Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 12:12 - ಕನ್ನಡ ಸತ್ಯವೇದವು C.L. Bible (BSI)

12 ನಾಡೆಲ್ಲ ಗೋಳಾಡುವುದು, ಒಂದೊಂದು ಕುಟುಂಬವೂ ಪ್ರತ್ಯೇಕವಾಗಿ ಗೋಳಾಡುವುದು. “ದಾವೀದ ವಂಶದ ಕುಟುಂಬವೇ ಬೇರೆಯಾಗಿ, ಅದರಲ್ಲಿನ ಗಂಡಸರು ಹೆಂಗಸರು ಬೇರೆಬೇರೆಯಾಗಿ; ನಾತಾನ ವಂಶದ ಕುಟುಂಬವೇ ಬೇರೆಯಾಗಿ, ಅದರಲ್ಲಿನ ಗಂಡಸರು ಹೆಂಗಸರು ಬೇರೆಬೇರೆಯಾಗಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದೇಶವೆಲ್ಲಾ ಗೋಳಾಡುವುದು, ಒಂದೊಂದು ಕುಟುಂಬವು ಬೇರೆ ಬೇರೆಯಾಗಿ ಗೋಳಾಡುವುದು; ದಾವೀದ ವಂಶದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು, ಗಂಡಸರು ಬೇರೆ ಬೇರೆ; ನಾತಾನ ವಂಶದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು ಗಂಡಸರು ಬೇರೆ ಬೇರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ದೇಶವೆಲ್ಲಾ ಗೋಳಾಡುವದು, ಒಂದೊಂದು ಕುಟುಂಬವು ಬೇರೆ ಬೇರೆ ಗೋಳಾಡುವದು; ದಾವೀದ ವಂಶದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು ಗಂಡಸರು ಬೇರೆ ಬೇರೆ; ನಾತಾನ ವಂಶದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು, ಗಂಡಸರು ಬೇರೆ ಬೇರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಪ್ರತಿಯೊಂದು ಕುಟುಂಬವೂ ರೋಧಿಸುವದು. ದಾವೀದನ ಕುಲದವರೂ ಗೋಳಾಡುವರು. ಅವರ ಹೆಂಡತಿಯರೂ ಗೋಳಾಡುವರು. ನಾತಾನಿನ ಕುಟುಂಬದವರೂ ಗೋಳಾಡುವರು; ಅವರ ಹೆಂಡತಿಯರೂ ಗೋಳಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ದೇಶವು ಗೋತ್ರ ಗೋತ್ರಗಳ ಪ್ರಕಾರ ಪ್ರತ್ಯೇಕವಾಗಿ ಗೋಳಾಡುವುದು. ದಾವೀದನ ಮನೆಯ ಕುಲವು ಪ್ರತ್ಯೇಕ, ಅವರ ಹೆಂಡತಿಯರು ಪ್ರತ್ಯೇಕ; ನಾತಾನನ ಮನೆತನದ ಕುಲವು ಪ್ರತ್ಯೇಕ, ಅವರ ಹೆಂಡತಿಯರು ಪ್ರತ್ಯೇಕ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 12:12
17 ತಿಳಿವುಗಳ ಹೋಲಿಕೆ  

ಇಗೋ ನೋಡು, ಮೇಘಾರೂಢನಾಗಿ ಬರುತಿಹನು ಪ್ರತಿಯೊಂದು ಕಣ್ಣೂ ಕಾಣುವುದು ಆತನನು, ಆತನನ್ನು ಇರಿದವರೂ ವೀಕ್ಷಿಸುವರು, ಗೋಳಾಡುವರಾತನನ್ನು ಕಂಡು ಲೋಕದ ಜನರೆಲ್ಲರು. ಹೌದು, ಅದರಂತೆಯೇ ಆಗುವುದು, ಆಮೆನ್.


ಎಲಿಯಕೀಮ್ ಮೆಲೆಯಾನಿಗೆ, ಮೆಲೆಯಾ ಮೆನ್ನನಿಗೆ, ಮೆನ್ನ ಮತ್ತಾಥನಿಗೆ, ಮತ್ತಾಥ ನಾತಾನನಿಗೆ, ನಾತಾನ್ ದಾವೀದನಿಗೆ ಹುಟ್ಟಿದರು.


ಆಗ ನರಪುತ್ರನ ಚಿಹ್ನೆ ಆಕಾಶದಲ್ಲಿ ಕಾಣಿಸಿಕೊಳ್ಳುವುದು. ಪೃಥ್ವಿಯ ಪ್ರಜೆಗಳೆಲ್ಲಾ ಅತ್ತು ಪ್ರಲಾಪಿಸುವರು. ನರಪುತ್ರನು ಶಕ್ತಿಸಾಮರ್ಥ್ಯದಿಂದಲೂ ಮಹಾಮಹಿಮೆಯಿಂದಲೂ ಮೇಘಾರೂಢನಾಗಿ ಆಗಮಿಸುವುದನ್ನು ಅವರು ಕಾಣುವರು.


ಅಲ್ಲದೆ, ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ದೇವಾಲಯದ ಯಾಜಕರನ್ನೂ ಪ್ರವಾದಿಗಳನ್ನೂ ಕಂಡು, “ನಾವು ಇಷ್ಟು ವರ್ಷಗಳಿಂದ ಅನುಸರಿಸಿಕೊಂಡು ಬಂದಂತೆ, 5ನೆಯ ತಿಂಗಳಲ್ಲಿ ಉಪವಾಸವಿದ್ದು ಪ್ರಲಾಪಿಸಬೇಕೋ?” ಎಂದು ವಿಚಾರಿಸಿಕೊಂಡು ಬರಬೇಕೆಂದು ಅವರಿಗೆ ಆಜ್ಞಾಪಿಸಿದರು.


ಅಲ್ಲಿ ಅವನಿಗೆ ಹುಟ್ಟಿದವರ ಹೆಸರುಗಳು ಇವು: ಶಮ್ಮೂವ, ಶೋಬಾಬ್, ನಾತಾನ್, ಸೊಲೊಮೋನ್,


ಆದುದರಿಂದ ಸತಿಪತಿಯರು ಒಬ್ಬರಿಗೊಬ್ಬರು ದಾಂಪತ್ಯಕರ್ತವ್ಯಗಳನ್ನು ನೆರವೇರಿಸಲು ನಿರಾಕರಿಸಬಾರದು. ಧ್ಯಾನ, ಪ್ರಾರ್ಥನೆಗಳಲ್ಲಿ ನಿರತರಾಗಿರಲು, ಸ್ವಲ್ಪಕಾಲ ಒಬ್ಬರನ್ನೊಬ್ಬರು ಅಗಲಿರಬಹುದು. ಆದರೆ ಅದಕ್ಕೆ ಪರಸ್ಪರ ಸಮ್ಮತಿ ಇರಬೇಕು. ಅನಂತರ ಒಂದುಗೂಡಬೇಕು. ಇಲ್ಲದೆ ಹೋದರೆ, ನಿಮ್ಮಲ್ಲಿ ಸಂಯಮ ಇಲ್ಲದಿರುವುದನ್ನು ಕಂಡು ಸೈತಾನನು ಪಾಪಕ್ಕೆ ಪ್ರಚೋದಿಸಬಹುದು.


ಜನರನ್ನು ಒಟ್ಟುಗೂಡಿಸಿರಿ; ಸಭೆಯನ್ನು ಏರ್ಪಡಿಸಿರಿ; ವೃದ್ಧರನ್ನು, ಮಕ್ಕಳನ್ನು, ಮೊಲೆಗೂಸುಗಳನ್ನು ಕರೆತನ್ನಿರಿ. ವಧೂವರರು ತಮ್ಮ ಕಲ್ಯಾಣಗೃಹದಿಂದ ಹೊರಟುಬರಲಿ.


ಎಫ್ರಯಿಮಿನ ಈ ಪ್ರಲಾಪ ನನ್ನ ಕಿವಿಗೆ ಬಿದ್ದಿದೆ: ‘ನೀನು ನನಗೆ ಶಿಕ್ಷೆ ವಿಧಿಸಿದೆ ಪಳಗದ ಹೋರಿಯಂತೆ ನಾನು ಆ ಶಿಕ್ಷೆಯನ್ನು ಅನುಭವಿಸಿದೆ. ನೀನು ನನ್ನನ್ನು ತಿರುಗಿಸು, ನೀ ತಿರುಗಿಸಿದ ಹಾಗೆ ನಾನು ತಿರುಗುವೆ. ನೀನೆ ನನ್ನ ದೇವರಾದ ಸರ್ವೇಶ್ವರನಲ್ಲವೆ?


ಸರ್ವೇಶ್ವರ ನನಗೆ ಹೀಗೆಂದರು : “ರಾಜನಿಗೂ ರಾಜಮಾತೆಗೂ ಈ ವರ್ತಮಾನವನ್ನು ತಿಳಿಸು - ‘ನೀವು ಇಳಿದುಬಂದು ನೆಲದಲ್ಲಿ ಕುಳಿತುಕೊಳ್ಳಿ. ನಿಮ್ಮ ಚೆಲುವಾದ ಕಿರೀಟ ಬಿದ್ದುಹೋಗಿದೆ ತಲೆಯಿಂದ.


ಲೋಕ ದುಃಖಿಸುವುದು ಆಕಾಶ ಕಪ್ಪಗಾಗುವುದು ಇದು ಸರ್ವೇಶ್ವರ ಆಡಿದ ಮಾತು. ಇದನ್ನು ಬದಲಾಯಿಸುವಂತಿಲ್ಲ. ಇದು ಅವರ ತೀರ್ಮಾನ; ಇದನ್ನು ರದ್ದುಗೊಳಿಸುವಂತಿಲ್ಲ.


ಇಗೋ ಕೇಳಿ, ಬೋಳು ಗುಡ್ಡಗಳ ಮೇಲಿಂದ ಒಂದು ಶಬ್ದ : ‘ನಾವು ಡೊಂಕುದಾರಿಯನ್ನು ಹಿಡಿದಿದ್ದೇವೆ. ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಯನ್ನು ಮರೆತುಬಿಟ್ಟಿದ್ದೇವೆ’ ಎಂದು ಇಸ್ರಯೇಲರು ಕಣ್ಣೀರು ಸುರಿಸುತ್ತಾ ದೇವರ ಕೃಪೆಯನ್ನು ಬೇಡುತ್ತಿದ್ದಾರೆ.


ಸರ್ವೇಶ್ವರಸ್ವಾಮಿ ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದರು. ಅವನು ದಾವೀದನ ಬಳಿಗೆ ಬಂದು ಹೀಗೆಂದು ಹೇಳಿದನು: “ಒಂದು ಊರಲ್ಲಿ ಇಬ್ಬರು ವ್ಯಕ್ತಿಗಳಿದ್ದರು. ಒಬ್ಬನು ಐಶ್ವರ್ಯವಂತ, ಇನ್ನೊಬ್ಬನು ಬಡವ.


ಆ ರಾತ್ರಿ ಫರೋಹನೂ ಅವನ ಪರಿವಾರದವರೂ ಈಜಿಪ್ಟಿನವರೆಲ್ಲರೂ ಎದ್ದು ನೋಡಿದಾಗ ಶವವಿಲ್ಲದ ಮನೆ ಒಂದೂ ಇರಲಿಲ್ಲ. ಆದ್ದರಿಂದ ಆ ದೇಶದಲ್ಲೆಲ್ಲಾ ದೊಡ್ಡ ಗೋಳಾಟ ಎದ್ದಿತು.


ಮೆಗಿದ್ದೋವಿನ ಕಣಿವೆಯಲ್ಲಿ ಆದಂತೆ, ಹದಾಧ್ - ರೀಮೋನ್‍ನಲ್ಲಿ ನಡೆದಂತೆ ಜೆರುಸಲೇಮಿನಲ್ಲಿ ಆ ದಿನದಂದು ದೊಡ್ಡ ಗೋಳಾಟವಾಗುವುದು.


ಲೇವಿ ವಂಶದ ಕುಟುಂಬವೇ ಬೇರೆಯಾಗಿ, ಅದರಲ್ಲಿನ ಗಂಡಸರು ಹೆಂಗಸರು ಬೇರೆಬೇರೆಯಾಗಿ; ಶಿಮ್ಮಿಯ ಸಂತಾನದ ಕುಟುಂಬವೇ ಬೇರೆಯಾಗಿ, ಅದರಲ್ಲಿನ ಗಂಡಸರು ಹೆಂಗಸರು ಬೇರೆಬೇರೆಯಾಗಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು