Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 7:3 - ಕನ್ನಡ ಸತ್ಯವೇದವು C.L. Bible (BSI)

3 ಅಲ್ಲದೆ, ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ದೇವಾಲಯದ ಯಾಜಕರನ್ನೂ ಪ್ರವಾದಿಗಳನ್ನೂ ಕಂಡು, “ನಾವು ಇಷ್ಟು ವರ್ಷಗಳಿಂದ ಅನುಸರಿಸಿಕೊಂಡು ಬಂದಂತೆ, 5ನೆಯ ತಿಂಗಳಲ್ಲಿ ಉಪವಾಸವಿದ್ದು ಪ್ರಲಾಪಿಸಬೇಕೋ?” ಎಂದು ವಿಚಾರಿಸಿಕೊಂಡು ಬರಬೇಕೆಂದು ಅವರಿಗೆ ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ, “ನಾವು ಬಹು ವರ್ಷಗಳಿಂದ ಮಾಡಿಕೊಂಡು ಬಂದಂತೆ ಮುಂದೆಯೂ ಐದನೆಯ ತಿಂಗಳಿನಲ್ಲಿ ಉಪವಾಸ ಮಾಡಿ ಅಳಬೇಕೋ? ಎಂದು ಪ್ರವಾದಿಗಳ ಮತ್ತು ಸೇನಾಧೀಶ್ವರನಾದ ಯೆಹೋವನ ಆಲಯದ ಯಾಜಕರ ಹತ್ತಿರ ವಿಚಾರಿಸಿಕೊಂಡು ಬನ್ನಿರಿ” ಎಂಬುದಾಗಿ ಅವರಿಗೆ ಅಪ್ಪಣೆಕೊಟ್ಟು ಕಳುಹಿಸಿದ್ದೇವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ - ನಾವು ಬಹು ವರುಷಗಳಿಂದ ಮಾಡಿಕೊಂಡು ಬಂದಂತೆ ಮುಂದೆಯೂ ಐದನೆಯ ತಿಂಗಳಲ್ಲಿ ಉಪವಾಸಮಾಡಿ ಅಳಬೇಕೋ ಎಂದು ಪ್ರವಾದಿಗಳ ಮತ್ತು ಸೇನಾಧೀಶ್ವರ ಯೆಹೋವನ ಆಲಯದ ಯಾಜಕರ ಹತ್ತಿರ ವಿಚಾರಿಸಿಕೊಂಡು ಬನ್ನಿರಿ ಎಂಬದಾಗಿ ಅವರಿಗೆ ಅಪ್ಪಣೆಕೊಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವರು ಸರ್ವಶಕ್ತನಾದ ಯೆಹೋವನ ಆಲಯದಲ್ಲಿದ್ದ ಯಾಜಕರ ಬಳಿಗೂ ಪ್ರವಾದಿಗಳ ಬಳಿಗೂ ಹೋದರು. ಅವರು ಹೀಗೆ ಪ್ರಶ್ನೆ ಕೇಳಿದರು: “ಅನೇಕ ವರ್ಷಗಳಿಂದ ಆಲಯವು ಕೆಡವಲ್ಪಟ್ಟದ್ದಕ್ಕಾಗಿ ನಮ್ಮ ದುಃಖವನ್ನು ತೋರಿಸಿದೆವು. ಪ್ರತೀ ವರ್ಷದ ಐದನೇ ತಿಂಗಳಿನಲ್ಲಿ ಉಪವಾಸಕ್ಕಾಗಿ ಮತ್ತು ರೋದಿಸುವುದಕ್ಕಾಗಿ ನಾವು ಪ್ರತ್ಯೇಕ ಸಮಯವನ್ನು ನೇಮಿಸುತ್ತಿದ್ದೆವು. ನಾವು ಇದನ್ನು ಹೀಗೆಯೇ ಮುಂದುವರಿಸಬೇಕೋ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಸರ್ವಶಕ್ತರಾದ ಯೆಹೋವ ದೇವರ ಆಲಯದಲ್ಲಿದ್ದ ಯಾಜಕರ ಸಂಗಡ ಮತ್ತು ಪ್ರವಾದಿಗಳ ಸಂಗಡ ನಾನು ಮಾತನಾಡಿ, “ಇಷ್ಟು ವರ್ಷ ಮಾಡಿದ ಪ್ರಕಾರ, ಐದನೆಯ ತಿಂಗಳಿನಲ್ಲಿ ಉಪವಾಸವಿದ್ದು, ಪ್ರಲಾಪಿಸಬೇಕೋ?” ಎಂದು ವಿಚಾರಿಸಿಕೊಂಡು ಬರಬೇಕೆಂದು ಅವರಿಗೆ ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 7:3
21 ತಿಳಿವುಗಳ ಹೋಲಿಕೆ  

“ನಾಲ್ಕನೇ, ಐದನೇ, ಏಳನೇ ಮತ್ತು ಹತ್ತನೇ ತಿಂಗಳುಗಳ ಉಪವಾಸ ಇವು ಯೆಹೂದ್ಯ ವಂಶಕ್ಕೆ ವಿಶೇಷ ಹಬ್ಬದ ದಿನಗಳಾಗಿ ಮಾರ್ಪಟ್ಟು, ಜನರು ಹರ್ಷಿಸಿ ಆನಂದಿಸುವರು. ಇಂತಿರಲು ಸತ್ಯವನ್ನೂ ಸಮಾಧಾನವನ್ನೂ ಪ್ರೀತಿಸಿರಿ.”


ಯಾಜಕನ ತುಟಿಗಳು ದೈವಜ್ಞಾನದ ದ್ವಾರಗಳು. ಅವನ ಬಾಯಿಂದ ಜನರು ಧರ್ಮೋಪದೇಶವನ್ನು ಕೇಳಬೇಕು. ಅವನು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ದೂತನು.”


ಆದುದರಿಂದ ಸತಿಪತಿಯರು ಒಬ್ಬರಿಗೊಬ್ಬರು ದಾಂಪತ್ಯಕರ್ತವ್ಯಗಳನ್ನು ನೆರವೇರಿಸಲು ನಿರಾಕರಿಸಬಾರದು. ಧ್ಯಾನ, ಪ್ರಾರ್ಥನೆಗಳಲ್ಲಿ ನಿರತರಾಗಿರಲು, ಸ್ವಲ್ಪಕಾಲ ಒಬ್ಬರನ್ನೊಬ್ಬರು ಅಗಲಿರಬಹುದು. ಆದರೆ ಅದಕ್ಕೆ ಪರಸ್ಪರ ಸಮ್ಮತಿ ಇರಬೇಕು. ಅನಂತರ ಒಂದುಗೂಡಬೇಕು. ಇಲ್ಲದೆ ಹೋದರೆ, ನಿಮ್ಮಲ್ಲಿ ಸಂಯಮ ಇಲ್ಲದಿರುವುದನ್ನು ಕಂಡು ಸೈತಾನನು ಪಾಪಕ್ಕೆ ಪ್ರಚೋದಿಸಬಹುದು.


ಅದಕ್ಕೆ ಯೇಸು, “ಮದುವಣಿಗನು ಜೊತೆಯಲ್ಲಿ ಇರುವಷ್ಟು ಕಾಲ ಅವನ ಆಪ್ತರು ದುಃಖಪಡುವುದುಂಟೇ? ಮದುವಣಿಗನು ಅವರಿಂದ ಅಗಲಬೇಕಾಗುವ ಕಾಲವು ಬರುವುದು; ಆಗ ಅವರು ಉಪವಾಸ ಮಾಡುವರು.


“ಯಾಜಕರಿಗೂ ನಾಡಿನ ಸಕಲ ಜನರಿಗೂ ಹೀಗೆಂದು ತಿಳಿಸಲು: ನೀವು ಕಳೆದ ಎಪ್ಪತ್ತು ವರ್ಷಗಳಿಂದ 5ನೇ ಮತ್ತು 7ನೇ ತಿಂಗಳುಗಳಲ್ಲಿ ಉಪವಾಸಮಾಡಿ ಗೋಳಾಡಿದ್ದು ನನಗೋಸ್ಕರವೋ?


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ - “ನೀನು ಯಾಜಕರ ಬಳಿಗೆ ಹೋಗು.


ಸರ್ವೇಶ್ವರಸ್ವಾಮಿಯ ಪರಿಚಾರಕರಾದ ಯಾಜಕರು ದೇವಾಲಯದ ದ್ವಾರಮಂಟಪಕ್ಕೂ ಬಲಿಪೀಠಕ್ಕೂ ನಡುವೆ ಶೋಕತಪ್ತರಾಗಿ ಹೀಗೆಂದು ಪ್ರಾರ್ಥಿಸಲಿ: “ಕರುಣೆ ತೋರು, ಹೇ ಸರ್ವೇಶ್ವರಾ, ನಿನ್ನ ಪ್ರಜೆಗೆ ನಿಂದೆಯಾಗದಿರಲಿ ನಿನ್ನ ಸ್ವಂತ ಜನತೆಗೆ ಗುರಿಯಾಗದಿರಲಿ ಅವರು ಅನ್ಯರ ತಾತ್ಸಾರಕೆ ‘ನಿಮ್ಮ ದೇವನೆಲ್ಲಿ?’ ಎಂಬ ಪರಕೀಯರ ಹೀಯಾಳಿಕೆಗೆ”


ಜನರು ಜ್ಞಾನಹೀನರಾಗಿ ಅಳಿದುಹೋಗುತ್ತಿದ್ದಾರೆ. “ನೀವು ದೈವಜ್ಞಾನವನ್ನು ತಿರಸ್ಕರಿಸಿದ್ದೀರಿ; ನಾನು ಸಹ ಯಾಜಕವರ್ಗದಿಂದ ನಿಮ್ಮನ್ನು ವರ್ಜಿಸಿಬಿಡುತ್ತೇನೆ. ನೀವು ದೇವರ ಧರ್ಮೋಪದೇಶವನ್ನು ಮರೆತುಬಿಟ್ಟಿದ್ದೀರಿ; ನಾನು ನಿಮ್ಮ ಮಕ್ಕಳನ್ನು ಮರೆತುಬಿಡುತ್ತೇನೆ.


ಅಳುವ ಸಮಯ, ನಗುವ ಸಮಯ, ಗೋಳಾಡುವ ಸಮಯ, ಕುಣಿದಾಡುವ ಸಮಯ.


ತಿಳಿಸುವನಿವನು ನಿನ್ನ ನಿರ್ಣಯವನು ಯಕೋಬನಿಗೆ ಕಲಿಸುವನು ನಿನ್ನ ಧರ್ಮಶಾಸ್ತ್ರವನು ಇಸ್ರಯೇಲನಿಗೆ. ಧೂಪಾರತಿ ಎತ್ತುವನು ನಿನ್ನ ಸನ್ನಿಧಿಯಲಿ ದಹನಬಲಿ ಸಮರ್ಪಿಸುವನು ನಿನ್ನ ಬಲಿಪೀಠದಲಿ.


ಕಟ್ಟುವವರು ಸರ್ವೇಶ್ವರನ ಮಂದಿರದ ಅಸ್ತಿವಾರವನ್ನು ಹಾಕಿದಾಗ, ಇಸ್ರಯೇಲರ ಅರಸ ದಾವೀದನು ನೇಮಿಸಿದ ಕ್ರಮಕ್ಕನುಸಾರ, ಸರ್ವೇಶ್ವರನನ್ನು ಸಂಕೀರ್ತಿಸಿದರು. ಇದಕ್ಕಾಗಿ ದೀಕ್ಷಾವಸ್ತ್ರ ಭೂಷಿತರಾದ ಯಾಜಕರು ತುತೂರಿಗಳೊಡನೆ ಹಾಗು ಆಸಾಫನ ಮಕ್ಕಳಾದ ಲೇವಿಯರು ತಾಳಗಳೊಡನೆ ನಿಂತುಕೊಂಡು,


ಇಂತಿರಲು, ಸೇನಾಧೀಶ್ವರ ಸರ್ವೇಶ್ವರ ನನಗೆ ಈ ಸಂದೇಶವನ್ನು ದಯಪಾಲಿಸಿದರು”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು