Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 8:8 - ಕನ್ನಡ ಸತ್ಯವೇದವು C.L. Bible (BSI)

8 ಅವರು ಜೆರುಸಲೇಮಿನಲ್ಲೇ ವಾಸವಾಗಿರುವರು. ನಾನು ಅವರಿಗೆ ದೇವರಾಗಿರುವೆನು; ಅವರು ನನಗೆ ಸತ್ಸಂಬಂಧವುಳ್ಳ ಸದ್ಧರ್ಮದ ಪ್ರಜೆಗಳಾಗಿರುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರು ಯೆರೂಸಲೇಮಿನೊಳಗೆ ವಾಸಿಸುವರು; ಸತ್ಯಸಂಧತೆಯಿಂದಲೂ ಮತ್ತು ಸದ್ಧರ್ಮದಿಂದಲೂ ಅವರು ನನಗೆ ಪ್ರಜೆಯಾಗಿರುವರು. ಹಾಗೆಯೇ ನಾನು ಅವರಿಗೆ ದೇವರಾಗಿರುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವರು ಯೆರೂಸಲೇವಿುನೊಳಗೇ ವಾಸವಾಗಿರುವರು; ಸತ್ಯಸಂಧತೆಯಿಂದಲೂ ಸದ್ಧರ್ಮದಿಂದಲೂ ಅವರು ನನಗೆ ಪ್ರಜೆಯಾಗಿರುವರು. ಹಾಗೆಯೇ ನಾನು ಅವರಿಗೆ ದೇವರಾಗಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಾನು ಅವರನ್ನು ಇಲ್ಲಿಗೆ ಕರೆತರುವೆನು. ಅವರು ಜೆರುಸಲೇಮಿನಲ್ಲಿ ವಾಸಿಸುವರು. ಅವರು ನನ್ನ ಜನರಾಗಿರುವರು; ನಾನು ಅವರಿಗೆ ಒಳ್ಳೆಯವನಾದ ನಂಬಿಗಸ್ತನಾದ ದೇವರಾಗಿರುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಾನು ಅವರನ್ನು ತರುವೆನು. ಅವರು ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವರು. ಅವರು ನನ್ನ ಜನರಾಗಿರುವರು. ನಾನು ಅವರಿಗೆ ನಂಬಿಗಸ್ತನೂ, ನೀತಿವಂತನೂ ಆದ ದೇವರಾಗಿರುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 8:8
30 ತಿಳಿವುಗಳ ಹೋಲಿಕೆ  

ನಾನು ನಿಮ್ಮ ಪಿತೃಗಳಿಗೆ ಅನುಗ್ರಹಿಸಿದ ನಾಡಿನಲ್ಲಿ ನೀವು ವಾಸಿಸುವಿರಿ. ನೀವು ನನಗೆ ಪ್ರಜೆಯಾಗಿರುವಿರಿ, ನಾನು ನಿಮಗೆ ದೇವರಾಗಿರುವೆನು.


ಕಲ್ಲಾದ ಹೃದಯವನ್ನು ಅವರೊಳಗಿಂದ ತೆಗೆದು ಮೃದುವಾದ ಹೃದಯವನ್ನು ಅವರಿಗೆ ಅನುಗ್ರಹಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.


ಆಗ ಸಿಂಹಾಸನದ ಕಡೆಯಿಂದ ಬಂದ ಮಹಾಧ್ವನಿ ಇಂತೆಂದಿತು : ಇಗೋ ಮಾನವರ ಮಧ್ಯೆಯೇ ಇದೆ ದೇವಾಲಯ, ಆತನವರೊಡನೆ ವಾಸಿಸುವನು; ಅವರಾತನಿಗೆ ಪ್ರಜೆಗಳಾಗುವರು; ದೇವರೇ ಅವರುಗಳ ಜೊತೆಗಾರ; ಆತನಲ್ಲದೆ ಅವರಿಗಿಲ್ಲ ಬೇರಾವ ದೇವ.


ಸರ್ವೇಶ್ವರನಾದ ನಾನು ಹೇಳುತ್ತೇನೆ ಕೇಳಿ: ಆ ದಿನಗಳು ಬಂದಮೇಲೆ ನಾನು ಇಸ್ರಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು - ನನ್ನ ಧರ್ಮಶಾಸ್ತ್ರವನ್ನು ಅವರ ಅಂತರಂಗದಲ್ಲಿ ಇಡುವೆನು. ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


‘ಸರ್ವೇಶ್ವರ ಸ್ವಾಮಿಯ ಜೀವದಾಣೆ’ ಎಂದು ಸತ್ಯ, ನ್ಯಾಯ, ನೀತಿಗೆ ಅನುಗುಣವಾಗಿ ಪ್ರಮಾಣಮಾಡಿರಿ, ಆಗ ರಾಷ್ಟ್ರಗಳೆಲ್ಲ ನನ್ನಿಂದ ಆಶೀರ್ವಾದ ಪಡೆಯಲು ಆಶಿಸುವರು, ನನ್ನಲ್ಲೇ ಹೆಮ್ಮೆಪಡುವರು.”


ಜಯಶಾಲಿಯಾದವನು ಆಗುವನು ಇದಕ್ಕೆಲ್ಲಾ ಬಾಧ್ಯನು ನಾನವನಿಗೆ ದೇವನಾಗಿರುವೆನು ಅವನೆನಗೆ ಪುತ್ರನಾಗಿರುವನು.


ಹಾಕುವೆನಾ ಮೂರನೇ ಭಾಗದವರನ್ನು ಬೆಂಕಿಗೆ, ಶೋಧಿಸುವೆನು ಅವರನ್ನು ಬೆಳ್ಳಿಯ ಹಾಗೆ. ಶುದ್ಧೀಕರಿಸುವೆನು ಬಂಗಾರದ ಹಾಗೆ. ಕಿವಿಗೊಡುವೆ ನನ್ನ ಹೆಸರೆತ್ತಿ ಪ್ರಾರ್ಥಿಸುವವರಿಗೆ. ಹೇಳುವೆನು, ‘ಇವರೇ ನನ್ನ ಪ್ರಜೆಯೆಂದು. ಹೇಳುವರವರು ‘ಸರ್ವೇಶ್ವರನೇ ನಮ್ಮ ದೇವ’ ಎಂದು.


ಹೌದು, ನನ್ನ ವಾಸಸ್ಥಾನವು ಅವರ ಮಧ್ಯೆಯಿರುವುದು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


ನನ್ನ ದಾಸ ಯಕೋಬನಿಗೆ ನಾನು ದಯಪಾಲಿಸಿದ ನಾಡಿನಲ್ಲಿ ಅವರು ವಾಸಿಸುವರು. ಹೌದು, ನಿಮ್ಮ ಪಿತೃಗಳು ವಾಸಿಸಿದ ನಾಡಿನಲ್ಲಿ ಅವರೂ ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು; ನನ್ನ ದಾಸ ದಾವೀದನು ಅವರಿಗೆ ಸದಾ ಪ್ರಭುವಾಗಿರುವನು.


ನಿಮ್ಮ ನಡುವೆ ಸಂಚರಿಸುತ್ತಾ ನಿಮಗೆ ದೇವರಾಗಿರುವೆನು. ನೀವು ನನಗೆ ಪ್ರಜೆಗಳಾಗಿರುವಿರಿ.


ಆ ದಿನದಂದು ಹಲವಾರು ರಾಷ್ಟ್ರಗಳು ಸರ್ವೇಶ್ವರಸ್ವಾಮಿಯನ್ನು ಆಶ್ರಯಿಸಿಕೊಳ್ಳುವರು. ಅವರು ಆ ಸ್ವಾಮಿಯ ಜನರಾಗುವರು. ಸ್ವಾಮಿ ಅವರ ಮಧ್ಯೆ ವಾಸಿಸುವರು. ಸೇನಾಧೀಶ್ವರರಾದ ಆ ಸ್ವಾಮಿಯೇ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ ಎಂಬುದು ಆಗ ನಿಮಗೆ ಗೊತ್ತಾಗುವುದು.


ಹತರಾದವರು ನಿರ್ದೋಷಿಗಳೆಂದು ನಿರ್ಣಯಿಸುವೆನು. ಕೊಲೆಪಾತಕರನ್ನು ದಂಡಿಸಿಯೇ ತೀರುವೆನು.


ನೀವು ನನಗೆ ಪ್ರಜೆಯಾಗಿರುವಿರಿ ನಾನು ನಿಮಗೆ ದೇವರಾಗಿರುವೆನು.


ಕರೆತರುವೆನವರನು ಈಜಿಪ್ಟ್, ಅಸ್ಸೀರಿಯ ನಾಡುಗಳಿಂದ ಗಿಲ್ಯಾದ್, ಲೆಬೊನೇನ್‍ಗಳಲ್ಲವರು ಬಂದು ಸೇರುವುದರಿಂದ ತುಂಬಿತುಳುಕುವುವು ಆ ನಾಡುಗಳು ಜನಸ್ತೋಮದಿಂದ.


ಅವರಿಗೆ ಒಳಿತನ್ನು ಮಾಡುವುದರಲ್ಲಿ ಸಂತೋಷಿಸುವೆನು.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ: “ಕಾಲ ಬರಲಿದೆ, ಆಗ ಇಸ್ರಯೇಲಿನ ಸಕಲ ಗೋತ್ರಗಳಿಗೆ ನಾನೇ ದೇವರಾಗಿರುವೆನು. ಅವರು ನನಗೆ ಪ್ರಜೆಯಾಗಿರುವರು.


ಬದಲಿಗೆ ‘ಇಸ್ರಯೇಲ್ ಮನೆತನವೆಂಬ ಸಂತಾನವನ್ನು ಉತ್ತರನಾಡಿನಿಂದಲೂ ಅವರನ್ನು ತಳ್ಳಲಾಗಿದ್ದ ಸಕಲ ಸೀಮೆಗಳಿಂದಲೂ ಬರಮಾಡಿ ಉದ್ಧರಿಸಿದ ಸರ್ವೇಶ್ವರನ ಜೀವದಾಣೆ’ ಎಂದು ಪ್ರಮಾಣ ಮಾಡುವರು. ಅವರು ಸ್ವಂತ ನಾಡಿನಲ್ಲಿ ಸುಖವಾಗಿ ಬಾಳುವರು. ಇದು ಸರ್ವೇಶ್ವರನಾದ ನನ್ನ ನುಡಿ.”


ನಾನೇ ಸರ್ವೇಶ್ವರ ಎಂದು ಒಪ್ಪಿಕೊಳ್ಳುವ ಹೃದಯವನ್ನು ಅವರಿಗೆ ಅನುಗ್ರಹಿಸುವೆನು. ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು. ಅವರು ನನ್ನತ್ತ ಮನಪೂರ್ವಕವಾಗಿ ಹಿಂದಿರುಗಿ ಬರುವರು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಾನು ನಿಮ್ಮನ್ನು ನಿಮ್ಮ ಅಪರಾಧಗಳಿಂದೆಲ್ಲಾ ಶುದ್ಧಿಮಾಡುವ ದಿನದಲ್ಲಿ ಪಟ್ಟಣಗಳನ್ನು ನಿವಾಸಿಗಳಿಂದ ತುಂಬಿಸುವೆನು. ನಿವೇಶನಗಳಲ್ಲಿ ಕಟ್ಟಡಗಳು ಏಳುವುವು.


“ಬಲಗೊಳಿಸುವೆನು ಯೆಹೂದ್ಯ ಕುಲವನು ಉದ್ಧರಿಸುವೆನು ಜೊಸೇಫನ ವಂಶವನು. ಕನಿಕರಿಸುವೆನು, ಮರಳಿ ಬರಮಾಡುವೆನು ಅವರನು ನಾನು ಕೈಬಿಟ್ಟವರಂತೆ ಇರಲಾರರವರು ಇನ್ನು. ಏಕೆನೆ ನಾನೇ ದೇವ ಸರ್ವೇಶ್ವರ ಅವರಿಗೆ ಕಿವಿಗೊಡುವೆನು ನಾನು ಅವರ ಕರೆಗೆ ಸದುತ್ತರವೀಯುವೆನು ಅವರ ಮೊರೆಗೆ.


ನೀನು ಪ್ರವಾಸವಾಗಿರುವ ಈ ಕಾನಾನ್ ನಾಡೆಲ್ಲವನ್ನು ನಿನಗೂ ನಿನ್ನ ಸಂತಾನಕ್ಕೂ ಶಾಶ್ವತವಾದ ಸೊತ್ತಾಗಿ ಕೊಡುತ್ತೇನೆ. ನಾನು ನಿಮ್ಮ ಕುಲದೇವರಾಗಿರುತ್ತೇನೆ.”


ಗುಬ್ಬಿಗಳಂತೆ ಈಜಿಪ್ಟಿನಿಂದಲೂ ಪಾರಿವಾಳಗಳಂತೆ ಅಸ್ಸೀರಿಯದಿಂದಲೂ ಅವರು ಬೆದರುತ್ತಾ ಓಡಿಬರುತ್ತಾರೆ. ಅವರು ತಮ್ಮ ತಮ್ಮ ಮನೆಗಳಿಗೆ ಹಿಂದಿರುಗುವಂತೆ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು