Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 9:13 - ಕನ್ನಡ ಸತ್ಯವೇದವು C.L. Bible (BSI)

13 ಬಗ್ಗಿಸಿಕೊಂಡಿರುವೆ ಜುದೇಯ ಎಂಬ ಬಿಲ್ಲನು ಹೂಡಿರುವೆ ಅದರಲಿ ಎಫ್ರಯಿಮೆಂಬ ಬಾಣವನು. ಸಿಯೋನ್, ಎತ್ತಿಕಟ್ಟಿರುವೆ ನಿನ್ನವರನು ಗ್ರೀಕರಿಗಿದಿರಾಗಿ ಮಾಡುವೆ ನಿನ್ನನು ಶೂರನ ಕತ್ತಿಯನ್ನಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೂದವೆಂಬ ಬಿಲ್ಲನ್ನು ಬೊಗ್ಗಿಸಿಕೊಂಡಿದ್ದೇನೆ. ಅದರಲ್ಲಿ ಎಫ್ರಾಯೀಮ್ ಎಂಬ ಬಾಣವನ್ನು ಹೂಡಿದ್ದೇನೆ; ಚೀಯೋನೇ, ನಾನು ನಿನ್ನ ಸಂತಾನವನ್ನು ಗ್ರೀಕ್ ಸಂತಾನಕ್ಕೆ ವಿರುದ್ಧವಾಗಿ ಎಬ್ಬಿಸಿ ನಿನ್ನನ್ನು ಶೂರನ ಕತ್ತಿಯನ್ನಾಗಿ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೂದವೆಂಬ ಬಿಲ್ಲನ್ನು ಬೊಗ್ಗಿಸಿಕೊಂಡಿದ್ದೇನೆ, ಅದರಲ್ಲಿ ಎಫ್ರಾಯೀಮನ್ನು ಹೂಡಿದ್ದೇನೆ; ಚೀಯೋನೇ, ನಾನು ನಿನ್ನ ಸಂತಾನವನ್ನು ಗ್ರೀಕ್ ಸಂತಾನಕ್ಕೆ ವಿರುದ್ಧವಾಗಿ ಎಬ್ಬಿಸಿ ನಿನ್ನನ್ನು ಶೂರನ ಕತ್ತಿಯನ್ನಾಗಿ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೂದನೇ, ನಾನು ನಿನ್ನನ್ನು ಬಿಲ್ಲಿನಂತೆ ಉಪಯೋಗಿಸುವೆನು. ಎಫ್ರಾಯೀಮನೇ, ನಾನು ನಿನ್ನನ್ನು ಬಾಣದಂತೆ ಉಪಯೋಗಿಸುವೆನು. ಇಸ್ರೇಲೇ, ಗ್ರೀಸಿನ ಜನರೊಂದಿಗೆ ಯುದ್ಧಮಾಡಲು ನಾನು ನಿನ್ನನ್ನು ಖಡ್ಗದಂತೆ ಉಪಯೋಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಾನು ನನ್ನ ಬಿಲ್ಲನ್ನು ಬಗ್ಗಿಸುವಂತೆ ಯೆಹೂದವನ್ನು ಬಗ್ಗಿಸುತ್ತೇನೆ. ಎಫ್ರಾಯೀಮಿನಿಂದ ಅದನ್ನು ತುಂಬಿಸುತ್ತೇನೆ. ಚೀಯೋನೇ, ನಿನ್ನ ಪುತ್ರರನ್ನು ಗ್ರೀಕ್ ಪುತ್ರರ ವಿರೋಧವಾಗಿ ಎಬ್ಬಿಸಿ, ನಿನ್ನನ್ನು ಶೂರನ ಖಡ್ಗದಂತೆ ಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 9:13
31 ತಿಳಿವುಗಳ ಹೋಲಿಕೆ  

ಅವರು ಯಜ್ಞದ ಕುರಿಮರಿಯ ಮೇಲೆ ಯುದ್ಧಮಾಡುವರು. ಆದರೆ ಯಜ್ಞದ ಕುರಿಮರಿಗೆ ಜಯವಾಗುವುದು. ಆ ಕುರಿಮರಿಯು ಒಡೆಯರಿಗೆಲ್ಲಾ ಒಡೆಯನೂ ರಾಜಾಧಿರಾಜನೂ ಆಗಿರುವುದೇ ಇದಕ್ಕೆ ಕಾರಣ. ದೇವರ ಕರೆ ಹೊಂದಿದವರೂ ದೇವರು ಆಯ್ದುಕೊಂಡವರೂ ಆದ ಪ್ರಾಮಾಣಿಕ ಅನುಯಾಯಿಗಳು ಆ ಜಯದಲ್ಲಿ ಪಾಲುಗಾರರಾಗುವರು,” ಎಂದನು.


ಮಾಡಿದನು ನನ್ನ ನುಡಿಯನ್ನು ಹರಿತವಾದ ಖಡ್ಗವನ್ನಾಗಿ ಮುಚ್ಚಿಟ್ಟಹನು ನನ್ನನ್ನು ತನ್ನ ಕರದ ನೆರಳಿನಲ್ಲಿ ರೂಪಿಸಿಹನು ನನ್ನನ್ನು ಚೂಪಾದ ಬಾಣವನ್ನಾಗಿ, ಬಚ್ಚಿಟ್ಟಿಹನು ನನ್ನನು ತನ್ನ ಬತ್ತಳಿಕೆಯಲ್ಲಿ.


“ಇವರು ಏನು ಮಾಡುವುದಕ್ಕೆ ಬಂದಿದ್ದಾರೆ?” ಎಂದು ಕೇಳಿದಾಗ ಆತ: ಯೆಹೂದ್ಯರಲ್ಲಿ ಯಾರೂ ತಲೆಯೆತ್ತದಂತೆ ಅವುಗಳನ್ನು ಚದರಿಸುವ ಕೊಂಬುಗಳು ಅವು. ಇವರಾದರೆ ಜುದೇಯ ನಾಡನ್ನು ಚದರಿಸಬೇಕೆಂದು ತಲೆಯೆತ್ತಿದ ರಾಷ್ಟ್ರಗಳನ್ನೆ ಚದರಿಸಿ ಅವರ ಕೊಂಬುಗಳನ್ನು ಹೊಡೆದು ಕೆಡುವುವುದಕ್ಕೆ ಬಂದಿದ್ದಾರೆ,” ಎಂದು ಹೇಳಿದರು


ಕಟ್ಟಿಕೋ ಶೂರನೇ, ಪಟ್ಟಗತ್ತಿಯನು ಸೊಂಟಕೆ I ಸಂಭ್ರಮ,‍ ಶೋಭೆ, ಸಡಗರ ಸಲ್ಲತಕ್ಕವು ನಿನಗೆ II


ಇನ್ನುಳಿದವರು ಕುದುರೆಯ ಮೇಲೆ ಕುಳಿತಿದ್ದಾತನ ಬಾಯಿಂದ ಹೊರಟ ಖಡ್ಗದಿಂದ ಹತರಾದರು; ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೆ ಆಹಾರವಾದರು.


ರಾಷ್ಟ್ರಗಳನ್ನು ಹೊಡೆದುರುಳಿಸುವಂಥ ಹರಿತವಾದ ಖಡ್ಗವೊಂದು ಆತನ ಬಾಯಿಂದ ಹೊರಟಿತು. ಆತನು ಕಬ್ಬಿಣದ ದಂಡದಿಂದ ಅವುಗಳ ಆಳ್ವಿಕೆ ನಡೆಸುವನು. ಸರ್ವಶಕ್ತ ದೇವರ ರೋಷವೆಂಬ ದ್ರಾಕ್ಷಿಯ ಆಲೆಯಲ್ಲಿ ಇರುವವರನ್ನು ತುಳಿದುಹಾಕುವನು.


“ಪೆರ್ಗಮದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ಹರಿತವಾದ ಇಬ್ಬಾಯಿಯ ಖಡ್ಗವುಳ್ಳವನು ನೀಡುವ ಸಂದೇಶವಿದು:


ಅವರ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು. ಬಾಯೊಳಗಿಂದ ಹರಿತವಾದ ಇಬ್ಬಾಯಿಯ ಖಡ್ಗವು ಹೊರಬಂದಿತ್ತು. ಅವರ ಮುಖ ನಡುಮಧ್ಯಾಹ್ನದ ಸೂರ್ಯನಂತೆ ಪ್ರಕಾಶಿಸುತ್ತಿತ್ತು.


ದೇವರ ವಾಕ್ಯ ಜೀವಂತವಾದುದು, ಕ್ರಿಯಾತ್ಮಕವಾದುದು; ಎಂಥ ಇಬ್ಬಾಯಿ ಕತ್ತಿಗಿಂತಲೂ ಹರಿತವಾದುದು. ಪ್ರಾಣ ಮತ್ತು ಆತ್ಮಗಳ, ಕೀಲು ಮತ್ತು ಮಜ್ಜೆಗಳ ಭೇದವನ್ನು ಛೇದಿಸುವಂತಾದ್ದು; ಹೃದಯದ ಆಶೆ ಆಲೋಚನೆಗಳನ್ನು ವಿವೇಚಿಸುವಂತಾದ್ದು.


ಬಾಳಿನ ಸ್ಪರ್ಧೆಯಲ್ಲಿ ಭಾಗವಹಿಸಿದ್ದೇನೆ. ನನ್ನ ಓಟವನ್ನು ಮುಗಿಸಿದ್ದೇನೆ. ವಿಶ್ವಾಸವನ್ನು ಕಾಪಾಡಿಕೊಂಡಿದ್ದೇನೆ.


ರಕ್ಷಣೆಯೆಂಬ ಶಿರಸ್ತ್ರಾಣವನ್ನು ಧರಿಸಿಕೊಳ್ಳಿ; ಪವಿತ್ರಾತ್ಮರ ಕೊಡುಗೆಯಾದ ದೇವರ ವಾಕ್ಯವು ನಿಮಗೆ ಖಡ್ಗವಾಗಿರಲಿ.


ಉದ್ಧಾರಕನು ಏಸಾವಿನ ಪರ್ವತವನ್ನು ಆಳಲು ಸಿಯೋನ್ ಪರ್ವತವನ್ನು ಏರುವನು. ಆಗ ರಾಜ್ಯಭಾರವು ಸರ್ವೇಶ್ವರಸ್ವಾಮಿಯದಾಗಿರುವುದು.”


ನಿಮ್ಮ ಪುತ್ರರಲ್ಲಿ ಕೆಲವರನ್ನು ಪ್ರವಾದಿಗಳನ್ನಾಗಿ, ನಿಮ್ಮ ಯುವಜನರಲ್ಲಿ ಕೆಲವರನ್ನು ನಾಜೀರರನ್ನಾಗಿ ಸಿದ್ಧಪಡಿಸಿದವನು ನಾನೇ. ಇಸ್ರಯೇಲಿನ ಜನರೇ, ಇದು ನಿಜವಲ್ಲವೇ? ನೀವೇ ಹೇಳಿ.


ಅಯ್ಯೋ, ಅಪರಂಜಿಯಂತೆ ಅಮೂಲ್ಯವಾಗಿದ್ದ ಸಿಯೋನ್ ಪ್ರಜೆ ಇಂದು ಬೇಡವೆಂದು ಬಿಸಾಡಿದ ಕುಂಬಾರನ ಮಣ್ಣುಮಡಕೆ! ಅಮೂಲ್ಯವಾಗಿದ್ದರು ಸಿಯೋನಿನ ಪ್ರಜೆಗಳು ಅಪರಂಜಿಯಂತೆ ಅಯ್ಯೋ ಈಗ ಅವರಾಗಿಹರು ಕುಂಬಾರನೆ ಬಿಸಾಡಿದ ಮಡಕೆಯಂತೆ.


“ಬಾಬಿಲೋನೇ, ನೀನು ನನಗೊಂದು ಯುದ್ಧಾಸ್ತ್ರ, ಒಂದು ಗದೆ. ಈ ಗದೆಯಿಂದ ರಾಷ್ಟ್ರಗಳನ್ನು ಬಡಿದುಬಿಡುವೆನು, ರಾಜ್ಯಗಳನ್ನು ಅಳಿಸಿಬಿಡುವೆನು.


ಇರಲಿ ಪ್ರಭುವಿನ ಸ್ತೋತ್ರ ಅವರ ಬಾಯಲಿ I ಇರಲಿ ಇಬ್ಬಾಯಿ ಕತ್ತಿಯು ಅವರ ಕೈಯಲಿ II


ಸ್ತುತಿಸ್ತೋತ್ರ ಪ್ರಭುವಿಗೆ, ನನ್ನ ಆಶ್ರಯದುರ್ಗಕ್ಕೆ I ಕಲಿಸಿಹನು ಕದನ ಕೈಗೆ, ಕಾಳಗ ನನ್ನ ಬೆರಳಿಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು