Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 2:10 - ಕನ್ನಡ ಸತ್ಯವೇದವು C.L. Bible (BSI)

10 ಸರ್ವೇಶ್ವರ ಇಂತೆನ್ನುತ್ತಾರೆ: “ಎಲೈ ಸಿಯೋನ್ ನಗರವೇ, ಸಂತೋಷಪಡು, ಜಯಕಾರ ಮಾಡು; ಇಗೋ, ನಾನೇ ಬಂದು ನಿನ್ನ ಮಧ್ಯೆ ವಾಸಿಸುವೆನು!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನು ಇಂತೆನ್ನುತ್ತಾನೆ, “ಚೀಯೋನ್ ನಗರಿಯೇ, ಉಲ್ಲಾಸಗೊಳ್ಳು, ಹರ್ಷಧ್ವನಿಗೈ! ಇಗೋ, ನಾನು ಬಂದು ನಿನ್ನ ಮಧ್ಯದಲ್ಲಿ ವಾಸಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೋವನು ಇಂತೆನ್ನುತ್ತಾನೆ - ಚೀಯೋನ್ ನಗರಿಯೇ, ಉಲ್ಲಾಸಗೊಳ್ಳು, ಹರ್ಷಧ್ವನಿಗೈ! ಇಗೋ, ನಾನು ಬಂದು ನಿನ್ನ ಮಧ್ಯದಲ್ಲಿ ವಾಸಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೋವನು ಹೀಗೆನ್ನುತ್ತಾನೆ, “ಚೀಯೋನೇ, ಆನಂದಿಸು, ಯಾಕೆಂದರೆ ನಾನು ಬಂದು ನಿಮ್ಮ ಪಟ್ಟಣದಲ್ಲಿ ವಾಸಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಚೀಯೋನ್ ಪುತ್ರಿಯೇ, ಹಾಡಿ ಹರ್ಷಿಸು. ಏಕೆಂದರೆ, ನಾನು ಬರುವೆನು ಮತ್ತು ನಾನು ನಿಮ್ಮ ಮಧ್ಯದಲ್ಲಿ ವಾಸಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 2:10
41 ತಿಳಿವುಗಳ ಹೋಲಿಕೆ  

ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


ಸರ್ವೇಶ್ವರ ಇಂತೆನ್ನುತ್ತಾರೆ: “ಸಿಯೋನಿಗೆ ಹಿಂದಿರುಗುವೆನು. ಜೆರುಸಲೇಮಿನ ನಡುವೆ ವಾಸಮಾಡುವೆನು. ಆಗ ಜೆರುಸಲೇಮ್ ‘ನಿಷ್ಠಾವಂತ ನಗರ’ ಎನಿಸಿಕೊಳ್ಳುವುದು. ಅದಕ್ಕೆ ಸೇನಾಧೀಶ್ವರನ ಪರ್ವತ, ಪವಿತ್ರ ಪರ್ವತ ಎಂಬ ಹೆಸರು ಬರುವುದು.”


ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು, ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮೀಸಲಾದ ಮಹಿಮೆಯೇ. ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು.


ಸಂತೋಷಿಸಿರಿ, ಆನಂದಿಸಿರಿ, ಸಿಯೋನಿನ ನಿವಾಸಿಗಳೇ, ಹರ್ಷೋದ್ಗಾರ ಮಾಡಿರಿ, ಜೆರುಸಲೇಮಿನ ಜನಗಳೇ, ಇಗೋ, ಬರುತಿಹನು ನಿಮ್ಮ ಅರಸನು ನ್ಯಾಯವಂತನು, ಜಯಶೀಲನು ಆತನು ವಿನಮ್ರನು, ಹೇಸರಗತ್ತೆಯನ್ನೇರಿ ಸಾಗಿಬರುತಿಹನು.


ಪ್ರಸನ್ನವಾಗಿಹನು ದೇವ, ಸರ್ವೇಶ ನಿನ್ನ ಮಧ್ಯೆ ಕೊಡುವನಾ ಶೂರ ನಿನಗೆ ರಕ್ಷಣೆ ಹರ್ಷಾನಂದಗೊಳ್ಳುವನು ನಿನ್ನ ವಿಷಯದಲಿ ಪುನಶ್ಚೇತನಗೊಳಿಸುವನು ನಿನ್ನನು ಪ್ರಶಾಂತ ಪ್ರೀತಿಯಲಿ ಗಾನಗೀತೆಗಳಿಂದ ತೋಷಿಸುವನು ನಿನ್ನಲಿ ಹಬ್ಬಹುಣ್ಣಿಮೆಗಳ ತರದಲಿ.


ಹೌದು, ನನ್ನ ವಾಸಸ್ಥಾನವು ಅವರ ಮಧ್ಯೆಯಿರುವುದು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


ನಿಮ್ಮ ನಡುವೆ ಸಂಚರಿಸುತ್ತಾ ನಿಮಗೆ ದೇವರಾಗಿರುವೆನು. ನೀವು ನನಗೆ ಪ್ರಜೆಗಳಾಗಿರುವಿರಿ.


ಆಗ ಸಿಂಹಾಸನದ ಕಡೆಯಿಂದ ಬಂದ ಮಹಾಧ್ವನಿ ಇಂತೆಂದಿತು : ಇಗೋ ಮಾನವರ ಮಧ್ಯೆಯೇ ಇದೆ ದೇವಾಲಯ, ಆತನವರೊಡನೆ ವಾಸಿಸುವನು; ಅವರಾತನಿಗೆ ಪ್ರಜೆಗಳಾಗುವರು; ದೇವರೇ ಅವರುಗಳ ಜೊತೆಗಾರ; ಆತನಲ್ಲದೆ ಅವರಿಗಿಲ್ಲ ಬೇರಾವ ದೇವ.


ಆಗ ಯೇಸು, “ನನ್ನನ್ನು ಪ್ರೀತಿಸುವವನು ನನ್ನ ಮಾತನ್ನು ಕೈಗೊಂಡು ನಡೆಯುವನು. ಅವನನ್ನು ನನ್ನ ಪಿತನೂ ಪ್ರೀತಿಸುವರು ಮತ್ತು ನಾವಿಬ್ಬರೂ ಅವನ ಬಳಿ ಬಂದು ಅವನಲ್ಲಿ ನೆಲೆಸುವೆವು.


ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ, ಇವು ಮತ್ತೆ ಕೇಳಿಬರುವುವು. ‘ಸೇನಾಧೀಶ್ವರ ಸರ್ವೇಶ್ವರನಿಗೆ ಕೃತಜ್ಞತಾಸ್ತೋತ್ರ ಮಾಡಿ; ಆತ ಒಳ್ಳೆಯವನು, ಆತನ ಪ್ರೀತಿ ಶಾಶ್ವತ’ ಎಂದು ಹಾಡುತ್ತಾ ಕೃತಜ್ಞತಾಬಲಿಯನ್ನು ದೇವಾಲಯಕ್ಕೆ ತರುವರು. ಅವರ ಗಾನ ನಿಮ್ಮ ಕಿವಿಗೆ ಬೀಳುವುದು. ನಾಡನ್ನು ಬಿಡುಗಡೆಮಾಡಿ ಹಿಂದಿನ ಸುಸ್ಥಿತಿಗೆ ಏರಿಸುವೆನು.


ಅವುಗಳಿಂದ ಸ್ತುತಿಸ್ತೋತ್ರ ಕೇಳಿಬರುವುದು ಅಲ್ಲಿಂದ ನಲಿವುನಾದ ಕೇಳಿಸುವುದು. ಆ ಜನರನ್ನು ಹೆಚ್ಚಿಸುವೆನು, ಅವರು ಕೊಂಚವಾಗಿರರು. ಅವರನ್ನು ಘನಪಡಿಸುವೆನು, ಅವರು ಹೀನರಾಗಿರರು.


ಇದನ್ನು ಕಂಡಾಗ ನಿಮ್ಮೆದೆ ಸಂತಸದಿಂದ ಉಬ್ಬುವುದು ಚಿಗುರುವುದು ಹಸಿಹುಲ್ಲಂತೆ ನಿಮ್ಮೆಲುಬು. ‘ಸರ್ವೇಶ್ವರನ ಕೃಪಾಹಸ್ತ ತನ್ನ ಭಕ್ತರ ಮೇಲೆ ಆತನ ರೋಷಾವೇಶ ಶತ್ರುಗಳ ಮೇಲೆ’ ಎಂಬುವುದು ವ್ಯಕ್ತವಾಗುವುದು ನಿಮಗೆ.


ಹಿಂದಿರುಗುವರು ಸರ್ವೇಶ್ವರನಿಂದ ರಕ್ಷಣೆ ಪಡೆದವರು ಉತ್ಸಾಹ ಗೀತೆಯೊಂದಿಗೆ ಸಿಯೋನನ್ನು ಸೇರುವರವರು. ಧರಿಸಿಕೊಳ್ಳುವರು ಶಾಶ್ವತ ಸಂತಸವೆಂಬ ಕಿರೀಟವನು ಅನುಭವಿಸುವರು ಹರ್ಷಾನಂದಗಳನು ತೊಲಗಿ ಓಡುವುವು ದುಃಖದುಗುಡಗಳು.


ಸಿಯೋನಿನ ನಿವಾಸಿಗಳೇ, ಹಾಡಿರಿ, ಮಾಡಿರಿ ಭಜನ ನಿಮ್ಮ ಮಧ್ಯೆಯಿರುವ ಆ ಘನವಂತನ ಇಸ್ರಯೇಲಿನಾ ಸ್ವಾಮಿ ಪರಮಪಾವನ.”


“ಎಫೆಸದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡಿದಿರುವಾತನೂ ಏಳು ಚಿನ್ನದ ದೀಪಸ್ತಂಭಗಳ ನಡುವೆ ನಡೆದಾಡುವಾತನೂ ನೀಡುವ ಸಂದೇಶವಿದು:


ಪ್ರಭುವಿನಲ್ಲಿ ನೀವು ಸತತವೂ ಆನಂದಿಸಿರಿ. ಆನಂದಿಸಬೇಕೆಂದು ಮತ್ತೆ ಒತ್ತಿ ಹೇಳುತ್ತೇನೆ.


ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: “ನಾನು ನನ್ನ ದೂತನನ್ನು ಮುಂದಾಗಿ ಕಳುಹಿಸುತ್ತೇನೆ. ನಾನು ಬರಲು ಮಾರ್ಗವನ್ನು ಆತನು ಸಿದ್ಧಗೊಳಿಸುವನು. ನೀವು ಎದುರು ನೋಡುತ್ತಿರುವ ಸರ್ವೇಶ್ವರ ಇದ್ದಕ್ಕಿದ್ದಂತೆ ತಮ್ಮ ಆಲಯಕ್ಕೆ ಬರುವರು. ಇಗೋ, ನಿಮಗೆ ಪ್ರಿಯನಾದ ದೂತನು ಬರುವನು. ನನ್ನ ಒಡಂಬಡಿಕೆಯನ್ನು ನಿಮಗೆ ಪ್ರಕಟಿಸುವನು.”


ನೀವು ಆ ಗುಡ್ಡಗಳ ನಡುವೆ ಉಂಟಾಗುವ ಕಣಿವೆಯ ಮೂಲಕ ಪಲಾಯನಗೈಯುವಿರಿ. ಆ ಕಣಿವೆ ಆಚೆಲಿನವರೆಗೆ ಹಬ್ಬಿರುವುದು. ಜುದೇಯದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪವಾದಾಗ ನೀವು ಮಾಡಿದಂತೆ ಪಲಾಯನ ಗೈಯುವಿರಿ. ಆಗ ನನ್ನ ದೇವರಾದ ಸರ್ವೇಶ್ವರ ತಮ್ಮ ದೂತರ ಸಮೇತ ಬರುವರು.


ಅವರು ಬಂದು ಹಾಡುವರು ಸಿಯೋನ್ ಶಿಖರದಲ್ಲಿ ಬರುವರು ಪ್ರವಾಹ ಪ್ರವಾಹವಾಗಿ ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕುರಿ, ಕುರಿಮರಿ, ಸರ್ವೇಶ್ವರನ ಈ ವರದಾನಗಳನ್ನು ಅನುಭವಿಸಲಿಕ್ಕಾಗಿ. ಹದವಾಗಿ ನೀರುಹಾಯಿಸಿದ ಉದ್ಯಾನವನದಂತೆ ಅವರ ಜೀವನ ಇನ್ನು ಅವರಿಗಿರದು ವ್ಯಸನ.


ನಾನು ಪಡೆಯುವೆ ಸರ್ವೇಶ್ವರನಲ್ಲಿ ಪರಮಾನಂದ ಹಿರಿಹಿಗ್ಗುವುದು ನನ್ನ ದೇವರಲಿ ನನ್ನಾತ್ಮ. ಮದುವಣಿಗನಿಗೆ ಬಾಸಿಂಗವನು ತೊಡಿಸುವಂತೆ ವಧುವಿಗೆ ಆಭರಣಗಳಿಂದ ಅಲಂಕರಿಸುವಂತೆ ಹೊದಿಸಿಹನಾತ ನನಗೆ ಮುಕ್ತಿಯೆಂಬ ವಸ್ತ್ರವನು ತೊಡಿಸಿಹನು ನನಗೆ ನೀತಿಯೆಂಬ ನಿಲುವಂಗಿಯನು.


ಆನಂದ ಗೀತೆಯನು ಹಾಡು ಹೆರದವಳೇ, ಬಂಜೆಯಾಗಿದ್ದವಳೇ; ಉಲ್ಲಾಸದಿಂದ ಅರಚು, ಬೇನೆಯನು ಅನುಭವಿಸದವಳೇ. ‘ಗಂಡನುಳ್ಳವಳಿಗಿಂತ ಹೆಚ್ಚು ಮಕ್ಕಳನ್ನು ಹೆರುವೆ’ ಎಂದು ಹೇಳುತ್ತಾರೆ ಸರ್ವೇಶ್ವರ ಸ್ವಾಮಿ ನಿನಗೆ.


ಸಮುದ್ರಯಾತ್ರಿಕರೇ, ಸಕಲ ಜಲಚರಗಳೇ, ದ್ವೀಪಗಳೇ, ದ್ವೀಪಾಂತರ ನಿವಾಸಿಗಳೇ, ನೂತನ ಗೀತವ ಹಾಡಿ ಹೊಗಳಿ ಸರ್ವೇಶ್ವರನನು, ದಿಗಂತಗಳಲ್ಲಿಯೂ ಕೀರ್ತಿಸಿ ಆತನನು.


ಹೇ ದೇವಾ, ಹೇ ಪ್ರಭು, ನೀನೇರಿದೆ ಉನ್ನತ ಶಿಖರಕೆ I ಕರೆದೊಯ್ದೆ ಖೈದಿಗಳನೇಕರನು ನಿನ್ನ ನಿವಾಸಕೆ I ಸರಳರಿಂದಲೂ ದುರುಳರಿಂದಲೂ ಪಡೆದೆ ಕಪ್ಪಕಾಣಿಕೆ I ದೇವರಾದ ಪ್ರಭುವೇ, ಅಲ್ಲೇ ನೀ ವಾಸಿಸುವೆ II


ನಾನೋಗೊಡುತ ಇಂತೆಂದೆ : “ಇಗೋ ನಾನೇ ಬರುತ್ತಿರುವೆ I ಗ್ರಂಥ ಸುರುಳಿಯಲಿ ನನ್ನ ಕುರಿತು ಲಿಖಿತವಾಗಿದೆಯಲ್ಲವೇ? II


ಹಿಂದಿರುಗುವರು ಸರ್ವೇಶ್ವರನಿಂದ ವಿಮೋಚನೆ ಪಡೆದವರು ಜಯಜಯಕಾರದೊಂದಿಗೆ ಸಿಯೋನನು ಸೇರುವರು. ನಿತ್ಯಾನಂದ ಸುಖವಿರುವುದು ಕಿರೀಟಪ್ರದವಾಗಿ ಸಿಗುವುದವರಿಗೆ ಹರ್ಷಾನಂದದ ಸವಿ ತೊಲಗುವುದು ದುಃಖದುಗುಡದ ಕಹಿ.


ತಮ್ಮ ಮಧ್ಯೆ ವಾಸವಾಗುವುದಕ್ಕಾಗಿಯೇ ತಮ್ಮನ್ನು ಈಜಿಪ್ಟಿನಿಂದ ಹೊರಗೆ ಬರಮಾಡಿದ ತಮ್ಮ ದೇವರಾದ ಸರ್ವೇಶ್ವರನು ನಾನೇ ಎಂದು ಅವರು ಅರಿತುಕೊಳ್ಳುವರು. ಹೌದು, ನಾನೇ ಅವರ ದೇವರಾದ ಸರ್ವೇಶ್ವರ ಸ್ವಾಮಿ.


“ನಿನ್ನನ್ನು ಪರಿಹಾಸ್ಯಮಾಡಿ ತಿರಸ್ಕರಿಸುತಿಹಳು ಕನ್ಯೆಯಾದ ಸಿಯೋನಿನ ಕುವರಿಯು, ನಿನ್ನ ಹಿಂದೆ ತಲೆಯಾಡಿಸಿ ಮೂದಲಿಸುತಿಹಳು ಜೆರುಸಲೇಮಿನ ಆ ಕುವರಿಯು.


ಪಟ್ಟಣದ ಸುತ್ತಳತೆ ಒಂಬತ್ತು ಸಾವಿರ ಮೀಟರ್‍ಗಳು. ಅದನ್ನು ನಿರ್ಮಿಸಿದಂದಿನಿಂದ ಆ ಪಟ್ಟಣಕ್ಕೆ ‘ಸರ್ವೇಶ್ವರನ ನೆಲೆ’ ಎಂದು ಹೆಸರಾಗುವುದು.


ಆದುದರಿಂದ ನಾನು ಕರುಣಾಮಯನಾಗಿ ಜೆರುಸಲೇಮಿಗೆ ಹಿಂದಿರುಗಿ ಬಂದಿದ್ದೇನೆ. ಅಲ್ಲಿ ನನ್ನ ಆಲಯವನ್ನು ಮರಳಿ ಕಟ್ಟಲಾಗುವುದು. ಜೆರುಸಲೇಮ್ ನಗರವನ್ನು ವಾಸ್ತುಶಿಲ್ಪಕ್ಕೆ ತಕ್ಕಂತೆ ನಿರ್ಮಿಸಲಾಗುವುದು. ಇದು ಸೇನಾಧೀಶ್ವರ ಸರ್ವೇಶ್ವರನ ನುಡಿ.”


ನಾನೇ ಅದರ ಸುತ್ತಮುತ್ತಲು ಅಗ್ನಿ ಪ್ರಾಕಾರವಾಗಿ, ಅದರೊಳಗಿನ ವೈಭವವಾಗಿರುವೆನು. ಇದು ಸರ್ವೇಶ್ವರಸ್ವಾಮಿಯ ನುಡಿ,’ ಎಂದ.”


ಆ ದಿನದಂದು ಹಲವಾರು ರಾಷ್ಟ್ರಗಳು ಸರ್ವೇಶ್ವರಸ್ವಾಮಿಯನ್ನು ಆಶ್ರಯಿಸಿಕೊಳ್ಳುವರು. ಅವರು ಆ ಸ್ವಾಮಿಯ ಜನರಾಗುವರು. ಸ್ವಾಮಿ ಅವರ ಮಧ್ಯೆ ವಾಸಿಸುವರು. ಸೇನಾಧೀಶ್ವರರಾದ ಆ ಸ್ವಾಮಿಯೇ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ ಎಂಬುದು ಆಗ ನಿಮಗೆ ಗೊತ್ತಾಗುವುದು.


“ಭೂಮಂಡಲದ ಚತುರ್ದಿಕ್ಕುಗಳಲ್ಲಿರುವ ಎಲ್ಲ ಜನಾಂಗಗಳಲ್ಲಿಯೂ ಸರ್ವೇಶ್ವರ ನಿಮ್ಮನ್ನು ಚದುರಿಸುವರು; ಅಲ್ಲಿ ನಿಮಗಾಗಲಿ ನಿಮ್ಮ ಪಿತೃಗಳಿಗಾಗಲಿ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.


ಹೊರಡಿರಿ ಬಾಬಿಲೋನ್ ನಗರದಿಂದ, ಓಡಿರಿ ಕಸ್ದೀಯರ ಕಡೆಯಿಂದ ಪ್ರಚುರಪಡಿಸಿರಿ ಹರ್ಷಧ್ವನಿಯಿಂದ, ಪ್ರಕಟಿಸಿರಿ ಭೂಮಿಯ ಕಟ್ಟಕಡೆಯ ತನಕ, ಈ ಪರಿ ತಿಳಿಸಿರಿ : “ಸರ್ವೇಶ್ವರ, ತಮ್ಮ ದಾಸ ಯಕೋಬನ ಉದ್ಧಾರಕ".


ಹೊರಡಿರಿ, ನೀವು ಹೊರಡಿರಿ ಬಾಬಿಲೋನಿನಿಂದ ಅಶುದ್ಧವಾದುವನ್ನು ಮುಟ್ಟದೆ ತೆರಳಿ ಅಲ್ಲಿಂದ. ಸರ್ವೇಶ್ವರನ ಆರಾಧನಾ ಉಪಕರಣಗಳನು ಹೊರುವವರೇ, ನಿಮ್ಮನು ನೀವೆ ಪರಿಶುದ್ಧವಾಗಿಸಿರಿಕೊಂಡು ತೆರಳಿ ಹೊರಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು