Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 11:16 - ಕನ್ನಡ ಸತ್ಯವೇದವು C.L. Bible (BSI)

16 ಏಕೆಂದರೆ ನಾಡಿನಲ್ಲಿ ಒಬ್ಬ ಕುರುಬನು ಏಳುವಂತೆ ನಾನು ಮಾಡುವೆನು. ಅವನು ಅಳಿದುಹೋದ ಕುರಿಗಳನ್ನು ಗುಣಪಡಿಸನು; ಚದರಿಹೋದ ಕುರಿಗಳನ್ನು ಹುಡುಕಿತರನು; ಉಳಿದವುಗಳನ್ನು ಸಾಕಲಾರನು. ಕೊಬ್ಬಿದ ಕುರಿಗಳನ್ನು ಕಡಿದು, ಅವುಗಳ ಗೊರಸುಗಳನ್ನೂ ಸುಲಿದು ಕಬಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇಗೋ, ದೇಶದಲ್ಲಿ ನಾನು ಒಬ್ಬ ಕುರುಬನನ್ನು ನೇಮಿಸುವೆನು; ಅವನು ಹಾಳಾಗುತ್ತಿರುವ ಕುರಿಗಳನ್ನು ನೋಡಿಕೊಳ್ಳನು, ಚದುರಿದವುಗಳನ್ನು ಹುಡುಕನು, ಊನವಾದವುಗಳನ್ನು ಗುಣಪಡಿಸನು, ನೆಟ್ಟಗಿರುವವುಗಳನ್ನು ಸಾಕನು; ಕೊಬ್ಬಿದವುಗಳ ಮಾಂಸವನ್ನು ತಿನ್ನುವನು, ಕುರಿಗಳ ಗೊರಸುಗಳನ್ನು ಚೂರುಚೂರು ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇಗೋ, ದೇಶದಲ್ಲಿ ನಾನು ಒಬ್ಬ ಕುರುಬನನ್ನು ಏರ್ಪಡಿಸುವೆನು; ಅವನು ಹಾಳಾಗುತ್ತಿರುವ ಕುರಿಗಳನ್ನು ನೋಡಿಕೊಳ್ಳನು, ಚದರಿದವುಗಳನ್ನು ಹುಡುಕನು, ಊನವಾದವುಗಳನ್ನು ಗುಣಪಡಿಸನು, ನೆಟ್ಟಗಿರುವವುಗಳನ್ನು ಸಾಕನು; ಕೊಬ್ಬಿದವುಗಳ ಮಾಂಸವನ್ನು ತಿನ್ನುವನು, ಕುರಿಗಳ ಗೊರಸುಗಳನ್ನು ಚೂರುಚೂರುಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಾನು ಈ ದೇಶಕ್ಕೆ ಒಬ್ಬ ಹೊಸ ಕುರುಬನನ್ನು ನೇಮಕ ಮಾಡುವೆನೆಂದು ಆ ರೀತಿಯಾಗಿ ತೋರಿಸುವೆನು. ಆದರೆ ಈ ಮನುಷ್ಯನಿಗೆ ನಾಶಮಾಗುತ್ತಿರುವ ಕುರಿಗಳನ್ನು ಪರಾಮರಿಸಲು ಸಾಧ್ಯವಾಗುವುದಿಲ್ಲ. ಗಾಯಗೊಂಡ ಕುರಿಗಳನ್ನು ಗುಣಮಾಡಲು ಅವನಿಂದ ಸಾಧ್ಯವಾಗುವುದಿಲ್ಲ. ಸಾಯದೆ ಉಳಿದ ಕುರಿಗಳಿಗೆ ಆಹಾರ ಕೊಡಲು ಅವನಿಂದ ಸಾಧ್ಯವಾಗುವುದಿಲ್ಲ. ಪುಷ್ಟಿಕರವಾದ ಕುರಿಗಳನ್ನು ಪೂರ್ತಿಯಾಗಿ ತಿಂದುಹಾಕಲಾಗುವದು. ಅದರ ಗೊರಸುಗಳು ಮಾತ್ರವೇ ಉಳಿಯುವದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಏಕೆಂದರೆ ನಾನು ದೇಶದಲ್ಲಿ ಒಬ್ಬ ಕುರುಬನನ್ನು ಎಬ್ಬಿಸುವೆನು. ಅವನು ಕಳೆದುಹೋದ ಕುರಿಗಳ ಬಗ್ಗೆ ಕಾಳಜಿವಹಿಸುವುದಿಲ್ಲ ಮತ್ತು ಪ್ರಾಯದ ಕುರಿಗಳನ್ನು ಹುಡುಕುವುದಿಲ್ಲ, ಗಾಯಗೊಂಡದ್ದನ್ನು ಅವನು ಗುಣ ಮಾಡುವುದಿಲ್ಲ, ಇನ್ನೂ ಆರೋಗ್ಯದಿಂದಿರುವುದನ್ನು ಅವನು ಪೋಷಿಸುವುದಿಲ್ಲ. ಆದರೆ ಕೊಬ್ಬಿದವುಗಳ ಮಾಂಸವನ್ನು ತಿನ್ನುವನು. ಅವುಗಳ ಗೊರಸುಗಳನ್ನು ಮುರಿದು ಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 11:16
16 ತಿಳಿವುಗಳ ಹೋಲಿಕೆ  

ಇಸ್ರಯೇಲರ ದೇವರಾದ ಸರ್ವೇಶ್ವರ, ತಮ್ಮ ಜನರೆಂಬ ಕುರಿಗಳನ್ನು ಮೇಯಿಸುವ ಕುರಿಗಾಹಿಗಳ ದ್ರೋಹವನ್ನು ಅರಿತಿದ್ದಾರೆ. ಅಂಥವರನ್ನು ಕುರಿತು ಹೀಗೆನ್ನುತ್ತಾರೆ : “ನೀವು ನನ್ನ ಮಂದೆಯನ್ನು ಚದರಿಸಿ ಓಡಿಸಿಬಿಟ್ಟಿದ್ದೀರಿ. ಅವುಗಳ ಬಗ್ಗೆ ಎಚ್ಚರ ವಹಿಸಲೇ ಇಲ್ಲ. ನಿಮ್ಮ ನೀಚಕಾರ್ಯಗಳ ನಿಮಿತ್ತ ನಿಮ್ಮನ್ನು ವಿಚಾರಣೆಗೆ ಗುರಿಪಡಿಸುವೆನು.


“ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ಕುರಿಹಟ್ಟಿಗೆ ಬಾಗಿಲ ಮೂಲಕ ಬರದೆ ಗೋಡೆ ಹತ್ತಿಬರುವವನು ಕಳ್ಳ ಹಾಗೂ ಕೊಳ್ಳೆಗಾರ.


ಟಗರು ಹೋತಗಳೇ, ನೀವು ಕುರಿಮೇಕೆಗಳನ್ನು ಪಕ್ಕದಿಂದಲೂ ಹೆಗಲಿನಿಂದಲೂ ನೂಕುತ್ತಾ ದುರ್ಬಲವಾದವುಗಳನ್ನು ಕೊಂಬುಗಳಿಂದ ಹಾಯುತ್ತಾ ನನ್ನ ಹಿಂಡನ್ನು ಚದರಿಸಿಬಿಟ್ಟಿರಿ;


“ತಪ್ಪಿಸಿಕೊಂಡಿದ್ದನ್ನು ಹುಡುಕುವೆನು, ದಾರಿತಪ್ಪಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದುದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿನ ಕುರಿಗಳನ್ನಾದರೋ ಧ್ವಂಸಮಾಡುವೆನು; ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ತಿನ್ನಿಸುವೆನು.”


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅಕಟಾ! ನನ್ನ ಜೀವದಾಣೆ, ನಾನು ಆ ಕುರಿಗಾಹಿಗಳಿಗೆ ವಿರುದ್ಧನಾಗಿದ್ದೇನೆ; ಅವರು ನನ್ನ ಕುರಿಗಳ ಲೆಕ್ಕವನ್ನು ನನಗೆ ಒಪ್ಪಿಸಬೇಕು; ನನ್ನ ಕುರಿ ಮೇಯಿಸುವ ಕೆಲಸದಿಂದ ಅವರನ್ನು ತೆಗೆದುಬಿಡುವೆನು; ಆ ಕುರುಬರು ಇನ್ನು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳರು; ನನ್ನ ಕುರಿಗಳು ಆಹಾರವಾಗಿ ಅವರ ಬಾಯಿಗೆ ಬೀಳದಂತೆ ಅವುಗಳನ್ನು ರಕ್ಷಿಸುವೆನು.


ಇವರು ನನ್ನ ಆಲೋಚನಾ ಸಭೆಯಲ್ಲಿ ಹಾಜರಿದ್ದಿದ್ದರೆ, ನನ್ನ ವಾಕ್ಯಗಳನ್ನು ನನ್ನ ಜನರ ಕಿವಿಗೆ ಮುಟ್ಟಿಸುತ್ತಿದ್ದರು; ಅವರನ್ನು ದುರ್ಮಾರ್ಗದಿಂದಲೂ ದುಷ್ಕೃತ್ಯಗಳಿಂದಲೂ ತಪ್ಪಿಸುತ್ತಿದ್ದರು.


ಆತ ಮೇಯಿಸುವನು ತನ್ನ ಮಂದೆಯನ್ನು ಕುರುಬನ ಹಾಗೆ ಮರಿಗಳನ್ನು ಕೈಗೆ ಎತ್ತಿಕೊಳ್ಳುವನು, ಅಪ್ಪಿಕೊಳ್ಳುವನು ಎದೆಗೆ ನಡೆಸುವನು ಹಾಲೂಡಿಸುವ ಕುರಿಗಳನ್ನು ಮೆಲ್ಲಗೆ.


ಅದಕ್ಕೆ ಯಕೋಬನು, “ನನ್ನೊಡೆಯರಾದ ನಿಮಗೆ ತಿಳಿದಿರುವಂತೆ ನನ್ನ ಮಕ್ಕಳು ಎಳೆಯ ಪ್ರಾಯದವರು; ಈದಿರುವ ದನಕುರಿಗಳೂ ನನಗಿವೆ; ಒಂದೇ ದಿನ ಹೆಚ್ಚಾಗಿ ದಾರಿ ನಡೆಸಿದೆನಾದರೆ ಆಡುಕುರಿಗಳೆಲ್ಲವೂ ಸತ್ತುಹೋದಾವು.


ಇದಕ್ಕಾಗಿಯೇ ನಾನು ಇಪ್ಪತ್ತು ವರ್ಷ ನಿಮ್ಮ ಬಳಿ ಇದ್ದುದು? ನಿಮ್ಮ ಆಡುಕುರಿಗಳು ಕಂದು ಹಾಕಲಿಲ್ಲ; ನಿಮ್ಮ ಹಿಂಡಿನ ಟಗರುಗಳನ್ನು ನಾನೇನೂ ತಿಂದುಬಿಡಲಿಲ್ಲ;


“(ಉತ್ತರದ) ರಾಜನು ಮನಸ್ಸು ಬಂದ ಹಾಗೆ ನಡೆದು ತಾನು ಎಲ್ಲ ದೇವರುಗಳಿಗಿಂತಲೂ ದೊಡ್ಡವನೆಂದು ತನ್ನನ್ನೇ ಹೆಚ್ಚಿಸಿಕೊಂಡು ಗರ್ವಿಷ್ಠನಾಗುವನು. ದೇವಾಧಿದೇವರನ್ನು ಅತಿಯಾಗಿ ದೂಷಿಸುವನು. ನಿಮ್ಮ ಮೇಲಿನ ದೈವಕೋಪ ತೀರುವ ತನಕ ಅವನು ವೃದ್ಧಿಯಾಗುವನು. ದೈವಸಂಕಲ್ಪ ನೆರವೇರಲೇಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು