Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 12:6 - ಕನ್ನಡ ಸತ್ಯವೇದವು C.L. Bible (BSI)

6 “ಆ ದಿನದಂದು ಜುದೇಯದ ಕುಲನಾಯಕರನ್ನು ಕಟ್ಟಿಗೆಯ ಮಧ್ಯೆ ಇರುವ ಅಗ್ಗಿಷ್ಟಿಕೆಯನ್ನಾಗಿಯೂ ಸಿವುಡುಗಳ ನಡುವೆ ಉರಿಯುವ ಪಂಜನ್ನಾಗಿಯೂ ಮಾಡುವೆನು. ಅವರು ಸುತ್ತಮುತ್ತಲಿನ ರಾಷ್ಟ್ರಗಳನ್ನು ಎಡಬಲವೆನ್ನದೆ ನಾಶಮಾಡುವರು. ಜೆರುಸಲೇಮಿನ ನಿವಾಸಿಗಳಾದರೋ ತಮ್ಮ ನಗರದಲ್ಲೇ ಸುರಕ್ಷಿತವಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ಆ ದಿನದಲ್ಲಿ ನಾನು ಯೆಹೂದದ ಕುಲಪತಿಗಳನ್ನು ಸೌದೆಯ ಮಧ್ಯದಲ್ಲಿನ ಅಗ್ಗಿಷ್ಟಿಕೆಯನ್ನಾಗಿಯೂ, ಸಿವುಡುಗಳ ನಡುವಣ ಪಂಜನ್ನಾಗಿಯೂ ಮಾಡುವೆನು; ಅವರು ಸುತ್ತಣ ಜನಾಂಗಗಳನ್ನೆಲ್ಲಾ ಎಡಬಲಗಳಲ್ಲಿ ನುಂಗಿಬಿಡುವರು; ಯೆರೂಸಲೇಮಿನವರು ತಮ್ಮ ಸ್ಥಳವಾದ ಯೆರೂಸಲೇಮಿನಲ್ಲೇ ಇನ್ನು ವಾಸಿಸುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆ ದಿನದಲ್ಲಿ ನಾನು ಯೆಹೂದದ ಕುಲಪತಿಗಳನ್ನು ಸೌದೆಯ ಮಧ್ಯದಲ್ಲಿನ ಅಗ್ಗಿಷ್ಟಿಕೆಯನ್ನಾಗಿಯೂ ಸಿವುಡುಗಳ ನಡುವಣ ಪಂಜನ್ನಾಗಿಯೂ ಮಾಡುವೆನು; ಅವರು ಸುತ್ತಣ ಜನಾಂಗಗಳನ್ನೆಲ್ಲಾ ಎಡಬಲಗಳಲ್ಲಿ ನುಂಗಿಬಿಡುವರು; ಯೆರೂಸಲೇವಿುನವರು ತಮ್ಮ ಸ್ಥಳವಾದ ಯೆರೂಸಲೇವಿುನಲ್ಲಿಯೇ ಇನ್ನು ವಾಸಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆ ಸಮಯದಲ್ಲಿ ಯೆಹೂದದ ಕುಲ ಪ್ರಧಾನರನ್ನು ನಾನು ಕಾಡಿನಲ್ಲಿ ಉರಿಯುವ ಬೆಂಕಿಯಂತೆ ಮಾಡುವೆನು. ಅವರು ಹುಲ್ಲು ಸುಡುವ ಬೆಂಕಿಯೋಪಾದಿಯಲ್ಲಿ ತಮ್ಮ ವೈರಿಗಳನ್ನು ನಾಶಮಾಡುವರು. ತಮ್ಮ ಸುತ್ತಮುತ್ತಲಿರುವ ವೈರಿಗಳನ್ನು ನಾಶಮಾಡುವರು. ಜೆರುಸಲೇಮಿನ ಜನರು ಮತ್ತೆ ನೆಮ್ಮದಿಯಿಂದ ವಾಸಿಸುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ಆ ದಿವಸದಲ್ಲಿ ನಾನು ಯೆಹೂದದ ಕುಲಪತಿಗಳನ್ನು ಕಟ್ಟಿಗೆಯ ಮಧ್ಯದಲ್ಲಿರುವ ಬೆಂಕಿಯ ಒಲೆಯ ಹಾಗೆಯೂ, ಸಿವುಡುಗಳಲ್ಲಿರುವ ಬೆಂಕಿಯ ಪಂಜಿನ ಹಾಗೆಯೂ ಮಾಡುವೆನು. ಅವರು ಬಲಗಡೆಯಲ್ಲಿಯೂ, ಎಡಗಡೆಯಲ್ಲಿಯೂ ಸುತ್ತಲಿರುವ ಎಲ್ಲಾ ಜನಗಳನ್ನೂ ನುಂಗಿಬಿಡುವರು. ಆದರೆ ಯೆರೂಸಲೇಮಿನವರು ತಿರುಗಿ ತನ್ನ ಸ್ಥಳದಲ್ಲಿ ಯೆರೂಸಲೇಮಿನಲ್ಲಿಯೇ ಸುರಕ್ಷಿತವಾಗಿ ವಾಸಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 12:6
25 ತಿಳಿವುಗಳ ಹೋಲಿಕೆ  

ಯಕೋಬವಂಶ ಅಗ್ನಿಯಂತೆ; ಜೋಸೆಫನ ವಂಶ ಜ್ವಾಲೆಯಂತೆ. ಇವೆರಡೂ ಸೇರಿ ಕೂಳೆಯಂತೆ ಇರುವ ಏಸಾವಿನ ವಂಶವನ್ನು ಧಗಧಗನೆ ದಹಿಸಿ ಭಸ್ಮಮಾಡುವುವು. ಏಸಾವಿನ ವಶದಲ್ಲಿ ಯಾರೂ ಉಳಿಯುವುದಿಲ್ಲ.” ಇದು ಸರ್ವೇಶ್ವರಸ್ವಾಮಿಯ ನುಡಿ.


“ಅಳೆಯಲು ಹೋಗುತ್ತಿರುವ ಆ ಯುವಕನಿಗೆ ಓಡಿಹೋಗಿ ಈ ಮಾತನ್ನು ತಿಳಿಸು: ‘ಜೆರುಸಲೇಮಿನಲ್ಲಿ ಜನರ ಮತ್ತು ದನಕರುಗಳ ಸಂಖ್ಯೆ ಅಪಾರವಾಗುವುದು. ಅದು ಪೌಳಿಗೋಡೆಗಳಿಲ್ಲದ ಊರುಕೇರಿಗಳಂತೆ ಹರಡಿಕೊಳ್ಳುವುದು.


ರಕ್ಷಿಸುವನು ಸೇನಾಧೀಶ್ವರ ಸರ್ವೇಶ್ವರ ತನ್ನ ಜನರನು ನಸುಕಿ ನಾಶಮಾಡುವರವರು ಕವಣೆಗಾರ ಶತ್ರುಗಳನು. ಭೋರ್ಗರೆಯುವರು ಕುಡಿದು ಅಮಲೇರಿದವರಂತೆ ಇರುವರು ತುಂಬಿ ತುಳುಕುವ ಬೋಗುಣಿಗಳಂತೆ ರಕ್ತತೋಯ್ದ ವೇದಿಯ ಮೂಲೆಮೂಲೆಗಳಂತೆ.


ಸರ್ವೇಶ್ವರ ಇಂತೆನ್ನುತ್ತಾರೆ: “ಸಿಯೋನ್ ನಗರಿಯೇ, ಎದ್ದು ಒಕ್ಕಣೆಮಾಡು. ಇದಕ್ಕಾಗಿ ನಿನ್ನ ಕೊಂಬನ್ನು ಕಬ್ಬಿಣವಾಗಿಸುವೆನು. ನಿನ್ನ ಗೊರಸನ್ನು ಕಂಚನ್ನಾಗಿ ಮಾಡುವೆನು. ಅನೇಕ ರಾಷ್ಟ್ರಗಳನ್ನು ನೀನು ತುಳಿದು ಧ್ವಂಸಮಾಡುವೆ. ಅವುಗಳನ್ನು ಕೊಳ್ಳೆಹೊಡೆದು ತಂದ ಸ್ವತ್ತನ್ನು ಸರ್ವೇಶ್ವರಸ್ವಾಮಿಗೆ ಮೀಸಲಾಗಿಡುವೆ. ಅವುಗಳಿಂದ ಬಂದ ಆಸ್ತಿಯನ್ನು ಲೋಕದೊಡೆಯನಿಗೆ ಪ್ರತ್ಯೇಕಿಸಿಡುವೆ.”


ಯಕೋಬನ ಮನೆಗಳ ದುರವಸ್ಥೆಯನ್ನು ತಪ್ಪಿಸುವೆನು ಜೆರುಸಲೇಮಿನ ನಿವಾಸಗಳನ್ನು ನಿಶ್ಚಯವಾಗಿ ಕರುಣಿಸುವೆನು. ಅದರ ಹಾಳುದಿಬ್ಬಗಳ ಮೇಲೆ ಹೊಸನಗರ ಕಟ್ಟುವೆನು ಅದರ ಅರಮನೆ ಮೊದಲಿದ್ದ ಸ್ಥಳದಲ್ಲೆ ನೆಲೆಯಾಗಿ ನಿಲ್ಲುವುದು.


ಏಕೆಂದರೆ ಹಬ್ಬಿಕೊಳ್ಳುವೆ ನೀನು ಎಡಬಲದೊಳು ಎಲ್ಲೆಲ್ಲು, ವಶಮಾಡಿಕೊಳ್ಳುವರು ನಿನ್ನ ಸಂತಾನದವರು ಜನಾಂಗಗಳನು. ಜನಭರಿತವಾಗುವಂತೆ ಮಾಡುವರು ಪಾಳುಬಿದ್ದ ಪಟ್ಟಣಗಳನು.


ಅತ್ತ ಕಿತ್ತುತಿಂದರೂ ಅವರಿಗೆ ತೃಪ್ತಿಯಿಲ್ಲ. ಇತ್ತ ಕುಡಿದು ಕಬಳಿಸಿದರೂ ಅವರ ಹಸಿವು ನೀಗುವುದಿಲ್ಲ. ಒಬ್ಬೊಬ್ಬನೂ ತನ್ನ ಕಂದನನ್ನೇ ಕೊಂದು ತಿನ್ನುತ್ತಾನೆ.


ಅವರು ದೇಶದಲ್ಲೆಲ್ಲಾ ಹರಡಿಕೊಂಡು ದೇವಜನರ ಪಾಳೆಯಕ್ಕೂ ದೇವರ ಪ್ರಿಯ ಪಟ್ಟಣಕ್ಕೂ ಮುತ್ತಿಗೆ ಹಾಕಿದರು. ಆಗ ಸ್ವರ್ಗದಿಂದ ಬೆಂಕಿ ಇಳಿದುಬಂದು ಅವರನ್ನು ದಹಿಸಿಬಿಟ್ಟಿತು.


ಸತ್ಯೋಕ್ತಿ, ದೈವಶಕ್ತಿ, ಇವುಗಳಿಂದಲೂ ನಾವು ದೇವರ ದಾಸರೆಂದು ತೋರ್ಪಡಿಸುತ್ತೇವೆ. ರಕ್ಷಿಸಲೂ ಎದುರಿಸಲೂ ಧರ್ಮವೆಂಬ ಆಯುಧವನ್ನು ಕೈಯಲ್ಲಿ ಹಿಡಿದಿದ್ದೇವೆ.


ತೆರೆ, ಲೆಬನೋನೇ ನಿನ್ನ ಪುರದ್ವಾರಗಳನು ದಹಿಸಿಬಿಡಲಿ ಅಗ್ನಿ ನಿನ್ನ ದೇವದಾರುಗಳನು!


ಪವಿತ್ರಭೂಮಿಯಲ್ಲಿ ಜುದೇಯ ನಾಡನ್ನು ಸ್ವಾಮಿ ತಮ್ಮ ಸೊತ್ತಾಗಿ ಮಾಡಿಕೊಳ್ಳುವರು. ಜೆರುಸಲೇಮನ್ನು ತಮಗಾಗಿ ಮರಳಿ ಆರಿಸಿಕೊಳ್ಳುವರು.


ಆದುದರಿಂದ ನಾನು ಕರುಣಾಮಯನಾಗಿ ಜೆರುಸಲೇಮಿಗೆ ಹಿಂದಿರುಗಿ ಬಂದಿದ್ದೇನೆ. ಅಲ್ಲಿ ನನ್ನ ಆಲಯವನ್ನು ಮರಳಿ ಕಟ್ಟಲಾಗುವುದು. ಜೆರುಸಲೇಮ್ ನಗರವನ್ನು ವಾಸ್ತುಶಿಲ್ಪಕ್ಕೆ ತಕ್ಕಂತೆ ನಿರ್ಮಿಸಲಾಗುವುದು. ಇದು ಸೇನಾಧೀಶ್ವರ ಸರ್ವೇಶ್ವರನ ನುಡಿ.”


ಆಗ ಜುದೇಯದ ನಾಯಕರೆಲ್ಲ ತಮ್ಮ ತಮ್ಮೊಳಗೇ: ‘ಜೆರುಸಲೇಮಿನ ನಿವಾಸಿಗಳ ಶಕ್ತಿಸಾಮರ್ಥ್ಯ ಸೇನಾಧೀಶ್ವರ ಸರ್ವೇಶ್ವರನಾದ ದೇವರೇ’ ಎಂದುಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು