Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 4:12 - ಕನ್ನಡ ಸತ್ಯವೇದವು C.L. Bible (BSI)

12 (ಮತ್ತೆ ಅವನನ್ನು - “ತಮ್ಮೊಳಗಿಂದ ಚಿನ್ನದಂಥ ಎಣ್ಣೆಯನ್ನು ಪಾತ್ರೆಯಲ್ಲಿ ತುಂಬಿಸುವ ಎರಡು ಬಂಗಾರದ ನಾಳಗಳಿವೆಯಲ್ಲಾ; ಆ ನಾಳಗಳ ಬಾಯಿಗೆ ಸೇರಿರುವ ಎರಡು ಎಣ್ಣೆಕಾಯಿಗುತ್ತಿಗಳು ಏನು?” ಎಂದು ಕೇಳಿದೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮತ್ತೆ ನಾನು ಅವನಿಗೆ, ತಮ್ಮೊಳಗಿಂದ ಚಿನ್ನದಂಥ ಎಣ್ಣೆಯನ್ನು ಪಾತ್ರೆಯಲ್ಲಿ ತುಂಬಿಸುವ ಎರಡು ಬಂಗಾರದ ನಾಳಗಳಿವೆಯಲ್ಲಾ. ಆ ನಾಳಗಳ ಬಾಯಿಗೆ ಸೇರಿರುವ ಎರಡು ಎಣ್ಣೆಕಾಯಿಗುತ್ತಿಗಳು ಏನು? ಎಂದು ಕೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಮತ್ತೆ ಅವನನ್ನು - ತಮ್ಮೊಳಗಿಂದ ಚಿನ್ನದಂಥ ಎಣ್ಣೆಯನ್ನು ಪಾತ್ರೆಯಲ್ಲಿ ತುಂಬಿಸುವ ಎರಡು ಬಂಗಾರದ ನಾಳಗಳಿವೆಯಲ್ಲಾ; ಆ ನಾಳಗಳ ಬಾಯಿಗೆ ಸೇರಿರುವ ಎರಡು ಎಣ್ಣೆಕಾಯಿಗುತ್ತಿಗಳು ಏನು ಎಂದು ವಿಚಾರಿಸಿದ್ದಕ್ಕೆ ಅವನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ತಿರಿಗಿ ನಾನು ಅವನಿಗೆ, “ನಾನು ಆ ಎರಡು ಬಂಗಾರದ ನಳಿಗೆಯ ಬದಿಯಲ್ಲಿ ಆಲೀವ್ ಮರದ ಎರಡು ಕೊಂಬೆಗಳನ್ನು ನೋಡಿದೆನು. ಅದರಿಂದ ಬಂಗಾರದ ಬಣ್ಣದ ಎಣ್ಣೆಯು ಹರಿಯುತ್ತಿತ್ತು. ಇವುಗಳ ಅರ್ಥವೇನು?” ಎಂದು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಪುನಃ ನಾನು ಅವನಿಗೆ, “ಎರಡು ಚಿನ್ನದ ನಾಳಗಳಿಂದ ಚಿನ್ನದ ಎಣ್ಣೆಯನ್ನು ತಮ್ಮೊಳಗಿಂದ ಸುರಿಸುವ, ಈ ಎರಡು ಹಿಪ್ಪೆಕೊಂಬೆಗಳು ಏನು?” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 4:12
5 ತಿಳಿವುಗಳ ಹೋಲಿಕೆ  

ಲೋಕಾಧಿಪತಿಯಾದ ದೇವರ ಸಾನ್ನಿಧ್ಯದಲ್ಲಿರುವ ಎರಡು ಓಲಿವ್ ಮರಗಳು ಮತ್ತು ಎರಡು ದೀಪಸ್ತಂಭಗಳು ಇವರೇ.


ಆಗ ಯೇಸು, “ನನ್ನ ಪಾತ್ರೆಯಿಂದ ನೀವೇನೋ ಕುಡಿಯುವಿರಿ. ಆದರೆ ನನ್ನ ಬಲಗಡೆಯಲ್ಲಾಗಲೀ ಎಡಗಡೆಯಲ್ಲಾಗಲೀ ಆಸೀನರಾಗುವಂತೆ ಅನುಗ್ರಹಿಸುವುದು ನನ್ನದಲ್ಲ. ಅದು ಯಾರಿಗಾಗಿ ನನ್ನ ಪಿತನಿಂದ ಸಿದ್ಧಮಾಡಲಾಗಿದೆಯೋ ಅವರಿಗೇ ಸಿಗುವುದು," ಎಂದು ನುಡಿದರು.


ಪರ್ಷಿಯಾದ ಚಕ್ರವರ್ತಿಯಾದ ಡೇರಿಯಸ್ ಅವನ ಆಳ್ವಿಕೆಯ ಎರಡನೇ ವರ್ಷದ ಆರನೇ ತಿಂಗಳ ಮೊದಲನೆಯ ದಿನದಂದು ಪ್ರವಾದಿ ಹಗ್ಗಾಯನ ಮುಖಾಂತರ ಸರ್ವೇಶ್ವರಸ್ವಾಮಿ ನೀಡಿದ ದೈವೋಕ್ತಿ: ಅದು ಶೆಯಲ್ತಿಯೇಲನ ಮಗನೂ ಜುದೇಯ ನಾಡಿನ ದೇಶಾಧಿಪತಿಯೂ ಆದ ಜೆರುಬ್ಬಾಬೆಲನನ್ನು ಮತ್ತು ಯೆಹೋಚಾದಾಕನ ಮಗನೂ ಮಹಾಯಾಜಕನೂ ಆದ ಯೆಹೋಶುವನನ್ನು ಉದ್ದೇಶಿಸಿ ಕೊಡಲಾದ ಸಂದೇಶವಾಗಿತ್ತು.


ಪುನಃ ನಾನು ದೇವದೂತನನ್ನು, “ದೀಪಸ್ತಂಭದ ಎಡಬಲಗಳಲ್ಲಿರುವ ಎಣ್ಣೆಮರಗಳು ಏನನ್ನು ಸೂಚಿಸುತ್ತವೆ?” ಎಂದು ಕೇಳಿದೆ.


ಅದಕ್ಕೆ ಆ ದೂತನು: “ಅವು ಏನೆಂದು ನಿನಗೆ ತಿಳಿಯುವುದಿಲ್ಲವೋ” ಎಂದು ಕೇಳಿದಾಗ ನಾನು: “ಇಲ್ಲ, ಸ್ವಾಮೀ,” ಎಂದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು