Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 11:3 - ಕನ್ನಡ ಸತ್ಯವೇದವು C.L. Bible (BSI)

3 ಆಹಾ! ಕೇಳಿಬರುತ್ತಿದೆ ಕುರುಬರ ಗೋಳಾಟ ಬರಡಾಗಿದೆ ಅವರ ಹುಲ್ಲುಗಾವಲ ನೋಟ ಕೇಳಿರಿ, ಇಗೋ, ಯುವಸಿಂಹಗಳ ಆಕ್ರಂದನ ಏಕೆನೆ ಪಾಳುಬಿದ್ದಿದೆ ಜೋರ್ಡನಿನ ದಟ್ಟವನ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಹಾ, ಕುರುಬರು ಗೋಳಾಡುತ್ತಾರೆ! ಅವರ ಅತಿಶಯದ ಕಾವಲು ಹಾಳಾಗಿದೆ. ಇಗೋ, ಪ್ರಾಯದ ಸಿಂಹಗಳು ಗರ್ಜಿಸುತ್ತವೆ! ಯೊರ್ದನಿನ ದಟ್ಟ ಅಡವಿಯು ಹಾಳಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಹಾ, ಕುರುಬರು ಗೋಳಾಡುತ್ತಾರೆ! ಅವರ ಅತಿಶಯದ ಕಾವಲು ಹಾಳಾಗಿದೆ. ಇಗೋ, ಪ್ರಾಯದ ಸಿಂಹಗಳು ಗರ್ಜಿಸುತ್ತವೆ! ಯೊರ್ದನಿನ ದಟ್ಟಡವಿಯು ಪಾಳಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ರೋದಿಸುವ ಕುರುಬರ ಕಡೆಗೆ ಕಿವಿಗೊಡಿರಿ. ಅವರ ನಾಯಕರುಗಳನ್ನು ತೆಗೆದುಕೊಂಡು ಹೋಗಿರುತ್ತಾರೆ. ಪ್ರಾಯದ ಸಿಂಹಗಳ ಗರ್ಜನೆಗೆ ಕಿವಿಗೊಡಿರಿ. ಯೋರ್ದನ್ ಹೊಳೆಯ ಬದಿಯಲ್ಲಿದ್ದ ದಟ್ಟವಾದ ಪೊದರುಗಳೆಲ್ಲಾ ತೆಗೆದುಕೊಂಡು ಹೋಗಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಕುರುಬರ ಗೋಳಾಟವನ್ನು ಕೇಳಿರಿ, ಅವರ ಸೊಂಪಾದ ಹುಲ್ಲುಗಾವಲುಗಳು ಹಾಳಾಗಿವೆ ಪ್ರಾಯದ ಸಿಂಹಗಳು ಗರ್ಜಿಸುವ ಶಬ್ದ ಕೇಳಿಸುತ್ತಿದೆ, ಯೊರ್ದನಿನ ದಟ್ಟವಾದ ಪೊದೆಗಳು ನಾಶವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 11:3
34 ತಿಳಿವುಗಳ ಹೋಲಿಕೆ  

ಬಾಬಿಲೋನಿಯರಿಗೆ ನಿತ್ಯ ನೆಲೆಯಾದ ಗೋಮಾಳಕ್ಕೆ ಇಗೋ, ಜೋರ್ಡನ್ ದಟ್ಟಡವಿಯಿಂದ ಸಿಂಹದೋಪಾದಿ ನಾನು ಏರಿಬರುವೆನು. ಕ್ಷಣಮಾತ್ರದಲ್ಲಿ ಆ ಬಾಬಿಲೋನಿಯರನ್ನು ಅಲ್ಲಿಂದ ಓಡಿಸಿಬಿಡುವೆನು. ಅದನ್ನು ಪಾಲಿಸುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನ್ಯಾಯವಿಚಾರಣೆಗೆ ನನ್ನನ್ನು ಎಳೆಯಬಲ್ಲ ವ್ಯಕ್ತಿ ಯಾರು? ಮಂದೆಯನ್ನು ಕಾಯುವ ಯಾವನು ತಾನೆ ನನ್ನೆದುರಿಗೆ ನಿಲ್ಲಬಲ್ಲನು?


ನಿಮ್ಮ ಪೂರ್ವಜರು ಹಿಂಸೆಗೆ ಗುರಿಪಡಿಸದ ಪ್ರವಾದಿ ಯಾರಾದರೂ ಇದ್ದಾರೆಯೆ? ಸತ್ಯಸ್ವರೂಪನು ಬರಲಿದ್ದಾನೆಂದು ಮುಂತಿಳಿಸಿದವರನ್ನು ಅವರು ಕೊಂದುಹಾಕಿದರು. ನೀವಾದರೋ, ಆ ಸತ್ಯಸ್ವರೂಪನನ್ನು ಹಿಡಿದುಕೊಟ್ಟು ಕೊಲೆಮಾಡಿಸಿದಿರಿ.


ಅವರನ್ನು ಅವರಷ್ಟಕ್ಕೇ ಬಿಡಿ; ಅವರೊ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸಲು ಹೋಗುತ್ತಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಇಬ್ಬರೂ ಹಳ್ಳದಲ್ಲಿ ಬೀಳುತ್ತಾರಷ್ಟೆ,” ಎಂದರು.


ಒಂದೇ ತಿಂಗಳೊಳಗೆ ಮೂವರು ಕುರುಬರನ್ನು ಕೆಲಸದಿಂದ ತೆಗೆದುಹಾಕಿದೆ. ಅನಂತರ ನನಗೆ ಕುರಿಗಳ ಬಗ್ಗೆ ಅಸಹ್ಯವಾಯಿತು. ಕುರಿಗಳು ಸಹ ನನ್ನ ಬಗ್ಗೆ ಬೇಸರಗೊಂಡವು.


ನೀನು ನನಗೆ ಎದುರಾಗಿ ದಂಗೆಯೆದ್ದು ಮಾಡಿದ ನಾನಾ ದುಷ್ಕೃತ್ಯಗಳಿಗಾಗಿ ಆ ದಿನದಂದು ನೀನು ನಾಚಿಕೆಪಡುವ ಅವಶ್ಯಕತೆ ಇರುವುದಿಲ್ಲ. ಏಕೆಂದರೆ ಅತಿ ಗರ್ವದಿಂದ ಮೆರೆಯುವವರನ್ನು ನಿನ್ನ ಮಧ್ಯೆಯಿಂದ ತೊಲಗಿಸಿಬಿಡುವೆನು. ಅಂದಿನಿಂದ ನನ್ನ ಪವಿತ್ರ ಪರ್ವತದ ಮೇಲೆ ನೀನು ಗರ್ವಪಡದೆ ಬಾಳುವೆ.


ಅದರ ಪ್ರಮುಖರು ಗರ್ಜಿಸುವ ಸಿಂಹಗಳು. ಅದರ ನ್ಯಾಯಾಧಿಪತಿಗಳು ಹಸಿದ ತೋಳಗಳು. ಕಡಿಯುವುದಕ್ಕೆ ಎಲುಬನ್ನು ಕೂಡ ಮರುದಿನದವರೆಗೆ ಉಳಿಸವು.


“ಆ ದಿನದಲ್ಲಿ ಜೆರುಸಲೇಮಿನಲ್ಲಿರುವ ಮೀನುಬಾಗಿಲಿನ ಬಳಿ ಕೂಗಾಟವನ್ನು, ಪಟ್ಟಣದ ಹೊಸ ಬಡಾವಣೆಯಲ್ಲಿ ಗೋಳಾಟವನ್ನು, ಹಾಗೂ ಬೆಟ್ಟಗುಡ್ಡಗಳಲ್ಲಿ ಭೀಕರ ಗದ್ದಲವನ್ನು ಕೇಳುವಿರಿ. ಇದು ಸರ್ವೇಶ್ವರಸ್ವಾಮಿಯ ನುಡಿ.


ಅವರ ದುಷ್ಕೃತ್ಯಗಳ ನಿಮಿತ್ತವೇ ನಾಡು ಕಂಪಿಸುವುದು; ನಿವಾಸಿಗಳೆಲ್ಲರು ದುಃಖಿಸುವರು. ನಾಡೆಲ್ಲವು ನೈಲ್ ನದಿಯಂತೆ ಉಬ್ಬುವುದು. ಅಲ್ಲೋಲಕಲ್ಲೋಲವಾಗಿ ಈಜಿಪ್ಟಿನ ನದಿಯಂತೆ ಕುಗ್ಗಿ ಕರಗಿಹೋಗುವುದು.


ಯಾಜಕರೇ, ಗೋಣಿತಟ್ಟನ್ನುಟ್ಟು ರೋದಿಸಿರಿ; ಬಲಿಪೀಠದ ಪರಿಚಾರಕರೇ, ಪ್ರಲಾಪಿಸಿರಿ; ದೇವರ ದಾಸರೇ, ಬನ್ನಿ; ಗೋಣಿತಟ್ಟನ್ನುಟ್ಟು ಜಾಗರಣೆ ಮಾಡಿರಿ. ದೇವರ ಆಲಯದಲ್ಲಿ ಧಾನ್ಯಪಾನ ನೈವೇದ್ಯಗಳು ನಿಂತುಹೋಗಿವೆ.


ಬೇತಾವೆನಿನ ಬಸವನಿಗೆ ಸಮಾರ್ಯದ ನಿವಾಸಿಗಳು ದಿಗಿಲುಗೊಳ್ಳುವರು; ಅದನ್ನು ಕಾಣದುದಕ್ಕಾಗಿ ಭಕ್ತಜನರು ಎದೆಬಡಿದುಕೊಳ್ಳುವರು. ಅದರ ಮಹಿಮೆ ನಂದಿಹೋಯಿತು ಎಂದು ಪೂಜಾರಿಗಳು ಗೋಳಾಡುವರು.


“ಎದೋಮ್ಯರಿಗೆ ನಿತ್ಯ ನೆಲೆಯಾದ ಗೋಮಾಳಕ್ಕೆ ಇದೋ ಜೋರ್ಡನ್ ದಟ್ಟಡವಿಯಿಂದ ಸಿಂಹದೋಪಾದಿ ಏರಿಬರುವೆನು. ಕ್ಷಣಮಾತ್ರದಲ್ಲಿ ಅವರನ್ನು ಅಲ್ಲಿಂದ ಓಡಿಸಿಬಿಡುವೆನು. ಅದನ್ನು ಪಾಲಿಸುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನ್ಯಾಯವಿಚಾರಣೆಗೆ ನನ್ನನ್ನು ಎಳೆಯುವಂಥ ವ್ಯಕ್ತಿ ಯಾರು? ಮಂದೆಯನ್ನು ಕಾಯುವ ಯಾವನು ತಾನೆ ನನ್ನೆದುರಿಗೆ ನಿಲ್ಲಬಲ್ಲನು?


ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ಇಳಿಸುವೆನು. ಈ ನಗರವು ವಿಶ್ವದ ಜನರಿಗೆಲ್ಲ ಶಾಪಗ್ರಸ್ತ ನಗರವಾಗುವಂತೆ ಮಾಡುವೆನು.”


‘ಇದು ಸರ್ವೇಶ್ವರನ ಗರ್ಭಗುಡಿ, ಸರ್ವೇಶ್ವರನ ಗರ್ಭಗುಡಿ, ಸರ್ವೇಶ್ವರನ ಗರ್ಭಗುಡಿ, (ಆದುದರಿಂದ ಎಲ್ಲ ಸುಭದ್ರ)’ ಎಂಬ ಮೋಸಕರ ಮಾತುಗಳಲ್ಲಿ ಭರವಸೆ ಇಡಬೇಡಿ.


ನಾನು ನಿಮ್ಮನ್ನು ದಂಡಿಸಿದ್ದು ವ್ಯರ್ಥವಾಯಿತು, ನೀವು ತಿದ್ದುಕೊಳ್ಳಲಿಲ್ಲ. ಸಂಹರಿಸುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ಕತ್ತಿಗೆ ತುತ್ತಾಗಿಸಿದ್ದೀರಿ.


ಶತ್ರುಗಳು ಯುವ ಸಿಂಹಗಳಂತೆ ಅವನಿಗೆ ವಿರುದ್ಧ ಗರ್ಜಿಸಿ ಆರ್ಭಟಿಸುತ್ತಿವೆ; ಅವನ ನಾಡನ್ನು ಹಾಳುಮಾಡಿವೆ, ಅವನ ಊರುಗಳು ಸುಟ್ಟು ನಿರ್ಜನವಾಗಿವೆ.


ಆಯ್ಕೆಯಾದವರಿಗೆ ನಿಮ್ಮ ಹೆಸರು ಶಾಪದ ಹೆಸರಾಗಿಯೇ ಉಳಿಯುವುದು. ಏಕೆಂದರೆ, ಸ್ವಾಮಿ ಸರ್ವೇಶ್ವರ ಆದ ನಾನು ನಿಮ್ಮನ್ನು ಕೊಲೆಗೀಡುಮಾಡುವೆನು. ನನ್ನ ಭಕ್ತಾದಿಗಳಿಗಾದರೋ ಹೊಸ ಹೆಸರನ್ನು ಕೊಡುವೆನು.


ರಕ್ಷಿಸೆನ್ನನು ಸಿಂಹದ ಬಾಯಿಂದ I ಬಿಡಿಸು ಕಾಡುಕೋಣದ ಕೊಂಬಿನಿಂದ II


ಗರ್ಜಿಸುತಿಹರು ಸೈನಿಕರು ಸಿಂಹದಂತೆ, ಆರ್ಭಟಿಸುತಿಹರವರು ಪ್ರಾಯದ ಸಿಂಹಗಳಂತೆ, ಗುರುಗುಟ್ಟುತಿಹರು ಬೇಟೆ ಹಿಡಿದ ಕೇಸರಿಯಂತೆ. ಅದನ್ನೆತ್ತಿಕೊಂಡು ಓಡುತಿಹರು, ಬಿಡಿಸುವರಾರೂ ಇಲ್ಲದಂತೆ.


ತುರಾಯಿಮರವೇ, ಗೋಳಾಡು ಬಿದ್ದುಹೋಗಿದೆ ದೇವದಾರು ನಾಶವಾಗಿವೆ ಭಾರೀ ಮರಗಳು. ರೋಧಿಸಲಿ ಬಾಷಾನಿನ ಅಲ್ಲೋನ್ ವೃಕ್ಷಗಳು ಉರುಳಿವೆ ನುಗ್ಗಲಾಗದಾ ದಟ್ಟವನಗಳು.


ಇಗೋ, ನಿನ್ನ ತಾಯಿ, ಸಿಂಹಗಳ ಮಧ್ಯೆ ಸಿಂಹಿಣಿ, ಸಾಕಿದಳು ತನ್ನ ಮರಿಗಳನು, ಯುವ ಸಿಂಹಗಳ ನಡುವೆ ಪವಡಿಸಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು