಕನಸುಗಳ ಬಗ್ಗೆ ಹೇಳುವರು. ಆದರೆ ಅವುಗಳೆಲ್ಲಾ ನಿಷ್ಪ್ರಯೋಜಕ ಸುಳ್ಳುಗಳಾಗಿವೆ. ಆದ್ದರಿಂದ ಜನರು ಸಹಾಯಕ್ಕಾಗಿ ಕೂಗುತ್ತಾ ಅತ್ತಿಂದಿತ್ತ ತಿರುಗಾಡುವ ಕುರಿಗಳಂತಿದ್ದಾರೆ. ಅವುಗಳನ್ನು ನಡಿಸಲು ಕುರುಬರೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ವಿಗ್ರಹಗಳು ವ್ಯರ್ಥವಾಗಿ ಮಾತನಾಡುವವು. ಶಕುನಗಾರರು ಸುಳ್ಳು ದರ್ಶನವನ್ನು ಕಾಣುವರು. ಮೋಸವಾದ ಕನಸುಗಳನ್ನು ತಿಳಿಸಿದ್ದಾರೆ. ವ್ಯರ್ಥವಾಗಿ ಆದರಿಸುತ್ತಾರೆ, ಆದ್ದರಿಂದ ಕುರಿಗಳಂತೆ ಚದರಿದ್ದಾರೆ, ಕುರುಬನಿಲ್ಲದೆ ಕಂಗೆಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 10:2
44 ತಿಳಿವುಗಳ ಹೋಲಿಕೆ  

ಆ ಜನಸಮೂಹವನ್ನು ಕಂಡಾಗ ಅವರ ಮನ ಕರಗಿತು.


ಕೆತ್ತನೆಯ ವಿಗ್ರಹದಿಂದ ಪ್ರಯೋಜನ ಏನು? ಅದು ಕೇವಲ ಮಾನವನ ಕೃತಿ, ಸುಳ್ಳು ಕಣಿಗಾಗಿ ಇಟ್ಟುಕೊಂಡ ಎರಕದ ಗೊಂಬೆ. ಅದನ್ನು ನಿರ್ಮಿಸಿದಾತನಿಗೆ ಅದು ಯಾವ ಅಭಯವನ್ನು ತಾನೇ ತಂದೀತು? ಅದು ಬಾಯ್ದೆರೆಯಲಾಗದ ಮೂಕ ಬೊಂಬೆಯಷ್ಟೆ.


ಹೀಗಿರಲು, ಅನೇಕ ದಿನಗಳವರೆಗೆ ಇಸ್ರಯೇಲಿನಲ್ಲಿ ರಾಜಯುವರಾಜರುಗಳು ಆಳ್ವಿಕೆ ನಡೆಸುವುದಿಲ್ಲ. ಬಲಿಯರ್ಪಣೆಗಳು ಇರುವುದಿಲ್ಲ. ವಿಗ್ರಹವೇದಿಕೆಗಳು ಅವರ ಮಧ್ಯೆ ಕಂಡುಬರುವುದಿಲ್ಲ, ಮಾಟಮಂತ್ರ ನಡೆಯುವುದಿಲ್ಲ.


ಕುರಿಗಾಹಿಗಳು ಇರಲಿಲ್ಲವಾದುದರಿಂದ ಅವು ಚದುರಿಹೋದುವು; ದಿಕ್ಕಾಪಾಲಾಗಿ ಕಾಡಿನ ಸಕಲ ಮೃಗಗಳಿಗೆ ತುತ್ತಾದವು;


“ನೀವು ಬಾಬಿಲೋನಿನ ಅರಸನಿಗೆ ಅಡಿಯಾಳುಗಳು ಆಗುವುದಿಲ್ಲ’ ಎಂದು ನಿಮಗೆ ನುಡಿಯುವ ನಿಮ್ಮ ಪ್ರವಾದಿಗಳು ಶಕುನದವರು, ಕನಸಿಗರು, ಕಣಿಯವರು, ಮಾಟಗಾರರು. ಅವರಿಗೆ ಕಿವಿಗೊಡಲೇಬೇಡಿ.


ಇತ್ತ ಲಾಬಾನನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸಲು ಹೋಗಿದ್ದನು. ಅದೇ ಸಮಯದಲ್ಲಿ ರಾಖೇಲಳು ತನ್ನ ತಂದೆಯ ಮನೆಯಲ್ಲಿದ್ದ ಕುಲದೈವಗಳ ವಿಗ್ರಹಗಳನ್ನು ಕದ್ದುಕೊಂಡಳು.


ಅಯ್ಯೋ, ನನ್ನ ಕುರಿಗಳು ಕೊಳ್ಳೆಯಾದವು, ಕಾಡಿನ ಸಕಲಮೃಗಗಳಿಗೆ ತುತ್ತಾದವು; ಕುರುಬರೇ ಇರಲಿಲ್ಲ. ನನ್ನ ಕುರುಬರು ನನ್ನ ಕುರಿಗಳನ್ನು ಹುಡುಕಲಿಲ್ಲ; ಅವರು ಸ್ವಂತ ಹೊಟ್ಟೆಪಾಡನ್ನು ನೋಡಿಕೊಂಡರೇ ಹೊರತು, ನನ್ನ ಕುರಿಗಳ ಹೊಟ್ಟೆಯನ್ನು ನೋಡಲೇ ಇಲ್ಲ.


“ಯಕೋಬ ವಂಶಜರೇ, ನಾನು ನಿಮ್ಮನ್ನೆಲ್ಲಾ ಖಂಡಿತವಾಗಿ ಒಟ್ಟುಗೂಡಿಸುವೆನು. ಇಸ್ರಯೇಲಿನ ಅಳಿದುಳಿದ ಜನರನ್ನು ಸೇರಿಸಿಯೇ ಸೇರಿಸುವೆನು. ಹಟ್ಟಿಯಲ್ಲಿರುವ ಕುರಿಗಳಂತೆ ಅವರನ್ನು ಒಟ್ಟಿಗೆ ಸೇರಿಸುವೆನು. ಹುಲ್ಲುಗಾವಲಿನಲ್ಲಿರುವ ಕುರಿಮಂದೆಯಂತೆ ಒಂದುಗೂಡಿಸುವೆನು,” ಎನ್ನುತ್ತಾರೆ.


ಅಮ್ಮೋನೇ, ನಿನ್ನ ಜೋಯಿಸರು ಮಿಥ್ಯೆಯನ್ನು ಕಲ್ಪಿಸಿಕೊಂಡು ಸುಳ್ಳುಸುಳ್ಳಾಗಿ ಕಣಿ ಹೇಳುತ್ತಿದ್ದಾರೆ. ಸಮಯವು ಸಮೀಪಿಸಿ ಅಪರಾಧದ ಕಡೆಗಾಲವು ಸಂಭವಿಸಿ ಹತರಾಗಿ ಬಿದ್ದಿರುವ ದುಷ್ಟರ ಗತಿಯನ್ನು ನೋಡು; ಜೋಯಿಸರನ್ನು ನಂಬಿದ ನೀನೂ ಆ ದುಷ್ಟರ ಕತ್ತುಗಳ ಮೇಲೆ ಬೀಳುವೆ.


ಮಾರ್ಗ ಕವಲೊಡೆಯುವ ಸ್ಥಳದಲ್ಲಿ, ಎರಡು ದಾರಿಗಳ ಪ್ರಾರಂಭದಲ್ಲಿ ಬಾಬಿಲೋನಿನ ಅರಸ ಶಕುನ ನೋಡಲು ನಿಂತಿರುವನು. ಬಾಣಗಳನ್ನು ಕಲಕಿ, ವಿಗ್ರಹಗಳನ್ನು ಪ್ರಶ್ನೆ ಕೇಳಿ, ಹಸ್ತರೇಖೆಯನ್ನು ಪರೀಕ್ಷಿಸಿದ್ದಾನೆ.


ನಿನ್ನ ಪ್ರವಾದಿಗಳು ಕಂಡ ದರ್ಶನದಲ್ಲಿ ಸಾರವಿಲ್ಲ, ಅರ್ಥವಿಲ್ಲ. ನಿನ್ನ ದೋಷಗಳನ್ನು ಬೈಲಿಗೆಳೆಯಲು ಅವರಿಂದಾಗಲಿಲ್ಲ. ಈ ಕಾರಣ, ನಿನ್ನ ದುರವಸ್ಥೆಯನ್ನು ತಡೆಗಟ್ಟಲಾಗಲಿಲ್ಲ. ನಿನ್ನ ಬಗ್ಗೆ ಅವರು ನುಡಿದ ದೈವೋಕ್ತಿಗಳು ವ್ಯರ್ಥವಾದುವು, ನೀನು ಗಡಿಪಾರಾಗಿ ಹೋಗಲು ಅವು ಆಸ್ಪದವಾದುವು.


ಈ ಗದೆಯಿಂದ ಒಡೆದುಬಿಡುವೆನು ಕುರುಬನನ್ನೂ ಮಂದೆಯನ್ನೂ ರೈತನನ್ನೂ ನೊಗದೆತ್ತುಗಳನ್ನೂ ದೇಶಾಧಿಪತಿಗಳನ್ನೂ ನಾಡಿನೊಡೆಯರನ್ನೂ.”


“ಇಸ್ರಯೇಲ್ ಚದರಿಹೋದ ಮಂದೆ. ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ. ಮೊಟ್ಟಮೊದಲು ಅಸ್ಸೀರಿಯಾದ ಅರಸನು ಅದನ್ನು ಕಬಳಿಸಿದನು. ಕಟ್ಟಕಡೆಗೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು.


‘ಬಾಬಿಲೋನಿನ ಅರಸನು ನಿಮಗೂ ಈ ನಾಡಿಗೂ ವಿರುದ್ಧವಾಗಿ ಆಕ್ರಮಣ ನಡೆಸನು’ ಎಂದು ಸಾರಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ?


ಇಸ್ರಯೇಲರ ದೇವರೂ ಸೇನಾಧೀಶ್ವರ ಸರ್ವೇಶ್ವರನೂ ಆದ ನಾನು ನಿಮಗೆ ಹೇಳುತ್ತೇನೆ: ನಿಮ್ಮ ಮಧ್ಯೆ ಇರುವ ಪ್ರವಾದಿಗಳಿಗೂ ಶಕುನದವರಿಗೂ ಕಿವಿಗೊಟ್ಟು ಮೋಸಹೋಗದಿರಿ. ನಿಮಗಾಗಿ ಕನಸುಕಂಡು ಹೇಳುವವರನ್ನು ನಂಬಬೇಡಿ.


ಆಗ ಪ್ರವಾದಿ ಯೆರೆಮೀಯನು ಪ್ರವಾದಿ ಹನನ್ಯನಿಗೆ, “ಹನನ್ಯನೇ ಕೇಳು, ಸರ್ವೇಶ್ವರ ನಿನ್ನನ್ನು ಕಳಿಸಲಿಲ್ಲ. ಆದರೂ ಈ ಜನರು ಸುಳ್ಳನ್ನು ನಂಬುವಂತೆ ಮಾಡುತ್ತಿರುವೆ.


ನನ್ನನ್ನು ಅಸಡ್ಡೆಮಾಡುವವರಿಗೆ, ‘ನಿಮಗೆ ಶುಭವಾಗುವುದು ಎಂದು ಸರ್ವೇಶ್ವರನೇ ನುಡಿದಿದ್ದಾರೆ’ ಎಂದು ಹೇಳುತ್ತಲೇ ಇದ್ದಾರೆ. ಹಟಮಾರಿ ಹೃದಯಿಗಳೆಲ್ಲರಿಗೆ, ‘ನಿಮಗೆ ಯಾವ ಕೇಡೂ ಸಂಭವಿಸದು’ ಎಂದು ನುಡಿಯುತ್ತಾರೆ.”


ಅನ್ಯಜನಾಂಗಗಳ ಶೂನ್ಯದೇವತೆಗಳಲ್ಲಿ ಮಳೆಸುರಿಸಬಲ್ಲವರುಂಟೆ? ಆಕಾಶವು ತಾನಾಗಿ ಹದಮಳೆಯನ್ನು ಬರಮಾಡಬಲ್ಲುದೆ? ನಮ್ಮ ದೇವರಾದ ಸರ್ವೇಶ್ವರಾ, ವೃಷ್ಟಿದಾತರು ನೀವೇ ನಾವು ನಿರೀಕ್ಷಿಸುತ್ತಿರುವುದು ನಿಮ್ಮನ್ನೇ ಹೌದು, ಇವುಗಳನ್ನೆಲ್ಲ ನಡೆಸುವವರು ನೀವೇ.


ಆಗ ನಾನು, “ಅಯ್ಯೋ, ಸ್ವಾಮಿ ಸರ್ವೇಶ್ವರಾ, ಈ ಜನರಿಗೆ, ‘ಖಡ್ಗ ನಿಮ್ಮ ಕಣ್ಣಿಗೂ ಕಾಣಿಸದು, ಕ್ಷಾಮ ನಿಮಗೆಂದಿಗೂ ಬಂದೊದಗದು. ಸರ್ವೇಶ್ವರ ಈ ನಾಡಿನಲ್ಲೆ ನಿಮಗೆ ಚಿರಶಾಂತಿ ಸಮಾಧಾನವನ್ನು ಕೊಡುವರು’ ಎಂದು ಪ್ರವಾದಿಗಳೇ ನುಡಿಯುತ್ತಿದ್ದಾರೆ,” ಎಂದು ಹೇಳಿದೆನು.


ಕೇವಲ ಪಶುಪ್ರಾಯರು, ಮಂದಮತಿಗಳು, ಅವರೆಲ್ಲರು ಬೊಂಬೆ ಪೂಜೆಯಿಂದ ಬರುವ ಜ್ಞಾನ ಮರದಂತೆ ಮೊದ್ದು.


ನನ್ನ ಜನರ ಗಾಯಗಳು ಗುಣವಾಗದಿದ್ದರೂ ಅವು ಮಚ್ಚೆಗಳೋ ಎಂಬಂತೆ ‘ಎಲ್ಲ ಚೆನ್ನಾಗಿದೆ’ ಎಂದು ಸಮಾಧಾನ ಹೇಳಿ ವಂಚಿಸುತ್ತಿದ್ದಾರೆ.


ಅವರು, ನನ್ನ ಜನರ ಗಾಯಗಳು ಗುಣವಾಗದಿದ್ದರೂ ಅವು ಕೇವಲ ಮಚ್ಚೆಗಳೋ ಎಂಬಂತೆ ‘ಎಲ್ಲ ಚೆನ್ನಾಗಿದೆ’ ಎಂದು ಸಮಾಧಾನ ಹೇಳಿ ವಂಚಿಸುತ್ತಿದ್ದಾರೆ.


ನನ್ನನ್ನು ಯಾರಿಗೆ ಸರಿಹೋಲಿಸಬಲ್ಲಿರಿ? ನನ್ನನ್ನು ಯಾರಿಗೆ ಸಾಟಿಮಾಡಬಲ್ಲಿರಿ?


ವಿಗ್ರಹಗಳನ್ನು ಕೆತ್ತುವವರೆಲ್ಲರು ನಿರರ್ಥಕರು; ಅವರ ಇಷ್ಟಬೊಂಬೆಗಳು ಏತಕ್ಕೂ ಬಾರವು; ಅವುಗಳಲ್ಲಿ ವಿಶ್ವಾಸವಿಡುವವರು ಕುರುಡರು, ತಿಳುವಳಿಕೆ ಇಲ್ಲದವರು. ಅಂಥವರು ನಾಚಿಕೆಗೆ ಗುರಿಯಾಗುವರು.


ಇಂತಿರಲು ನಿಮ್ಮ ಉಪಶಮನದ ಮಾತು ವ್ಯರ್ಥ ನಿಮ್ಮ ಮಾತುಗಳ ಸಾರಾಂಶ ಮಿತ್ರದ್ರೋಹ.”


ನೀವು ಸುಳ್ಳಿಗೆ ಸುಣ್ಣ ಬಳಿಯುವವರು ನೀವೆಲ್ಲರು ಏತಕ್ಕೂ ಬಾರದ ವೈದ್ಯರು.


ಆಗ ಅವನು, “ಇಸ್ರಯೇಲರೆಲ್ಲರೂ ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದರಿಹೋದದ್ದನ್ನು ಕಂಡೆ; ಆಗ ಸರ್ವೇಶ್ವರ, ‘ಇವರು ಒಡೆಯನಿಲ್ಲದವರಾಗಿರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ,’ ಎಂದರು” ಎಂಬುದಾಗಿ ಉತ್ತರಕೊಟ್ಟನು.


ಲಯಿಷ್ ದೇಶವನ್ನು ಸಂಚರಿಸಿ ನೋಡುವುದಕ್ಕೆ ಹೋಗಿದ್ದ ಐದು ಮಂದಿ ತಮ್ಮ ಬಂಧುಗಳಿಗೆ, “ಈ ಗ್ರಾಮದಲ್ಲಿ ಒಂದು ‘ಏಫೋದು’, ದೇವತಾಪ್ರತಿಮೆಗಳು, ಕೆತ್ತನೆಯ ಮತ್ತು ಎರಕದ ವಿಗ್ರಹಗಳು ಇರುತ್ತವೆ ಎಂಬುದು ನಿಮಗೆ ಗೊತ್ತುಂಟೇ?


ಆದುದರಿಂದ ಅವರ ಕೆಲಸಕಾರ್ಯಗಳನ್ನು ನಿರ್ವಹಿಸುವುದಕ್ಕೂ ಅವರನ್ನು ಮುನ್ನಡೆಸುವುದಕ್ಕೂ ಹಿಂದಕ್ಕೆ ಕರೆದುತರುವುದಕ್ಕೂ ಒಬ್ಬ ನಾಯಕನನ್ನು ನೇಮಿಸಿ,” ಎಂದು ಮನವಿಮಾಡಿಕೊಂಡನು.


ಯೇಸು ದೋಣಿಯಿಂದ ಇಳಿದಾಗ ಅಲ್ಲಿ ದೊಡ್ಡ ಜನಸಮೂಹವೇ ಸೇರಿತ್ತು. ಆ ಜನರು ಕುರುಬನಿಲ್ಲದ ಕುರಿಗಳಂತಿರುವುದನ್ನು ಕಂಡು ಯೇಸುವಿನ ಮನ ಕರಗಿತು; ಅನೇಕ ವಿಷಯಗಳನ್ನು ಕುರಿತು ಅವರಿಗೆ ಉಪದೇಶವಿತ್ತರು.


ಸುಳ್ಳು ಕನಸುಗಳನ್ನು ಪ್ರಕಟಿಸುತ್ತಾ ಹಾಗು ವಿವರಿಸುತ್ತಾ ತಮ್ಮ ಅಬದ್ಧ ಮಾತುಗಳಿಂದಲೂ ಕಚ್ಚಾಟದಿಂದಲೂ ನನ್ನ ಜನರಿಗೆ ದಾರಿ ತಪ್ಪಿಸುವ ಪ್ರವಾದಿಗಳನ್ನು ನಾನು ಖಂಡಿಸುತ್ತೇನೆ. ನಾನು ಅವರನ್ನು ಕಳುಹಿಸಲಿಲ್ಲ, ಅಥವಾ ಅವರಿಗೆ ಆಜ್ಞಾಪಿಸಲಿಲ್ಲ. ಅವರಿಂದ ಈ ಜನರಿಗೆ ಯಾವ ಪ್ರಯೋಜನವೂ ಇಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.”


ಮಂದೆಕಾಯದ ಕುರುಬನಿಗೆ ಧಿಕ್ಕಾರ! ತಾಕುವುದು ಅವನ ತೋಳಿಗೂ ಬಲಗಣ್ಣಿಗೂ ಖಡ್ಗ ತೀರಾ ಬತ್ತಿಹೋಗಲಿ ಅವನ ತೋಳು ಪೂರಾ ಮಬ್ಬಾಗಲಿ ಅವನ ಬಲಗಣ್ಣು.


‘ಈ ದೇವತೆಗಳನ್ನು ಅವಲಂಬಿಸಿ ಪೂಜಿಸೋಣ’ ಎಂದು ಬೋಧಿಸಬಹುದು; ಆ ಬೋಧನೆಯನ್ನು ರುಜುವಾತು ಪಡಿಸಲು ಒಂದು ಅದ್ಭುತವನ್ನಾಗಲಿ, ಮಹತ್ಕಾರ್ಯವನ್ನಾಗಲಿ ತೋರಿಸಿಕೊಡುತ್ತೇನೆಂದು ಹೇಳಬಹುದು.


ನಿಶ್ಚಯವಾಗಿ ಆ ದೇವತೆಗಳೆಲ್ಲ ಕ್ಷುದ್ರರೇ‍ ಅವರ ಕಾರ್ಯಗಳೆಲ್ಲ ಶೂನ್ಯವೇ ಆ ಎರಕದ ಬೊಂಬೆಗಳೆಲ್ಲಾ ಬರಿ ಗಾಳಿಯೆ !


ಸುಳ್ಳುಶಕುನ ಹೇಳುವವರನು ನಿರರ್ಥಕಗೊಳಿಸುವವನು ನಾನೆ ಕಣಿ ಹೇಳುವವರನು ಮರುಳುಗೊಳಿಸುವವನು ನಾನೆ ವಿವೇಕಿಗಳೊಡನೆ ವಾದಿಸಿ ಅವರ ವಿವೇಕವೇ ಅವಿವೇಕವೆಂದು ತೋರಿಸಿದವನು ನಾನೆ.


ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ. ಅವರ ದುರ್ಬೋಧನೆಯ ನಿಮಿತ್ತ ನಾನು ನಿಮ್ಮನ್ನು ಹೊರದೂಡಬೇಕಾಗುವುದು; ನೀವು ದೇಶಭ್ರಷ್ಟರಾಗಿ ನಾಶವಾಗುವಿರಿ.


‘ನೀವು ಬಾಬಿಲೋನಿಯದ ಅರಸನ ಅಡಿಯಾಳಾಗುವುದಿಲ್ಲ’ ಎಂದು ನಿಮಗೆ ನುಡಿಯುವ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿ; ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು