Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 6:7 - ಕನ್ನಡ ಸತ್ಯವೇದವು C.L. Bible (BSI)

7 “ಕೆಂಪು ಕುದುರೆಗಳು ಲೋಕದಲ್ಲೆಲ್ಲ ಗಸ್ತು ತಿರುಗಿ,” ಎಂದು ಅಪ್ಪಣೆಮಾಡಲು, ಅವು ಅಂತೆಯೇ ಮಾಡಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಕೆಂಪು ಕುದುರೆಗಳು ಬಂದು ಲೋಕದಲ್ಲಿ ಸಂಚರಿಸುವುದಕ್ಕೆ ಹೊರಡಬೇಕೆಂದು ತ್ವರೆಪಟ್ಟವು; ಆಗ ಅವನು, “ಹೊರಡಿರಿ, ಲೋಕದಲ್ಲಿ ಸಂಚರಿಸಿರಿ” ಎಂದು ಅಪ್ಪಣೆ ಮಾಡಲು ಅವು ಲೋಕದಲ್ಲಿ ಸಂಚರಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಕೆಂಪು ಕುದುರೆಗಳು ಬಂದು ಲೋಕದಲ್ಲಿ ಸಂಚರಿಸುವದಕ್ಕೆ ಹೊರಡಬೇಕೆಂದು ತ್ವರೆಪಟ್ಟವು; ಅವನು - ಹೊರಡಿರಿ, ಲೋಕದಲ್ಲಿ ಸಂಚರಿಸಿರಿ ಎಂದಪ್ಪಣೆಮಾಡಲು ಅವು ಲೋಕದಲ್ಲಿ ಸಂಚರಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಕೆಂಪು ಮಚ್ಚೆ ಇರುವ ಕುದುರೆಗಳು ತಮಗೆ ನೇಮಕವಾದ ಜಾಗಕ್ಕೆ ಹೋಗಿ ಅದನ್ನು ನೋಡಲು ಆತುರಗೊಂಡಿದ್ದವು. ಆಗ ದೂತನು ಅವುಗಳಿಗೆ, “ಹೋಗಿ, ಭೂಮಿಯ ಮೇಲೆ ಹೋಗಿ ಬನ್ನಿ” ಎಂದು ಹೇಳಿದಾಗ ಅವುಗಳು ಹೋಗಿ ತಮ್ಮ ಪ್ರಾಂತ್ಯದಲ್ಲಿ ನಡೆದಾಡಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಕೆಂಪು ಕುದುರೆಗಳ ರಥ ಹೊರಟು ಲೋಕದಲ್ಲಿ ಸಂಚಾರ ಮಾಡಲು ಹೋಗುವುದಕ್ಕೆ ನೋಡಿದವು. ಆಗ ಅವನು, “ಹೋಗಿ ಲೋಕದಲ್ಲಿ ಅತ್ತಿತ್ತ ನಡೆದಾಡುವುದಕ್ಕೆ ಇಲ್ಲಿಂದ ಹೋಗಿರಿ,” ಎಂದನು. ಹಾಗೆ ಅವು ದೇಶದಲ್ಲಿ ಅತ್ತಿತ್ತ ತಿರುಗಾಡಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 6:7
8 ತಿಳಿವುಗಳ ಹೋಲಿಕೆ  

ಕೂಡಲೆ ಸುಗಂಧ ವೃಕ್ಷಗಳ ನಡುವೆ ಇದ್ದವನು: “ಇವರು ಲೋಕದ ವೀಕ್ಷಣಾರ್ಥವಾಗಿ ದೇವರಿಂದ ಕಳುಹಿಸಲ್ಪಟ್ಟವರು” ಎಂದು ಉತ್ತರಕೊಟ್ಟ.


ಸರ್ವೇಶ್ವರ ಭೂಲೋಕದ ಎಲ್ಲಾ ಕಡೆ ದೃಷ್ಟಿಹರಿಸುತ್ತಾ ತಮ್ಮ ಕಡೆಗೆ ಯಥಾರ್ಥ ಮನಸ್ಸುಳ್ಳವರ ರಕ್ಷಣೆಗಾಗಿ ತಮ್ಮ ಪ್ರತಾಪವನ್ನು ತೋರ್ಪಡಿಸುತ್ತಾರೆ. ನೀವು ಈ ಕಾರ್ಯದಲ್ಲಿ ಬುದ್ಧಿಹೀನರಾಗಿ ನಡೆದುಕೊಂಡಿದ್ದೀರಿ; ಇಂದಿನಿಂದ ನಿಮಗೆ ಯುದ್ಧಗಳು ಇದ್ದೇ ಇರುತ್ತವೆ,” ಎಂದು ಹೇಳಿದನು.


ಆ ಹತ್ತು ಕೊಂಬುಗಳು ಅದೇ ರಾಜ್ಯವನ್ನು ಆಳುವ ಹತ್ತುಮಂದಿ ಅರಸರು. ಅವರ ತರುವಾಯ ಮತ್ತೊಬ್ಬನು ತಲೆದೋರುವನು. ಅವನು ಮುಂಚಿನ ಅರಸರಿಗಿಂತ ವಿಲಕ್ಷಣವಾಗಿರುವನು, ಆ ಮೂವರು ಅರಸರನ್ನು ಸದೆಬಡಿದುಬಿಡುವನು.


ಅದಾದ ಮೇಲೆ ಇತರ ಮೃಗಗಳಿಗಿಂತ ವಿಲಕ್ಷಣವಾಗಿಯೂ ಅತಿಭಯಂಕರವಾಗಿಯೂ ಕಬ್ಬಿಣದ ಹಲ್ಲು, ಕಂಚಿನ ಉಗುರು ಉಳ್ಳದ್ದಾಗಿಯೂ ತನ್ನ ಬಲಿಯನ್ನು ತುಂಡುತುಂಡಾಗಿಸಿ ಕಬಳಿಸುತ್ತಿದ್ದ ಹಾಗು ಮಿಕ್ಕದ್ದನ್ನು ಕಾಲಿನಿಂದ ತುಳಿಯುತ್ತಿದ್ದ ಆ ನಾಲ್ಕನೆಯ ಮೃಗದ ವಿಷಯವನ್ನು ತಿಳಿದುಕೊಳ್ಳಲು ಬಯಸಿದೆ.


ನೀನೆದ್ದು ಈ ನಾಡಿನ ಉದ್ದಗಲಕ್ಕೂ ತಿರುಗಾಡು; ಇದನ್ನು ನಾನು ನಿನಗೆ ಕೊಡುತ್ತೇನೆ, ಎಂದು ಹೇಳಿದರು.


ಇಸ್ರಯೇಲರು ಹೋರ್ ಬೆಟ್ಟದಿಂದ ಹೊರಟು ಎದೋಮ್ಯರ ನಾಡನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪುಕಡಲಿನ ಮಾರ್ಗವಾಗಿ ಪ್ರಯಾಣ ಮಾಡಿದರು. ಈ ಮಾರ್ಗದ ಆಯಾಸದಿಂದ ಅವರಿಗೆ ಬೇಸರವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು