Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 4:2 - ಕನ್ನಡ ಸತ್ಯವೇದವು C.L. Bible (BSI)

2 “ಏನನ್ನು ನೋಡುತ್ತಿರುವೆ?” ಎಂದು ಅವನು ನನ್ನನ್ನು ಕೇಳಿದಾಗ ನಾನು, “ಇಗೋ, ಏಳು ದೀಪಗಳುಳ್ಳ ಸುವರ್ಣಮಯ ದೀಪಸ್ತಂಭವೊಂದನ್ನು ನೋಡುತ್ತಿದ್ದೇನೆ. ಅದರ ಮೇಲ್ಗಡೆ ಎಣ್ಣೆಯ ಪಾತ್ರೆ ಇದೆ. ಅದರ ಮೇಲೆ ದೀಪಗಳಿಗೆ ಏಳು ನಾಳಗಳಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಇಗೋ, ಏಳು ದೀಪಗಳುಳ್ಳ ಸುವರ್ಣಮಯವಾದ ಒಂದು ದೀಪಸ್ತಂಭವನ್ನು ನೋಡುತ್ತೇನೆ; ಅದರ ಮೇಲಿನ ದೀಪಗಳಿಗೆ ಏಳು ನಾಳಗಳಿವೆ; ಅದರ ಮೇಲ್ಗಡೆ ಎಣ್ಣೆಯ ಪಾತ್ರೆಯಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇಗೋ, ಏಳು ದೀಪಸ್ತಂಭಗಳುಳ್ಳ ಸುವರ್ಣಮಯವಾದ ಒಂದು ದೀಪಸ್ತಂಭವನ್ನು ನೋಡುತ್ತೇನೆ; ಅದರ ಮೇಲಿನ ದೀಪಗಳಿಗೆ ಏಳು ನಾಳಗಳಿವೆ; ಅದರ ಮೇಲ್ಗಡೆ ಎಣ್ಣೆಯ ಪಾತ್ರೆಯಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಗ ದೂತನು, “ಏನು ನೋಡುತ್ತೀ?” ಎಂದು ಪ್ರಶ್ನಿಸಿದನು. ಆಗ ನಾನು “ಬಂಗಾರದ ದೀಪಸ್ತಂಭವನ್ನು ನೋಡುತ್ತಿದ್ದೇನೆ. ಆ ಸ್ತಂಭದಲ್ಲಿ ಏಳು ದೀಪಗಳಿವೆ. ದೀಪಸ್ತಂಭದ ಮೇಲೆ ಒಂದು ಬೋಗುಣಿ ಇದೆ. ಆ ಬೋಗುಣಿಯಿಂದ ಏಳು ನಳಿಗೆಗಳು ಪ್ರತೀ ದೀಪಕ್ಕೆ ಹೋಗುತ್ತವೆ. ಬೋಗುಣಿಯಲ್ಲಿಟ್ಟ ಎಣ್ಣೆಯು ಆ ನಳಿಗೆಯ ಮೂಲಕ ದೀಪಕ್ಕೆ ಸುರಿಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಿದ್ರೆ ಹತ್ತಿದವನಂತಿದ್ದ ನನ್ನನ್ನು ಎಬ್ಬಿಸಿದನು. ಅವನು ನನಗೆ, “ನೀನು ಏನು ನೋಡುತ್ತೀ?” ಎಂದು ಕೇಳಿದಾಗ ನಾನು, “ಏಳು ದೀಪಗಳುಳ್ಳ ಬಂಗಾರದ ದೀಪಸ್ತಂಭ ಒಂದನ್ನು ನೋಡುತ್ತಿದ್ದೇನೆ. ಅದರ ಮೇಲೆ ಎಣ್ಣೆಯ ಪಾತ್ರೆಗಳಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 4:2
19 ತಿಳಿವುಗಳ ಹೋಲಿಕೆ  

ಸಿಂಹಾಸನದಿಂದ ಮಿಂಚು, ಗುಡುಗು, ಗರ್ಜನೆಗಳು ಹೊರಹೊಮ್ಮುತ್ತಿದ್ದವು. ಆ ಸಿಂಹಾಸನದ ಮುಂದೆ ದೇವರ ಸಪ್ತ ಆತ್ಮಗಳನ್ನು ಸೂಚಿಸುವ ಸಪ್ತದೀಪಗಳು ಬೆಳಗುತ್ತಿದ್ದವು.


ನನ್ನ ಸಂಗಡ ಮಾತನಾಡುತ್ತಿರುವ ಈ ಶಬ್ದ ಯಾರದೆಂದು ನೋಡಲು ನಾನು ಹಿಂದಕ್ಕೆ ತಿರುಗಿದೆ. ಹಾಗೆ ತಿರುಗಿದಾಗ, ಏಳು ಚಿನ್ನದ ದೀಪಸ್ತಂಭಗಳನ್ನು ಕಂಡೆ.


ದೂತನು ನನ್ನನ್ನು, “ನಿನಗೆ ಏನು ಕಾಣಿಸುತ್ತಿದೆ?” ಎಂದು ಕೇಳಿದನು. ಅದಕ್ಕೆ ನಾನು “ಹಾರುತ್ತಿರುವ ಪತ್ರದ ಸುರುಳಿ ಕಾಣಿಸುತ್ತಿದೆ. ಅದರ ಉದ್ದ ಒಂಬತ್ತು ಮೀಟರ್, ಅಗಲ ನಾಲ್ಕುವರೆ ಮೀಟರ್,” ಎಂದು ಉತ್ತರಕೊಟ್ಟೆ.


ರಕ್ಷಾದಳದ ನಾಯಕನು ಬೆಳ್ಳಿ ಬಂಗಾರದ ಪಂಚಪಾತ್ರೆ, ಅಗ್ಗಿಷ್ಟಿಕೆ, ಬಟ್ಟಲು, ಬೋಗುಣಿ, ದೀಪಸ್ತಂಭ, ಸಾಂಬ್ರಾಣಿಕಳಸ, ಪಾನಾರ್ಪಣೆಯ ಪಾತ್ರೆ ಮೊದಲಾದವುಗಳನ್ನು ದೋಚಿಕೊಂಡನು.


ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ರಹಸ್ಯವಿಷ್ಟೆ: ಆ ಏಳು ನಕ್ಷತ್ರಗಳು ಏಳು ಸಭೆಗಳ ದೂತರನ್ನು ಸೂಚಿಸುತ್ತವೆ. ಆ ಏಳು ಚಿನ್ನದ ದೀಪಸ್ತಂಭಗಳು ಏಳು ಸಭೆಗಳನ್ನು ಸೂಚಿಸುತ್ತವೆ,” ಎಂದರು.


ಈ ಯಾಜಕರು ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಸರ್ವೇಶ್ವರನಿಗಾಗಿ ದಹನಬಲಿಗಳನ್ನು ಸಮರ್ಪಿಸುತ್ತಾ, ಸುಗಂಧದ್ರವ್ಯಗಳ ಧೂಪಾರತಿ ಎತ್ತುತ್ತಾ, ಚೊಕ್ಕಬಂಗಾರದ ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ, ಪ್ರತೀ ಸಾಯಂಕಾಲ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಸರ್ವೇಶ್ವರನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಅವರನ್ನು ತೊರೆದುಬಿಟ್ಟವರು.


ಅದೂ ಅಲ್ಲದೆ ನೇಮಕವಾದ ಮಾದರಿಯಂತೆ ಬಂಗಾರದ ಹತ್ತು ದೀಪಸ್ತಂಭಗಳನ್ನು ಮಾಡಿಸಿ, ಐದನ್ನು ದೇವಾಲಯದೊಳಗೆ ಬಲಗಡೆಯಲ್ಲೂ ಐದನ್ನು ಎಡಗಡೆಯಲ್ಲೂ ಇಡಿಸಿದನು.


ಇದಲ್ಲದೆ, ಆರಾಧನೆಯ ಆಯಾ ಆಚಾರಗಳಲ್ಲಿ ಉಪಯೋಗಿಸಬೇಕಾದ ಎಲ್ಲ ಸಾಮಾನುಗಳ ಬೆಳ್ಳಿ, ಬಂಗಾರದ ತೂಕ ಅಂದರೆ, ಬಂಗಾರದ ಹಣತೆಗಳಿರುವ ಬಂಗಾರದ ಪ್ರತಿಯೊಂದು ದೀಪಸ್ತಂಭದ ತೂಕ, ಬೇರೆ ಬೇರೆ ಕೆಲಸಗಳಿಗೆ ಉಪಯೋಗವಾಗುವ ಪ್ರತಿಯೊಂದು ಬೆಳ್ಳಿಯ ದೀಪಸ್ತಂಭದ ಮತ್ತು ಅದರ ಹಣತೆಗಳ ತೂಕ,


ಬೆಳ್ಳಿಯ ಸರ ಕಿತ್ತುಹೋಗುವುದು, ಚಿನ್ನದಬಟ್ಟಲು ಜಜ್ಜಿಹೋಗುವುದು; ಮಡಕೆ ಬುಗ್ಗೆಯ ಹತ್ತಿರವೆ ಒಡೆಯುವುದು, ಬಾವಿಯ ರಾಟೆ ಮುರಿಯುವುದು.


ಆಗ ಸರ್ವೇಶ್ವರ ನನ್ನನ್ನು, “ಯೆರೆಮೀಯನೇ, ನಿನಗೆ ಕಾಣುತ್ತಿರುವುದು ಏನು?” ಎಂದು ಕೇಳಿದರು. ನಾನು, “ಅಂಜೂರದ ಹಣ್ಣುಗಳನ್ನು ನೋಡುತ್ತಿದ್ದೇನೆ. ಒಳ್ಳೆಯ ಹಣ್ಣುಗಳು ಅತ್ತ್ಯುತ್ತಮವಾಗಿವೆ. ಕೆಟ್ಟ ಹಣ್ಣುಗಳು ಬಹಳ ಕೆಟ್ಟಿವೆ. ಯಾರೂ ತಿನ್ನಲಾಗದಷ್ಟು ಅಸಹ್ಯವಾಗಿವೆ,” ಎಂದು ಉತ್ತರಕೊಟ್ಟೆ.


ಅವರು ನನಗೆ: “ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವುದೇನು?” ಎಂದು ಕೇಳಿದರು. ನಾನು “ಒಂದು ನೂಲುಗುಂಡು,” ಎಂದು ಉತ್ತರಕೊಟ್ಟೆ. ಆಗ ಸ್ವಾಮಿ, “ಇಗೋ,ನನ್ನ ಜನರಾದ ಇಸ್ರಯೇಲಿನ ಮಧ್ಯೆ ನೂಲುಗುಂಡನ್ನು ಹಿಡಿದು ಅವರ ನಡತೆ-ಗೋಡೆ ನೆಟ್ಟಗಿಲ್ಲವೆಂದು ತೋರಿಸುವೆನು. ಅವರನ್ನು ಕಂಡೂ ಕಾಣದಂತಿರದೆ, ದಂಡಿಸಿಯೇ ತೀರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು