Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 14:19 - ಕನ್ನಡ ಸತ್ಯವೇದವು C.L. Bible (BSI)

19 ಈಜಿಪ್ಟಿಗೂ ಪರ್ಣಕುಟೀರಗಳ ಹಬ್ಬವನ್ನು ಆಚರಿಸಲು ಬರದ ಸಕಲ ರಾಷ್ಟ್ರಗಳಿಗೂ ಸಂಭವಿಸುವ ದಂಡನೆ ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಐಗುಪ್ತಕ್ಕೂ ಪರ್ಣಶಾಲೆಗಳ ಹಬ್ಬವನ್ನು ಆಚರಿಸುವುದಕ್ಕೆ ಬರದಿರುವ ಸಕಲ ಜನಾಂಗಗಳಿಗೂ ಸಂಭವಿಸುವ ದಂಡನೆಯು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಐಗುಪ್ತಕ್ಕೂ ಪರ್ಣಶಾಲೆಗಳ ಹಬ್ಬವನ್ನು ಆಚರಿಸುವದಕ್ಕೆ ಬಾರದಿರುವ ಸಕಲ ಜನಾಂಗಗಳಿಗೂ ಸಂಭವಿಸುವ ದಂಡನೆಯು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಇದು ಕೇವಲ ಈಜಿಪ್ಟಿನ ಜನರಿಗೆ ಮಾತ್ರವೇ ಆಗಿರದೆ ಯಾವ ದೇಶವು ಪರ್ಣಶಾಲೆಗಳ ಹಬ್ಬವನ್ನು ಆಚರಿಸಲು ಬರುವುದಿಲ್ಲವೋ ಆ ದೇಶದ ಜನರೂ ಅದೇ ರೋಗಕ್ಕೆ ತುತ್ತಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಇದೇ ಈಜಿಪ್ಟಿನ ದಂಡನೆಯೂ, ಗುಡಾರಗಳ ಹಬ್ಬವನ್ನು ಆಚರಿಸುವುದಕ್ಕೆ ಬಾರದ ಎಲ್ಲಾ ಜನಾಂಗಗಳ ದಂಡನೆಯೂ ಆಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 14:19
5 ತಿಳಿವುಗಳ ಹೋಲಿಕೆ  

ಆ ತೀರ್ಪು ಏನೆಂದರೆ: ಜ್ಯೋತಿ ಜಗತ್ತಿಗೆ ಬಂದಿತು: ಮಾನವರಾದರೋ ತಮ್ಮ ದುಷ್ಕೃತ್ಯಗಳಿಂದಾಗಿ ಆ ಜ್ಯೋತಿಗೆ ಬದಲು ಅಂಧಕಾರವನ್ನೇ ಅವಲಂಭಿಸಿದರು.


ಈಜಿಪ್ಟಿನ ಮನೆತನದವರು ಬರದೆಹೋದರೆ, ಪರ್ಣಕುಟೀರಗಳ ಹಬ್ಬವನ್ನು ಆಚರಿಸಲು ಬರದ ರಾಷ್ಟ್ರಗಳಿಗೆ ಸರ್ವೇಶ್ವರ ವಿಧಿಸುವ ದಂಡನೆ ಅವರಿಗೂ ತಗಲುವುದು.


ಆ ದಿನ ಬಂದಾಗ ‘ಸರ್ವೇಶ್ವರಸ್ವಾಮಿಗೆ ಸಮರ್ಪಿತ’ ಎಂಬ ಲಿಪಿಯು ಕುದುರೆಗಳ ಕತ್ತಿಗೆ ಕಟ್ಟಿರುವ ಗಂಟೆಗಳ ಮೇಲೆ ಕೆತ್ತನೆ ಮಾಡಲಾಗಿರುವುದು. ದೇವಾಲಯದ ಪಾತ್ರೆಗಳೆಲ್ಲವು ಬಲಿಪೀಠದ ಪಾತ್ರೆಗಳಷ್ಟೆ ಪವಿತ್ರವಾಗಿರುವುವು.


“ಏಳನೆಯ ತಿಂಗಳಿನ ಹದಿನೈದನೆಯ ದಿನ ಮೊದಲ್ಗೊಂಡು ಏಳು ದಿನದವರೆಗೆ ಪರ್ಣಕುಟೀರಗಳ ಜಾತ್ರೆಯನ್ನು ಸರ್ವೇಶ್ವರನ ಗೌರವಾರ್ಥ ಆಚರಿಸಬೇಕು.


ಅಮವಾಸ್ಯೆಯಿಂದ ಅಮವಾಸ್ಯೆಯವರೆಗೆ ಸಬ್ಬತ್‍ದಿನದಿಂದ ಸಬ್ಬತ್‍ದಿನದವರೆಗೆ ಮನುಜರೆಲ್ಲರು ಬರುವರು ನನ್ನನ್ನು ಆರಾಧಿಸಲಿಕ್ಕೆ.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು