Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 8:17 - ಕನ್ನಡ ಸತ್ಯವೇದವು C.L. Bible (BSI)

17 ನಿಮ್ಮಲ್ಲಿ ಯಾರೂ ನೆರೆಯವನಿಗೆ ಕೇಡು ಬಗೆಯದಿರಲಿ. ಸುಳ್ಳುಸಾಕ್ಷ್ಯಕ್ಕೆ ಎಂದೂ ಸಂತೋಷಿಸಬೇಡಿ. ಇದೆಲ್ಲ ನನಗೆ ಅಸಹ್ಯ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಿಮ್ಮಲ್ಲಿ ಯಾವನೂ ತನ್ನ ಹೃದಯದಲ್ಲಿ ನೆರೆಯವನಿಗೆ ಕೇಡನ್ನು ಬಗೆಯದಿರಲಿ; ಸುಳ್ಳು ಸಾಕ್ಷಿಗೆ ಎಂದೂ ಸಂತೋಷಪಡಬೇಡಿರಿ; ನಾನು ಇವುಗಳನ್ನೆಲ್ಲಾ ದ್ವೇಷಿಸುವವನಾಗಿದ್ದೇನೆ; ಇದು ಯೆಹೋವನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಿಮ್ಮಲ್ಲಿ ಯಾವನೂ ತನ್ನ ಹೃದಯದಲ್ಲಿ ನೆರೆಯವನಿಗೆ ಕೇಡನ್ನು ಬಗೆಯದಿರಲಿ; ಸುಳ್ಳುಸಾಕ್ಷಿಗೆ ಎಂದೂ ಸಂತೋಷಪಡಬೇಡಿರಿ; ಇವುಗಳನ್ನೆಲ್ಲಾ ದ್ವೇಷಿಸುವವನಾಗಿದ್ದೇನೆ; ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಿಮ್ಮ ನೆರೆಯವನಿಗೆ ಹಾನಿಮಾಡುವುದನ್ನು ಗುಟ್ಟಾಗಿ ಆಲೋಚಿಸಬೇಡಿರಿ. ಸುಳ್ಳು ವಾಗ್ದಾನ ಮಾಡಬೇಡಿರಿ. ಅವುಗಳನ್ನೆಲ್ಲಾ ಮಾಡುವದರಲ್ಲಿ ಆನಂದಿಸಬೇಡಿರಿ. ಯಾಕೆಂದರೆ ಅವುಗಳನ್ನು ನಾನು ದ್ವೇಷಿಸುತ್ತೇನೆ.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಿಮ್ಮ ಹೃದಯಗಳಲ್ಲಿ ನೆರೆಯವನ ವಿರುದ್ಧವಾಗಿ ಕೇಡನ್ನು ಕಲ್ಪಿಸದಿರಿ. ಸುಳ್ಳು ಪ್ರಮಾಣವನ್ನು ಪ್ರೀತಿಸಬೇಡಿರಿ. ಏಕೆಂದರೆ ಇವುಗಳನ್ನೆಲ್ಲಾ ನಾನು ಹಗೆಮಾಡುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 8:17
19 ತಿಳಿವುಗಳ ಹೋಲಿಕೆ  

“ಮಾಟಗಾರರಿಗೆ, ಸೂಳೆಗಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ - ಅಂತೂ ನನಗಂಜದ ಎಲ್ಲರಿಗೆ, ಬೇಗನೆ ನ್ಯಾಯತೀರಿಸಿ, ದಂಡನೆ ವಿಧಿಸಲು ನಾನು ಬರುವೆನು,” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಕೇಡನ್ನು ನೋಡಲಾರದಷ್ಟು ನಿಷ್ಕಳಂಕ ನಿಮ್ಮ ಕಣ್ಣು. ಕೆಡುಕನ್ನು ಸಹಿಸಲಾಗದಸ್ಟು ಪವಿತ್ರರು ನೀವು. ಇಂತಿರಲು ಕೆಡುಕನ್ನು ನೋಡಿಕೊಂಡಿರುವಿರೇಕೆ? ದುಷ್ಟನು ಶಿಷ್ಟನಾದವನನ್ನು ಕಬಳಿಸುತ್ತಿರುವುದನ್ನು ನೋಡಿ ಸುಮ್ಮನಿರುವಿರೇಕೆ?


ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲಾ ಅವರ ಬಳಿಗೆ ತಡಮಾಡದೆ ಕಳುಹಿಸುತ್ತಾಬಂದೆ. ‘ಎಚ್ಚರಿಕೆ, ನಾನು ಹೇಸುವ ಈ ಅಸಹ್ಯಕಾರ್ಯಗಳನ್ನು ಮಾಡಬೇಡಿ’ ಎಂದು ಪ್ರಕಟಿಸುತ್ತಾ ಬಂದೆ.


ಜೆರುಸಲೇಮ್, ನೀನು ತಪ್ಪಿಸಿಕೊಳ್ಳಬೇಕಾದರೆ ನಿನ್ನ ಹೃದಯದಲ್ಲಿರುವ ಕೆಟ್ಟತನವನ್ನು ತೊಳೆದುಬಿಡು. ದುರಾಲೋಚನೆಗಳನ್ನು ನಿನ್ನ ಮನದಲ್ಲಿ ಇನ್ನೆಷ್ಟರವರೆಗೆ ಇಟ್ಟುಕೊಂಡಿರುವೆ?


ಕೇಡನ್ನು ಬಗೆಯಬೇಡ ನೆರೆಯವನಿಗೆ, ಪಕ್ಕದಲ್ಲೆ ನಂಬಿಕೆಯಿಂದ ವಾಸಿಸುವವನಿಗೆ.


ಕೇಡಿಗನು ತನ್ನ ಮನದಾಸೆಗಾಗಿ ಹೆಮ್ಮೆಪಡುತಿಹನು I ಲಾಭಬಡುಕನು ಪ್ರಭುವನು ಶಪಿಸಿ ತಿರಸ್ಕರಿಸುತಿಹನು II


ಹೃದಯದಿಂದ ದುರಾಲೋಚನೆ, ಕೊಲೆ, ವ್ಯಭಿಚಾರ, ಅನೈತಿಕತೆ, ಕಳ್ಳತನ, ಸುಳ್ಳುಸಾಕ್ಷಿ, ಅಪದೂರು, ಇವು ಹೊರಬರುತ್ತವೆ.


ಒಳ್ಳೆಯವನು ತನ್ನ ಒಳ್ಳೆಯ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ; ಕೆಟ್ಟವನು ತನ್ನ ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ.


ಆದರೆ ನಾನು ಹೇಳುತ್ತೇನೆ, ಕೇಳಿ; ಪರಸ್ತ್ರೀಯನ್ನು ಕಾಮದೃಷ್ಟಿಯಿಂದ ನೋಡುವ ಪ್ರತಿಯೊಬ್ಬನೂ ತನ್ನ ಹೃದಯದಲ್ಲಿ ಆಕೆಯೊಡನೆ ಆಗಲೇ ವ್ಯಭಿಚಾರ ಮಾಡಿದವನೇ ಆಗುತ್ತಾನೆ.


ಒಬ್ಬರಿಗೊಬ್ಬರು ಪ್ರೀತಿ ಕರುಣೆಯನ್ನು ತೋರಿಸಿರಿ. ವಿಧವೆಯರು, ಅನಾಥರು, ವಿದೇಶಿಯರು, ಬಡವರು, ಇವರಾರನ್ನೂ ಶೋಷಣೆಮಾಡಬೇಡಿ. ನಿಮ್ಮಲ್ಲಿ ಯಾವನೂ ತನ್ನ ಸಹೋದರನಿಗೆ ಕೇಡನ್ನು ಬಗೆಯದಿರಲಿ.


‘ಸರ್ವೇಶ್ವರ ಸ್ವಾಮಿಯ ಜೀವದಾಣೆ’ ಎಂದು ಸತ್ಯ, ನ್ಯಾಯ, ನೀತಿಗೆ ಅನುಗುಣವಾಗಿ ಪ್ರಮಾಣಮಾಡಿರಿ, ಆಗ ರಾಷ್ಟ್ರಗಳೆಲ್ಲ ನನ್ನಿಂದ ಆಶೀರ್ವಾದ ಪಡೆಯಲು ಆಶಿಸುವರು, ನನ್ನಲ್ಲೇ ಹೆಮ್ಮೆಪಡುವರು.”


ದೈವಭಯದಿಂದ ಹುಟ್ಟುತ್ತದೆ ಪಾಪದ್ವೇಷ; ಗರ್ವ, ಅಹಂಕಾರ, ದುರಾಚಾರ, ಕಪಟ ಭಾಷಣ ನನಗೆ ಅಸಹ್ಯ.


ಅವನ ಮನದಲ್ಲಿರುವುದು ಮೂರ್ಖತನ; ಅವನು ಸತತ ಕಲ್ಪಿಸುವುದು ಕೆಡುಕುತನ. ಅವನು ಬಿತ್ತನೆ ಮಾಡುವುದು ಕಾಳಗ, ಕದನ.


ಸೇನಾಧೀಶ್ವರ ಸರ್ವೇಶ್ವರ ನನಗೆ ಕೊಟ್ಟ ಸಂದೇಶವೇನೆಂದರೆ:


ನೀಚಕಾರ್ಯಗಳನು ನಾ ವೀಕ್ಷಿಸಲಾರೆ I ಅಧರ್ಮಿಗಳ ನಡೆಯನು ನಾ ಸಹಿಸಲಾರೆ I ಅಂಥವರ ಸಹವಾಸವನು ನಾ ತಾಳಲಾರೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು