Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 13:1 - ಕನ್ನಡ ಸತ್ಯವೇದವು C.L. Bible (BSI)

1 ಸೇನಾಧೀಶ್ವರ ಸರ್ವೇಶ್ವರ ಹೀಗೆ ಹೇಳುತ್ತಾರೆ: “ಆ ದಿನದಂದು ದಾವೀದ ವಂಶದವರಿಗೆ ಮತ್ತು ಜೆರುಸಲೇಮಿನವರಿಗೆ ಪಾಪದ ಅಶುದ್ಧತೆಯನ್ನು ಪರಿಹರಿಸಬಲ್ಲ ಒಂದು ಬುಗ್ಗೆ ಕಾಣಿಸಿಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆ ದಿನದಲ್ಲಿ ಪಾಪವನ್ನೂ, ಅಶುಚಿಯನ್ನೂ ಪರಿಹರಿಸತಕ್ಕ ಒಂದು ಬುಗ್ಗೆಯು ದಾವೀದ ವಂಶದವರಿಗೂ, ಯೆರೂಸಲೇಮಿನವರಿಗೂ ತೆರೆದಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆ ದಿನದಲ್ಲಿ ಪಾಪವನ್ನೂ ಅಶುಚಿಯನ್ನೂ ಪರಿಹರಿಸತಕ್ಕ ಒಂದು ಬುಗ್ಗೆಯು ದಾವೀದ ವಂಶದವರಿಗೂ ಯೆರೂಸಲೇವಿುನವರಿಗೂ ತೆರೆದಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆದರೆ ಆ ಸಮಯದಲ್ಲಿ ಜೆರುಸಲೇಮಿನಲ್ಲಿ ವಾಸಿಸುವ ಜನರಿಗೂ ದಾವೀದನ ಕುಟುಂಬದವರಿಗೂ ಒಂದು ಹೊಸ ಬುಗ್ಗೆಯ ನೀರು ಚಿಮ್ಮುವದು. ಆ ಬುಗ್ಗೆಯು ಜನರ ಪಾಪಗಳನ್ನು ತೊಳೆದು ಶುದ್ಧಮಾಡುವದಕ್ಕಾಗಿ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಆ ದಿವಸದಲ್ಲಿ ದಾವೀದನ ಮನೆತನದವರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ಅವರ ಪಾಪದಿಂದ ಮತ್ತು ಅಶುದ್ಧತೆಯಿಂದ ಶುದ್ಧೀಕರಿಸಲು ಒಂದು ಬುಗ್ಗೆಯು ತೆರೆಯಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 13:1
34 ತಿಳಿವುಗಳ ಹೋಲಿಕೆ  

ತೊಳೆ ಪೂರ್ತಿಯಾಗಿ ಪಾಪದಿಂದೆನ್ನನು I ದೋಷಪರಿಹರಿಸಿ ಶುದ್ಧಗೊಳಿಸೆನ್ನನು II


ಹಿಂದೆ ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ. ಆದರೆ ಈಗ ಪ್ರಭು ಯೇಸುಕ್ರಿಸ್ತರ ನಾಮದಲ್ಲಿ ಮತ್ತು ದೇವರಾತ್ಮನಲ್ಲಿ ನೀವು ಶುದ್ಧರಾಗಿದ್ದೀರಿ, ಪುನೀತರಾಗಿದ್ದೀರಿ ಹಾಗೂ ದೇವರೊಡನೆ ಸತ್ಸಂಬಂಧ ಹೊಂದಿದ್ದೀರಿ.


ಮರುದಿನ ಯೊವಾನ್ನನು, ತಾನಿದ್ದಲ್ಲಿಗೇ ಯೇಸು ಬರುತ್ತಿರುವುದನ್ನು ಕಂಡು, “ಇಗೋ ನೋಡಿ, ಬಲಿಯರ್ಪಣೆಗಾಗಿ ದೇವರು ನೇಮಿಸಿರುವ ಕುರಿಮರಿ; ಲೋಕದ ಪಾಪಗಳನ್ನು ಪರಿಹರಿಸುವವರು ಇವರೇ.


ನಾನು ನಿಮ್ಮ ಮೇಲೆ ನಿರ್ಮಲೋದಕವನ್ನು ಪ್ರೋಕ್ಷಿಸುವೆನು, ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ಕ್ರಿಸ್ತಯೇಸುವೇ ಜಲ ಮತ್ತು ರಕ್ತದಿಂದ ಸಾಕ್ಷಿಹೊಂದಿದವರು. ಜಲದಿಂದ ಮಾತ್ರವಲ್ಲ ಜಲ ಮತ್ತು ರಕ್ತದಿಂದ ಸಾಕ್ಷಿಹೊಂದಿದವರು.


ಬದಲಿಗೆ, ದೇವರು ಬೆಳಕಿನಲ್ಲಿರುವಂತೆ ನಾವೂ ಬೆಳಕಿನಲ್ಲಿ ನಡೆದರೆ ನಮ್ಮಲ್ಲಿ ಪರಸ್ಪರ ಅನ್ಯೋನ್ಯತೆ ಇರುತ್ತದೆ. ಆಗ ದೇವರ ಪುತ್ರನಾದ ಯೇಸುವಿನ ರಕ್ತವು ನಮ್ಮನ್ನು ಎಲ್ಲ ಪಾಪದಿಂದಲೂ ಶುದ್ಧಗೊಳಿಸುತ್ತದೆ.


ಸ್ವಾಮಿ ಸರ್ವೇಶ್ವರಾ, ನೀವು ಇಸ್ರಯೇಲರ ಆಶ್ರಯ ! ನಿಮ್ಮನ್ನು ಬಿಟ್ಟುಹೋಗುವವರು ಆಶಾಭಂಗಪಡುವರು ಅವರು ಜೀವಜಲದ ಬುಗ್ಗೆಯನ್ನೆ ತೊರೆದವರು ತಮ್ಮ ಹೆಸರನ್ನು ಧೂಳಿನಲ್ಲಿ ಬರೆಸಿಕೊಂಡವರು.


ಬದಲಿಗೆ, ಯಾವ ನ್ಯೂನತೆಯೂ ಇಲ್ಲದ, ಯಾವ ಕಳಂಕವೂ ಇಲ್ಲದ ಬಲಿಯ ಕುರಿಮರಿಯಂಥ ಕ್ರಿಸ್ತಯೇಸುವಿನ ಅಮೂಲ್ಯ ರಕ್ತವೇ ಆ ಬೆಲೆ.


ಆ ದಿನದಂದು ಜೆರುಸಲೇಮನ್ನು ಭಾರಿ ಬಂಡೆಯನ್ನಾಗಿ ಮಾಡುವೆನು. ಅದನ್ನು ಎತ್ತಲು ಯತ್ನಿಸುವವರೆಲ್ಲರಿಗೂ ತೀವ್ರ ಗಾಯವಾಗುವುದು. ವಿಶ್ವದ ರಾಷ್ಟ್ರಗಳು ಅದನ್ನು ಎತ್ತಿಹಾಕಲು ಕೂಡಿಬರುವುವು.


ಹಿಸ್ಸೋಪಿನಿಂದ ನೀ ಚಿಮುಕಿಸೆ, ನಾ ಶುದ್ಧನಾಗುವೆ I ನೀ ತೊಳೆದೆಯಾದರೆ, ಹಿಮಕ್ಕಿಂತ ನಾ ಬೆಳ್ಳಗಾಗುವೆ II


ನಾನು ನಿಮ್ಮನ್ನು ನಿಮ್ಮ ಎಲ್ಲ ಅಶುದ್ಧತೆಯಿಂದ ಉದ್ಧರಿಸಿ, ಕಾಳನ್ನು ಬೆಳೆಯಲೆಂದು ಅಪ್ಪಣೆಕೊಟ್ಟು ಅದನ್ನು ವೃದ್ಧಿಗೊಳಿಸುವೆನು; ನಿಮಗೆ ಕ್ಷಾಮವನ್ನು ಇನ್ನು ಬರಮಾಡೆನು.


“ನರಪುತ್ರನೇ, ಇಸ್ರಯೇಲ್ ವಂಶದವರು ಸ್ವದೇಶದಲ್ಲಿ ವಾಸಿಸುತ್ತಿದ್ದಾಗ ತಮ್ಮ ದುರ್ಮಾರ್ಗ ದುರಾಚಾರಗಳಿಂದ ಅದನ್ನು ಅಶುದ್ಧಗೊಳಿಸಿದರು. ಅವರ ನಡತೆ ಮುಟ್ಟಿನ ಹೊಲಸಿನಂತೆ ನನಗೆ ಅಸಹ್ಯವಾಗಿತ್ತು.


ಆಗ ಒಡೆಯರಾದ ಸ್ವಾಮಿ ನ್ಯಾಯನಿರ್ಣಯ ಮಾಡುವ ತಮ್ಮ ಚೈತನ್ಯದಿಂದಲೂ ಸುಟ್ಟು ಶುಚಿಮಾಡುವ ಚೈತನ್ಯದಿಂದಲೂ ಸಿಯೋನಿನ ಮಹಿಳೆಯರ ಕಲ್ಮಶವನ್ನು ತೊಡೆದುಹಾಕುವರು.


“ನನ್ನ ಜನರು ಇಬ್ಬಗೆಯ ಅಪರಾಧಗಳನ್ನು ಎಸಗಿದ್ದಾರೆ; ಜೀವಜಲದ ಬುಗ್ಗೆಯಾದ ನನ್ನನ್ನೇ ತೊರೆದುಬಿಟ್ಟಿದ್ದಾರೆ! ತೊಟ್ಟಿಗಳನ್ನು, ನೀರುನಿಲ್ಲದ ಬಿರುಕು ತೊಟ್ಟಿಗಳನ್ನು ತಮಗಾಗಿ ಕೊರೆದುಕೊಂಡಿದ್ದಾರೆ!”


‘ಸರ್ವೇಶ್ವರ ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ದೇವಾಲಯದ ಯಾಜಕನನ್ನಾಗಿ ನೇಮಿಸಿದ್ದಾರೆ. ಯಾವನಾದರು ಮೈದುಂಬಿ ಪ್ರವಾದಿಯಾಗಿ ನಟಿಸಿದ್ದೇ ಆದರೆ ಅವನನ್ನು ಕೊಳಕ್ಕೆಹಾಕಿ, ಕೊರಳಿಗೆ ಕವೆಯೊಡ್ಡುವ ಅಧಿಕಾರವನ್ನು ನಿನಗೆ ವಹಿಸಿದ್ದಾರೆ.


ಅವರು ನನಗೆ ವಿರುದ್ಧವಾಗಿ ಮಾಡಿದ ಅಧರ್ಮವನ್ನೆಲ್ಲ ತೊಲಗಿಸಿ ಅವರನ್ನು ಶುದ್ಧೀಕರಿಸುವೆನು; ನನಗೆ ವಿರುದ್ಧ ಮಾಡಿರುವ ಪಾಪದ್ರೋಹಗಳನ್ನೆಸಗಿ ಕಟ್ಟಿಕೊಂಡಿರುವ ಅಪರಾಧಗಳನ್ನೆಲ್ಲ ಕ್ಷಮಿಸುವೆನು.


ಆಮೇಲೆ ಆ ಪುರುಷ ನನ್ನನ್ನು ದೇವಸ್ಥಾನದ ಬಾಗಿಲಿಗೆ ಪುನಃ ಕರೆದುತಂದನು; ಇಗೋ, ದೇವಸ್ಥಾನದ ಹೊಸ್ತಿಲ ಕೆಳಗಿನಿಂದ ನೀರು ಹೊರಟು ಪೂರ್ವದಕಡೆಗೆ ಹರಿಯುತ್ತಿತ್ತು. (ದೇವಸ್ಥಾನ ಪೂರ್ವಾಭಿಮುಖವಾಗಿತ್ತು). ಆ ನೀರು ದೇವಸ್ಥಾನದ ಬಲಗಡೆ ಕೆಳಗಿನಿಂದ ಹೊರಟು ಬಲಿಪೀಠದ ದಕ್ಷಿಣದಲ್ಲಿ ಹರಿಯುತ್ತಿತ್ತು.


ಮಿಕ್ಕ ಕುಟುಂಬಗಳೆಲ್ಲ ಬೇರೆಯಾಗಿ, ಅವುಗಳ ಗಂಡಸರು ಹೆಂಗಸರು ಬೇರೆಬೇರೆಯಾಗಿ; ಹೀಗೆ ಎಲ್ಲರು ಗೋಳಾಡುವರು ಬೇರೆಬೇರೆಯಾಗಿ.”


ಒರತೆ ಮೊದಲಾದ ಜಲಾಶಯಗಳನ್ನು ಮಾತ್ರ ನೀವು ಶುದ್ಧವೆಂದೆಣಿಸಬೇಕು. ಆದರೆ ಇವುಗಳೊಳಗಿಂದ ಆ ಹೆಣವನ್ನು ಎತ್ತಿದವನು ಅಶುದ್ಧನಾಗುವನು.


ಉದ್ಧರಿಸುವಾ ಒರತೆಗಳಿಂದ ಸೇದುವಿರಿ ನೀರನು ಹರುಷದಿಂದ.


ನಿನ್ನ ನುರಿತ ಮಂತ್ರತಂತ್ರಗಳನ್ನು ನಿಲ್ಲಿಸಿಬಿಡುವೆನು. ನಿನ್ನ ಮಂತ್ರವಾದಿಗಳನ್ನು ನಿರ್ಮೂಲಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು