Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 12:3 - ಕನ್ನಡ ಸತ್ಯವೇದವು C.L. Bible (BSI)

3 ಆ ದಿನದಂದು ಜೆರುಸಲೇಮನ್ನು ಭಾರಿ ಬಂಡೆಯನ್ನಾಗಿ ಮಾಡುವೆನು. ಅದನ್ನು ಎತ್ತಲು ಯತ್ನಿಸುವವರೆಲ್ಲರಿಗೂ ತೀವ್ರ ಗಾಯವಾಗುವುದು. ವಿಶ್ವದ ರಾಷ್ಟ್ರಗಳು ಅದನ್ನು ಎತ್ತಿಹಾಕಲು ಕೂಡಿಬರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆ ದಿನದಲ್ಲಿ ನಾನು ಯೆರೂಸಲೇಮನ್ನು ಸಮಸ್ತ ಜನಗಳಿಗೂ, ಭಾರೀ ಬಂಡೆಯನ್ನಾಗಿ ಮಾಡುವೆನು; ಅದನ್ನು ಎತ್ತುವವರೆಲ್ಲರು ಜಜ್ಜಲ್ಪಡುವರು; ಲೋಕದ ಸಕಲ ರಾಜ್ಯಗಳು ಅದನ್ನೆತ್ತಿ ಹಾಕಲು ಕೂಡಿಬರುವವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆ ದಿನದಲ್ಲಿ ನಾನು ಯೆರೂಸಲೇಮನ್ನು ಸಮಸ್ತಜನಗಳಿಗೂ ಭಾರೀ ಬಂಡೆಯನ್ನಾಗಿ ಮಾಡುವೆನು; ಅದನ್ನೆತ್ತುವವರೆಲ್ಲರಿಗೂ ಕಡುಗಾಯವಾಗುವದು; ಲೋಕದ ಸಕಲ ರಾಜ್ಯಗಳು ಅದನ್ನೆತ್ತಿಹಾಕಲು ಕೂಡಿಬರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದರೆ ನಾನು ಜೆರುಸಲೇಮನ್ನು ಒಂದು ಭಾರವಾದ ಬಂಡೆ ಕಲ್ಲಿನಂತೆ ಮಾಡುವೆನು. ಅದನ್ನು ತೆಗೆಯಲು ಯತ್ನಿಸುವವನು ಗಾಯಗೊಳ್ಳುವನು. ಆದರೂ ಲೋಕದ ಎಲ್ಲಾ ದೇಶಗಳವರು ಜೆರುಸಲೇಮಿಗೆ ವಿರುದ್ಧವಾಗಿ ಯುದ್ಧಕ್ಕೆ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆ ದಿವಸದಲ್ಲಿ, ಅವಳ ವಿರೋಧವಾಗಿ ಭೂಮಿಯ ಜನಾಂಗಗಳೆಲ್ಲಾ ಒಟ್ಟುಗೂಡಿಕೊಳ್ಳುವಾಗ, ನಾನು ಯೆರೂಸಲೇಮನ್ನು ಎಲ್ಲಾ ಜನರಿಗೆ ಚಲಿಸಲಾಗದ ಕಲ್ಲಾಗಿ ಮಾಡುತ್ತೇನೆ. ಅದನ್ನು ತೆಗೆದುಹಾಕಲು ಪ್ರಯತ್ನಿಸುವವರೆಲ್ಲರು ತಮ್ಮನ್ನು ತಾವೇ ಗಾಯಗೊಳಿಸಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 12:3
31 ತಿಳಿವುಗಳ ಹೋಲಿಕೆ  

ಅಷ್ಟೇ ಅಲ್ಲದೆ, ಆ ಕಲ್ಲಿನ ಮೇಲೆ ಬೀಳುವವನು ಛಿದ್ರಛಿದ್ರನಾಗುವನು. ಯಾವನ ಮೇಲೆ ಆ ಕಲ್ಲು ಬೀಳುವುದೋ ಅವನು ಜಜ್ಜಿಹೋಗುವನು’.”


ಈ ಕಲ್ಲಿನ ಮೇಲೆ ಬೀಳುವ ಪ್ರತಿಯೊಬ್ಬನೂ ಛಿದ್ರಛಿದ್ರವಾಗುವನು. ಯಾವನ ಮೇಲೆ ಈ ಕಲ್ಲು ಬೀಳುವುದೋ ಅವನು ಜಜ್ಜಿಹೋಗುವನು,” ಎಂದರು.


ಆ ದಿನ ಬಂದಾಗ ಚಳಿಯಾಗಲೀ ಮಂಜಾಗಲೀ ಇರದು. ಕತ್ತಲು ಕವಿಯದು.


ಸೇನಾಧೀಶ್ವರ ಸರ್ವೇಶ್ವರ ಹೀಗೆ ಹೇಳುತ್ತಾರೆ: “ಆ ದಿನದಂದು ದಾವೀದ ವಂಶದವರಿಗೆ ಮತ್ತು ಜೆರುಸಲೇಮಿನವರಿಗೆ ಪಾಪದ ಅಶುದ್ಧತೆಯನ್ನು ಪರಿಹರಿಸಬಲ್ಲ ಒಂದು ಬುಗ್ಗೆ ಕಾಣಿಸಿಕೊಳ್ಳುವುದು.


ಮೆಗಿದ್ದೋವಿನ ಕಣಿವೆಯಲ್ಲಿ ಆದಂತೆ, ಹದಾಧ್ - ರೀಮೋನ್‍ನಲ್ಲಿ ನಡೆದಂತೆ ಜೆರುಸಲೇಮಿನಲ್ಲಿ ಆ ದಿನದಂದು ದೊಡ್ಡ ಗೋಳಾಟವಾಗುವುದು.


ಇವು ಪವಾಡ ಕಾರ್ಯಗಳನ್ನು ಎಸಗುವ ದೆವ್ವಾತ್ಮಗಳು. ಸರ್ವಶಕ್ತ ದೇವರ ಮಹಾದಿನದಲ್ಲಿ ನಡೆಯುವ ಯುದ್ಧಕ್ಕಾಗಿ ಭೂಲೋಕದ ರಾಜರುಗಳನ್ನೆಲ್ಲಾ ಒಟ್ಟುಗೂಡಿಸಲು ಅವು ಹೊರಟವು.


ಸರ್ವೇಶ್ವರ ಆ ದಿನದಂದು ನಾಡಿನಲ್ಲಿ ಕೋಲಾಹಲವನ್ನೆಬ್ಬಿಸಲು , ಜನರು ಭಯಭೀತಿಗೆ ಒಳಗಾಗುವರು . ಒಬ್ಬರನ್ನೊಬ್ಬರು ತಡೆಹಿಡಿದು ಹೊಡೆದಾಡುವರು.


“ಆ ದಿನದಂದು ಜುದೇಯದ ಕುಲನಾಯಕರನ್ನು ಕಟ್ಟಿಗೆಯ ಮಧ್ಯೆ ಇರುವ ಅಗ್ಗಿಷ್ಟಿಕೆಯನ್ನಾಗಿಯೂ ಸಿವುಡುಗಳ ನಡುವೆ ಉರಿಯುವ ಪಂಜನ್ನಾಗಿಯೂ ಮಾಡುವೆನು. ಅವರು ಸುತ್ತಮುತ್ತಲಿನ ರಾಷ್ಟ್ರಗಳನ್ನು ಎಡಬಲವೆನ್ನದೆ ನಾಶಮಾಡುವರು. ಜೆರುಸಲೇಮಿನ ನಿವಾಸಿಗಳಾದರೋ ತಮ್ಮ ನಗರದಲ್ಲೇ ಸುರಕ್ಷಿತವಾಗಿರುವರು.


ಆಗ ಅವರ ಕುದುರೆಗಳೆಲ್ಲ ತಬ್ಬಿಬ್ಬಾಗುವಂತೆ ಮಾಡುವೆನು. ರಾಹುತರನ್ನು ದಿಗ್ಭ್ರಮೆಗೊಳಿಸುವೆನು. ಜುದೇಯ ಮನೆತನವನ್ನು ಕಟಾಕ್ಷಿಸಿ, ಇತರ ರಾಷ್ಟ್ರಗಳ ಕುದುರೆಗಳನ್ನೆಲ್ಲಾ ಕುರುಡಾಗಿಸುವೆನು.


ರಾಜ್ಯಗಳ ಸಿಂಹಾಸನವನ್ನು ಕೆಡವಿಬಿಡುವೆನು. ರಾಷ್ಟ್ರಗಳ ಸಂಸ್ಥಾನಬಲವನ್ನು ಧ್ವಂಸಮಾಡುವೆನು. ರಥಗಳನ್ನೂ ರಥಾರೂಢರನ್ನೂ ದಬ್ಬಿಬಿಡುವೆನು. ಕುದುರೆಗಳೂ ರಾಹುತರೂ ಬಿದ್ದುಹೋಗುವರು; ಒಬ್ಬನು ಮತ್ತೊಬ್ಬನ ಕತ್ತಿಗೆ ತುತ್ತಾಗುವನು.”


ಆ ದಿನದಲಿ ಇಂತೆನ್ನುವನು: “ದಂಡಿಸುವೆನು ನಿನ್ನನು ಬಾಧಿಸಿದವರನು ಉದ್ಧರಿಸುವೆನು ನಿನ್ನಲ್ಲಿ ಕುಂಟುವವರನು ಒಂದುಗೂಡಿಸುವೆನು ಚದರಿಹೋದವರನು ಬರಮಾಡುವೆನು ಅವಮಾನಿತರಿಗೆ ಸನ್ಮಾನವನು ಗಿಟ್ಟಿಸುವೆನು ನಿಮಗೆ ಜಗದಲ್ಲೆಲ್ಲ ಕೀರ್ತಿಯನು.


ನೀನು ಜನರ ರಕ್ತವನ್ನು ಸುರಿಸಿರುವೆ. ನಾಡುಗಳನ್ನೂ ನಗರಗಳನ್ನೂ ಅವುಗಳ ನಿವಾಸಿಗಳನ್ನೂ ಹಿಂಸಿಸಿರುವೆ. ಲೆಬನೋನ್ ಅರಣ್ಯಗಳನ್ನೂ ಕಡಿದುಹಾಕಿರುವೆ. ಈಗ ನಿನ್ನನ್ನೇ ಕಡಿದುಹಾಕಲಾಗುವುದು. ಅದರ ಪ್ರಾಣಿಪಕ್ಷಿಗಳನ್ನು ನಾಶಮಾಡಿರುವೆ. ಈಗ ಅವು ನಿನಗೆ ಭಯಾನಕವಾಗಿರುವುವು.


ನನ್ನ ಮಾತನ್ನು ಕೇಳದ ರಾಷ್ಟ್ರಗಳಿಗೆ ಉಗ್ರಕೋಪದಿಂದ ಮುಯ್ಯಿತೀರಿಸುವೆನು.”


ಸಿಂಹವು ತಿರುಗಾಡುತ್ತಾ ಕಾಡುಮೃಗಗಳನ್ನು ಕಬಳಿಸುತ್ತದೆ. ಪ್ರಾಯದ ಸಿಂಹವು ಓಡಾಡುತ್ತಾ ಸುರಕ್ಷಣೆಯಿಲ್ಲದ ಕುರಿಮಂದೆಗಳನ್ನು ಸೀಳಿಹಾಕುತ್ತದೆ. ಅಂತೆಯೇ ಯಕೋಬನ ಅಳಿದುಳಿದ ಜನರು ದೇಶವಿದೇಶಗಳ ಹಲವಾರು ರಾಷ್ಟ್ರಗಳ ನಡುವೆ ನಾಶಕರವಾಗಿರುವರು.


ಯಕೋಬವಂಶ ಅಗ್ನಿಯಂತೆ; ಜೋಸೆಫನ ವಂಶ ಜ್ವಾಲೆಯಂತೆ. ಇವೆರಡೂ ಸೇರಿ ಕೂಳೆಯಂತೆ ಇರುವ ಏಸಾವಿನ ವಂಶವನ್ನು ಧಗಧಗನೆ ದಹಿಸಿ ಭಸ್ಮಮಾಡುವುವು. ಏಸಾವಿನ ವಶದಲ್ಲಿ ಯಾರೂ ಉಳಿಯುವುದಿಲ್ಲ.” ಇದು ಸರ್ವೇಶ್ವರಸ್ವಾಮಿಯ ನುಡಿ.


ನಾಶವಾಗುವುವು ನಿನ್ನ ಸೇವೆಮಾಡಲೊಲ್ಲದ ರಾಜ್ಯಗಳು, ಜನಾಂಗಗಳು; ಹೌದು, ಸಂಪೂರ್ಣವಾಗಿ ಹಾಳಾಗುವುವು ಆ ಜನಾಂಗಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು