Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 3:7 - ಕನ್ನಡ ಸತ್ಯವೇದವು C.L. Bible (BSI)

7 “ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: ನೀನು ನನ್ನ ಮಾರ್ಗದಲ್ಲಿ ನಡೆದು, ನಾನು ನಿನಗೆ ವಹಿಸಿದ ಕಾರ್ಯವನ್ನು ನೆರವೇರಿಸಿದರೆ, ನನ್ನ ಆಲಯದ ಮುಖ್ಯಾಧಿಕಾರಿಯಾಗುವೆ. ಅದರ ವ್ಯಾಪ್ತಿಯಲ್ಲಿ ಉಳ್ಳ ಎಲ್ಲದಕ್ಕೂ ವ್ಯವಸ್ಥಾಪಕನಾಗುವೆ. ಈ ಸನ್ನಿಧಾನದ ದೂತರ ಮಧ್ಯೆ ಬಂದುಹೋಗುವ ಹಕ್ಕನ್ನು ನಿನಗೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನೀನು ನನ್ನ ಮಾರ್ಗಗಳಲ್ಲಿ ನಡೆದು, ನಾನು ನಿನಗೆ ವಹಿಸಿದ ಪಾರುಪತ್ಯವನ್ನು ನೆರವೇರಿಸಿದರೆ ನನ್ನ ಆಲಯದ ಮುಖ್ಯಾಧಿಕಾರಿಯಾಗಿ ನನ್ನ ಪ್ರಾಕಾರಗಳನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ನೀಡುವೆ; ನನ್ನ ಸನ್ನಿಧಾನದೂತರ ನಡುವೆ ಪ್ರವೇಶಿಸುವ ಹಕ್ಕನ್ನು ನಿನಗೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನೀನು ನನ್ನ ಮಾರ್ಗಗಳಲ್ಲಿ ನಡೆದು ನಾನು ನಿನಗೆ ವಹಿಸಿದ ಪಾರುಪತ್ಯವನ್ನು ನೆರವೇರಿಸಿದರೆ ನನ್ನ ಆಲಯದ ಮುಖ್ಯಾಧಿಕಾರಿಯಾಗಿ ನನ್ನ ಪ್ರಾಕಾರಗಳನ್ನು ನೋಡಿಕೊಳ್ಳುವಿ; ಈ ಸನ್ನಿಧಾನದೂತರ ನಡುವೆ ಪ್ರವೇಶಿಸುವ ಹಕ್ಕನ್ನು ನಿನಗೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ, “ನಾನು ಹೇಳುವ ರೀತಿಯಲ್ಲಿ ಜೀವಿಸು. ನಾನು ಹೇಳುವ ರೀತಿಯಲ್ಲಿ ನಡೆ. ನೀನು ನನ್ನ ಆಲಯದ ಮುಖ್ಯಾಧಿಕಾರಿಯಾಗುವೆ. ಅದರ ಅಂಕಣಗಳನ್ನು ನೀನು ನೋಡಿಕೊಳ್ಳುವೆ. ಇಲ್ಲಿ ನಿಂತಿರುವವರೊಂದಿಗೆ ನೀನು ಪ್ರವೇಶಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನೀನು ನನ್ನ ಮಾರ್ಗಗಳಲ್ಲಿ ನಡೆದು ನನ್ನ ಆಜ್ಞೆಗಳನ್ನು ಕೈಗೊಂಡರೆ, ಆಗ ನೀನು ನನ್ನ ಆಲಯಕ್ಕೂ ನ್ಯಾಯತೀರಿಸಿ, ನನ್ನ ಅಂಗಳಗಳನ್ನೂ ಕಾಯುವೆ. ಇಲ್ಲಿ ನಿಂತವರ ಬಳಿಯಲ್ಲಿ ನಡೆದಾಡುವ ಹಕ್ಕನ್ನು ನಿನಗೆ ಕೊಡುವೆನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 3:7
30 ತಿಳಿವುಗಳ ಹೋಲಿಕೆ  

ನಿನ್ನ ಸಂತತಿಯನ್ನು ಆಕಾಶದಲ್ಲಿರುವ ನಕ್ಷತ್ರಗಳಂತೆ ಅಸಂಖ್ಯಾತವಾಗಿಸುತ್ತೇನೆ; ಅವರಿಗೆ ಈ ನಾಡೆಲ್ಲವನ್ನು ಕೊಡುತ್ತೇನೆ. ಜಗದ ಜನಾಂಗಗಳಿಗೆಲ್ಲ ನಿನ್ನ ಸಂತತಿಯ ಮುಖಾಂತರ ಆಶೀರ್ವಾದ ದೊರಕುವುದು.”


ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ: ಹೊಸ ಸೃಷ್ಟಿಯಲ್ಲಿ ನರಪುತ್ರನು ತನ್ನ ಮಹಿಮಾನ್ವಿತ ಸಿಂಹಾಸನದ ಮೇಲೆ ಆಸೀನನಾಗುವಾಗ, ನನ್ನನ್ನು ಹಿಂಬಾಲಿಸಿರುವ ನೀವು ಕೂಡ, ಇಸ್ರಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯಾಧಿಪತಿಗಳಾಗಿ ಹನ್ನೆರಡು ಸಿಂಹಾಸನಗಳ ಮೇಲೆ ಆಸೀನರಾಗುವಿರಿ.


ಆದುದರಿಂದ ನೀವು ಆ ಆಜ್ಞೆಯ ಮೇರೆಗೆ ಏಳು ದಿನಗಳೂ ಹಗಲಿರುಳು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ಇರಬೇಕು; ಇಲ್ಲದಿದ್ದರೆ ಸಾಯುವಿರಿ. ಇದು ಸರ್ವೇಶ್ವರನ ಆಜ್ಞೆ.


ನಾನು ಜಯಗಳಿಸಿ ನನ್ನ ತಂದೆಯೊಡನೆ ಅವರ ಸಿಂಹಾಸನದಲ್ಲಿ ಕುಳಿತುಕೊಂಡಿದ್ದೇನೆ. ಅದೇ ಪ್ರಕಾರ ಜಯಹೊಂದಿದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.


ನನ್ನ ಪಿತನ ಆಸ್ಥಾನದಲ್ಲಿ ಅನೇಕ ನಿವಾಸಗಳು ಇವೆ. ಹಾಗಿಲ್ಲದ ಪಕ್ಷದಲ್ಲಿ ನಿಮಗೆ ತಿಳಿಸುತ್ತಿದ್ದೆ. ನಾನು ಹೋಗಿ ನಿಮಗೆ ಸ್ಥಳವನ್ನು ಅಣಿಗೊಳಿಸುತ್ತೇನೆ.


ನನ್ನ ಸಾಮ್ರಾಜ್ಯದಲ್ಲಿ ನನ್ನ ಸಂಗಡ ಊಟ ಮಾಡುವಿರಿ. ಪಾನ ಮಾಡುವಿರಿ, ಮಾತ್ರವಲ್ಲ ಇಸ್ರಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯಾಧಿಪತಿಗಳಾಗಿ ಸಿಂಹಾಸನಗಳ ಮೇಲೆ ಆಸೀನರಾಗುವಿರಿ.


ಅದಕ್ಕೆ ದೂತನು, “ಇವು ಆಕಾಶದ ನಾಲ್ಕು ಮಾರುತಗಳು; ಭೂಲೋಕದೊಡೆಯನ ಸಾನ್ನಿಧ್ಯದಿಂದ ಇದೀಗಲೆ ಹೊರಟುಬಂದಿವೆ,” ಎಂದನು.


ಅದಕ್ಕೆ ಅವನು, “ಇವು ದೇವರಿಂದ ಆಯ್ಕೆಯಾಗಿ ಎಣ್ಣೆಯಿಂದ ಅಭಿಷಿಕ್ತರಾದ ಇಬ್ಬರು ವ್ಯಕ್ತಿಗಳನ್ನು ಸೂಚಿಸುತ್ತವೆ. ಸರ್ವಲೋಕದ ಒಡೆಯನ ಸನ್ನಿಧಿಯಲ್ಲಿರುವ ಸೇವಕರನ್ನು ಸೂಚಿಸುತ್ತವೆ,” ಎಂದನು.


ಆ ಕ್ಷೇತ್ರ ಚಾದೋಕನ ಸಂತಾನದವರಲ್ಲಿ ನನಗಾಗಿ ಪ್ರತಿಷ್ಠಿತರು ಹಾಗು ನನ್ನ ಆಲಯದ ಪಾರುಪತ್ಯವನ್ನು ನೆರವೇರಿಸಿದವರು ಆದ ಯಾಜಕರಿಗೇ ಸೇರತಕ್ಕದ್ದು. ಇಸ್ರಯೇಲರು ನನ್ನನ್ನು ತೊರೆದಾಗ ಲೇವಿಯರೂ ತೊರೆದಂತೆ ಇವರು ತೊರೆಯಲಿಲ್ಲ.


ಹೀಗೆ ಅವರು ತಮ್ಮ ಸಹೋದರರಾದ ಆರೋನ್ಯರ ಸಹಾಯಕರಾಗಿದ್ದು, ದೇವದರ್ಶನದ ಗುಡಾರವನ್ನೂ ಪರಿಶುದ್ಧವಾದ ಎಲ್ಲಾ ಸಾಮಾನುಗಳನ್ನೂ ನೋಡಿಕೊಳ್ಳುವುದೇ ಸರ್ವೇಶ್ವರನ ಆಲಯದಲ್ಲಿ ಅವರು ಮಾಡಬೇಕಾಗಿದ್ದ ಪರಿಚರ್ಯೆ.


ನಿನ್ನ ದೇವರಾದ ಸರ್ವೇಶ್ವರಸ್ವಾಮಿಯ ಕಟ್ಟಳೆಯನ್ನು ಕೈಗೊಂಡು ಅವರ ಮಾರ್ಗದಲ್ಲೇ ನಡೆದುಕೋ; ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಅವರ ಆಜ್ಞಾನಿಯಮ-ವಿಧಿನಿರ್ಣಯಗಳನ್ನು ಪಾಲಿಸು. ಹೀಗೆ ಮಾಡುವುದಾದರೆ ನೀನು ಏನು ಮಾಡಿದರೂ ಎಲ್ಲಿಗೆ ಹೋದರೂ ಕೃತಾರ್ಥನಾಗುವೆ.


ನೀವು ನನ್ನ ಪರಿಶುದ್ಧ ವಸ್ತುಗಳ ಪಾರುಪತ್ಯ ಮಾಡಲಿಲ್ಲ; ಈ ಮ್ಲೇಚ್ಛರನ್ನು ನನ್ನ ಪವಿತ್ರಾಲಯದಲ್ಲಿ ನನ್ನ ವಸ್ತುಗಳ ಮೇಲೆ ಪಾರುಪತ್ಯಗಾರರನ್ನಾಗಿ ನೇಮಿಸಿಕೊಂಡಿರಿ; ನಿಮ್ಮ ಅಪಾರ ದುರಾಚಾರಗಳು ಇನ್ನು ಸಾಕು.


ಆಗ ಮೋಶೆ ಆರೋನನಿಗೆ: “’ನನ್ನ ಬಳಿಯಿರುವವರ ಮುಖಾಂತರವೆ ನನ್ನ ಪರಿಶುದ್ಧತೆಯನ್ನು ತೋರ್ಪಡಿಸುವೆ ಜನರೆಲ್ಲರ ಸಮ್ಮುಖದಲೆ ನನ್ನ ಮಹಿಮೆಯನು ಶೃತಪಡಿಸುವೆ, ಎಂಬ ಸರ್ವೇಶ್ವರನ ನುಡಿಗೆ ಇದೊಂದು ದೃಷ್ಟಾಂತವೇ ಸರಿ,” ಎಂದನು. ಅದಕ್ಕೆ ಆರೋನನು ಮೌನವಾಗಿದ್ದನು.


ನೀನು ನಿನ್ನ ತಂದೆ ದಾವೀದನಂತೆ ನನ್ನ ಮಾರ್ಗದಲ್ಲೇ ನಡೆದು ನನ್ನ ಆಜ್ಞಾವಿಧಿಗಳನ್ನು ಕೈಗೊಳ್ಳುವುದಾದರೆ ನಿನ್ನ ಆಯುಷ್ಯವನ್ನೂ ಹೆಚ್ಚಿಸುವೆನು,” ಎಂದರು.


ಬೆಳೆಮಾಡಿದವರೇ ಕಾಳನು ತಿಂದು ಸ್ತುತಿಸುವರು ಸರ್ವೇಶ್ವರನನು; ದ್ರಾಕ್ಷಿ ಕಿತ್ತವರೇ ಕುಡಿವರು ಈ ರಸವನು ನನ್ನಾಲಯದ ಅಂಗಳದೊಳು.”


ಬಳಿಕ ದೇವದೂತನು ಯೆಹೋಶುವನಿಗೆ ಈ ಆಶ್ವಾಸನೆಯನ್ನು ಕೊಟ್ಟನು:


ದೂರದಲ್ಲಿ ವಾಸಿಸುವ ಜನರು ಅಲ್ಲಿಗೆ ಬಂದು ಸರ್ವೇಶ್ವರಸ್ವಾಮಿಯ ಆಲಯವನ್ನು ಕಟ್ಟುವುದಕ್ಕೆ ನೆರವಾಗುವರು. ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದಾತ ಸೇನಾಧೀಶ್ವರ ಸರ್ವೇಶ್ವರಸ್ವಾಮಿಯೇ ಎಂಬುದು ನಿಮಗೆ ಮನದಟ್ಟಾಗುವುದು. ನಿಮ್ಮ ದೇವರಾದ ಆ ಸ್ವಾಮಿಯ ಮಾತನ್ನು ನೀವು ಮನಃಪೂರ್ವಕವಾಗಿ ಅನುಸರಿಸಿದರೆ ಇದೆಲ್ಲವೂ ಸರಿಯಾಗಿ ನೆರವೇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು